Homeಮುಖಪುಟನಾನು ದಲಿತ ಎಂಬ ಕಾರಣಕ್ಕೆ ಸಂಸತ್ತಿನಲ್ಲಿ ಮಾತನಾಡಲು ಬಿಡುತ್ತಿಲ್ಲ ಎಂದು ಹೇಳಬೇಕೆ?: ಖರ್ಗೆ

ನಾನು ದಲಿತ ಎಂಬ ಕಾರಣಕ್ಕೆ ಸಂಸತ್ತಿನಲ್ಲಿ ಮಾತನಾಡಲು ಬಿಡುತ್ತಿಲ್ಲ ಎಂದು ಹೇಳಬೇಕೆ?: ಖರ್ಗೆ

- Advertisement -
- Advertisement -

ಪ್ರತಿ ವಿಷಯದಲ್ಲೂ ಜಾತಿಯನ್ನು ಎಳೆದು ತರಬಾರದು ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ  ಹೇಳಿದ್ದು, ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಅವರು ಸಾಂವಿಧಾನಿಕ ಪೀಠದಲ್ಲಿ ಕುಳಿತುಕೊಂಡು ತನ್ನ ಜಾತಿ ಬಗ್ಗೆ ಉಲ್ಲೇಖಿಸಿ ಕೊಟ್ಟ ಹೇಳಿಕೆಗೆ ಖರ್ಗೆ ವಿರೋಧವನ್ನು ವ್ಯಕ್ತಪಡಿಸಿದ್ದಾರೆ.

ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಅವರ ಅನುಕರಣೆ ಕುರಿತು ಗದ್ದಲದ ಬೆನ್ನಲ್ಲೇ ರಾಜ್ಯಸಭೆಯಲ್ಲಿ ತನಗೆ ಮಾತನಾಡಲು ಅವಕಾಶ ನಿರಾಕರಿಸಿದಾಗ ಪ್ರತಿ ಬಾರಿಯೂ ತಾನು ದಲಿತನೆಂದು ಮಾತನಾಡಲು ಅವಕಾಶ ನೀಡಿಲ್ಲ ಎಂದು ಹೇಳಬೇಕೆ? ಎಂದು ಖರ್ಗೆ ಪ್ರಶ್ನಿಸಿದ್ದಾರೆ.

ರಾಜ್ಯಸಭೆಯ ಸ್ಪೀಕರ್‌ ಆಗಿರುವ ಉಪರಾಷ್ಟ್ರಪತಿ ಜಗದೀಪ ಧನ್ಕರ್ ಅವರನ್ನು ಟಿಎಂಸಿ ಸಂಸದ ಕಲ್ಯಾಣ ಬ್ಯಾನರ್ಜಿಯವರು ಅನುಕರಣೆಯನ್ನು ಮಾಡಿದ್ದರು. ಇದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದ ಧನ್ಕರ್, ಇದು ರೈತನಾಗಿ ಮತ್ತು ಜಾಟ್ ಆಗಿ ತನ್ನ ಹಿನ್ನೆಲೆಗೆ ಮಾಡಲಾಗಿರುವ ಅವಮಾನವಾಗಿದೆ ಎಂದು ಹೇಳಿದ್ದರು. ಬಿಜೆಪಿ ಕೂಡ ಇದೇ ಅಭಿಪ್ರಾಯ ವ್ಯಕ್ತಪಡಿಸಿತ್ತು.

ಬುಧವಾರ ಈ ಬಗ್ಗೆ ಮಾದ್ಯಮದ ಜೊತೆ ಮಾತನಾಡಿದ ಖರ್ಗೆ, ಇತರ ಸದಸ್ಯರಿಗೆ ರಕ್ಷಣೆ ನೀಡುವುದು ಸಭಾಪತಿಗಳ ಕೆಲಸವಾಗಿದೆ. ಆದರೆ ಅವರು ಸ್ವಯಂ ಇಂತಹ ಹೇಳಿಕೆ ನೀಡುತ್ತಿದ್ದಾರೆ. ಹಲವು ಬಾರಿ ರಾಜ್ಯಸಭೆಯಲ್ಲಿ ಮಾತನಾಡಲು ನನಗೆ ಅವಕಾಶ ನೀಡಿಲ್ಲ. ನಾನು ದಲಿತನಾಗಿರುವುದು ಇದಕ್ಕೆ ಕಾರಣ ಎಂದು ನಾನು ಹೇಳಬೇಕೇ? ಅವರು ಸಂಸತ್ತಿನೊಳಗೆ ಜಾತಿಯ ಕುರಿತು ಮಾತನಾಡಿ ಅದರ ಹೆಸರಿನಲ್ಲಿ ಹೊರಗಿರುವ ಜನರನ್ನು ಪ್ರಚೋದಿಸಬಾರದು ಎಂದು ಖರ್ಗೆ ಹೇಳಿದ್ದಾರೆ.

ಈ ಕುರಿತು ಮಾತನಾಡಿದ ಕಾಂಗ್ರೆಸ್ ನಾಯಕ ಅಧೀರ್ ರಂಜನ್‌ ಚೌಧರಿ, ಸಾಂವಿಧಾನಿಕ ಹುದ್ದೆಯಲ್ಲಿರುವವರು ತಮ್ಮ ಜಾತಿಗಳ ಕುರಿತು ಮಾತನಾಡಿದಾಗ ಅದು ದೇಶಕ್ಕೆ ಅತ್ಯಂತ ದುಃಖದ ದಿನವಾಗುತ್ತದೆ. ಸರಕಾರವು ಇಂತಹ ವಿಷಯಗಳನ್ನು ಚರ್ಚೆಗೆ ತಂದು ಸಂಸತ್‌ನ ಭದ್ರತಾ ಲೋಪದ ವಿಷಯವನ್ನು ಮುಚ್ಚಿಹಾಕಲು ಪ್ರಯತ್ನಿಸುತ್ತಿದೆ ಎಂದು ಹೇಳಿದ್ದಾರೆ.

ಲೋಕಸಭೆ ಮತ್ತು ರಾಜ್ಯಸಭೆಯಿಂದ ಸಂಸದರ ಅಮಾನತಿನ ವಿರುದ್ಧ ಸಂಸತ್ತಿನ ಮೆಟ್ಟಿಲುಗಳ ಮೇಲೆ ಪ್ರತಿಪಕ್ಷಗಳ ಪ್ರತಿಭಟನೆಯ ಸಂದರ್ಭದಲ್ಲಿ ತೃಣಮೂಲ ಕಾಂಗ್ರೆಸ್ ನಾಯಕ ಕಲ್ಯಾಣ್ ಬ್ಯಾನರ್ಜಿ ಅವರು ಧನ್ಕರ್ ಅವರನ್ನು ಅನುಕರಣೆ ಮಾಡಿದ್ದರು. ಆ ಬಳಿಕ ಸಂಸದರ ಅಮಾನತು ವಿಚಾರಕ್ಕಿಂತಲೂ ಜಾಸ್ತಿಯಾಗಿ  ಈ ವಿಚಾರ ರಾಜಕೀಯ ಗದ್ದಲಕ್ಕೆ ಕಾರಣವಾಗಿದೆ.

ಇದಕ್ಕೂ ಮೊದಲು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದ ಮಲ್ಲಿಕಾರ್ಜುನ ಖರ್ಗೆ, ಸಂಸತ್ತಿನಲ್ಲಿ ಉಂಟಾದ ಭದ್ರತಾ ಲೋಪಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಅಮಿತ್‌ ಶಾ ಅವರು ಹೇಳಿಕೆ ನೀಡಬೇಕೆಂದು ಒತ್ತಾಯಿಸಿದ್ದರಿಂದ 141 ಸಂಸದರನ್ನು ಅಮಾನತು ಮಾಡಲಾಗಿದೆ. ಆದರೆ ಆರೋಪಿಗೆ ಪಾಸ್‌ ನೀಡಿದ್ದ ತಮ್ಮದೇ ಪಕ್ಷದ ಸಂಸದರ ಬಗ್ಗೆ ಬಿಜೆಪಿಯವರು ಪ್ರಶ್ನಿಸುತ್ತಿಲ್ಲ. ಕೃತ್ಯಕ್ಕೆ ತಿಂಗಳುಗಳಿಂದ ಯೋಜನೆ ರೂಪಿಸುತ್ತಿದ್ದ ಆರೋಪಿಗಳ ಬಗ್ಗೆ ಅಧಿಕಾರಿಗಳು ಯಾಕೆ ಗಮನಹರಿಸಿಲ್ಲ? ಇದು ಗುಪ್ತಚರ ಇಲಾಖೆಯ ಬಹು ದೊಡ್ಡ ವೈಫಲ್ಯ. ಭದ್ರತಾ ಲೋಪಕ್ಕೆ ಹಿರಿಯ ಅಧಿಕಾರಿಗಳನ್ನು ಹೊಣೆಯನ್ನಾಗಿ ಯಾಕೆ ಮಾಡಲಿಲ್ಲ ಎಂದು ಪ್ರಶ್ನಿಸಿದ್ದರು.

ಇದನ್ನು ಓದಿ: ಅಸ್ಸಾಂನ ಬಂಧನ ಕೇಂದ್ರಗಳಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...