Homeಮುಖಪುಟಎಂವಿಎ ಮೈತ್ರಿ ಸರ್ಕಾರ ರಚಿಸದಂತೆ ಮಹಾರಾಷ್ಟ್ರ ಚುನಾವಣೆ ನಿಗದಿ; ಬಿಜೆಪಿಗೆ ಲಾಭ ಮಾಡುವ ಉದ್ದೇಶ: ಆರೋಪ

ಎಂವಿಎ ಮೈತ್ರಿ ಸರ್ಕಾರ ರಚಿಸದಂತೆ ಮಹಾರಾಷ್ಟ್ರ ಚುನಾವಣೆ ನಿಗದಿ; ಬಿಜೆಪಿಗೆ ಲಾಭ ಮಾಡುವ ಉದ್ದೇಶ: ಆರೋಪ

- Advertisement -
- Advertisement -

ಮಹಾರಾಷ್ಟ್ರ ಚುನಾವಣೆ ನಂತರ ಸರ್ಕಾರ ರಚನೆಗೆ ಕೇವಲ 48 ಗಂಟೆಗಳ ಕಾಲಾವಕಾಶ ನೀಡುವ ಮೂಲಕ ಚುನಾವಣಾ ಆಯೋಗವು ಬಿಜೆಪಿಗೆ ಲಾಭವಾಗುವಂತೆ ವೇಳಾಪಟ್ಟಿ ಮಾಡಿದೆ ಎಂದು ಶಿವಸೇನೆ(ಯುಬಿಟಿ) ನಾಯಕ ಸಂಜಯ್ ರಾವತ್ ಭಾನುವಾರ ಹೇಳಿದ್ದಾರೆ. ಪ್ರತಿಪಕ್ಷಗಳ ಮೈತ್ರಿಯಾದ ಮಹಾ ವಿಕಾಸ್ ಅಘಾಡಿಗೆ ಸರ್ಕಾರ ರಚಿಸಲು ಸಾಧ್ಯವಾಗಬಾರದು ಎಂಬ ಕಾರಣಕ್ಕೆ ಬಿಜೆಪಿ ಈ ತಂತ್ರ ಹೂಡಿದೆ ಎಂದು ಅವರು ಪ್ರತಿಪಾದಿಸಿದ್ದಾರೆ. ಎಂವಿಎ ಮೈತ್ರಿ

ಪ್ರಸ್ತುತ ವಿಧಾನಸಭೆಯ ಅವಧಿ ನವೆಂಬರ್ 26 ರಂದು ಕೊನೆಗೊಳ್ಳುತ್ತದೆ. ರಾಜ್ಯದಲ್ಲಿ ನವೆಂಬರ್ 20 ರಂದು ಚುನಾವಣೆ ನಡೆಯಲಿದ್ದು, ನವೆಂಬರ್ 23 ರಂದು ಮತಗಳ ಎಣಿಕೆ ನಡೆಯಲಿದೆ. ಎಂವಿಎ ಮೈತ್ರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸುದ್ದಿಗಾರರೊಂದಿಗೆ ಮಾತನಾಡಿದ ರಾಜ್ಯಸಭಾ ಸಂಸದ ಸಂಜಯ್ ರಾವತ್, ”ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ಗೆಲ್ಲುವುದಿಲ್ಲ ಎಂದು ಅಮಿತ್ ಶಾ ಜೊತೆಗೆ ಬಿಜೆಪಿ ಒಪ್ಪಿಕೊಂಡಂತಿದೆ. ಮಹಾ ವಿಕಾಸ್ ಅಘಾಡಿ ಮೈತ್ರಿ ಪಕ್ಷಗಳಿಗೆ ಚರ್ಚಿಸಲು ಇರುವ ಸಮಯವನ್ನು ಮಿತಿಗೊಳಿಸುವ ತಂತ್ರ ಇದರಲ್ಲಿ ಇದೆ ಎಂದು ತೋರುತ್ತದೆ. ಅಘಾಡಿಯ ಮೈತ್ರಿಯ ಪಕ್ಷವು ಈ ಸಮಯದ ಒಳಗೆ ಸರ್ಕಾರ ರಚಿಸಲು ವಿಫಲವಾದರೆ, ರಾಜ್ಯಪಾಲರು ಆರು ತಿಂಗಳ ಕಾಲ ರಾಷ್ಟ್ರಪತಿ ಆಳ್ವಿಕೆಗೆ ಶಿಫಾರಸು ಮಾಡುತ್ತಾರೆ” ಎಂದು ಹೇಳಿದ್ದಾರೆ.

ಎಂವಿಎ ಅಧಿಕಾರಕ್ಕೆ ಮರಳದಂತೆ ಮಾಡಲು ಬಿಜೆಪಿ ಪೂರ್ವಭಾವಿ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ರಾವತ್ ಹೇಳಿದ್ದಾರೆ. “ಚುನಾವಣಾ ಆಯೋಗ ಪರಿಣಾಮಕಾರಿಯಾಗಿ ಸರ್ಕಾರವನ್ನು ರಚಿಸುವ ಅಘಾಡಿ ಮೈತ್ರಿಯ ಅವಕಾಶವನ್ನು ನಿರ್ಬಂಧಿಸುವ ರೀತಿಯಲ್ಲಿ ಚುನಾವಣೆಗಳನ್ನು ನಿಗದಿಪಡಿಸಿದೆ” ಎಂದು ಅವರು ಹೇಳಿದ್ದಾರೆ.

ನವೆಂಬರ್ 23 ರಂದು ಮತ ಎಣಿಕೆ ನಡೆಯಲಿದೆ, ಅಂದರೆ ಅಘಾಡಿ ಮೈತ್ರಿಯ ಪಕ್ಷಗಳಾದ ಶಿವಸೇನೆ (ಯುಬಿಟಿ), ಕಾಂಗ್ರೆಸ್, ಎನ್‌ಸಿಪಿ (ಎಸ್‌ಪಿ) ಮತ್ತು ಇತರ ಸಣ್ಣ ಪಕ್ಷಗಳು ಸರ್ಕಾರ ರಚನೆಗೆ ಕೇವಲ 48 ಗಂಟೆಗಳ ಕಾಲಾವಕಾಶವಿರುತ್ತದೆ ಮತ್ತು ಇದು ಅನ್ಯಾಯವಾಗಿದೆ ಎಂದು ಸಂಜಯ್ ರಾವತ್ ಹೇಳಿದ್ದಾರೆ.

ಚುನಾವಣಾ ಆಯೋಗದ ಕ್ರಮಗಳು ಬಿಜೆಪಿ ವಕ್ತಾರರಂತೆಯೇ ಇವೆ. ಆಯೋಗ ಇವಿಎಂ ಅನ್ನು ಬೆಂಬಲಿಸುತ್ತದೆ ಆದರೆ ಹರಿಯಾಣ ರಾಜ್ಯ ಚುನಾವಣೆಯಲ್ಲಿ ಈ ಯಂತ್ರಗಳನ್ನು ಟ್ಯಾಂಪರಿಂಗ್ ಮಾಡಿದ ಆರೋಪದ ಬಗ್ಗೆ ಮಾತನಾಡುವಾಗ ಮೌನವಾಗಿರುತ್ತದೆ. ದೂರುಗಳ ಬಗ್ಗೆ ಆಯೋಗವು ಯಾವುದೇ ಕ್ರಮ ಕೈಗೊಂಡಿಲ್ಲ. ಲೋಕಸಭೆ ಚುನಾವಣೆ ವೇಳೆ ಹಣ ದುರುಪಯೋಗವಾಗಿದೆ ಎಂದು ಅವರು ಹೇಳಿದ್ದಾರೆ.

ರಾಜ್ಯ ಚುನಾವಣೆ ಘೋಷಣೆಯಾಗುವ ಮುನ್ನವೇ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಸುಮಾರು 200 ವಿಧಾನಸಭಾ ಕ್ಷೇತ್ರಗಳಲ್ಲಿ 15 ಕೋಟಿ ರೂ.ಗಳನ್ನು ಹಂಚಲು ನಿರ್ಧರಿಸಿದ್ದಾರೆ ಮತ್ತು ಅದು ಸರ್ಕಾರದ ಹಣ ಎಂದು ರಾವತ್ ಹೇಳಿದ್ದಾರೆ.

ಇದನ್ನೂ ಓದಿ: ಹರಿಯಾಣ ನಂತರ ಮಹಾರಾಷ್ಟ್ರದ ಕಡೆಗೆ ಆರೆಸ್ಸೆಸ್‌ | ಬಿಜೆಪಿಗೆ ಲಾಭ ಮಾಡಲು ತಂಡ ರಚನೆ!

ಹರಿಯಾಣ ನಂತರ ಮಹಾರಾಷ್ಟ್ರದ ಕಡೆಗೆ ಆರೆಸ್ಸೆಸ್‌ | ಬಿಜೆಪಿಗೆ ಲಾಭ ಮಾಡಲು ತಂಡ ರಚನೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...

ತೆಲಂಗಾಣ| ಕೆಸಿಆರ್‌ ಮನೆ ಮುಂದೆ ದಲಿತ ಮುಖಂಡರಿಂದ ಪ್ರತಿಭಟನೆ; ಬಿಆರ್‌ಎಸ್‌ ಕಾರ್ಯಕರ್ತರಿಂದ ನೀರು-ಅರಿಶಿನ ಬಳಸಿ ರಸ್ತೆ ಶುದ್ಧೀಕರಣ

ತೆಲಂಗಾಣದ ಸಿದ್ಧಾಪೇಟೆ ಜಿಲ್ಲೆಯ ಎರ್ರವಳ್ಳಿಯಲ್ಲಿರುವ ಬಿಆರ್‌ಎಸ್ ಅಧ್ಯಕ್ಷ ಕೆ. ಚಂದ್ರಶೇಖರ ರಾವ್ (ಕೆಸಿಆರ್) ಅವರ ಫಾರ್ಮ್ ಹೌಸ್ ಬಳಿ ದಲಿತ ಮುಖಂಡರು ಮತ್ತು ಕಾಂಗ್ರೆಸ್ ನಡೆಸಿದ ಪ್ರತಿಭಟನೆಯ ನಂತರ, ಬಿಆರ್‌ಎಸ್ ನಾಯಕರು ನಡೆಸಿದ...

ಉದ್ಯಮಿಗಳಾದ ನಂದನ್ ನಿಲೇಕಣಿ- ನಿಖಿಲ್ ಕಾಮತ್, ನಟ ಶಿವರಾಜ್‌ಕುಮಾರ್ ಅವರಿಗೂ ಎಸ್‌ಐಆರ್ ನೋಟಿಸ್‌

ಇನ್ಫೋಸಿಸ್ ಸಹ-ಸಂಸ್ಥಾಪಕ, ಕೇಂದ್ರ ಸರ್ಕಾರದ 'ಪರೀಕ್ಷಾ ಸುಧಾರಣಾ ಉನ್ನತ ಮಟ್ಟದ ಕಾರ್ಯಪಡೆ' ಮುಕ್ಯಸ್ಥ ನಂದನ್ ನಿಲೇಕಣಿ ಹಾಗೂ ಅವರ ಇಡೀ ಕುಟುಂಬವು, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಚುನಾವಣಾ...

ರಾಷ್ಟ್ರೀಯ ಮಹಿಳಾ ಆಯೋಗದ ಕಾರ್ಯಾಗಾರದಲ್ಲಿ ಬರೀ ಹಿಂದಿ ಮಾತು : ಆಕ್ಷೇಪ ವ್ಯಕ್ತಪಡಿಸಿ ಹೊರನಡೆದ ಕೇರಳದ ಶಾಸಕರು

ರಾಷ್ಟ್ರೀಯ ಮಹಿಳಾ ಆಯೋಗ (NCW) ಮಂಗಳವಾರ (ಸೆ.8) ಹಮ್ಮಿಕೊಂಡಿದ್ದ ಕಾರ್ಯಾಗಾರದಲ್ಲಿ, ಬಹುಪಾಲು ಸೆಷನ್‌ಗಳನ್ನು ಹಿಂದಿ ಭಾಷೆಯಲ್ಲೇ ನಡೆಸಲಾಗುತ್ತಿದೆ ಮತ್ತು ಹಿಂದಿ ಮಾತನಾಡದ ರಾಜ್ಯಗಳ ಭಾಗವಹಿಸುವಿಕೆಗೆ ಕರಾರುವಕ್ಕಾಗಿ ನಡವಳಿಕೆಗಳನ್ನು ಅರ್ಥಮಾಡಿಕೊಳ್ಳಲು ಕಷ್ಟವಾಗುತ್ತಿದೆ ಎಂದು ಆರೋಪಿಸಿ,...

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...