Homeಮುಖಪುಟಎಂವಿಎ ಅಂತಿಮ ಸೀಟು ಹಂಚಿಕೆ ಶುಕ್ರವಾರ ಪ್ರಕಟ: ಮಹಾರಾಷ್ಟ್ರ ಕಾಂಗ್ರೆಸ್

ಎಂವಿಎ ಅಂತಿಮ ಸೀಟು ಹಂಚಿಕೆ ಶುಕ್ರವಾರ ಪ್ರಕಟ: ಮಹಾರಾಷ್ಟ್ರ ಕಾಂಗ್ರೆಸ್

- Advertisement -
- Advertisement -

ಮಹಾರಾಷ್ಟ್ರದ ವಿಪಕ್ಷಗಳ ಮಹಾ ವಿಕಾಸ್ ಅಘಾಡಿ (ಎಂವಿಎ) ಮೈತ್ರಿಕೂಟದ ಅಂತಿಮ ಸೀಟು ಹಂಚಿಕೆ ಸೂತ್ರವನ್ನು ಶುಕ್ರವಾರ ಬೆಳಿಗ್ಗೆ ಪ್ರಕಟಿಸಲಾಗುವುದು ಎಂದು ಮಹಾರಾಷ್ಟ್ರ ಕಾಂಗ್ರೆಸ್ ಮುಖ್ಯಸ್ಥ ನಾನಾ ಪಟೋಲೆ ಗುರುವಾರ ಹೇಳಿದ್ದಾರೆ. ರಾಜ್ಯದ 288 ಕ್ಷೇತ್ರಗಳಲ್ಲಿ ಪ್ರಮುಖ ಮೂರು ಪಕ್ಷಗಳು ತಲಾ 85 ಕ್ಷೇತ್ರಗಳನ್ನು ಹಂಚಿಕೊಂಡಿರುವುದಾಗಿ ಬುಧವಾರ ಹೇಳಿತ್ತು. ಒಟ್ಟು 270 ಕ್ಷೇತ್ರಗಳಲ್ಲಿ ಮೈತ್ರಿ ಪಕ್ಷಗಳು ಸ್ಪರ್ಧಿಸಲಿದ್ದು, ಉಳಿದ 18 ಕ್ಷೇತ್ರವನ್ನು ಇಂಡಿಯಾ ಮೈತ್ರಿಕೂಟದ ಇತರ ಪಕ್ಷಗಳಿಗೆ ಬಿಟ್ಟುಕೊಡುವುದಾಗಿ ಹೇಳಿದ್ದರು.

ನವೆಂಬರ್ 20 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ಟಿಕೆಟ್ ಪಡೆಯಲು ಖಚಿತವಾಗಿರುವ ಕೆಲವು ಅಭ್ಯರ್ಥಿಗಳಿಗೆ ನಾಮಪತ್ರ ಸಲ್ಲಿಸಲು ಪಕ್ಷವು ಈಗಾಗಲೇ ಕೇಳಿದೆ ಎಂದು ಪಟೋಲೆ ಮುಂಬೈ ಅಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ. ಅಂತಿಮ ಸೀಟು ಹಂಚಿಕೆಯನ್ನು ಇಂದು ಸಂಜೆ ಅಥವಾ ನಾಳೆ ಬೆಳಿಗ್ಗೆ ಪ್ರಕಟಿಸಲಾಗುವುದು ಎಂದು ಅವರು ಹೇಳಿದ್ದಾರೆ. ಬುಧವಾರ ಮಾತನಾಡಿದ್ದ ಅವರು ರಾಜ್ಯದ ಎಲ್ಲಾ 288 ಕ್ಷೇತ್ರಗಳಲ್ಲೂ ತಮ್ಮ ಎಂವಿಎ ಮೈತ್ರಿ ಸ್ಪರ್ಧಿಸುವುದಾಗಿ ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಹಲವು ದಿನಗಳ ಬಹಿರಂಗ ಅಸಮಾಧಾನದ ನಂತರ, ಪ್ರತಿಪಕ್ಷಗಳ ಮೈತ್ರಿಯು ಕಾಂಗ್ರೆಸ್, ಎನ್‌ಸಿಪಿ (ಎಸ್‌ಪಿ) ಮತ್ತು ಶಿವಸೇನೆ (ಯುಬಿಟಿ) ಒಟ್ಟು 288 ಸ್ಥಾನಗಳಲ್ಲಿ ತಲಾ 85 ಸ್ಥಾನಗಳ ಸೀಟುಗಳನ್ನು ಹಂಚಿಕೊಂಡಿದ್ದೇವೆ ಎಂದು ಬುಧವಾರ ಘೋಷಿಸಿತ್ತು.

ಇದಕ್ಕೂ ಮುನ್ನ ಗುರುವಾರ ಸೇನಾ (ಯುಬಿಟಿ) ನಾಯಕ ಸಂಜಯ್ ರಾವುತ್ ಅವರು ಮಿತ್ರಪಕ್ಷಗಳ ನಡುವೆ ಕೆಲವು ಸ್ಥಾನಗಳನ್ನು ವಿನಿಮಯ ಮಾಡಿಕೊಳ್ಳುವ ಸಾಧ್ಯತೆಯಿದ್ದು, ಶಿವಸೇನೆ ಅಂತಿಮವಾಗಿ 100 ಸ್ಥಾನಗಳಲ್ಲಿ ಸ್ಪರ್ಧಿಸುವ ಸಾಧ್ಯತೆ ಇದೆ ಎಂದು ಸೂಚಿಸಿದ್ದಾರೆ.

ಈ ಮಧ್ಯೆ ಕಾಂಗ್ರೆಸ್ ಕಾರ್ಯಕರ್ತರು ತಮ್ಮನ್ನು ಕಾಂಗ್ರೆಸ್‌ನ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸುವ ಘೋಷಣೆಗಳನ್ನು ಕೂಗುತ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಎಂವಿಎ ಅಧಿಕಾರಕ್ಕೆ ತರುವುದು ತಮ್ಮ ಮೊದಲ ಕೆಲಸ ಎಂದು ಪಟೋಲೆ ಹೇಳಿದ್ದಾರೆ. ಮುಖ್ಯಮಂತ್ರಿ ಸ್ಥಾನದ ಬಗ್ಗೆ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಅವರು ತಿಳಿಸಿದ್ದಾರೆ.

ಬುಧವಾರ ಸೀಟು ಹಂಚಿಕೆ ಸೂತ್ರದ ಕುರಿತು ಮಾತನಾಡಿದ್ದ ಪಟೋಲೆ, “ಕಾಂಗ್ರೆಸ್, ಎನ್‌ಸಿಪಿ (ಶರದ್ ಪವಾರ್ ಬಣ) ಮತ್ತು ಶಿವಸೇನೆ (ಯುಬಿಟಿ) ತಲಾ 85 ಸ್ಥಾನಗಳಲ್ಲಿ ಸ್ಪರ್ಧಿಸಲು ನಿರ್ಧರಿಸಿದ್ದೇವೆ. ಉಳಿದ 18 ಸ್ಥಾನಗಳ ಬಗ್ಗೆ ನಾವು ಸಮಾಜವಾದಿ ಪಕ್ಷ ಸೇರಿದಂತೆ ನಮ್ಮ ಮೈತ್ರಿ ಪಕ್ಷಗಳೊಂದಿಗೆ ಮಾತುಕತೆ ನಡೆಸುತ್ತೇವೆ ಮತ್ತು ನಾಳೆ ಅವುಗಳನ್ನು ಹಂಚಿಕೆ ಮಾಡುತ್ತೇವೆ” ಎಂದು ಅವರು ಹೇಳಿದ್ದರು.

ಮಹಾರಾಷ್ಟ್ರದಲ್ಲಿ ವಿರೋಧ ಪಕ್ಷಗಳು ತಮ್ಮ ಲೋಕಸಭಾ ಚುನಾವಣೆಯ ಪ್ರದರ್ಶನವನ್ನು ಪುನರಾವರ್ತಿಸಲು ಪ್ರಯತ್ನಿಸುತ್ತಿವೆ. ಲೋಕಸಭೆಯಲ್ಲಿ ಆಡಳಿತರೂಢ ಮಹಾಯುತಿ 17 ಕ್ಷೇತ್ರಗಳನ್ನು ಗೆದ್ದರೆ, 30 ಸ್ಥಾನವನ್ನು ವಿಪಕ್ಷಗಳ ಮಹಾ ವಿಕಾಸ್ ಅಘಾಡಿ ಗೆದ್ದುಕೊಂಡಿತ್ತು. ಕಾಂಗ್ರೆಸ್ ಸ್ಪರ್ಧಿಸಿದ 17 ಸ್ಥಾನಗಳಲ್ಲಿ 13 ಮತ್ತು ಶಿವಸೇನೆ-UBT ಅದು ಸ್ಪರ್ಧಿಸಿದ 21 ಸ್ಥಾನಗಳಲ್ಲಿ 9 ರಲ್ಲಿ ಗೆದ್ದಿತ್ತು.

ಇದನ್ನೂ ಓದಿ: ಬೆಂಗಳೂರು ಪ್ರವಾಹ | ಸ್ಥಳಾಂತರಕ್ಕೆ ನಿರಾಕರಿಸಿದ 20 ಮನೆಯ ಬಾಗಿಲು ಒಡೆದು ತೆರವುಗೊಳಿಸಲು ಡಿಸಿಎಂ ಸೂಚನೆ

ಬೆಂಗಳೂರು ಪ್ರವಾಹ | ಸ್ಥಳಾಂತರಕ್ಕೆ ನಿರಾಕರಿಸಿದ 20 ಮನೆಯ ಬಾಗಿಲು ಒಡೆದು ತೆರವುಗೊಳಿಸಲು ಡಿಸಿಎಂ ಸೂಚನೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...