Homeರಾಷ್ಟ್ರೀಯನಾನು ಗಾಂಧಿ ಕುಟುಂಬದ ವಿರುದ್ಧ ಮಾತನಾಡಿದ್ದಕ್ಕೆ ನನ್ನ ಮಗಳು ಟಾರ್ಗೆಟ್: ಗೋವಾ ಬಾರ್ ವಿವಾದದ ಬಗ್ಗೆ...

ನಾನು ಗಾಂಧಿ ಕುಟುಂಬದ ವಿರುದ್ಧ ಮಾತನಾಡಿದ್ದಕ್ಕೆ ನನ್ನ ಮಗಳು ಟಾರ್ಗೆಟ್: ಗೋವಾ ಬಾರ್ ವಿವಾದದ ಬಗ್ಗೆ ಸ್ಮೃತಿ ಇರಾನಿ

- Advertisement -
- Advertisement -

ನಾನು ಗಾಂಧಿ ಕಟುಂಬದ ವಿರುದ್ಧ ಮಾತನಾಡುತ್ತೇನೆ ಎಂಬ ಕಾರಣಕ್ಕೆ ಕಾಂಗ್ರೆಸ್ ನನ್ನ ಮಗಳನ್ನು ಟಾರ್ಗೆಟ್ ಮಾಡುತ್ತಿದೆ ಎಂದು ಒಕ್ಕೂಟ ಸರ್ಕಾರದ ಸಚಿವೆ ಸ್ಮೃತಿ ಇರಾನಿ ಶನಿವಾರ ಮಾಧ್ಯಮಗಳನ್ನು ಉದ್ದೇಶಿಸಿ ಹೇಳಿದ್ದಾರೆ. ತನ್ನ ಮಗಳ ಮೇಲೆ ಇರುವ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಗೋವಾದಲ್ಲಿ ತನ್ನ ಮಗಳು ಅಕ್ರಮ ಬಾರ್ ನಡೆಸುತ್ತಿದ್ದಾರೆ ಎಂಬ ಆರೋಪಗಳನ್ನು ನಿರಾಕರಿಸಿದ್ದಾರೆ.

“18ರ ಹರೆಯದ ಬಾಲಕಿಯೊಬ್ಬಳ ಚಾರಿತ್ರ್ಯಹತ್ಯೆಗೆ ಇಬ್ಬರು ಮಧ್ಯವಯಸ್ಕ ಕಾಂಗ್ರೆಸ್ಸಿಗರೇ ಕಾರಣ. ಬಾಲಕಿಯ ತಾಯಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಬಗ್ಗೆ ಮಾತನಾಡಿದ್ದು ಮಾತ್ರ ಅವರು ಮಾಡಿರುವ ತಪ್ಪು” ಎಂದು ತನ್ನ ಮಗಳ ಮೇಲಿನ  ಕಾಂಗ್ರೆಸ್ ಆರೋಪವನ್ನು ತಳ್ಳಿಹಾಕಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪಬ್ಲಿಕ್ ಫ್ಲಾಟ್‌ಫಾರ್ಮ್ ಅಲ್ಲಿರುವ ಮಾಹಿತಿಯ ಪ್ರಕಾರ ಸ್ಮೃತಿ ಇರಾನಿ ಅವರ ಮಗಳ ಹುಟ್ಟಿದ ದಿನ, ‘23 ಸೆಪ್ಟೆಂಬರ್‌ 2003’ ಎಂದಿದೆ. ಅದರಂತೆ ಅವರಿಗೆ 18 ವರ್ಷ ಕಳೆದಿದ್ದು ಸೆಪ್ಟೆಂಬರ್‌ 2022ಕ್ಕೆ ಅವರ ವಯಸ್ಸು 19 ಆಗಲಿದೆ. ಭಾರತದ ಪ್ರಜೆಯೊಬ್ಬರಿಗೆ 18 ವರ್ಷ ತುಂಬಿದ ನಂತರ ಅವರನ್ನು ವಯಸ್ಕ ಎಂದು ಗುರುತಿಸಲಾಗುತ್ತದೆ.

ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಮಾಡಿರುವ 5,000 ರೂಪಾಯಿ ಲೂಟಿಯ ಬಗ್ಗೆ ಬಾಲಕಿಯ ತಾಯಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ್ದು ಬಾಲಕಿ ಮಾಡಿರುವ ತಪ್ಪು ಎಂದು ಸಚಿವೆ ಹೇಳಿದ್ದಾರೆ.

ಇದನ್ನೂ ಓದಿ: ಗೋವಾ: ನಿಧನ ಹೊಂದಿರುವ ವ್ಯಕ್ತಿಯ ಹೆಸರಿನಲ್ಲಿ ಲೈಸನ್ಸ್‌ ಪಡೆದು ಅಕ್ರಮ ಬಾರ್‌ ನಡೆಸುತ್ತಿರುವ ಸಚಿವೆ ಸ್ಮೃತಿ ಇರಾನಿ ಪುತ್ರಿ

“ನನ್ನ ಮಗಳು ಕಾಲೇಜಿನಲ್ಲಿ ಓದುತ್ತಾಳೆ, ಅವಳು ಬಾರ್ ನಡೆಸುತ್ತಿಲ್ಲ, ದಯವಿಟ್ಟು ದಾಖಲೆಗಳನ್ನು ಪರಿಶೀಲಿಸಿ. ಅದರಲ್ಲಿ ನನ್ನ ಮಗಳ ಹೆಸರು ಎಲ್ಲಿದೆ? ಅವರು ಮಾಹಿತಿ ಹಕ್ಕು (ಆರ್‌ಟಿಐ) ಆಧಾರದ ಮೇಲೆ ನನ್ನ ಮಗಳ ಮೇಲೆ ಆರೋಪ ಮಾಡುತ್ತಿದ್ದಾರೆ” ಎಂದು ಹೇಳಿದ್ದಾರೆ.

“ಇಬ್ಬರು ಗಾಂಧಿಗಳ ವಿರುದ್ಧ ಬಾಲಕಿಯ ಆಕೆಯ ತಾಯಿ ಪತ್ರಿಕಾಗೋಷ್ಠಿ ನಡೆಸಿದ್ದು ಬಾಲಕಿ ಮಾಡಿರುವ ತಪ್ಪು. ನನ್ನ ಮಗಳು ರಾಜಕಾರಣಿಯಲ್ಲ ಬದಲಾಗಿ ವಿದ್ಯಾರ್ಥಿಯಾಗಿ ಸಾಮಾನ್ಯ ಜೀವನವನ್ನು ನಡೆಸುತ್ತಿದ್ದಾರೆ” ಎಂದು ಸ್ಮೃತಿ ಇರಾನಿ ಹೇಳಿದ್ದಾರೆ.

“ನಾನು ಕಾನೂನಿನ ನ್ಯಾಯಾಲಯದಲ್ಲಿ ಮತ್ತು ಜನರ ನ್ಯಾಯಾಲಯದಲ್ಲಿ ಉತ್ತರವನ್ನು ಕಂಡುಕೊಳ್ಳುತ್ತೇನೆ. ಈ ದಾಖಲೆಗಳಲ್ಲಿ ನನ್ನ ಮಗಳ ಹೆಸರು ಎಲ್ಲಿದೆ ಎಂದು ನಾನು ಕೇಳಲು ಬಯಸುತ್ತೇನೆ. 2024 ರ ಲೋಕಸಭೆ ಚುನಾವಣೆಯಲ್ಲಿ ರಾಹುಲ್ ಗಾಂಧಿಯನ್ನು ಮತ್ತೊಮ್ಮೆ ಅಮೇಥಿಗೆ ಕಳುಹಿಸಿ. ನಾವು ಮತ್ತೊಮ್ಮೆ ರಾಹುಲ್ ಗಾಂಧಿಯನ್ನು ಸೋಲಿಸುತ್ತೇವೆ” ಎಂದು ಸ್ಮೃತಿ ಇರಾನಿ ಹೇಳಿದ್ದಾರೆ.

ಇಂದು ಸಂಜೆಯೊಳಗೆ ಹಿರಿಯ ಕಾಂಗ್ರೆಸ್ ನಾಯಕರಾದ ಜೈರಾಮ್ ರಮೇಶ್ ಮತ್ತು ಪವನ್ ಖೇರಾ ಅವರಿಗೆ ತಮ್ಮ ತಂಡ ಲೀಗಲ್ ನೋಟಿಸ್ ಕಳುಹಿಸಲಿದೆ ಎಂದು ಸಚಿವೆ ತಿಳಿಸಿದ್ದಾರೆ.

ಇದನ್ನೂ ಓದಿ: ಜನರು ಏನು ತೊಡುತ್ತಾರೆ ಎಂಬುದರಲ್ಲಿ ರಾಜಕಾರಣಿಗಳು ಮೂಗು ತೂರಿಸಬೇಕಿಲ್ಲ: ಸ್ಮೃತಿ ಇರಾನಿ

ಒಂದು ದಿನದ ಹಿಂದೆಯಷ್ಟೆ ಸ್ಮೃತಿ ಇರಾನಿ ಅವರ ಪುತ್ರಿ ಜೊಯಿಶ್ ಇರಾನಿ ಗೋವಾದಲ್ಲಿ ರೆಸ್ಟೋರೆಂಟ್ ನಡೆಸುತ್ತಿದ್ದಾರೆ ಎಂದು ಆರೋಪಿಸಲಾಗಿದೆ. ಈ ಬಾರ್‌ ಅನ್ನು ‘ನಕಲಿ ಪರವಾನಗಿ’ ಪಡೆದು ನಡೆಸಲಾಗುತ್ತಿದೆ ಎಂದು ಆರೋಪಿಸಲಾಗಿದೆ. ಈ ಎಲ್ಲಾ ಹಿನ್ನಲೆಯಲ್ಲಿ ನರೇಂದ್ರ ಮೋದಿ ಸರ್ಕಾರವು ಸಚಿವೆ ಸ್ಮೃತಿ ಇರಾನಿ ಅವರನ್ನು ವಜಾಗೊಳಿಸಬೇಕು ಎಂದು ಕಾಂಗ್ರೆಸ್ ನಾಯಕ ಪವನ್ ಖೇರಾ ಆಗ್ರಹಿಸಿದ್ದಾರೆ.

ಸ್ಮೃತಿ ಇರಾನಿ ಅವರ ವಕೀಲರ ಸಮಸ್ಯಾತ್ಮಕ ಹೇಳಿಕೆ

ಜೋಯಿಶ್ ಇರಾನಿ ಅವರ ವಕೀಲ ಕಿರಾತ್ ನಾಗ್ರಾ ಅವರು ಹೇಳಿಕೆಯನ್ನು ಬಿಡುಗಡೆ ಮಾಡಿದ್ದು, ಅವರ ಕಕ್ಷಿದಾರರ ವಿರುದ್ಧದ ಆರೋಪಗಳನ್ನು ನಿರಾಕರಿಸಿದ್ದಾರೆ.

ಸ್ಮೃತಿ ಇರಾನಿ ಅವರ ರಾಜಕೀಯ ವಿರೋಧಿಗಳು ರಾಜಕೀಯ ನಾಯಕರ ಮಗಳು ಎಂಬ ಕಾರಣಕ್ಕಾಗಿ ಅವರನ್ನು ಮಾನಹಾನಿ ಮಾಡುವ ಪೂರ್ವನಿರ್ಧರಿತ ಉದ್ದೇಶದಿಂದ ಅವರ ವಿರುದ್ಧ ಹಲವಾರು ‘ಸೃಷ್ಟಿಸಲಾದ’ ಆರೋಪಗಳನ್ನು ಮಾಡಿದ್ದಾರೆ ಎಂದು ಅವರ ವಕೀಲರು ಹೇಳಿದ್ದಾರೆ. ಅಷ್ಟೆ ಅಲ್ಲದೆ, ಜೊಯಿಶ್ ಅವರ ವಕೀಲರು, ಆಕೆಗೆ ಯಾವುದೇ ಪ್ರಾಧಿಕಾರದಿಂದ ಯಾವುದೇ ಶೋಕಾಸ್ ನೋಟಿಸ್ ಬಂದಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಇತಿಹಾಸದಲ್ಲೇ ಮೊದಲ ಬಾರಿಗೆ ಕಾಂಗ್ರೆಸ್ ನಾಯಕ ಹಿಂಸೆಗೆ ಕರೆ ನೀಡಿದ್ದಾರೆ: ಸ್ಮೃತಿ ಇರಾನಿ

ದೆಹಲಿಯ ಬಿಜೆಪಿ ನಾಯಕ ತಜೀಂದರ್ ಪಾಲ್ ಸಿಂಗ್ ಬಗ್ಗಾ ಅವರು ಆರೋಪವನ್ನು ನಿರಾಕರಿಸಿದ್ದು, ಸ್ಮೃತಿ ಇರಾನಿ ಅವರ ಮಗಳು ಅಮೆರಿಕಾದಲ್ಲಿ ಓದುತ್ತಿದ್ದಾರೆ. ಜೊಯಿಶ್‌ ಅವರಿಗೂ ಬಾರ್‌ಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...