Homeಮುಖಪುಟ‘ಗುಜರಾತ್‌ ಚುನಾವಣೆಯಿಂದ ಹೊರಗಿಡಲು ನನ್ನ ಬಂಧನ’: ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ

‘ಗುಜರಾತ್‌ ಚುನಾವಣೆಯಿಂದ ಹೊರಗಿಡಲು ನನ್ನ ಬಂಧನ’: ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ

- Advertisement -
- Advertisement -

ಮದ್ಯ ನೀತಿ ಪ್ರಕರಣದಲ್ಲಿ ಸಿಬಿಐನಿಂದ ವಿಚಾರಣೆಗೆ ಒಳಗಾಗಿರುವ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು, “ಮುಂಬರುವ ಗುಜರಾತ್ ಚುನಾವಣೆಗೆ ಪ್ರಚಾರ ಮಾಡದಂತೆ ಬಿಜೆಪಿಯ ‘ಯೋಜನೆ’ ಭಾಗವಾಗಿ ಇಂದು ತನ್ನನ್ನು ಬಂಧಿಸಲಾಗುವುದು” ಎಂದು ಸೋಮವಾರ ಭವಿಷ್ಯ ನುಡಿದಿದ್ದಾರೆ.

ಭಾನುವಾರ ಅವರು ಸಿಬಿಐ ಕಚೇರಿಗೆ ಹೋಗುವ ದಾರಿಯಲ್ಲಿ ತೆರೆದ ಛಾವಣಿಯ SUV ನಲ್ಲಿ ರೋಡ್ ಶೋ ನಡೆಸಿದ್ದಾರೆ. ಜೊತೆಗೆ ಮಹಾತ್ಮ ಗಾಂಧಿಯವರ ಸ್ಮಾರಕ ರಾಜ್ ಘಾಟ್ ಸೇರಿದಂತೆ ಅನೇಕ ಕಡೆ ನಿಂತು ಆಮ್ ಆದ್ಮಿ ಪಕ್ಷದ (ಎಎಪಿ) ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪಕ್ಷದ ಸಂಸದ ಸಂಜಯ್ ಸಿಂಗ್ ಮತ್ತು ಶಾಸಕರಾದ ಅತಿಶಿ, ಸೌರಭ್ ಭಾರದ್ವಾಜ್ ಅವರಂತಹ ಆಪ್ ನಾಯಕರೊಂದಿಗೆ ಸಿಸೋಡಿಯಾ ಅವರು “ತಿಲಕ” ಧರಿಸಿ ನಂತರ ಮನೆಯಿಂದ ಹೊರಬಂದಿದ್ದಾರೆ. ತನ್ನ ತಾಯಿ ಆಶೀರ್ವಾದ ಮಾಡುತ್ತಿರುವ ವಿಡಿಯೋವನ್ನು ಕೂಡ ಅವರು ಶೇರ್ ಮಾಡಿದ್ದಾರೆ.

ಇದನ್ನೂ ಓದಿ: ‘ಆಫರೇಷನ್‌ ಕಮಲ ವಿಫಲ’: ದೆಹಲಿ ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಲಿರುವ ಸಿಎಂ ಕೇಜ್ರಿವಾಲ್‌

ಸಿಬಿಐ ಪ್ರಶ್ನೆಗಳ ಪಟ್ಟಿಯನ್ನು ಸಿದ್ಧಪಡಿಸಿದ್ದು, ಅವುಗಳನ್ನು “ಹಲವು ಹಂತಗಳಲ್ಲಿ” ಕೇಳಲಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿದೆ. ಇಲ್ಲಿಯವರೆಗೆ ದೊರೆತಿರುವ ಸಾಕ್ಷ್ಯಗಳು ಮತ್ತು ಮದ್ಯದ ಹಗರಣದಲ್ಲಿ ಆರೋಪಿಗಳಾಗಿರುವ ಇತರರ ಹೇಳಿಕೆಗಳನ್ನು ಉಪಮುಖ್ಯಮಂತ್ರಿಯ ಮುಂದೆ ಇಡಲಾಗುವುದು ಎಂದು ಅವರು ಹೇಳಿದ್ದಾರೆ.

“ಅವರು ನನ್ನ ಮನೆಗೆ ದಾಳಿ ಮಾಡಿದರು, ಅದರಿಂದ ಏನೂ ಹೊರಬರಲಿಲ್ಲ. ಅವರು ನನ್ನ ವಿರುದ್ಧ ಏನಾದರೂ ಸಿಗುತ್ತದೆಯೆ ಎಂದು ಹುಡುಕಲು ನನ್ನ ಹಳ್ಳಿಗೆ ಹೋದರು, ಆದರೂ ಅವರಿಗೆ ಏನೂ ಸಿಕ್ಕಿಲ್ಲ. ಈಗ ಅವರು ನನ್ನನ್ನು ಗುಜರಾತ್‌ನಲ್ಲಿ ಪ್ರಚಾರ ಮಾಡದಂತೆ ತಡೆಯಲು ಅವರು ನನ್ನನ್ನು ಬಂಧಿಸಲು ಯೋಜಿಸಿದ್ದಾರೆ. ನಾನು ಸಿಬಿಐ, ಇಡಿಗೆ ಅಥವಾ ಜೈಲಿಗೆ ಹೋಗುವ ಬಗ್ಗೆ ಹೆದರುವುದಿಲ್ಲ” ಎಂದು ಅವರು ದಾರಿಯಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಹೇಳಿದ್ದಾರೆ.

“ಭಗತ್ ಸಿಂಗ್ ಕೂಡ ದೇಶಕ್ಕಾಗಿ ಜೈಲಿಗೆ ಹೋಗಬೇಕಾಯಿತು” ಎಂದು ಅವರು ಘೋಷಿಸಿದರು.

ಈ ನಡುವೆ ಬಿಜೆಪಿ ರೋಡ್‌ಶೋ ಅನ್ನು ಟೀಕಿಸಿದ್ದು, “ಆಮ್ ಆದ್ಮಿ ಪಕ್ಷವು ಭ್ರಷ್ಟಾಚಾರದ ವಿಶ್ವಕಪ್ ಅನ್ನು ಗೆದ್ದಿದೆ” ಎಂದು ತೋರುತ್ತಿದೆ ಎಂದು ಹೇಳಿದೆ.

ಇದನ್ನೂ ಓದಿ: ಏರ್‌ಪೋರ್ಟ್ ವಿವಾದದಲ್ಲಿ ಬಿಜೆಪಿ ಸಂಸದ; ದಿಯೋಘರ್‌ ಡಿಸಿ ವಿರುದ್ಧ ದೆಹಲಿಯಲ್ಲಿ ದೇಶದ್ರೋಹ ಪ್ರಕರಣ ದಾಖಲು

ಇಂದು ಕೂಡಾ ಮನೀಷ್ ಸಿಸೋಡಿಯಾ ಅವರು ತಮ್ಮ ಬೆಂಬಲಿಗರೊಂದಿಗೆ ಬೀದಿಗಳಲ್ಲಿ ತೆರೆದ ಕಾರಿನಲ್ಲಿ ಘೋಷಣೆಗಳನ್ನು ಕೂಗುತ್ತಿರುವ ರೀತಿ ನೋಡಿದರೆ ಆಮ್ ಆದ್ಮಿ ಪಕ್ಷ ಭ್ರಷ್ಟಾಚಾರದ ವಿಶ್ವಕಪ್ ಗೆದ್ದಂತೆ ತೋರುತ್ತಿದೆ ಎಂದು ಬಿಜೆಪಿ ವಕ್ತಾರ ಸಂಬಿತ್ ಪಾತ್ರ ಹೇಳಿದ್ದಾರೆ.

ತಮ್ಮ ಉಪಮುಖ್ಯಮಂತ್ರಿಯ ಬೆಂಬಲಕ್ಕೆ ನಿಂತಿರುವ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು, ಸಿಸೋಡಿಯಾ ಅವರ ವಿರುದ್ಧದ ಪ್ರಕರಣ ‘ಸಂಪೂರ್ಣವಾಗಿ ನಕಲಿ’ ಎಂದು ಆರೋಪಿಸಿದ್ದಾರೆ. ಸಿಸೋಡಿಯಾ ಅವರನ್ನು ನಾಯಕನ ಅವತಾರದಲ್ಲಿ ಚಿತ್ರಿಸುವ ಕಾರ್ಟೂನ್ ಅನ್ನು ಕೇಜ್ರಿವಾಲ್‌ ಟ್ವೀಟ್ ಮಾಡಿದ್ದಾರೆ.

“ಅವರು ಚುನಾವಣಾ ಪ್ರಚಾರಕ್ಕಾಗಿ ಗುಜರಾತ್‌ಗೆ ಹೋಗಬೇಕಿತ್ತು. ಅವರನ್ನು ತಡೆಯುವ ಪ್ರಯತ್ನದಲ್ಲಿ ಅವರನ್ನು ಬಂಧಿಸಲಾಗುವುದು. ಆದರೆ ಚುನಾವಣಾ ಪ್ರಚಾರ ನಿಲ್ಲುವುದಿಲ್ಲ. ಗುಜರಾತ್‌ನ ಪ್ರತಿಯೊಬ್ಬ ವ್ಯಕ್ತಿಯೂ ಇಂದು ಎಎಪಿಗೆ ಪ್ರಚಾರ ಮಾಡುತ್ತಿದ್ದಾರೆ” ಎಂದು ಕೇಜ್ರಿವಾಲ್ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ದೆಹಲಿ: 2023ರ ಜನವರಿ 1ರ ವರೆಗೆ ಪಟಾಕಿ ಉತ್ಪಾದನೆ, ಮಾರಾಟ ಮತ್ತು ಬಳಕೆ ನಿಷೇಧ

ಮನೀಶ್ ಸಿಸೋಡಿಯಾ ಅವರನ್ನು ಗುರಾಜಲ್ ಚುನಾವಣಾ ಫಲಿತಾಂಶ ಹೊರಬೀಳುವವರೆಗೂ ಜೈಲಿನಲ್ಲಿ ಇಡಲಾಗುವುದು ಎಂದು ಕೇಜ್ರಿವಾಲ್‌ ಹೇಳಿದ್ದಾರೆ. “ಡಿಸೆಂಬರ್ 8 ರಂದು ಗುಜರಾತ್ ಫಲಿತಾಂಶ ಹೊರಬೀಳಲಿದೆ. ಈ ಜನರು ಅಲ್ಲಿಯವರೆಗೆ ಮನೀಶ್ ಅವರನ್ನು ಜೈಲಿನಲ್ಲಿಡುತ್ತಾರೆ” ಎಂದು ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.

ಗುಜರಾತ್ ವಿಧಾನಸಭಾ ಚುನಾವಣೆಯ ದಿನಾಂಕವನ್ನು ಚುನಾವಣಾ ಆಯೋಗವು ಇಲ್ಲಿಯವರೆಗೆ ಘೋಷಿಸಿಲ್ಲ.

ಸಿಸೋಡಿಯಾ ಅವರು ಮಾಡಿರುವ ಸರಣಿ ಟ್ವೀಟ್‌ಗಳಲ್ಲಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. “ಗುಜರಾತ್ ಸೋಲುವುದು ಗೊತ್ತಿದ್ದೇ ಬಿಜೆಪಿಗೆ ಭಯವಾಗಿದೆ… ನಾನು ಗುಜರಾತ್ ಗೆ ಹೋಗದಂತೆ ತಡೆಯುವುದು ಅವರ ಉದ್ದೇಶ’’ ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ದೆಹಲಿ ಬೀದಿಯಲ್ಲಿ ಮಹಿಳೆಯ ಕೂದಲು ಹಿಡಿದು ಹೊಟ್ಟೆಗೆ ಒದ್ದ ದುಷ್ಕರ್ಮಿ: FIR ದಾಖಲಿಸುವಂತೆ ಒತ್ತಾಯಿಸಿದ ಮಹಿಳಾ ಆಯೋಗದ ಅಧ್ಯಕ್ಷೆ

ಎಎಪಿ ಕಾರ್ಯಕರ್ತರು ಅಲ್ಲಿ ಸೇರುವುದನ್ನು ತಡೆಯಲು ಅವರ ಮನೆಯ ಸುತ್ತಲೂ ದೊಡ್ಡ ಸಭೆಗಳನ್ನು ನಿಷೇಧಿಸಲಾಗಿದೆ ಮತ್ತು ಸ್ಥಳದಲ್ಲಿ ಭಾರೀ ಪೊಲೀಸ್ ಬಂದೋಬಸ್ತ್ ಕಂಡುಬಂದಿದೆ.

ಕೇಜ್ರಿವಾಲ್, ಸಿಸೋಡಿಯಾ ಮತ್ತು ಅವರ ಪಕ್ಷದ ಇತರರು ಗುಜರಾತ್‌ನಲ್ಲಿ ತಮ್ಮ ಪ್ರಚಾರದ ಕಾರಣದಿಂದ ಬಿಜೆಪಿ ತಮ್ಮನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ.

ಕ್ರಿಮಿನಲ್ ಪಿತೂರಿ ಮತ್ತು ಭ್ರಷ್ಟಾಚಾರದಂತಹ ಆರೋಪಗಳನ್ನು ಪಟ್ಟಿಮಾಡಿ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಸಿಸೋಡಿಯಾ ಮತ್ತು ಇತರ 14 ಜನರ ವಿರುದ್ಧ ಸಿಬಿಐ ಆಗಸ್ಟ್‌ನಲ್ಲಿ ದೆಹಲಿ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿತ್ತು. ಎಎಪಿ ಸರ್ಕಾರದ ಮದ್ಯ ನೀತಿಯು ಮದ್ಯದ ಕಾರ್ಟೆಲ್‌ಗಳಿಗೆ ಸಹಾಯ ಮಾಡಿದ್ದರೆ ಸಿಬಿಐ ತನಿಖೆ ನಡೆಸುತ್ತಿದೆ.

ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿನಯ್ ಕುಮಾರ್ ಸಕ್ಸೇನಾ ಅವರು ಶಿಫಾರಸು ಮಾಡಿದ ಸಿಬಿಐ ತನಿಖೆಯ ನಂತರ ಕಳೆದ ವರ್ಷ ನವೆಂಬರ್ 17 ರಿಂದ ಜಾರಿಗೆ ಬಂದ ಮದ್ಯ ನೀತಿಯನ್ನು ಅರವಿಂದ್ ಕೇಜ್ರಿವಾಲ್ ಸರ್ಕಾರ ಜುಲೈನಲ್ಲಿ ರದ್ದುಗೊಳಿಸಿತು.

ಇದನ್ನೂ ಓದಿ: ಲೆಫ್ಟಿನೆಂಟ್ ಗವರ್ನರ್‌‌‌ ಸಾಹೇಬ್‌‌ ನಿಮ್ಮ ‘ಸೂಪರ್‌ ಬಾಸ್‌’‌ಗೆ ಸ್ವಲ್ಪ ಚಿಲ್ ಮಾಡಲು ಹೇಳಿ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್

ಮದ್ಯ ಮಾರಾಟವನ್ನು ಖಾಸಗಿಯವರಿಗೆ ಹಸ್ತಾಂತರಿಸುವ ನೀತಿಯನ್ನು ಜಾರಿಗೆ ತರುವ ಮೂಲಕ ಎಎಪಿ ಸರ್ಕಾರವು ನಿಯಮಗಳನ್ನು ಉಲ್ಲಂಘಿಸಿದ್ದು, ಸರ್ಕಾರಿ ಮಳಿಗೆಗಳನ್ನು ಮುಚ್ಚಿದೆ ಎಂದು ಒಕ್ಕೂಟ ಸರ್ಕಾರ ಆರೋಪಿಸಿದೆ. ಆದರೆ ಈ ಆರೋಪಿ ಅಲ್ಲಗೆಳೆದಿರುವ ಉಪ ಮುಖ್ಯಮಂತ್ರಿ ಸಿಸೋಡಿಯಾ, ಈ ನೀತಿಯು ಭ್ರಷ್ಟಾಚಾರವನ್ನು ನಿಭಾಯಿಸಲು ಮತ್ತು ಪ್ರಬಲ ಮದ್ಯ ಮಾಫಿಯಾ ವಿರುದ್ಧ ಹೋರಾಡಲು ಉದ್ದೇಶಿಸಲಾಗಿದೆ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....