Homeಮುಖಪುಟ"ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ": ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

- Advertisement -
- Advertisement -

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ ಇಎಸ್ಐ ಆಸ್ಪತ್ರೆಯಿಂದ ಮೃತದೇಹವನ್ನು ಬಿಡುಗಡೆ ಮಾಡಲು ಕಾಗದಪತ್ರಗಳಿಗೆ ಸಹಿ ಹಾಕಿದರು. ನಂತರ ಮೃತದೇಹವನ್ನು ತಮ್ಮ ಸ್ವಂತ ಊರಾದ ಸೇಲಂಗೆ ಕೊಂಡೊಯ್ದು ಅಲ್ಲಿ ಅಂತ್ಯಸಂಸ್ಕಾರ ಮಾಡಿದರು ಎಂದು ಅವರು ತಿಳಿಸಿದ್ದಾರೆ.

thenewsminute.com ವರದಿಯ ಪ್ರಕಾರ, “ನನ್ನ ಅನುಮತಿ ಇಲ್ಲದೆಯೇ ನನ್ನ ಮಗುವನ್ನು ಸುಡಲಾಗಿದೆ. ನಾನು ಆಸ್ಪತ್ರೆಯಲ್ಲಿ ಕಾಯುತ್ತಿದ್ದೆ, ಆದರೆ ಅವರು ಮಗುವನ್ನು ಹಿಂಬಾಗಿಲಿನಿಂದ ಕರೆದುಕೊಂಡು ಹೋದರು” ಎಂದು ತಾಯಿ ಅಲವತ್ತುಕೊಂಡಿದ್ದಾರೆ.

“ನ್ಯಾಯ ಸಿಗುವವರೆಗೂ ಮೃತದೇಹವನ್ನು ಸ್ವೀಕರಿಸಬಾರದು ಎಂದು ನಾನು ನಿರ್ಧರಿಸಿದ್ದೆ. ನನ್ನನ್ನು ಮತ್ತು ನನ್ನ ಕುಟುಂಬದವರನ್ನು ಆಸ್ಪತ್ರೆಯ ಒಳಗೆ ಬಿಡಲಿಲ್ಲ. ನನ್ನ ಪತಿ ಮತ್ತು ಅವರ ಕುಟುಂಬದವರನ್ನು ಮಾತ್ರ ಒಳಗೆ ಬಿಟ್ಟರು. ಮೃತದೇಹವನ್ನು ಅಲ್ಲಿಂದ ತೆಗೆದುಕೊಂಡು ಹೋಗುತ್ತಿರುವುದು ನಮಗೆ ತಿಳಿಯಲೇ ಇಲ್ಲ” ಎಂದು ತಾಯಿ ನೋವು ತೋಡಿಕೊಂಡಿದ್ದಾರೆ.

“ನಾನು ಕಾಗದಪತ್ರಗಳಿಗೆ ಸಹಿ ಹಾಕಲು ನಿರಾಕರಿಸಿದ ಕಾರಣಕ್ಕಾಗಿಯೇ ನನ್ನ ಮಗುವಿನ ಮೃತದೇಹವನ್ನು ನೋಡದಂತೆ ನನ್ನನ್ನು ವಂಚಿಸಲಾಯಿತು” ಎಂದು ತಾಯಿ ಆರೋಪಿಸಿದ್ದಾರೆ. ಅವರು ತಮ್ಮ ಪತಿ ಮತ್ತು ಅವರ ಕುಟುಂಬದ ವಿರುದ್ಧ ತನಿಖೆಗೆ ಒತ್ತಾಯಿಸಿದ್ದಾರೆ.

“ಮೃತದೇಹವನ್ನು ತೆಗೆದುಕೊಂಡು ಹೋಗಿರುವುದು ನಮಗೆ ತಿಳಿಯುತ್ತಿದ್ದಂತೆ, ನಾನು ಕಾರಿನಲ್ಲಿ ನನ್ನ ಪತಿಯ ಊರಿಗೆ ಧಾವಿಸಿದೆ. ಆದರೆ ಅವರು ನನಗಾಗಿ ಕಾಯದೆ ಅಂತ್ಯಸಂಸ್ಕಾರವನ್ನು ನೆರವೇರಿಸಿದ್ದರು” ಎಂದು ತಿಳಿಸಿದ್ದಾರೆ.

ಮಗುವನ್ನು ಅಪಹರಿಸಿದಾಗ ತಾನು ಮದ್ಯದ ಅಮಲಿನಲ್ಲಿದ್ದೆ ಎಂಬ ಆರೋಪಗಳನ್ನು ಅವರು ತಳ್ಳಿಹಾಕಿದ್ದಾರೆ.

ಬಾಲಕಿಯು ಮೇ 21ರ ಸಂಜೆ ಸುಳೂರು ಬಳಿಯ ಪಲ್ಲಪಾಳ್ಯಂನ ಭಾರತಿಪುರಂನಿಂದ ನಾಪತ್ತೆಯಾಗಿದ್ದಳು. ಪೊಲೀಸರ ಪ್ರಕಾರ, ಆಕೆಯನ್ನು ಅಪಹರಿಸಿ, ಲೈಂಗಿಕ ದೌರ್ಜನ್ಯ ನಡೆಸಿ, ಕೊಲೆ ಮಾಡಲಾಗಿದೆ. ನಂತರ ಆಕೆಯ ಮೃತದೇಹವು ಕಣ್ಣಂಪಾಳ್ಯಂ ಬಳಿಯ ತೆಂಗಿನ ತೋಟದಲ್ಲಿ ಪತ್ತೆಯಾಗಿತ್ತು.

ತಮಿಳುನಾಡು ಪೊಲೀಸರು ಮೇ 23ರಂದು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪುರುಷರನ್ನು ಬಂಧಿಸಿದ್ದಾರೆ. ಮುಖ್ಯ ಆರೋಪಿ ಕೆ. ಕಾರ್ತಿ (33) ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆಯ (ಪೋಕ್ಸೊ) ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ, ಇನ್ನು ಎರಡನೇ ಆರೋಪಿ ಮೋಹನ್‌ನನ್ನು ಅಪರಾಧಕ್ಕೆ ಸಂಚು ರೂಪಿಸಿದ ಆರೋಪದ ಮೇಲೆ ಬಂಧಿಸಲಾಗಿದೆ.

ತನಿಖೆಯ ಭಾಗವಾಗಿ ಪೊಲೀಸರು ನೂರಾರು ಸಿಸಿಟಿವಿ ಕ್ಯಾಮರಾಗಳ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದಾರೆ ಎಂದು ಪಶ್ಚಿಮ ವಲಯ ಐಜಿಪಿ ರಮ್ಯಾ ಭಾರತಿ ತಿಳಿಸಿದ್ದಾರೆ. ಬಾಲಕಿಯ ಕುಟುಂಬಕ್ಕೆ ಪರಿಚಿತನಾಗಿದ್ದ ಕಾರ್ತಿ, ಬಾಲಕಿಯನ್ನು ಅಪಹರಿಸಿ, ಆಕೆಯ ಮೇಲೆ ದೌರ್ಜನ್ಯ ಎಸಗಿ ಕೊಲೆ ಮಾಡಿದ್ದಾನೆ ಎಂದು ಐಜಿಪಿ ಹೇಳಿದ್ದಾರೆ. ಬಂಧನದಿಂದ ತಪ್ಪಿಸಿಕೊಳ್ಳಲು ಯತ್ನಿಸುವಾಗ ಕಟ್ಟಡದಿಂದ ಜಿಗಿದ ಪರಿಣಾಮ ಆತನ ಕೈ ಮತ್ತು ಕಾಲಿನ ಮೂಳೆ ಮುರಿತವಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಈ ಘಟನೆಯು ಕೊಯಮತ್ತೂರಿನಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದು, ಶೀಘ್ರ ಕ್ರಮಕ್ಕೆ ಆಗ್ರಹಿಸಿ ಬಾಲಕಿಯ ಸಂಬಂಧಿಕರು ಮತ್ತು ಸ್ಥಳೀಯ ನಿವಾಸಿಗಳು ಸುಳೂರು ಪೊಲೀಸ್ ಠಾಣೆಯ ಹೊರಗೆ ಪ್ರತಿಭಟನೆ ನಡೆಸಿದ್ದಾರೆ.

ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ಮೇ 24ರ ಭಾನುವಾರದಂದು ಬಾಲಕಿಯ ಪೋಷಕರೊಂದಿಗೆ ದೂರವಾಣಿ ಮೂಲಕ ಮಾತನಾಡಿ, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗುವಂತೆ ಮಾಡುವುದಾಗಿ ಭರವಸೆ ನೀಡಿದ್ದಾರೆ.

ಸಾರಿಗೆ ಸಚಿವ ಎ. ವಿಜಯ್ ತಮಿಳನ್ ಪಾರ್ಥಿಬನ್ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ವಿ. ಸಂಪತ್ ಕುಮಾರ್ ಅವರು ಸಂತ್ರಸ್ತೆಯ ಕುಟುಂಬಸ್ಥರನ್ನು ಭೇಟಿ ಮಾಡಿ, ಪೋಕ್ಸೊ ಕಾಯ್ದೆಯ ನಿಬಂಧನೆಗಳಿಗೆ ಒಳಪಟ್ಟು 7 ಲಕ್ಷ ರೂಪಾಯಿ ಪರಿಹಾರ ಧನವನ್ನು ನೀಡಿದ್ದಾರೆ.

ಈ ಘಟನೆಯು ಕೇವಲ ಒಂದು ಕುಟುಂಬದ ನಷ್ಟವಲ್ಲ, ಬದಲಿಗೆ ಇಡೀ ರಾಜ್ಯಕ್ಕೆ ಸಂಭವಿಸಿದ ದುರಂತವಾಗಿದೆ ಎಂದು ಪಾರ್ಥಿಬನ್ ಹೇಳಿದ್ದಾರೆ. ಇದಕ್ಕೆ ಕಾರಣರಾದವರಿಗೆ ಕಠಿಣ ಶಿಕ್ಷೆಯಾಗುವುದನ್ನು ಖಚಿತಪಡಿಸಲು ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದ್ದಾರೆ.

ಈ ಪ್ರಕರಣವು ತಮಿಳುನಾಡಿನಾದ್ಯಂತ ರಾಜಕೀಯ ವಲಯದಲ್ಲೂ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನೈನಾರ್ ನಾಗೇಂದ್ರನ್ ಅವರು ಸಂತ್ರಸ್ತೆಯ ಕುಟುಂಬಸ್ಥರನ್ನು ಭೇಟಿ ಮಾಡಿ ಸರ್ಕಾರದಿಂದ ಕಠಿಣ ಕ್ರಮ ಕೈಗೊಳ್ಳಬೇಕೆಂದು ಮತ್ತು ಕುಟುಂಬಕ್ಕೆ 1 ಕೋಟಿ ರೂಪಾಯಿ ಪರಿಹಾರ ನೀಡಬೇಕೆಂದು ಆಗ್ರಹಿಸಿದ್ದಾರೆ.

ಮತ್ತೊಂದೆಡೆ, ಘಟನೆಯ ಕುರಿತ ಪತ್ರಿಕಾಗೋಷ್ಠಿ ಆರಂಭವಾಗುವ ಮುನ್ನ ಐಜಿಪಿ ರಮ್ಯಾ ಭಾರತಿ ಮತ್ತು ಇತರ ಇಬ್ಬರು ಪೊಲೀಸ್ ಅಧಿಕಾರಿಗಳು ನಕ್ಕಿರುವುದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.





ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...

ದ್ವಿ-ರಾಷ್ಟ್ರ ಪರಿಹಾರ : ಬ್ರಿಕ್ಸ್ ನಿಲುವು ಸ್ವಾಗತಿಸಿದ ಪ್ಯಾಲೆಸ್ತೀನ್

ಪ್ಯಾಲೆಸ್ತೀನ್-ಇಸ್ರೇಲ್ ವಿವಾದಕ್ಕೆ ದ್ವಿ-ರಾಷ್ಟ್ರ ಪರಿಹಾರವನ್ನು ಕಂಡುಕೊಳ್ಳುವಂತೆ ಕರೆ ನೀಡಿರುವ ಬ್ರಿಕ್ಸ್ (BRICS) ಜಂಟಿ ಘೋಷಣೆಯನ್ನು ಪ್ಯಾಲೆಸ್ತೀನ್ ವಿದೇಶಾಂಗ ಮತ್ತು ವಲಸಿಗರ ಸಚಿವಾಲಯವು ಮುಕ್ತಕಂಠದಿಂದ ಸ್ವಾಗತಿಸಿದೆ. ಬ್ರಿಕ್ಸ್‌ ಶೃಂಗಸಭೆ, ಜೆರುಸಲೆಮ್ ಸೇರಿದಂತೆ ಪ್ಯಾಲೆಸ್ತೀನಿಯರನ್ನು ಅವರದೇ ಭೂಮಿಯಿಂದ...