Homeಮುಖಪುಟ'ಜಯಸೂರ್ಯ ಮೇಲಿನ ನನ್ನ ಆರೋಪ ಸುಳ್ಳಲ್ಲ..'; ನಟಿ ಸೋನಿಯಾ ಮಲ್ಹಾರ್

‘ಜಯಸೂರ್ಯ ಮೇಲಿನ ನನ್ನ ಆರೋಪ ಸುಳ್ಳಲ್ಲ..’; ನಟಿ ಸೋನಿಯಾ ಮಲ್ಹಾರ್

- Advertisement -
- Advertisement -

ಮಲಯಾಳಂ ಸಹ ನಟ ಜಯಸೂರ್ಯ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ ದಾಖಲಿಸಿರುವ ನಟಿ ಸೋನಿಯಾ ಮಲ್ಹಾರ್, ಆರೋಪಿಗಳು ತಮ್ಮ ಮೇಲಿನ ಆರೋಪಗಳನ್ನು ಸುಳ್ಳು ಎಂದು ಕರೆದು ಕಾನೂನು ಕ್ರಮಕ್ಕೆ ಬೆದರಿಕೆ ಹಾಕಿದರೂ ಹಿಂದೆ ಸರಿಯುವುದಿಲ್ಲ ಎಂದು ಹೇಳಿದ್ದಾರೆ.

“ಅವರು (ಜಯಸೂರ್ಯ) ಆರೋಪವನ್ನು ಸುಳ್ಳು ಎಂದು ಕರೆಯುತ್ತಿದ್ದಾರೆ. ಇದು ಸುಳ್ಳು ಆರೋಪವಲ್ಲ; ನನ್ನ ಹೇಳಿಕೆ ತುಂಬಾ ನಿಜ ಮತ್ತು ಸ್ಪಷ್ಟವಾಗಿದೆ. ಇದು ನನ್ನ ಜೀವನದಲ್ಲಿ ನಾನು ದಾಖಲಿಸಿದ ಮೊದಲನೇ ಎಫ್‌ಐಆರ್” ಎಂದು ನಟಿ ಎನ್‌ಡಿಟಿವಿಗೆ ನೀಡಿದ ವಿಶೇಷ ಸಂದರ್ಶನದಲ್ಲಿ ತಿಳಿಸಿದ್ದಾರೆ.

ಜಸ್ಟೀಸ್ ಹೇಮಾ ಸಮಿತಿಯ ವರದಿಯು ಮಲಯಾಳಂ ಚಲನಚಿತ್ರೋದ್ಯಮದಲ್ಲಿ ದಶಕಗಳಿಂದ ವ್ಯಾಪಕವಾಗಿರುವ ಲೈಂಗಿಕ ಕಿರುಕುಳ ಮತ್ತು ಶೋಷಣೆ ಕರಾಳ ಮುಖವನ್ನು ಬಹಿರಂಗಪಡಿಸಿದ ನಂತರ ಮಾತನಾಡಿದ ಅನೇಕ ಮಹಿಳಾ ನಟಿಯರಲ್ಲಿ ಮಲ್ಹಾರ್ ಕೂಡ ಒಬ್ಬರು.

ಇದೀಗ ಮತ್ತೊಂದು ‘ಮೀಟು’ ಪ್ರಕರಣವನ್ನು ಎದುರಿಸುತ್ತಿರುವ ಜಯಸೂರ್ಯ ಇಂದು ತಮ್ಮ ಮೇಲಿನ ಎಲ್ಲ ಆರೋಪಗಳನ್ನು ನಿರಾಕರಿಸಿದ್ದು, ತನ್ನ ಹೆಸರನ್ನು ಹೇಳುವವರ ವಿರುದ್ಧ ಕಾನೂನು ಕ್ರಮ ಜರುಗಿಸುವುದಾಗಿ ಬೆದರಿಕೆ ಹಾಕಿದ್ದಾರೆ.

“ಸುಳ್ಳು ಯಾವಾಗಲೂ ಸತ್ಯಕ್ಕಿಂತ ವೇಗವಾಗಿ ಚಲಿಸುತ್ತದೆ. ಆದರೆ, ಸತ್ಯವು ಮೇಲುಗೈ ಸಾಧಿಸುತ್ತದೆ ಎಂದು ನಾನು ನಂಬುತ್ತೇನೆ. ನನ್ನ ನಿರಪರಾಧಿ ಎಂದು ಸಾಬೀತುಪಡಿಸಲು ಎಲ್ಲಾ ಕಾನೂನು ಪ್ರಕ್ರಿಯೆಗಳು ಮುಂದುವರಿಯುತ್ತದೆ” ಎಂದು ಅವರು ಇಂದು ತಿಳಿಸಿದ್ದಾರೆ.

ಹೇಮಾ ಕಮಿಟಿ ವರದಿ ಬಂದಾಗ ಸುದ್ದಿ ವಾಹಿನಿಯೊಂದರಲ್ಲಿ ತಮಗಾದ ಸಂಕಷ್ಟವನ್ನು ಹೇಳಿದ್ದೆ. ಆದರೆ, ಕಿರುಕುಳ ನೀಡಿದವರ ಹೆಸರನ್ನೇ ಹೇಳಿಲ್ಲ ಎಂದು ಸೋನಿಯಾ ಮಲ್ಹಾರ್ ಹೇಳಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಹಲವಾರು ವದಂತಿಗಳು ಹರಿದಾಡಲು ಪ್ರಾರಂಭಿಸಿದ ನಂತರ ಅವರು ಜಯಸೂರ್ಯ ಹೆಸರನ್ನು ಉಲ್ಲೇಖಿಸಬೇಕಾಯಿತು.

“ಈ ವಿಷಯವು ಸಾಮಾಜಿಕ ಮಾಧ್ಯಮದಲ್ಲಿ ಸ್ಫೋಟಗೊಂಡಿದೆ ಮತ್ತು ಜನರು ನಾನು ಲಂಚ ತೆಗೆದುಕೊಂಡಿದ್ದೇನೆ ಎಂದು ಹೇಳಿಕೊಂಡರು. ಹಾಗಾಗಿ, ನನ್ನ ಘನತೆಯನ್ನು ಉಳಿಸಲು ನಾನು ಜಯಸೂರ್ಯ ಅವರ ಹೆಸರನ್ನು ತೆಗೆದುಕೊಳ್ಳಬೇಕಾಯಿತು” ಎಂದು ಅವರು ತಿಳಿಸಿದರು.

“ನಾನು ಆ ನಾಯಕನ ಮುಖವನ್ನು ಬಹಿರಂಗಪಡಿಸಿದ್ದೇನೆ. ಏಕೆಂದರೆ, ಅದು ನನ್ನ ಘನತೆಯನ್ನೂ ಕಳೆದುಕೊಳ್ಳುತ್ತದೆ, ನಾನು ಪ್ರಕರಣವನ್ನು ಮುಚ್ಚಿಟ್ಟರೆ ಅದು ನನಗೆ ಒಳ್ಳೆಯದಲ್ಲ” ಎಂದು ಅವರು ಹೇಳಿದರು.

ತಾನು ಹಿಂದೆ ಸರಿಯುವುದಿಲ್ಲ ಮತ್ತು ನ್ಯಾಯಕ್ಕಾಗಿ ತನ್ನ ಹೋರಾಟವನ್ನು ಮುಂದುವರಿಸುವುದಿಲ್ಲ ಎಂದು ನಟಿ ಪ್ರತಿಪಾದಿಸಿದ್ದಾರೆ.

ಲೈಂಗಿಕ ಕಿರುಕುಳದ ವ್ಯಾಪಕ ಆರೋಪಗಳನ್ನು ಬಹಿರಂಗಪಡಿಸಿದ ನ್ಯಾಯಮೂರ್ತಿ ಹೇಮಾ ಸಮಿತಿಯ ವರದಿಯ ಬಿಡುಗಡೆಯ ನಂತರ ಮಲಯಾಳಂ ಚಲನಚಿತ್ರೋದ್ಯಮದಲ್ಲಿ ‘ಮೀಟು’ ಚಳವಳಿ ವೇಗ ಪಡೆದುಕೊಂಡಿತು. 235 ಪುಟಗಳ ಸಮಗ್ರ ವರದಿಯು ಸಾಕ್ಷಿಗಳ ಹೆಸರುಗಳು ಮತ್ತು ಆರೋಪಿಗಳ ಹೆಸರುಗಳೊಂದಿಗೆ ಬಿಡುಗಡೆಯಾಗಿದೆ. 10-15 ಜನ ಪ್ರಭಾವಿ ಪುರುಷ ನಿರ್ಮಾಪಕರು, ನಿರ್ದೇಶಕರು ಮತ್ತು ನಟರ ಸಣ್ಣ ಗುಂಪು ಮಲಯಾಳಂ ಚಲನಚಿತ್ರೋದ್ಯಮದ ಮೇಲೆ ಗಮನಾರ್ಹ ನಿಯಂತ್ರಣವನ್ನು ಹೊಂದಿದೆ ಎಂದು ವರದಿ ಬಹಿರಂಗಪಡಿಸುತ್ತದೆ.

ಇದನ್ನೂ ಓದಿ; ‘ಕಾನೂನು ವ್ಯವಸ್ಥೆಯಲ್ಲಿ ನನಗೆ ನಂಬಿಕೆಯಿದೆ..’; ಲೈಂಗಿಕ ದೌರ್ಜನ್ಯ ಆರೋಪದ ಬಗ್ಗೆ ಮೌನ ಮುರಿದ ಮಲಯಾಳಂ ನಟ ಜಯಸೂರ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...