Homeಮುಖಪುಟ‘ಗುಜರಾತ್‌ ಚುನಾವಣೆಯಿಂದ ಹೊರಗಿಡಲು ನನ್ನ ಬಂಧನ’: ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ

‘ಗುಜರಾತ್‌ ಚುನಾವಣೆಯಿಂದ ಹೊರಗಿಡಲು ನನ್ನ ಬಂಧನ’: ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ

- Advertisement -
- Advertisement -

ಮದ್ಯ ನೀತಿ ಪ್ರಕರಣದಲ್ಲಿ ಸಿಬಿಐನಿಂದ ವಿಚಾರಣೆಗೆ ಒಳಗಾಗಿರುವ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು, “ಮುಂಬರುವ ಗುಜರಾತ್ ಚುನಾವಣೆಗೆ ಪ್ರಚಾರ ಮಾಡದಂತೆ ಬಿಜೆಪಿಯ ‘ಯೋಜನೆ’ ಭಾಗವಾಗಿ ಇಂದು ತನ್ನನ್ನು ಬಂಧಿಸಲಾಗುವುದು” ಎಂದು ಸೋಮವಾರ ಭವಿಷ್ಯ ನುಡಿದಿದ್ದಾರೆ.

ಭಾನುವಾರ ಅವರು ಸಿಬಿಐ ಕಚೇರಿಗೆ ಹೋಗುವ ದಾರಿಯಲ್ಲಿ ತೆರೆದ ಛಾವಣಿಯ SUV ನಲ್ಲಿ ರೋಡ್ ಶೋ ನಡೆಸಿದ್ದಾರೆ. ಜೊತೆಗೆ ಮಹಾತ್ಮ ಗಾಂಧಿಯವರ ಸ್ಮಾರಕ ರಾಜ್ ಘಾಟ್ ಸೇರಿದಂತೆ ಅನೇಕ ಕಡೆ ನಿಂತು ಆಮ್ ಆದ್ಮಿ ಪಕ್ಷದ (ಎಎಪಿ) ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪಕ್ಷದ ಸಂಸದ ಸಂಜಯ್ ಸಿಂಗ್ ಮತ್ತು ಶಾಸಕರಾದ ಅತಿಶಿ, ಸೌರಭ್ ಭಾರದ್ವಾಜ್ ಅವರಂತಹ ಆಪ್ ನಾಯಕರೊಂದಿಗೆ ಸಿಸೋಡಿಯಾ ಅವರು “ತಿಲಕ” ಧರಿಸಿ ನಂತರ ಮನೆಯಿಂದ ಹೊರಬಂದಿದ್ದಾರೆ. ತನ್ನ ತಾಯಿ ಆಶೀರ್ವಾದ ಮಾಡುತ್ತಿರುವ ವಿಡಿಯೋವನ್ನು ಕೂಡ ಅವರು ಶೇರ್ ಮಾಡಿದ್ದಾರೆ.

ಇದನ್ನೂ ಓದಿ: ‘ಆಫರೇಷನ್‌ ಕಮಲ ವಿಫಲ’: ದೆಹಲಿ ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಲಿರುವ ಸಿಎಂ ಕೇಜ್ರಿವಾಲ್‌

ಸಿಬಿಐ ಪ್ರಶ್ನೆಗಳ ಪಟ್ಟಿಯನ್ನು ಸಿದ್ಧಪಡಿಸಿದ್ದು, ಅವುಗಳನ್ನು “ಹಲವು ಹಂತಗಳಲ್ಲಿ” ಕೇಳಲಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿದೆ. ಇಲ್ಲಿಯವರೆಗೆ ದೊರೆತಿರುವ ಸಾಕ್ಷ್ಯಗಳು ಮತ್ತು ಮದ್ಯದ ಹಗರಣದಲ್ಲಿ ಆರೋಪಿಗಳಾಗಿರುವ ಇತರರ ಹೇಳಿಕೆಗಳನ್ನು ಉಪಮುಖ್ಯಮಂತ್ರಿಯ ಮುಂದೆ ಇಡಲಾಗುವುದು ಎಂದು ಅವರು ಹೇಳಿದ್ದಾರೆ.

“ಅವರು ನನ್ನ ಮನೆಗೆ ದಾಳಿ ಮಾಡಿದರು, ಅದರಿಂದ ಏನೂ ಹೊರಬರಲಿಲ್ಲ. ಅವರು ನನ್ನ ವಿರುದ್ಧ ಏನಾದರೂ ಸಿಗುತ್ತದೆಯೆ ಎಂದು ಹುಡುಕಲು ನನ್ನ ಹಳ್ಳಿಗೆ ಹೋದರು, ಆದರೂ ಅವರಿಗೆ ಏನೂ ಸಿಕ್ಕಿಲ್ಲ. ಈಗ ಅವರು ನನ್ನನ್ನು ಗುಜರಾತ್‌ನಲ್ಲಿ ಪ್ರಚಾರ ಮಾಡದಂತೆ ತಡೆಯಲು ಅವರು ನನ್ನನ್ನು ಬಂಧಿಸಲು ಯೋಜಿಸಿದ್ದಾರೆ. ನಾನು ಸಿಬಿಐ, ಇಡಿಗೆ ಅಥವಾ ಜೈಲಿಗೆ ಹೋಗುವ ಬಗ್ಗೆ ಹೆದರುವುದಿಲ್ಲ” ಎಂದು ಅವರು ದಾರಿಯಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಹೇಳಿದ್ದಾರೆ.

“ಭಗತ್ ಸಿಂಗ್ ಕೂಡ ದೇಶಕ್ಕಾಗಿ ಜೈಲಿಗೆ ಹೋಗಬೇಕಾಯಿತು” ಎಂದು ಅವರು ಘೋಷಿಸಿದರು.

ಈ ನಡುವೆ ಬಿಜೆಪಿ ರೋಡ್‌ಶೋ ಅನ್ನು ಟೀಕಿಸಿದ್ದು, “ಆಮ್ ಆದ್ಮಿ ಪಕ್ಷವು ಭ್ರಷ್ಟಾಚಾರದ ವಿಶ್ವಕಪ್ ಅನ್ನು ಗೆದ್ದಿದೆ” ಎಂದು ತೋರುತ್ತಿದೆ ಎಂದು ಹೇಳಿದೆ.

ಇದನ್ನೂ ಓದಿ: ಏರ್‌ಪೋರ್ಟ್ ವಿವಾದದಲ್ಲಿ ಬಿಜೆಪಿ ಸಂಸದ; ದಿಯೋಘರ್‌ ಡಿಸಿ ವಿರುದ್ಧ ದೆಹಲಿಯಲ್ಲಿ ದೇಶದ್ರೋಹ ಪ್ರಕರಣ ದಾಖಲು

ಇಂದು ಕೂಡಾ ಮನೀಷ್ ಸಿಸೋಡಿಯಾ ಅವರು ತಮ್ಮ ಬೆಂಬಲಿಗರೊಂದಿಗೆ ಬೀದಿಗಳಲ್ಲಿ ತೆರೆದ ಕಾರಿನಲ್ಲಿ ಘೋಷಣೆಗಳನ್ನು ಕೂಗುತ್ತಿರುವ ರೀತಿ ನೋಡಿದರೆ ಆಮ್ ಆದ್ಮಿ ಪಕ್ಷ ಭ್ರಷ್ಟಾಚಾರದ ವಿಶ್ವಕಪ್ ಗೆದ್ದಂತೆ ತೋರುತ್ತಿದೆ ಎಂದು ಬಿಜೆಪಿ ವಕ್ತಾರ ಸಂಬಿತ್ ಪಾತ್ರ ಹೇಳಿದ್ದಾರೆ.

ತಮ್ಮ ಉಪಮುಖ್ಯಮಂತ್ರಿಯ ಬೆಂಬಲಕ್ಕೆ ನಿಂತಿರುವ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು, ಸಿಸೋಡಿಯಾ ಅವರ ವಿರುದ್ಧದ ಪ್ರಕರಣ ‘ಸಂಪೂರ್ಣವಾಗಿ ನಕಲಿ’ ಎಂದು ಆರೋಪಿಸಿದ್ದಾರೆ. ಸಿಸೋಡಿಯಾ ಅವರನ್ನು ನಾಯಕನ ಅವತಾರದಲ್ಲಿ ಚಿತ್ರಿಸುವ ಕಾರ್ಟೂನ್ ಅನ್ನು ಕೇಜ್ರಿವಾಲ್‌ ಟ್ವೀಟ್ ಮಾಡಿದ್ದಾರೆ.

“ಅವರು ಚುನಾವಣಾ ಪ್ರಚಾರಕ್ಕಾಗಿ ಗುಜರಾತ್‌ಗೆ ಹೋಗಬೇಕಿತ್ತು. ಅವರನ್ನು ತಡೆಯುವ ಪ್ರಯತ್ನದಲ್ಲಿ ಅವರನ್ನು ಬಂಧಿಸಲಾಗುವುದು. ಆದರೆ ಚುನಾವಣಾ ಪ್ರಚಾರ ನಿಲ್ಲುವುದಿಲ್ಲ. ಗುಜರಾತ್‌ನ ಪ್ರತಿಯೊಬ್ಬ ವ್ಯಕ್ತಿಯೂ ಇಂದು ಎಎಪಿಗೆ ಪ್ರಚಾರ ಮಾಡುತ್ತಿದ್ದಾರೆ” ಎಂದು ಕೇಜ್ರಿವಾಲ್ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ದೆಹಲಿ: 2023ರ ಜನವರಿ 1ರ ವರೆಗೆ ಪಟಾಕಿ ಉತ್ಪಾದನೆ, ಮಾರಾಟ ಮತ್ತು ಬಳಕೆ ನಿಷೇಧ

ಮನೀಶ್ ಸಿಸೋಡಿಯಾ ಅವರನ್ನು ಗುರಾಜಲ್ ಚುನಾವಣಾ ಫಲಿತಾಂಶ ಹೊರಬೀಳುವವರೆಗೂ ಜೈಲಿನಲ್ಲಿ ಇಡಲಾಗುವುದು ಎಂದು ಕೇಜ್ರಿವಾಲ್‌ ಹೇಳಿದ್ದಾರೆ. “ಡಿಸೆಂಬರ್ 8 ರಂದು ಗುಜರಾತ್ ಫಲಿತಾಂಶ ಹೊರಬೀಳಲಿದೆ. ಈ ಜನರು ಅಲ್ಲಿಯವರೆಗೆ ಮನೀಶ್ ಅವರನ್ನು ಜೈಲಿನಲ್ಲಿಡುತ್ತಾರೆ” ಎಂದು ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.

ಗುಜರಾತ್ ವಿಧಾನಸಭಾ ಚುನಾವಣೆಯ ದಿನಾಂಕವನ್ನು ಚುನಾವಣಾ ಆಯೋಗವು ಇಲ್ಲಿಯವರೆಗೆ ಘೋಷಿಸಿಲ್ಲ.

ಸಿಸೋಡಿಯಾ ಅವರು ಮಾಡಿರುವ ಸರಣಿ ಟ್ವೀಟ್‌ಗಳಲ್ಲಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. “ಗುಜರಾತ್ ಸೋಲುವುದು ಗೊತ್ತಿದ್ದೇ ಬಿಜೆಪಿಗೆ ಭಯವಾಗಿದೆ… ನಾನು ಗುಜರಾತ್ ಗೆ ಹೋಗದಂತೆ ತಡೆಯುವುದು ಅವರ ಉದ್ದೇಶ’’ ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ದೆಹಲಿ ಬೀದಿಯಲ್ಲಿ ಮಹಿಳೆಯ ಕೂದಲು ಹಿಡಿದು ಹೊಟ್ಟೆಗೆ ಒದ್ದ ದುಷ್ಕರ್ಮಿ: FIR ದಾಖಲಿಸುವಂತೆ ಒತ್ತಾಯಿಸಿದ ಮಹಿಳಾ ಆಯೋಗದ ಅಧ್ಯಕ್ಷೆ

ಎಎಪಿ ಕಾರ್ಯಕರ್ತರು ಅಲ್ಲಿ ಸೇರುವುದನ್ನು ತಡೆಯಲು ಅವರ ಮನೆಯ ಸುತ್ತಲೂ ದೊಡ್ಡ ಸಭೆಗಳನ್ನು ನಿಷೇಧಿಸಲಾಗಿದೆ ಮತ್ತು ಸ್ಥಳದಲ್ಲಿ ಭಾರೀ ಪೊಲೀಸ್ ಬಂದೋಬಸ್ತ್ ಕಂಡುಬಂದಿದೆ.

ಕೇಜ್ರಿವಾಲ್, ಸಿಸೋಡಿಯಾ ಮತ್ತು ಅವರ ಪಕ್ಷದ ಇತರರು ಗುಜರಾತ್‌ನಲ್ಲಿ ತಮ್ಮ ಪ್ರಚಾರದ ಕಾರಣದಿಂದ ಬಿಜೆಪಿ ತಮ್ಮನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ.

ಕ್ರಿಮಿನಲ್ ಪಿತೂರಿ ಮತ್ತು ಭ್ರಷ್ಟಾಚಾರದಂತಹ ಆರೋಪಗಳನ್ನು ಪಟ್ಟಿಮಾಡಿ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಸಿಸೋಡಿಯಾ ಮತ್ತು ಇತರ 14 ಜನರ ವಿರುದ್ಧ ಸಿಬಿಐ ಆಗಸ್ಟ್‌ನಲ್ಲಿ ದೆಹಲಿ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿತ್ತು. ಎಎಪಿ ಸರ್ಕಾರದ ಮದ್ಯ ನೀತಿಯು ಮದ್ಯದ ಕಾರ್ಟೆಲ್‌ಗಳಿಗೆ ಸಹಾಯ ಮಾಡಿದ್ದರೆ ಸಿಬಿಐ ತನಿಖೆ ನಡೆಸುತ್ತಿದೆ.

ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿನಯ್ ಕುಮಾರ್ ಸಕ್ಸೇನಾ ಅವರು ಶಿಫಾರಸು ಮಾಡಿದ ಸಿಬಿಐ ತನಿಖೆಯ ನಂತರ ಕಳೆದ ವರ್ಷ ನವೆಂಬರ್ 17 ರಿಂದ ಜಾರಿಗೆ ಬಂದ ಮದ್ಯ ನೀತಿಯನ್ನು ಅರವಿಂದ್ ಕೇಜ್ರಿವಾಲ್ ಸರ್ಕಾರ ಜುಲೈನಲ್ಲಿ ರದ್ದುಗೊಳಿಸಿತು.

ಇದನ್ನೂ ಓದಿ: ಲೆಫ್ಟಿನೆಂಟ್ ಗವರ್ನರ್‌‌‌ ಸಾಹೇಬ್‌‌ ನಿಮ್ಮ ‘ಸೂಪರ್‌ ಬಾಸ್‌’‌ಗೆ ಸ್ವಲ್ಪ ಚಿಲ್ ಮಾಡಲು ಹೇಳಿ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್

ಮದ್ಯ ಮಾರಾಟವನ್ನು ಖಾಸಗಿಯವರಿಗೆ ಹಸ್ತಾಂತರಿಸುವ ನೀತಿಯನ್ನು ಜಾರಿಗೆ ತರುವ ಮೂಲಕ ಎಎಪಿ ಸರ್ಕಾರವು ನಿಯಮಗಳನ್ನು ಉಲ್ಲಂಘಿಸಿದ್ದು, ಸರ್ಕಾರಿ ಮಳಿಗೆಗಳನ್ನು ಮುಚ್ಚಿದೆ ಎಂದು ಒಕ್ಕೂಟ ಸರ್ಕಾರ ಆರೋಪಿಸಿದೆ. ಆದರೆ ಈ ಆರೋಪಿ ಅಲ್ಲಗೆಳೆದಿರುವ ಉಪ ಮುಖ್ಯಮಂತ್ರಿ ಸಿಸೋಡಿಯಾ, ಈ ನೀತಿಯು ಭ್ರಷ್ಟಾಚಾರವನ್ನು ನಿಭಾಯಿಸಲು ಮತ್ತು ಪ್ರಬಲ ಮದ್ಯ ಮಾಫಿಯಾ ವಿರುದ್ಧ ಹೋರಾಡಲು ಉದ್ದೇಶಿಸಲಾಗಿದೆ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...