Homeಮುಖಪುಟರೈತರ ನೂರಾರು ಸಾಮಾಜಿಕ ಮಾದ್ಯಮ ಖಾತೆಗಳಿಗೆ ನಿರ್ಬಂಧ: ದೆಹಲಿ ಚಲೋ ಪ್ರತಿಭಟನೆಗೆ ಬೆದರಿದ ಕೇಂದ್ರ?

ರೈತರ ನೂರಾರು ಸಾಮಾಜಿಕ ಮಾದ್ಯಮ ಖಾತೆಗಳಿಗೆ ನಿರ್ಬಂಧ: ದೆಹಲಿ ಚಲೋ ಪ್ರತಿಭಟನೆಗೆ ಬೆದರಿದ ಕೇಂದ್ರ?

- Advertisement -
- Advertisement -

ದೆಹಲಿ ಚಲೋ ಪ್ರತಿಭಟನೆ ಮತ್ತೆ ಪ್ರಾರಂಭವಾಗಿದ್ದು, ಇದಕ್ಕೂ ಮೊದಲೇ ರೈತರು ಮತ್ತು ರೈತ ಮುಖಂಡರಿಗೆ ಸೇರಿದ ನೂರಾರು ಸಾಮಾಜಿಕ ಮಾದ್ಯಮ ಖಾತೆಗಳಿಗೆ ಕೇಂದ್ರ ಸರಕಾರ ನಿರ್ಬಂಧ ವಿಧಿಸಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ರೈತ ಮುಖಂಡರು ಕೇಂದ್ರ ಸರಕಾರ ನಮ್ಮ ಪ್ರತಿಭಟನೆಗೆ ಬೆದರಿ ಈ ರೀತಿ ಮಾಡಿದೆ ಎಂದು ಹೇಳಿಕೊಂಡಿದ್ದಾರೆ.

ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ಮತ್ತು ಕಿಸಾನ್ ಮಜ್ದೂರ್ ಮೋರ್ಚಾದ (ಕೆಎಂಎಂ) ‘ದೆಹಲಿ ಚಲೋ’ ಕರೆಗೆ ಒಂದು ದಿನ ಮೊದಲು, ಕೇಂದ್ರ ಸರ್ಕಾರ ರೈತ ಸಂಘದ ಮುಖಂಡರಿಗೆ ಮತ್ತು ರೈತರ ಪರವಾಗಿ ಪ್ರಚಾರಕ್ಕೆ ಸಂಬಂಧಿಸಿದ 100ಕ್ಕೂ ಅಧಿಕ ಎಕ್ಸ್ ಖಾತೆಗಳನ್ನು ತಡೆಹಿಡಿಯಲಾಗಿದೆ.

MSP ಜಾರಿ, ಲಖಿಂಪುರ ಖೇರಿ ಪ್ರಕರಣದಲ್ಲಿ ನ್ಯಾಯ, ರೈತರ ಸಾಲಮನ್ನಾ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರೈತರು ದೆಹಲಿ ಚಲೋ ಪ್ರತಿಭಟನೆ ಹಮ್ಮಿಕೊಂಡಿದ್ದರು. ಆದರೆ ರೈತರನ್ನು ಪಂಜಾಬ್ ಮತ್ತು ಹರಿಯಾಣ ನಡುವಿನ ಶಂಭು, ಖಾನೌರಿ ಮತ್ತು ದಬ್ವಾಲಿ ಗಡಿಯಲ್ಲಿ ಪೊಲೀಸರು ತಡೆ ಹಿಡಿದಿದ್ದರು. ಫೆಬ್ರವರಿ 13ರಂದು ದೆಹಲಿ ಚಲೋ ಪ್ರತಿಭಟನೆ ಪ್ರಾರಂಭವಾದಾಗಿನಿಂದ ಕೇಂದ್ರ ಸರ್ಕಾರವು ಸಾಮಾಜಿಕ ಮಾಧ್ಯಮ ಖಾತೆಗಳಿಗೆ ನಿರ್ಬಂಧ ವಿಧಿಸಿರುವುದು ಇದು ಮೂರನೇ ಬಾರಿಯಾಗಿದೆ.

ಇದಕ್ಕೂ ಮೊದಲು, ಫೆಬ್ರವರಿ 12ರ ರಾತ್ರಿ ದೆಹಲಿ ಚಲೋ ಕರೆಗೆ ಒಂದು ದಿನ ಮುಂಚಿತವಾಗಿ ಸರ್ಕಾರವು ರೈತ ಸಂಘದ ಮುಖಂಡರಿಗೆ ಸೇರಿದ ಹನ್ನೆರಡು ಸಾಮಾಜಿಕ ಮಾಧ್ಯಮ ಖಾತೆಗಳು ಮತ್ತು ರೈತ ಸಂಘಗಳು ಮತ್ತು ಅವರ ಬೆಂಬಲಿಗರ ಅಧಿಕೃತ ಪೇಜ್‌ಗಳನ್ನು ತಡೆ ಹಿಡಿದಿತ್ತು. ಆ ಬಳಿಕ ಫೆಬ್ರವರಿ 21ರಂದು ದೆಹಲಿ ಚಲೋ ಕರೆ ಹಿನ್ನೆಲೆಯಲ್ಲಿ ಅನೇಕ ಸಾಮಾಜಿಕ ಮಾಧ್ಯಮ ಖಾತೆಗಳು, ವಿಶೇಷವಾಗಿ ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಮ್‌ನಲ್ಲಿರುವ ಖಾತೆಗಳನ್ನು ಮತ್ತೆ ತಡೆ ಹಿಡಿಯಲಾಗಿತ್ತು.

ರೈತ ಸಂಘದ ಮುಖಂಡರು ಮೋದಿ ಸರ್ಕಾರದ ಈ ನಡೆಯನ್ನು ಟೀಕಿಸಿದ್ದು, ರೈತರು ದೆಹಲಿ ಚಲೋ ತೆರಳಲು ಕರೆ ನೀಡಿದಾಗಲೆಲ್ಲಾ ಸಾಮಾಜಿಕ ಮಾಧ್ಯಮ ಖಾತೆಗಳನ್ನು ಮತ್ತೆ ಮತ್ತೆ ನಿರ್ಬಂಧಿಸಲಾಗುತ್ತಿದೆ ಎಂದು ಹೇಳಿದ್ದಾರೆ.

ರೈತ ಸಂಘದ ಮುಖಂಡ ಗುರುಪ್ರೀತ್ ಸಂಘ ಅವರು ಮಾತನಾಡಿ, ಮಾರ್ಚ್ 6ರಂದು ದೆಹಲಿ ಚಲೋ ಕರೆ ನೀಡುವುದಕ್ಕಿಂತ ಎರಡು ದಿನಗಳ ಮೊದಲು ಮಾರ್ಚ್ 4ರಂದು ರೈತರು, ರೈತ ಸಂಘದ ಮುಖಂಡರು ಮತ್ತು ಪ್ರತಿಭಟನೆಯನ್ನು ಬೆಂಬಲಿಸುವ ಜನರಿಗೆ ಸೇರಿದ ಸುಮಾರು 100 ಸಾಮಾಜಿಕ ಮಾಧ್ಯಮ ಖಾತೆಗಳನ್ನು ಭಾರತದಲ್ಲಿ ತಡೆಹಿಡಿಯಲಾಗಿದೆ ಎಂದು ಹೇಳಿದ್ದಾರೆ.

ಇಲ್ಲಿಯವರೆಗೆ, ಸರ್ಕಾರವು ನನ್ನ ಮೂರು ಎಕ್ಸ್‌ ಖಾತೆಗಳನ್ನು ತಡೆಹಿಡಿದಿದೆ, ಒಂದು ಖಾತೆಯನ್ನು ನಿರ್ಬಂಧಿಸಿದ ನಂತರ ಮತ್ತೊಂದು ಖಾತೆಯನ್ನು ನಾನು ತೆರೆದಿದ್ದೆ. ಈ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಮೆಟ್ಟಿಲೇರಲು ನಿರ್ಧರಿಸಿದ್ದೇವೆ. ನಮ್ಮ ಕಾನೂನು ತಂಡವು ಈ ಬಗ್ಗೆ ಕಾರ್ಯ ಪ್ರವೃತ್ತವಾಗಿದೆ ಎಂದು ಹೇಳಿದ್ದಾರೆ. ನಮ್ಮ ಧ್ವನಿಯು ಜನರಿಗೆ ತಲುಪಬಾರದು ಎಂಬುವುದು ಸರಕಾರದ ಗುರಿಯಾಗಿದೆ. ರೈತರನ್ನು ಮಾತನಾಡಲು ಬಿಡುವುದಿಲ್ಲ, ಸರ್ಕಾರವು ರೈತರ ಪ್ರತಿಭಟನೆಗೆ ಹೆದರುತ್ತಿದೆ, ಅದಕ್ಕಾಗಿ ಅವರು ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿಷೇಧಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ‘ದೆಹಲಿ ಚಲೋ’ ಹಮ್ಮಿಕೊಂಡಿರುವ ರೈತರು, ಇಂದು ತಮ್ಮ ಪಾದಯಾತ್ರೆಯನ್ನು ಪುನರಾರಂಭಿಸಲಿದ್ದಾರೆ. ಈ ಹಿನ್ನೆಲೆ ಪಂಜಾಬ್-ಹರಿಯಾಣ ಗಡಿಯಲ್ಲಿ ಪೊಲೀಸರು ಭದ್ರತೆ ಹೆಚ್ಚಿಸಿದ್ದಾರೆ. ರೈತರ ಪ್ರತಿಭಟನೆಯನ್ನು ಗಮನದಲ್ಲಿಟ್ಟುಕೊಂಡು ಟಿಕ್ರಿ, ಸಿಂಘು ಮತ್ತು ಘಾಜಿಪುರ ಗಡಿಗಳಲ್ಲಿ ಕಟ್ಟುನಿಟ್ಟಿನ ನಿಗಾ ವಹಿಸುವಂತೆ ದೆಹಲಿ ಪೊಲೀಸ್‌ ಮುಖ್ಯಸ್ಥರು ತಮ್ಮ ಸಿಬ್ಬಂದಿಗೆ ಸೂಚಿಸಿದ್ದಾರೆ. ರೈಲ್ವೆ ಮತ್ತು ಬಸ್‌ ನಿಲ್ದಾಣಗಳಲ್ಲಿ ಹೆಚ್ಚುವರಿ ಪೊಲೀಸ್ ಮತ್ತು ಅರೆಸೇನಾ ಪಡೆಗಳನ್ನು ಸಹ ನಿಯೋಜಿಸಲಾಗಿದೆ. ವಿವಿಧೆಡೆ ತಪಾಸಣೆ ತೀವ್ರಗೊಳಿಸಲಾಗಿದ್ದು, ರಾಜಧಾನಿಯಲ್ಲಿ ಸಂಚಾರ ದಟ್ಟಣೆ ಉಂಟಾಗಬಹುದು ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನು ಓದಿ: ‘ರಾಯಬರೇಲಿ ಕರೆಯುತ್ತಿದೆ…’; ಕಾಂಗ್ರೆಸ್ ಭದ್ರಕೋಟೆ ಕ್ಷೇತ್ರದಲ್ಲಿ ಪ್ರಿಯಾಂಕಾ ಗಾಂಧಿಯನ್ನು ಬೆಂಬಲಿಸಿ ಪೋಸ್ಟರ್‌ ಚಳವಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...