Homeಮುಖಪುಟ"ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ": ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

- Advertisement -
- Advertisement -

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ ಇಎಸ್ಐ ಆಸ್ಪತ್ರೆಯಿಂದ ಮೃತದೇಹವನ್ನು ಬಿಡುಗಡೆ ಮಾಡಲು ಕಾಗದಪತ್ರಗಳಿಗೆ ಸಹಿ ಹಾಕಿದರು. ನಂತರ ಮೃತದೇಹವನ್ನು ತಮ್ಮ ಸ್ವಂತ ಊರಾದ ಸೇಲಂಗೆ ಕೊಂಡೊಯ್ದು ಅಲ್ಲಿ ಅಂತ್ಯಸಂಸ್ಕಾರ ಮಾಡಿದರು ಎಂದು ಅವರು ತಿಳಿಸಿದ್ದಾರೆ.

thenewsminute.com ವರದಿಯ ಪ್ರಕಾರ, “ನನ್ನ ಅನುಮತಿ ಇಲ್ಲದೆಯೇ ನನ್ನ ಮಗುವನ್ನು ಸುಡಲಾಗಿದೆ. ನಾನು ಆಸ್ಪತ್ರೆಯಲ್ಲಿ ಕಾಯುತ್ತಿದ್ದೆ, ಆದರೆ ಅವರು ಮಗುವನ್ನು ಹಿಂಬಾಗಿಲಿನಿಂದ ಕರೆದುಕೊಂಡು ಹೋದರು” ಎಂದು ತಾಯಿ ಅಲವತ್ತುಕೊಂಡಿದ್ದಾರೆ.

“ನ್ಯಾಯ ಸಿಗುವವರೆಗೂ ಮೃತದೇಹವನ್ನು ಸ್ವೀಕರಿಸಬಾರದು ಎಂದು ನಾನು ನಿರ್ಧರಿಸಿದ್ದೆ. ನನ್ನನ್ನು ಮತ್ತು ನನ್ನ ಕುಟುಂಬದವರನ್ನು ಆಸ್ಪತ್ರೆಯ ಒಳಗೆ ಬಿಡಲಿಲ್ಲ. ನನ್ನ ಪತಿ ಮತ್ತು ಅವರ ಕುಟುಂಬದವರನ್ನು ಮಾತ್ರ ಒಳಗೆ ಬಿಟ್ಟರು. ಮೃತದೇಹವನ್ನು ಅಲ್ಲಿಂದ ತೆಗೆದುಕೊಂಡು ಹೋಗುತ್ತಿರುವುದು ನಮಗೆ ತಿಳಿಯಲೇ ಇಲ್ಲ” ಎಂದು ತಾಯಿ ನೋವು ತೋಡಿಕೊಂಡಿದ್ದಾರೆ.

“ನಾನು ಕಾಗದಪತ್ರಗಳಿಗೆ ಸಹಿ ಹಾಕಲು ನಿರಾಕರಿಸಿದ ಕಾರಣಕ್ಕಾಗಿಯೇ ನನ್ನ ಮಗುವಿನ ಮೃತದೇಹವನ್ನು ನೋಡದಂತೆ ನನ್ನನ್ನು ವಂಚಿಸಲಾಯಿತು” ಎಂದು ತಾಯಿ ಆರೋಪಿಸಿದ್ದಾರೆ. ಅವರು ತಮ್ಮ ಪತಿ ಮತ್ತು ಅವರ ಕುಟುಂಬದ ವಿರುದ್ಧ ತನಿಖೆಗೆ ಒತ್ತಾಯಿಸಿದ್ದಾರೆ.

“ಮೃತದೇಹವನ್ನು ತೆಗೆದುಕೊಂಡು ಹೋಗಿರುವುದು ನಮಗೆ ತಿಳಿಯುತ್ತಿದ್ದಂತೆ, ನಾನು ಕಾರಿನಲ್ಲಿ ನನ್ನ ಪತಿಯ ಊರಿಗೆ ಧಾವಿಸಿದೆ. ಆದರೆ ಅವರು ನನಗಾಗಿ ಕಾಯದೆ ಅಂತ್ಯಸಂಸ್ಕಾರವನ್ನು ನೆರವೇರಿಸಿದ್ದರು” ಎಂದು ತಿಳಿಸಿದ್ದಾರೆ.

ಮಗುವನ್ನು ಅಪಹರಿಸಿದಾಗ ತಾನು ಮದ್ಯದ ಅಮಲಿನಲ್ಲಿದ್ದೆ ಎಂಬ ಆರೋಪಗಳನ್ನು ಅವರು ತಳ್ಳಿಹಾಕಿದ್ದಾರೆ.

ಬಾಲಕಿಯು ಮೇ 21ರ ಸಂಜೆ ಸುಳೂರು ಬಳಿಯ ಪಲ್ಲಪಾಳ್ಯಂನ ಭಾರತಿಪುರಂನಿಂದ ನಾಪತ್ತೆಯಾಗಿದ್ದಳು. ಪೊಲೀಸರ ಪ್ರಕಾರ, ಆಕೆಯನ್ನು ಅಪಹರಿಸಿ, ಲೈಂಗಿಕ ದೌರ್ಜನ್ಯ ನಡೆಸಿ, ಕೊಲೆ ಮಾಡಲಾಗಿದೆ. ನಂತರ ಆಕೆಯ ಮೃತದೇಹವು ಕಣ್ಣಂಪಾಳ್ಯಂ ಬಳಿಯ ತೆಂಗಿನ ತೋಟದಲ್ಲಿ ಪತ್ತೆಯಾಗಿತ್ತು.

ತಮಿಳುನಾಡು ಪೊಲೀಸರು ಮೇ 23ರಂದು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪುರುಷರನ್ನು ಬಂಧಿಸಿದ್ದಾರೆ. ಮುಖ್ಯ ಆರೋಪಿ ಕೆ. ಕಾರ್ತಿ (33) ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆಯ (ಪೋಕ್ಸೊ) ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ, ಇನ್ನು ಎರಡನೇ ಆರೋಪಿ ಮೋಹನ್‌ನನ್ನು ಅಪರಾಧಕ್ಕೆ ಸಂಚು ರೂಪಿಸಿದ ಆರೋಪದ ಮೇಲೆ ಬಂಧಿಸಲಾಗಿದೆ.

ತನಿಖೆಯ ಭಾಗವಾಗಿ ಪೊಲೀಸರು ನೂರಾರು ಸಿಸಿಟಿವಿ ಕ್ಯಾಮರಾಗಳ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದಾರೆ ಎಂದು ಪಶ್ಚಿಮ ವಲಯ ಐಜಿಪಿ ರಮ್ಯಾ ಭಾರತಿ ತಿಳಿಸಿದ್ದಾರೆ. ಬಾಲಕಿಯ ಕುಟುಂಬಕ್ಕೆ ಪರಿಚಿತನಾಗಿದ್ದ ಕಾರ್ತಿ, ಬಾಲಕಿಯನ್ನು ಅಪಹರಿಸಿ, ಆಕೆಯ ಮೇಲೆ ದೌರ್ಜನ್ಯ ಎಸಗಿ ಕೊಲೆ ಮಾಡಿದ್ದಾನೆ ಎಂದು ಐಜಿಪಿ ಹೇಳಿದ್ದಾರೆ. ಬಂಧನದಿಂದ ತಪ್ಪಿಸಿಕೊಳ್ಳಲು ಯತ್ನಿಸುವಾಗ ಕಟ್ಟಡದಿಂದ ಜಿಗಿದ ಪರಿಣಾಮ ಆತನ ಕೈ ಮತ್ತು ಕಾಲಿನ ಮೂಳೆ ಮುರಿತವಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಈ ಘಟನೆಯು ಕೊಯಮತ್ತೂರಿನಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದು, ಶೀಘ್ರ ಕ್ರಮಕ್ಕೆ ಆಗ್ರಹಿಸಿ ಬಾಲಕಿಯ ಸಂಬಂಧಿಕರು ಮತ್ತು ಸ್ಥಳೀಯ ನಿವಾಸಿಗಳು ಸುಳೂರು ಪೊಲೀಸ್ ಠಾಣೆಯ ಹೊರಗೆ ಪ್ರತಿಭಟನೆ ನಡೆಸಿದ್ದಾರೆ.

ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ಮೇ 24ರ ಭಾನುವಾರದಂದು ಬಾಲಕಿಯ ಪೋಷಕರೊಂದಿಗೆ ದೂರವಾಣಿ ಮೂಲಕ ಮಾತನಾಡಿ, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗುವಂತೆ ಮಾಡುವುದಾಗಿ ಭರವಸೆ ನೀಡಿದ್ದಾರೆ.

ಸಾರಿಗೆ ಸಚಿವ ಎ. ವಿಜಯ್ ತಮಿಳನ್ ಪಾರ್ಥಿಬನ್ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ವಿ. ಸಂಪತ್ ಕುಮಾರ್ ಅವರು ಸಂತ್ರಸ್ತೆಯ ಕುಟುಂಬಸ್ಥರನ್ನು ಭೇಟಿ ಮಾಡಿ, ಪೋಕ್ಸೊ ಕಾಯ್ದೆಯ ನಿಬಂಧನೆಗಳಿಗೆ ಒಳಪಟ್ಟು 7 ಲಕ್ಷ ರೂಪಾಯಿ ಪರಿಹಾರ ಧನವನ್ನು ನೀಡಿದ್ದಾರೆ.

ಈ ಘಟನೆಯು ಕೇವಲ ಒಂದು ಕುಟುಂಬದ ನಷ್ಟವಲ್ಲ, ಬದಲಿಗೆ ಇಡೀ ರಾಜ್ಯಕ್ಕೆ ಸಂಭವಿಸಿದ ದುರಂತವಾಗಿದೆ ಎಂದು ಪಾರ್ಥಿಬನ್ ಹೇಳಿದ್ದಾರೆ. ಇದಕ್ಕೆ ಕಾರಣರಾದವರಿಗೆ ಕಠಿಣ ಶಿಕ್ಷೆಯಾಗುವುದನ್ನು ಖಚಿತಪಡಿಸಲು ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದ್ದಾರೆ.

ಈ ಪ್ರಕರಣವು ತಮಿಳುನಾಡಿನಾದ್ಯಂತ ರಾಜಕೀಯ ವಲಯದಲ್ಲೂ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನೈನಾರ್ ನಾಗೇಂದ್ರನ್ ಅವರು ಸಂತ್ರಸ್ತೆಯ ಕುಟುಂಬಸ್ಥರನ್ನು ಭೇಟಿ ಮಾಡಿ ಸರ್ಕಾರದಿಂದ ಕಠಿಣ ಕ್ರಮ ಕೈಗೊಳ್ಳಬೇಕೆಂದು ಮತ್ತು ಕುಟುಂಬಕ್ಕೆ 1 ಕೋಟಿ ರೂಪಾಯಿ ಪರಿಹಾರ ನೀಡಬೇಕೆಂದು ಆಗ್ರಹಿಸಿದ್ದಾರೆ.

ಮತ್ತೊಂದೆಡೆ, ಘಟನೆಯ ಕುರಿತ ಪತ್ರಿಕಾಗೋಷ್ಠಿ ಆರಂಭವಾಗುವ ಮುನ್ನ ಐಜಿಪಿ ರಮ್ಯಾ ಭಾರತಿ ಮತ್ತು ಇತರ ಇಬ್ಬರು ಪೊಲೀಸ್ ಅಧಿಕಾರಿಗಳು ನಕ್ಕಿರುವುದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.





ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...