HomeUncategorizedಪ್ರತ್ಯೇಕ ಜಾಹೀರಾತು: ಬಿಹಾರದಲ್ಲಿ ಜೆಡಿಯು-ಬಿಜೆಪಿ ನಡುವಿನ ಮುನಿಸಿಗೆ ತೇಪೆ?

ಪ್ರತ್ಯೇಕ ಜಾಹೀರಾತು: ಬಿಹಾರದಲ್ಲಿ ಜೆಡಿಯು-ಬಿಜೆಪಿ ನಡುವಿನ ಮುನಿಸಿಗೆ ತೇಪೆ?

ಬಿಹಾರದಲ್ಲಿ ನಿತೀಶ್‌ ಕುಮಾರ್‌ ಜನಪ್ರಿಯತೆ ಕಳೆದುಕೊಂಡಿದ್ದಾರೆ ಎನ್ನುವುದಕ್ಕೆ ಇದು ಉತ್ತಮ ಸಾಕ್ಷಿ. ಆಡಳಿತಾರೂಢ ಪಕ್ಷವು ಅವರನ್ನು ಜಾಹೀರಾತುಗಳಿಂದ ಕೈಬಿಟ್ಟಿದೆ- ತೇಜಸ್ವಿ ಯಾದವ್

- Advertisement -
- Advertisement -

ಬಿಹಾರ ಉಪಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟದ ಪ್ರತ್ಯೇಕ ಜಾಹೀರಾತುಗಳು ಪ್ರತಿಪಕ್ಷಗಳ ವ್ಯಂಗ್ಯಕ್ಕೆ ಕಾರಣವಾಗಿದ್ದವು. ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಬಿಜೆಪಿ ಹೊರಡಿಸಿದ ಪ್ರತ್ಯೇಕ ಪೋಸ್ಟರ್ ಮತ್ತು ಜಾಹೀರಾತುಗಳ ಬಗ್ಗೆ ಲೇವಡಿ ಮಾಡಿದ್ದರು.

ಹೊಸ ಸರ್ಕಾರಕ್ಕೆ ಇಂದು ಮತದಾನ ಆರಂಭವಾಗಿರುವ ಬಿಹಾರದಲ್ಲಿ ಆಡಳಿತಾರೂಢ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ (ಎನ್‌ಡಿಎ) ಇತ್ತೀಚಿನ ಪ್ರಚಾರ ಭಿತ್ತಿಪತ್ರಗಳು ಮತ್ತು ಜಾಹೀರಾತುಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ನಿತೀಶ್ ಕುಮಾರ್ ಕಾಣಿಸಿಕೊಂಡು ಬಿಹಾರದಲ್ಲಿ ಜೆಡಿಯು, ಬಿಜೆಪಿ ನಡುವಿನ ಮುನಿಸಿಗೆ ತೇಪೆ ಹಚ್ಚುವ ಕಾರ್ಯ ಮಾಡುತ್ತಿದೆ.

ನಿತೀತ್‌ ಕುಮಾರ್‌ ಅವರ ರಾಜಕೀಯ ಪ್ರತಿಸ್ಪರ್ಧಿಗಳಾದ ಚಿರಾಗ್ ಪಾಸ್ವಾನ್ ಮತ್ತು ತೇಜಸ್ವಿ ಯಾದವ್ ಅವರು ’ಬಿಹಾರದಲ್ಲಿ ನಿತೀಶ್‌ ಕುಮಾರ್‌ ಜನಪ್ರಿಯತೆ ಕಳೆದುಕೊಂಡಿದ್ದಾರೆ ಎನ್ನುವುದಕ್ಕೆ ಇದು ಉತ್ತಮ ಸಾಕ್ಷಿ. ಆಡಳಿತಾರೂಢ ಪಕ್ಷವು ಅವರನ್ನು ಜಾಹೀರಾತುಗಳಿಂದ ಕೈಬಿಟ್ಟಿದೆ’ ಎಂದು ವ್ಯಂಗ್ಯವಾಡಿದ್ದರು.

ಈ ವ್ಯಂಗ್ಯಗಳಿಗೆ ಉತ್ತರ ಕೊಡುವ ಪ್ರಯತ್ನದಲ್ಲಿ ಎನ್‌ಡಿಎ ಹೊಸ ಜಾಹೀರಾತುಗಳನ್ನ ಬಿಡುಗಡೆ ಮಾಡಿದೆ. ಈ ಜಾಹೀರಾತುಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಹಾರ ಮುಖ್ಯಮಂತ್ರಿ ಅಭ್ಯರ್ಥಿ ಹಾಲಿ ಸಿಎಂ ನಿತೀಶ್ ಕುಮಾರ್ ಜೊತೆಗಿರುವ ಜಾಹೀರಾತುಗಳು, ಪೋಸ್ಟರ್‌ಗಳು ಕಾಣಿಸಿಕೊಂಡಿವೆ.

ಇದನ್ನೂ ಓದಿ: ಬಿಹಾರ ಚುನಾವಣೆ: ಎನ್‌ಡಿಎ ಮೈತ್ರಿಕೂಟದ ಪಕ್ಷಗಳಿಂದ ಪ್ರತ್ಯೇಕ ಜಾಹೀರಾತು!

ub575seg

ಇಂದು ಬೆಳಿಗ್ಗೆ ಪತ್ರಿಕೆಗಳಲ್ಲಿ ಕಾಣಿಸಿಕೊಂಡಿರುವ ಹೊಸ ಜಾಹೀರಾತುಗಳಲ್ಲಿ, ಪಿಎಂ ಮೋದಿ ಮತ್ತು ನಿತೀಶ್ ಕುಮಾರ್ ಇಬ್ಬರು ಇದ್ದಾರೆ. ಆದರೆ, ಒಂದು ಜಾಹೀರಾತಿನಲ್ಲಿ, ನಿತೀಶ್ ಕುಮಾರ್ ಅವರನ್ನು ಏಕೈಕ ಎನ್‌ಡಿಎ ಮುಖವಾಗಿ ಗುರುತಿಸಲಾಗಿದ್ದು, ಉಳಿದವರೆಲ್ಲಾ ಬಿಜೆಪಿ ನಾಯಕರಿದ್ದಾರೆ.

0t3e8r3g

ಇದನ್ನೂ ಓದಿ: ಬಿಹಾರ ಚುನಾವಣೆ: ಉಚಿತ ಕೊರೊನಾ ಲಸಿಕೆ ಪ್ರಸ್ತಾಪ; ಟ್ರೋಲ್‌ ಆದ ಬಿಜೆಪಿ ಪ್ರಣಾಳಿಕೆ!

“ಬಿಜೆಪಿ ಹೈ ತೋ ಭರೋಸಾ ಹೈ (ಬಿಜೆಪಿ ಇರುವಲ್ಲಿ, ನಂಬಿಕೆ ಇದೆ)” ಎಂಬ ಸಂದೇಶವನ್ನು ಹೊಂದಿರುವ ಜಾಹೀರಾತು ಕೇಂದ್ರ ಸರ್ಕಾರದ ಯೋಜನೆಗಳನ್ನು ಪಟ್ಟಿ ಮಾಡಿ, ಬಿಹಾರಕ್ಕೂ ಅದೇ ಭರವಸೆ ನೀಡುತ್ತದೆ ಎಂದಿದೆ.

ಈ ಹಿಂದಿನ ಜಾಹೀರಾತುಗಳಲ್ಲಿ ‘ಬಿಜೆಪಿ ಹೈ ತೊ ಭರೋಸಾ ಹೈ’ (ಬಿಜೆಪಿ ಇದ್ದೆಡೆ ನಂಬಿಕೆ ಇರುತ್ತೆ) ಎಂಬ ಸಾಲಿನ ಜೊತೆಗೆ, ನರೇಂದ್ರ ಮೋದಿ ಅವರ ಚಿತ್ರ ಎದ್ದು ಕಾಣುವಂತಿತ್ತು. ಬಿಹಾರದ ಎಲ್ಲರಿಗೂ ಉಚಿತ ಕೋವಿಡ್ ಲಸಿಕೆ ಮತ್ತು 19 ಲಕ್ಷ ಉದ್ಯೋಗಾವಕಾಶಗಳು ಎಂಬ ಚುನಾವಣಾ ಭರವಸೆಗಳು ಕಾಣಿಸಿಕೊಂಡಿದ್ದವು, ಆದರೆ ಜಾಹೀರಾತಿನಲ್ಲಿ ಎಲ್ಲಿಯೂ ನಿತೀಶ್ ಕುಮಾರ್‌ ಬಗ್ಗೆ ಪ್ರಸ್ತಾಪವಿರಲಿಲ್ಲ.

0pf1eo3o

ಇತ್ತ ಎನ್‌ಡಿಎ ಮೈತ್ರಿಕೂಟದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಪತ್ರಿಕೆಗಳಿಗೆ ನೀಡಿದ್ದ ಜಾಹೀರಾತುಗಳಲ್ಲಿ ಎಲ್ಲೂ ಪ್ರಧಾನಿ ಮೋದಿಯವರ ಭಾವಚಿತ್ರ ಉಲ್ಲೇಖವಿರಲಿಲ್ಲ. ಈ ಚಿತ್ರವನ್ನು ಆರ್‌ಜೆಡಿ ತಮ್ಮ ಅಧಿಕೃತ ಟ್ವಿಟರ್‌ ಖಾತೆಯಲ್ಲಿ ಹಂಚಿಕೊಂಡು ವ್ಯಂಗ್ಯವಾಡಿತ್ತು.

0p55fkrg

ಪ್ರಧಾನಿಯೊಂದಿಗೆ ವೇದಿಕೆ ಹಂಚಿಕೊಳ್ಳುವ ಚುನಾವಣಾ ಕಾರ್ಯಕ್ರಮದ ದಿನದಂದು ಮುಖ್ಯಮಂತ್ರಿ ನಿತೀಶ್‌ಕುಮಾರ್ ಬಿಡುಗಡೆ ಮಾಡಿದ್ದ ಜಾಹೀರಾತಿನಲ್ಲಿ ಕೂಡ ನಿತೀಶ್ ತಮ್ಮ ಚಿತ್ರವನ್ನಷ್ಟೇ ಹಾಕಿಸಿಕೊಂಡಿದ್ದರು.


ಇದನ್ನೂ ಓದಿ: ಬಿಹಾರ ಚುನಾವಣೆ ಬಾಯ್ಕಾಟ್ ಎಂದ 108 ಆದಿವಾಸಿ ಗ್ರಾಮಗಳು: ಯಾಕೆ? ಇಲ್ಲಿದೆ ವಿವರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...