Homeಮುಖಪುಟ"ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ": ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

- Advertisement -
- Advertisement -

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ ಇಎಸ್ಐ ಆಸ್ಪತ್ರೆಯಿಂದ ಮೃತದೇಹವನ್ನು ಬಿಡುಗಡೆ ಮಾಡಲು ಕಾಗದಪತ್ರಗಳಿಗೆ ಸಹಿ ಹಾಕಿದರು. ನಂತರ ಮೃತದೇಹವನ್ನು ತಮ್ಮ ಸ್ವಂತ ಊರಾದ ಸೇಲಂಗೆ ಕೊಂಡೊಯ್ದು ಅಲ್ಲಿ ಅಂತ್ಯಸಂಸ್ಕಾರ ಮಾಡಿದರು ಎಂದು ಅವರು ತಿಳಿಸಿದ್ದಾರೆ.

thenewsminute.com ವರದಿಯ ಪ್ರಕಾರ, “ನನ್ನ ಅನುಮತಿ ಇಲ್ಲದೆಯೇ ನನ್ನ ಮಗುವನ್ನು ಸುಡಲಾಗಿದೆ. ನಾನು ಆಸ್ಪತ್ರೆಯಲ್ಲಿ ಕಾಯುತ್ತಿದ್ದೆ, ಆದರೆ ಅವರು ಮಗುವನ್ನು ಹಿಂಬಾಗಿಲಿನಿಂದ ಕರೆದುಕೊಂಡು ಹೋದರು” ಎಂದು ತಾಯಿ ಅಲವತ್ತುಕೊಂಡಿದ್ದಾರೆ.

“ನ್ಯಾಯ ಸಿಗುವವರೆಗೂ ಮೃತದೇಹವನ್ನು ಸ್ವೀಕರಿಸಬಾರದು ಎಂದು ನಾನು ನಿರ್ಧರಿಸಿದ್ದೆ. ನನ್ನನ್ನು ಮತ್ತು ನನ್ನ ಕುಟುಂಬದವರನ್ನು ಆಸ್ಪತ್ರೆಯ ಒಳಗೆ ಬಿಡಲಿಲ್ಲ. ನನ್ನ ಪತಿ ಮತ್ತು ಅವರ ಕುಟುಂಬದವರನ್ನು ಮಾತ್ರ ಒಳಗೆ ಬಿಟ್ಟರು. ಮೃತದೇಹವನ್ನು ಅಲ್ಲಿಂದ ತೆಗೆದುಕೊಂಡು ಹೋಗುತ್ತಿರುವುದು ನಮಗೆ ತಿಳಿಯಲೇ ಇಲ್ಲ” ಎಂದು ತಾಯಿ ನೋವು ತೋಡಿಕೊಂಡಿದ್ದಾರೆ.

“ನಾನು ಕಾಗದಪತ್ರಗಳಿಗೆ ಸಹಿ ಹಾಕಲು ನಿರಾಕರಿಸಿದ ಕಾರಣಕ್ಕಾಗಿಯೇ ನನ್ನ ಮಗುವಿನ ಮೃತದೇಹವನ್ನು ನೋಡದಂತೆ ನನ್ನನ್ನು ವಂಚಿಸಲಾಯಿತು” ಎಂದು ತಾಯಿ ಆರೋಪಿಸಿದ್ದಾರೆ. ಅವರು ತಮ್ಮ ಪತಿ ಮತ್ತು ಅವರ ಕುಟುಂಬದ ವಿರುದ್ಧ ತನಿಖೆಗೆ ಒತ್ತಾಯಿಸಿದ್ದಾರೆ.

“ಮೃತದೇಹವನ್ನು ತೆಗೆದುಕೊಂಡು ಹೋಗಿರುವುದು ನಮಗೆ ತಿಳಿಯುತ್ತಿದ್ದಂತೆ, ನಾನು ಕಾರಿನಲ್ಲಿ ನನ್ನ ಪತಿಯ ಊರಿಗೆ ಧಾವಿಸಿದೆ. ಆದರೆ ಅವರು ನನಗಾಗಿ ಕಾಯದೆ ಅಂತ್ಯಸಂಸ್ಕಾರವನ್ನು ನೆರವೇರಿಸಿದ್ದರು” ಎಂದು ತಿಳಿಸಿದ್ದಾರೆ.

ಮಗುವನ್ನು ಅಪಹರಿಸಿದಾಗ ತಾನು ಮದ್ಯದ ಅಮಲಿನಲ್ಲಿದ್ದೆ ಎಂಬ ಆರೋಪಗಳನ್ನು ಅವರು ತಳ್ಳಿಹಾಕಿದ್ದಾರೆ.

ಬಾಲಕಿಯು ಮೇ 21ರ ಸಂಜೆ ಸುಳೂರು ಬಳಿಯ ಪಲ್ಲಪಾಳ್ಯಂನ ಭಾರತಿಪುರಂನಿಂದ ನಾಪತ್ತೆಯಾಗಿದ್ದಳು. ಪೊಲೀಸರ ಪ್ರಕಾರ, ಆಕೆಯನ್ನು ಅಪಹರಿಸಿ, ಲೈಂಗಿಕ ದೌರ್ಜನ್ಯ ನಡೆಸಿ, ಕೊಲೆ ಮಾಡಲಾಗಿದೆ. ನಂತರ ಆಕೆಯ ಮೃತದೇಹವು ಕಣ್ಣಂಪಾಳ್ಯಂ ಬಳಿಯ ತೆಂಗಿನ ತೋಟದಲ್ಲಿ ಪತ್ತೆಯಾಗಿತ್ತು.

ತಮಿಳುನಾಡು ಪೊಲೀಸರು ಮೇ 23ರಂದು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪುರುಷರನ್ನು ಬಂಧಿಸಿದ್ದಾರೆ. ಮುಖ್ಯ ಆರೋಪಿ ಕೆ. ಕಾರ್ತಿ (33) ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆಯ (ಪೋಕ್ಸೊ) ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ, ಇನ್ನು ಎರಡನೇ ಆರೋಪಿ ಮೋಹನ್‌ನನ್ನು ಅಪರಾಧಕ್ಕೆ ಸಂಚು ರೂಪಿಸಿದ ಆರೋಪದ ಮೇಲೆ ಬಂಧಿಸಲಾಗಿದೆ.

ತನಿಖೆಯ ಭಾಗವಾಗಿ ಪೊಲೀಸರು ನೂರಾರು ಸಿಸಿಟಿವಿ ಕ್ಯಾಮರಾಗಳ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದಾರೆ ಎಂದು ಪಶ್ಚಿಮ ವಲಯ ಐಜಿಪಿ ರಮ್ಯಾ ಭಾರತಿ ತಿಳಿಸಿದ್ದಾರೆ. ಬಾಲಕಿಯ ಕುಟುಂಬಕ್ಕೆ ಪರಿಚಿತನಾಗಿದ್ದ ಕಾರ್ತಿ, ಬಾಲಕಿಯನ್ನು ಅಪಹರಿಸಿ, ಆಕೆಯ ಮೇಲೆ ದೌರ್ಜನ್ಯ ಎಸಗಿ ಕೊಲೆ ಮಾಡಿದ್ದಾನೆ ಎಂದು ಐಜಿಪಿ ಹೇಳಿದ್ದಾರೆ. ಬಂಧನದಿಂದ ತಪ್ಪಿಸಿಕೊಳ್ಳಲು ಯತ್ನಿಸುವಾಗ ಕಟ್ಟಡದಿಂದ ಜಿಗಿದ ಪರಿಣಾಮ ಆತನ ಕೈ ಮತ್ತು ಕಾಲಿನ ಮೂಳೆ ಮುರಿತವಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಈ ಘಟನೆಯು ಕೊಯಮತ್ತೂರಿನಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದು, ಶೀಘ್ರ ಕ್ರಮಕ್ಕೆ ಆಗ್ರಹಿಸಿ ಬಾಲಕಿಯ ಸಂಬಂಧಿಕರು ಮತ್ತು ಸ್ಥಳೀಯ ನಿವಾಸಿಗಳು ಸುಳೂರು ಪೊಲೀಸ್ ಠಾಣೆಯ ಹೊರಗೆ ಪ್ರತಿಭಟನೆ ನಡೆಸಿದ್ದಾರೆ.

ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ಮೇ 24ರ ಭಾನುವಾರದಂದು ಬಾಲಕಿಯ ಪೋಷಕರೊಂದಿಗೆ ದೂರವಾಣಿ ಮೂಲಕ ಮಾತನಾಡಿ, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗುವಂತೆ ಮಾಡುವುದಾಗಿ ಭರವಸೆ ನೀಡಿದ್ದಾರೆ.

ಸಾರಿಗೆ ಸಚಿವ ಎ. ವಿಜಯ್ ತಮಿಳನ್ ಪಾರ್ಥಿಬನ್ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ವಿ. ಸಂಪತ್ ಕುಮಾರ್ ಅವರು ಸಂತ್ರಸ್ತೆಯ ಕುಟುಂಬಸ್ಥರನ್ನು ಭೇಟಿ ಮಾಡಿ, ಪೋಕ್ಸೊ ಕಾಯ್ದೆಯ ನಿಬಂಧನೆಗಳಿಗೆ ಒಳಪಟ್ಟು 7 ಲಕ್ಷ ರೂಪಾಯಿ ಪರಿಹಾರ ಧನವನ್ನು ನೀಡಿದ್ದಾರೆ.

ಈ ಘಟನೆಯು ಕೇವಲ ಒಂದು ಕುಟುಂಬದ ನಷ್ಟವಲ್ಲ, ಬದಲಿಗೆ ಇಡೀ ರಾಜ್ಯಕ್ಕೆ ಸಂಭವಿಸಿದ ದುರಂತವಾಗಿದೆ ಎಂದು ಪಾರ್ಥಿಬನ್ ಹೇಳಿದ್ದಾರೆ. ಇದಕ್ಕೆ ಕಾರಣರಾದವರಿಗೆ ಕಠಿಣ ಶಿಕ್ಷೆಯಾಗುವುದನ್ನು ಖಚಿತಪಡಿಸಲು ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದ್ದಾರೆ.

ಈ ಪ್ರಕರಣವು ತಮಿಳುನಾಡಿನಾದ್ಯಂತ ರಾಜಕೀಯ ವಲಯದಲ್ಲೂ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನೈನಾರ್ ನಾಗೇಂದ್ರನ್ ಅವರು ಸಂತ್ರಸ್ತೆಯ ಕುಟುಂಬಸ್ಥರನ್ನು ಭೇಟಿ ಮಾಡಿ ಸರ್ಕಾರದಿಂದ ಕಠಿಣ ಕ್ರಮ ಕೈಗೊಳ್ಳಬೇಕೆಂದು ಮತ್ತು ಕುಟುಂಬಕ್ಕೆ 1 ಕೋಟಿ ರೂಪಾಯಿ ಪರಿಹಾರ ನೀಡಬೇಕೆಂದು ಆಗ್ರಹಿಸಿದ್ದಾರೆ.

ಮತ್ತೊಂದೆಡೆ, ಘಟನೆಯ ಕುರಿತ ಪತ್ರಿಕಾಗೋಷ್ಠಿ ಆರಂಭವಾಗುವ ಮುನ್ನ ಐಜಿಪಿ ರಮ್ಯಾ ಭಾರತಿ ಮತ್ತು ಇತರ ಇಬ್ಬರು ಪೊಲೀಸ್ ಅಧಿಕಾರಿಗಳು ನಕ್ಕಿರುವುದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.





ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...

ಅಯೋಧ್ಯೆ ದೇಣಿಗೆ ಹಗರಣ: ಕೇವಲ 45 ದಿನಗಳಲ್ಲಿ 70 ಬಾರಿ ಕಳ್ಳತನ, SIT ವರದಿ

ಅಯೋಧ್ಯೆಯ ರಾಮಮಂದಿರಕ್ಕೆ ಬಂದ ಸಾರ್ವಜನಿಕರ ದೇಣಿಗೆ ದುರುಪಯೋಗದ ಆರೋಪದ ಕುರಿತು ವಿಶೇಷ ತನಿಖಾ ತಂಡ (SIT) ನಡೆಸಿದ ಪ್ರಾಥಮಿಕ ತನಿಖೆಯಲ್ಲಿ, ಕೇವಲ 45 ದಿನಗಳಲ್ಲಿ ಸುಮಾರು 70 ಸಂಶಯಾಸ್ಪದ ಕಳ್ಳತನಗಳು ನಡೆದಿರುವುದಕ್ಕೆ ಪ್ರಾಥಮಿಕ...

ಬರುಯಿಪುರ ಅತ್ಯಾಚಾರ-ಕೊಲೆ ಪ್ರಕರಣ: ಪ್ರಮುಖ ಆರೋಪಿಯ ಎನ್‌ಕೌಂಟರ್; ‘ನನ್ನ ಮಗನ ಶವ ನನಗೆ ಬೇಡ’ ಎಂದ ಹೆತ್ತ ತಾಯಿ!

ಬರುಯಿಪುರ/ಕೋಲ್ಕತ್ತಾ: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬರುಯಿಪುರದಲ್ಲಿ 12 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕ್ರೂರ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪ್ರಭಾಸ್ ಮೊಂಡೋಲ್ ಬುಧವಾರ...

ವಯನಾಡ್ ಭೂಕುಸಿತ: ಕಾಣೆಯಾದ ಐವರಿಗಾಗಿ ಮುಂದುವರೆದ ಹುಡುಕಾಟ

ಬೆಟ್ಟದ ಜಿಲ್ಲೆಯ ವಯನಾಡ್‌ನಲ್ಲಿ ನಡೆಯುತ್ತಿರುವ ಸುರಂಗ ರಸ್ತೆ ನಿರ್ಮಾಣ ಸ್ಥಳದಲ್ಲಿ ಭೂಕುಸಿತ ಸಂಭವಿಸಿ ಮೂರು ಜೀವಗಳು ಬಲಿಯಾದ ಒಂದು ದಿನದ ನಂತರ, ಕಾಣೆಯಾಗಿರುವ ಐವರಿಗಾಗಿ ಹುಡುಕಾಟ ಮುಂದುವರೆದಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ವಯನಾಡ್...

ನನ್ನನ್ನು ಕೊಂಡುಕೊಳ್ಳಲು ಯಾರ ಕೈಲೂ ಸಾಧ್ಯವಿಲ್ಲ: ಮಹುವಾ ಮೋಯಿತ್ರಾ ವಿಶೇಷ ಸಂದರ್ಶನ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಜಯಭೇರಿ ಬಾರಿಸಿದ ಬೆನ್ನಲ್ಲೇ, ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರ ಭದ್ರಕೋಟೆ ಧೂಳೀಪಟವಾಗಿದೆ. ಚುನಾವಣಾ ಸೋಲಿನ ನಂತರ ಸಾಲು...

ಕೋರ್ಟ್ ರಾಜಕೀಯ ಅಖಾಡ ಅಲ್ಲ: ಸಿಎಂ ವಿಜಯ್ ವಿರುದ್ಧ ಅರ್ಜಿ ಸಲ್ಲಿಸಿದ್ದ ಡಿಎಂಕೆಗೆ ಸುಪ್ರೀಂ ತರಾಟೆ

ತಮಿಳುನಾಡಿನ ಕರೂರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡದಂತೆ ಮುಖ್ಯಮಂತ್ರಿ ವಿಜಯ್ ಅವರಿಗೆ ನಿರ್ಬಂಧ ಹೇರಬೇಕೆಂದು ಕೋರಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜನರಿಂದ...

ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ...