Homeಮುಖಪುಟಎಂವಿಎ 160-165 ಸ್ಥಾನಗಳನ್ನು ಗೆಲ್ಲಲಿದೆ: ಶಿವಸೇನೆ (ಯುಬಿಟಿ) ನಾಯಕ ಸಂಜಯ್ ರಾವತ್

ಎಂವಿಎ 160-165 ಸ್ಥಾನಗಳನ್ನು ಗೆಲ್ಲಲಿದೆ: ಶಿವಸೇನೆ (ಯುಬಿಟಿ) ನಾಯಕ ಸಂಜಯ್ ರಾವತ್

- Advertisement -
- Advertisement -

ಮಹಾರಾಷ್ಟ್ರದ 288 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಪ್ರತಿಪಕ್ಷಗಳ ಮೈತ್ರಿಯಾದ ಮಹಾ ವಿಕಾಸ್ ಅಘಾಡಿ (ಎಂವಿಎ)ಯು ಒಟ್ಟು 160 ರಿಂದ 165 ಸ್ಥಾನಗಳನ್ನು ಗೆದ್ದು ರಾಜ್ಯದಲ್ಲಿ ಸರ್ಕಾರವನ್ನು ರಚಿಸಲಿದೆ ಎಂದು ಶಿವಸೇನೆ (ಯುಬಿಟಿ) ಸಂಸದ ಸಂಜಯ್ ರಾವತ್ ಗುರುವಾರ ಹೇಳಿದ್ದಾರೆ. ಅದಾಗ್ಯೂ, ಎಕ್ಸಿಟ್ ಪೋಲ್‌ಗಳು ಆಡಳಿತರೂಢ ಮಹಾಯುತಿ ರಾಜ್ಯದಲ್ಲಿ ಗೆಲ್ಲಲಿವೆ ಎಂದು ಸೂಚಿಸಿವೆ. ಎಂವಿಎ 160-165

ಶನಿವಾರ ನಡೆಯಲಿರುವ ಮತ ಎಣಿಕೆಗೆ ಮುನ್ನ ಎಂವಿಎ ನಾಯಕರು ಗುರುವಾರ ಸಭೆ ನಡೆಸಲಿದ್ದಾರೆ ಎಂದು ರಾಜ್ಯಸಭಾ ಸಂಸದರೂ ಆಗಿರುವ ಸಂಜಯ್ ರಾವತ್ ಹೇಳಿದ್ದಾರೆ. ಬುಧವಾರ ಮತದಾನ ಮುಗಿದ ತಕ್ಷಣವೆ ಪ್ರಕಟವಾಗಿದ್ದ ಎಕ್ಸಿಟ್ ಪೋಲ್‌ಗಳು ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ ಮೈತ್ರಿಕೂಟಕ್ಕೆ ಬಹುಮತ ಸಿಗಲಿದೆ ಎಂದು ಸೂಚಿಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ನಾವು ಮತ್ತು ನಮ್ಮ ಮಿತ್ರಪಕ್ಷಗಳಾದ ಪಿಡಬ್ಲ್ಯೂಪಿ, ಸಮಾಜವಾದಿ ಪಕ್ಷ, ಎಡಪಕ್ಷಗಳು ಸೇರಿದಂತೆ ಸಣ್ಣ ಪಕ್ಷಗಳು ಬಹುಮತದ ಗಡಿ ದಾಟುತ್ತಿವೆ. ನಾವು 160-165 ಸ್ಥಾನಗಳನ್ನು ಗೆಲ್ಲುತ್ತೇವೆ. ರಾಜ್ಯದಲ್ಲಿ ಸ್ಥಿರ ಸರ್ಕಾರ ಇರುತ್ತದೆ. ನಾನು ಅದನ್ನು ಅತ್ಯಂತ ಆತ್ಮವಿಶ್ವಾಸದಿಂದ ಹೇಳಬಲ್ಲೆ” ಎಂದು ಸಂಜಯತ್ ರಾವತ್ ಸುದ್ದಿಗಾರರಿಗೆ ತಿಳಿಸಿದ್ದಾರೆ. ಎಂವಿಎ 160-165

ಮಹಾ ವಿಕಾಸ್ ಅಘಾಡಿಯಲ್ಲಿ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (UBT), ಕಾಂಗ್ರೆಸ್ ಮತ್ತು ಶರದ್ ಪವಾರ್ ಅವರ NCP (SP) ಪಕ್ಷಗಳು ಇವೆ. ಆಡಳಿತಾರೂಢ ಮಹಾಯುತಿ ಮೈತ್ರಿಯಲ್ಲಿ ಬಿಜೆಪಿ, ಸಿಎಂ ಏಕನಾಥ್ ಶಿಂಧೆ ಅವರ ಶಿವಸೇನೆ ಮತ್ತು ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರ ಎನ್‌ಸಿಪಿ ಪಕ್ಷಗಳು ಇವೆ.

ವಿರೋಧ ಪಕ್ಷದ MVA ಒಕ್ಕೂಟವು 2024 ರ ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಉತ್ತಮ ಪ್ರದರ್ಶನವನ್ನು ಮಾಡಿತ್ತು. ಇದರ ವಿರುದ್ಧವಾಗಿ ಮಹಾಯುತಿ ಮೈತ್ರಿಕೂಟವು ಅಧಿಕಾರವನ್ನು ಉಳಿಸಿಕೊಳ್ಳಲು ಭಾರಿ ಹೋರಾಟ ಮಾಡುತ್ತಿದೆ.

2019 ರ ವಿಧಾನಸಭಾ ಚುನಾವಣೆಯಲ್ಲಿ 61.74% ಮತದಾನವಾಗಿತ್ತು, ಆದರೆ ಬುಧವಾರ ನಡೆದ ವಿಧಾನಸಭಾ ಚುನಾವಣೆಯಲ್ಲಿ ಅಂದಾಜು 65% ದಷ್ಟು ಮತದಾನವಾಗಿದೆ ಎಂದು ತಾತ್ಕಾಲಿಕ ಅಂಕಿ ಅಂಶಗಳು ಹೇಳಿವೆ.

ಇದನ್ನೂ ಓದಿ: ಹೃದಯಹೀನ ಸರ್ಕಾರದ ನೀತಿ, ಕ್ರಾಂತಿಯ ಅಪ್ರಯೋಗಿಕ ಹಾದಿ ವಿಕ್ರಂ ಗೌಡ ದುರಂತ ಅಂತ್ಯಕ್ಕೆ ಕಾರಣ: ನೂರು ಶ್ರೀಧರ್ ಮತ್ತು ನಾಗರಾಜ್ ಸಿರಿಮನೆ ಜಂಟಿ ಹೇಳಿಕೆ

ಹೃದಯಹೀನ ಸರ್ಕಾರದ ನೀತಿ, ಕ್ರಾಂತಿಯ ಅಪ್ರಯೋಗಿಕ ಹಾದಿ ವಿಕ್ರಂ ಗೌಡ ದುರಂತ ಅಂತ್ಯಕ್ಕೆ ಕಾರಣ: ನೂರು ಶ್ರೀಧರ್ ಮತ್ತು ನಾಗರಾಜ್ ಸಿರಿಮನೆ ಜಂಟಿ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...