Homeಕರ್ನಾಟಕ'ಧರ್ಮಸ್ಥಳಕ್ಕೆ ಹೋಗಿದ್ದ ನನ್ನ ಮಗಳು ಕಾಣೆಯಾದ್ಲು, ದಯವಿಟ್ಟು ನ್ಯಾಯ ಕೊಡಿಸಿ': ಅನನ್ಯ ಭಟ್ ತಾಯಿ ಕಣ್ಣೀರು

‘ಧರ್ಮಸ್ಥಳಕ್ಕೆ ಹೋಗಿದ್ದ ನನ್ನ ಮಗಳು ಕಾಣೆಯಾದ್ಲು, ದಯವಿಟ್ಟು ನ್ಯಾಯ ಕೊಡಿಸಿ’: ಅನನ್ಯ ಭಟ್ ತಾಯಿ ಕಣ್ಣೀರು

"ಬೆಳ್ತಂಗಡಿ ಠಾಣೆಗೆ ಹೋದಾಗ ದೂರು ಸ್ವೀಕರಿಸಿಲ್ಲ. ಧರ್ಮಸ್ಥಳದಲ್ಲಿ ಯಾರೋ ನನ್ನನ್ನು ಕೂಡಿ ಹಾಕಿ ಥಳಿಸಿದ್ರು. ಮಗಳ ಅಸ್ತಿ ಸಿಕ್ರೆ ಶ್ರಾದ್ಧ ಮಾಡಿ ಪ್ರಾಣ ಬಿಡ್ತೀನಿ"

- Advertisement -
- Advertisement -

ಧರ್ಮಸ್ಥಳದಲ್ಲಿ  2003ರಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಅನನ್ಯ ಭಟ್ ಅವರ ನಾಪತ್ತೆ ಸಂಬಂಧ ದೂರು ನೀಡಲು ತಾಯಿ ಸುಜಾತಾ ಭಟ್ ಮಂಗಳವಾರ (ಜು.15) ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಡಾ.ಅರುಣ್ ಕೆ ಅವರನ್ನು ಭೇಟಿಯಾಗಿದ್ದರು.

ಪ್ರಕರಣ ಈಗಿನ ಧರ್ಮಸ್ಥಳ ಠಾಣೆ ವ್ಯಾಪ್ತಿಯಲ್ಲಿ ನಡೆದಿರುವುದರಿಂದ, ಅಲ್ಲಿಯೇ ದೂರು ನೀಡುವಂತೆ ಎಸ್ಪಿ ಸಲಹೆ ನೀಡಿದ್ದರು. ಅದರಂತೆ, ರಾತ್ರಿ 8 ಗಂಟೆಯ ಸುಮಾರಿಗೆ ಧರ್ಮಸ್ಥಳ ಪೊಲೀಸ್ ಠಾಣೆಗೆ ತೆರಳಿ ಸಬ್‌ ಇನ್‌ಸ್ಪೆಕ್ಟರ್ ಸಮರ್ಥ್ ಆರ್.ಗಾಣಿಗೇರ ಅವರಿಗೆ ಸುಜಾತಾ ಭಟ್ ದೂರು ನೀಡಿದ್ದಾರೆ. ಪೊಲೀಸರು ದೂರು ಸ್ವೀಕರಿಸಿದ್ದು, ಮುಂದಿನ ತನಿಖೆ ಕೈಗೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.

ಮಂಗಳವಾರ ಸಂಜೆ ವಕೀಲ ಮಂಜುನಾಥ್  ಜೊತೆ ಎಸ್ಪಿಯನ್ನು ಭೇಟಿ ಮಾಡಿದ ಬಳಿಕ ಮಾಧ್ಯಮಗಳ ಮುಂದೆ ಮಾತನಾಡಿದ ಸುಜಾತಾ ಭಟ್, ” ನನ್ನ ಮಗಳು 2003ರಲ್ಲಿ ಧರ್ಮಸ್ಥಳ ದೇವಸ್ಥಾನಕ್ಕೆಂದು ಹೋದಾಕೆ ಕಾಣೆಯಾಗಿದ್ದಳು. ಆಗ ನಾನು ಕೋಲ್ಕತ್ತಾದಲ್ಲಿ ಉದ್ಯೋಗದಲ್ಲಿದ್ದೆ. ಅಲ್ಲಿಂದ ಬರುವಾಗ ಎರಡು ದಿನ ಕಳೆದಿತ್ತು. ಬಂದು ಮಗಳನ್ನು ಹುಡುಕಿದೆ. ಆದರೆ, ಆಕೆ ಸಿಗಲಿಲ್ಲ. ಹಾಗಾಗಿ, ಬೆಳ್ತಂಗಡಿ ಪೊಲೀಸ್ ಠಾಣೆಗೆ ಹೋಗಿ ವಿಚಾರಿಸಿದೆ. ಆಗ ಬೆಳ್ತಂಗಡಿ ಪೊಲೀಸರು “ನೀನೆ ಹುಡ್ಕೋ ಹೋಗಮ್ಮ, ನಿನ್ನ ಮಗಳು ಯಾವನ್ ಜೊತೆಗೋ ಹೋಗಿರಬಹುದು. ನೀನೇ ಹುಡ್ಕೋ, ನಾವು ಹುಡುಕಿ ಕೊಡಲು ನಮಗೇನ್ ಬೇರೆ ಕೆಲ್ಸಾ ಇಲ್ವಾ, ಅದೇ ಕೆಲ್ಸಾನಾ?” ಎಂದು ಗದರಿಸಿ ನನ್ನ ಕಳಿಸಿದರು” ಎಂದು ಹೇಳಿದರು.

ಮುಂದುವರಿದು, “ನಾನು ಬೇರೆ ದಾರಿ ತೋಚದೆ ಧರ್ಮಸ್ಥಳಕ್ಕೆ ಹೋದೆ. ಅಲ್ಲಿ ಮಗಳಿಗಾಗಿ ಹುಡುಕಾಡಿ ಒಂದು ಕಡೆ ಕುಳಿತಿದ್ದೆ. ಆಗ ಯಾರೋ ನಾಲ್ಕು ಜನರು ಬಂದು “ನಿಮ್ಮ ಮಗಳನ್ನು ನೋಡಿದ್ದೀವಿ, ಹುಡುಕಿ ಕೊಡ್ತೀವಿ” ಎಂದು ಕರೆದುಕೊಂಡು ಹೋಗಿ ಕೂಡಿ ಹಾಕಿದ್ರು. ನಂತರ ಮರುದಿನ ಬೆಳಿಗ್ಗೆ ಸುಮಾರು 5 ಗಂಟೆಯ ಹೊತ್ತಿಗೆ ನನ್ನನ್ನು ಹೊರಗಡೆ ಕರೆದುಕೊಂಡು ಬಂದು ಬಿಟ್ರು. ನನ್ನನ್ನು ಕೂಡಿ ಹಾಕಿದವರು ನನ್ನ ತಲೆಗೆ ಹೊಡೆದಿದ್ರು. ಅದರ ಮಾರ್ಕ್ ಈಗಲೂ ಇದೆ. ನನ್ನನ್ನು ಕಟ್ಟಿ ಹಾಕಿದ್ದ ಮಾರ್ಕ್‌ಗಳು ಕೈಯ್ಯಲ್ಲಿ ಇವೆ. ಎರಡೂ ಕೈಗಳಲ್ಲಿ ಮಾರ್ಕ್‌ಗಳು ಇವೆ, ಕೈ ಬೆಂಡಾಗಿವೆ” ಎಂದು ತಲೆ ಮತ್ತು ಕೈಗಳನ್ನು ಸುಜಾತಾ ಭಟ್ ಮಾಧ್ಯಮಗಳ ಮುಂದೆ ತೋರಿಸಿದರು.

“ಹೊಡೆದವರು ಯಾರು? ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಭಟ್, “ಯಾರು ಅಂತ ನನಗೆ ಗೊತ್ತಿಲ್ಲ. ಅವರು ಹೊಡೆದಾಗ ನಾನು ಪ್ರಜ್ಞೆ ತಪ್ಪಿ ಬಿದ್ದಿದ್ದೆ. ಆ ಬಳಿಕ ಯಾರೋ ವ್ಯಕ್ತಿ ಬಂದು ನನ್ನನ್ನು ಬೆಂಗಳೂರಿಗೆ ಕರೆದುಕೊಂಡು ಹೋಗಿ ಆಸ್ಪತ್ರೆಗೆ ಸೇರಿಸಿದ್ದಾರೆ ಅನಿಸುತ್ತೆ. ನಾನು ಕೋಮಾಗೆ ಹೋಗಿದ್ದೆ. ಎಚ್ಚರ ಬಂದಾಗ ಆಸ್ಪತ್ರೆಯಲ್ಲಿ ಇದ್ದೆ. ನನ್ನನ್ನು ಆವತ್ತು ಆಸ್ಪತ್ರೆಗೆ ಸೇರಿಸಿದ ಆ ಪುಣ್ಯಾತ್ಮನಿಗೆ ನಾನು ಚಿರಋಣಿ” ಎಂದರು.

ಮಗಳು ಯಾರ ಜೊತೆ ದೇವಸ್ಥಾನಕ್ಕೆ ಹೋಗಿದ್ದರು? ಎಂಬ ಪ್ರಶ್ನೆಗೆ ಉತ್ತರಿಸಿದ ಸುಜಾತಾ ಭಟ್, “ಆಕೆ ಗೆಳೆಯರೊಂದಿಗೆ ಹೋಗಿರಬಹುದು. ಆ ಬಳಿಕ ಕಾಣೆಯಾಗಿದ್ದಾಳೆ ” ಎಂದು ತಿಳಿಸಿದರು.

“ಮೊನ್ನೆ ಸಾಕ್ಷಿ ದೂರುದಾರ ಹೇಳಿದಂತೆ ಪೊಲೀಸರು ಹುಡುಕಿದಾಗ ತಲೆ ಬುರುಡೆ ಸಿಕ್ಕಿದೆ. ಅದನ್ನು ಪೊಲೀಸರು ಬೆಳ್ತಂಗಡಿ ನ್ಯಾಯಾಲಯದ ಮುಂದೆ ಇಟ್ಟಿದ್ದಾರೆ. ಅದು ನನ್ನ ಮಗಳದ್ದಾಗಿರಬಹುದು ಅಥವಾ ನನ್ನ ಮಗಳದ್ದು ಅದೇ ರೀತಿ ಸಿಗಬಹುದು ಎಂಬ ಆಶಾ ಭಾವನೆಯೊಂದಿಗೆ ಎಸ್ಪಿಗೆ ದೂರು ಕೊಟ್ಟಿದ್ದೇನೆ. ನನ್ನ ಮಗಳ ಅಸ್ತಿ ಏನಾದರು ಸಿಕ್ಕಿದರೆ, ಸನಾತನ ಬ್ರಾಹ್ಮಣ ಹಿಂದೂ ಸಂಪ್ರದಾಯದಂತೆ ನಾನು ಅದರ ಅಂತ್ಯಕ್ರಿಯೆ ಮಾಡಬೇಕು. ಈ ಮೂಲಕ ಆಕೆಯ ಆತ್ಮಕ್ಕೆ ಶಾಂತಿ ಸಿಗಬೇಕು” ಎಂದು ಹೇಳಿದರು.

2003ರಿಂದ ಏಕೆ ಸುಮ್ಮನ್ನಿದ್ದಿರಿ? ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸುಜಾತಾ ಭಟ್, “ನಾನು ಭಯದಿಂದ ಸುಮ್ಮನಿದ್ದೆ. ನನಗೆ ಯಾರ ಬೆಂಬಲವೂ ಇಲ್ಲ. ಬಂದು ಇಲ್ಲ, ಬಳಗವೂ ಇಲ್ಲ. ಇದ್ದ ಒಬ್ಬಳು ಮಗಳನ್ನು ಕಳೆದುಕೊಂಡಿದ್ದೇನೆ. ದಯವಿಟ್ಟು ನನಗೆ ನ್ಯಾಯ ಕೊಡಿಸಿ” ಎಂದು ಕಣ್ಣೀರು ಹಾಕಿದರು.

“ನನ್ನ ಮಗಳು ಮಣಿಪಾಲ್‌ ಕೆಎಂಸಿಯಲ್ಲಿ ಎಂಬಿಬಿಎಸ್‌ ಓದುತ್ತಿದ್ದಳು. ಆಕೆ ಕೋರ್ಸ್‌ಗೆ ಸೇರಿ ಕೇವಲ ಆರು ತಿಂಗಳು ಆಗಿತ್ತು. ಆಕೆ ತುಂಬಾ ಕಷ್ಟಪಟ್ಟು ಓದುತ್ತಿದ್ದಳು. ಇವತ್ತು ಅವಳು ನನ್ನ ಜೊತೆಗಿಲ್ಲ. ಅವಳ ಆತ್ಮ ನನ್ನನ್ನು ಕಾಡ್ತಿದೆ. ಹಾಗಾಗಿ, ಅವಳ ಅಸ್ತಿ ಸಿಕ್ಕಿದರೆ ಪುಣ್ಯ ಬರುತ್ತದೆ ಎಂದು ಎಸ್ಪಿಯವರಿಗೆ ಹೇಳಿದ್ದೇನೆ. ಆಯ್ತಮ್ಮ ಎಂದು ಎಸ್ಪಿ ಹೇಳಿದ್ದಾರೆ. ಅವರಿಗೂ ನಾನು ಚಿರಋಣಿಯಾಗಿರುತ್ತೇನೆ” ಎಂದು ಮಾಧ್ಯಮಗಳ ಮುಂದೆ ಕಣ್ಣೀರು ಹಾಕುತ್ತಾ ಸುಜಾತಾ ಭಟ್ ಕೈ ಮುಗಿದರು.

2003ರಿಂದ ಏನು ಭಯ ಇತ್ತು ಮೇಡಂ? ಎಂಬ ಪ್ರಶ್ನೆಗೆ ಉತ್ತರಿಸಿ ಸುಜಾತಾ ಭಟ್, “ನನಗೆ ಯಾರ ಬೆಂಬಲವೂ ಇಲ್ಲ ಸರ್, ನಾನು ಒಂಟಿಯಾಗಿ ಹೋರಾಟ ಮಾಡಬೇಕಿದೆ ಸರ್ ಎಂದರು. ಮಣಿಪಾಲದ ಪರ್ಕಳದ ಹತ್ತಿರ ಪರಿಕ್ಕಾ ಅಂತ ಒಂದು ಊರಿದೆ. ಅಲ್ಲಿದ್ದ ನನ್ನ ಮನೆ ದೇವರು, ಆಸ್ತಿ ಎಲ್ಲವನ್ನೂ ಕಿತ್ತುಕೊಂಡಿದ್ದಾರೆ. ತಂದೆಯಿಂದ ಬಂದ ನನ್ನ ಪಿತ್ರಾರ್ಜಿತ ಆಸ್ತಿಯನ್ನು ನನ್ನ ಸಹಿಯೂ ಇಲ್ಲದೆ ಖರೀದಿ ಮಾಡಿದ್ದಾರೆ. ಆ ಆಸ್ತಿನೂ ನನ್ನ ಒಂದು ಭಾಗ ಆಗಿತ್ತು. ಈಗ ಅದೂ ಇಲ್ಲ. ನನಗೆ ಯಾರು ಇಲ್ಲ ಸರ್” ಎಂದು ಹೇಳಿದರು.

“ನನ್ನ ಮಗಳು ಧರ್ಮಸ್ಥಳದಲ್ಲೇ ಕಾಣೆಯಾಗಿದ್ದು, ಈ ಬಗ್ಗೆ ನಾನು 2003ರಲ್ಲೇ ಬೆಳ್ತಂಗಡಿ ಠಾಣೆಯಲ್ಲಿ ದೂರು ಕೊಟ್ಟಿದ್ದೆ. ಆದರೆ, ಅವರು ತೆಗೆದುಕೊಂಡಿಲ್ಲ. ಈಗ ನಾನು ಎಸ್ಪಿ ಬಳಿ ದೂರು ಕೊಟ್ಟಿದ್ದೇನೆ. ಅವರು ಧರ್ಮಸ್ಥಳ ಠಾಣೆಗೆ ಹೋಗಲು ಹೇಳಿದ್ದಾರೆ” ಎಂದು ತಿಳಿಸಿದರು.

ಸುಜಾತಾ ಭಟ್ ಪರ ವಕೀಲ ಮಂಜುನಾಥ್ ಮಾತನಾಡಿ, “ಸಾಕ್ಷಿ ದೂರುದಾರ ಮೊನ್ನೆ ನ್ಯಾಯಾಲಯಕ್ಕೆ ಹಾಜರಾಗಿ ಹೇಳಿಕೆ ಕೊಟ್ಟ ಬಳಿಕ ಸುಜಾತಾ ಭಟ್ ನನ್ನನ್ನು ಸಂಪರ್ಕಿಸಿದರು. “ಧರ್ಮಸ್ಥಳದ ಪ್ರಕರಣ ನಡೆಯುತ್ತಿದೆಯಲ್ಲ, ನನ್ನ ಮಗಳದ್ದು ಆ ರೀತಿಯ ಪ್ರಕರಣ ನಡೆದಿದೆ” ಎಂದರು. ಆಗ ನಾನು ಕಾನೂನಿನ ಪ್ರಕಾರ ದೂರು ಕೊಡೋಣ ಎಂದೆ. ಈಗ ದೂರು ಕೊಟ್ಟಿದ್ದೇವೆ. ಇವರ (ಸುಜಾತಾ ಭಟ್) ಬೇಡಿಕೆ ಏನೆಂದರೆ, ಇವರು ಯಾರನ್ನೂ ಜೈಲಿಗೆ ಹಾಕಿ ಎಂದು ಹೇಳುತ್ತಿಲ್ಲ. ಇವರಿಗೆ ಯಾರೂ ಇಲ್ಲ. ಇಲ್ಲಿ ಹೂಳಲಾಗಿದೆ ಎನ್ನಲಾದ ಹೆಣಗಳ ಬಗ್ಗೆ ಹುಡುಕಾಟ ನಡೆಸುವಾಗ ನನ್ನ ಮಗಳ ಅಸ್ತಿ ಏನಾದರು ಸಿಕ್ಕಿ, ಅದು ಡಿಎನ್‌ಎ ಮೂಲಕ ಖಚಿತವಾದರೆ ನನಗೆ ಕೊಡಿ. ಅದಕ್ಕೆ ಶ್ರಾದ್ಧ ಮಾಡಿ, ತಾನೂ ಜೀವ ಬಿಡುತ್ತೇನೆ ಎಂಬ ಸ್ಥಿತಿಯಲ್ಲಿ ಇದ್ದಾರೆ” ಎಂದರು.

“ಎಸ್ಪಿಯವರು ಪಾಸಿಟಿವ್ ಆಗಿ ಪ್ರತಿಕ್ರಿಯಿಸಿದ್ದಾರೆ. ಕಾನೂನಿನ ಪ್ರಕಾರ ಏನು ಮಾಡಬೇಕೋ ಅದು ಮಾಡುತ್ತೇವೆ ಎಂದಿದ್ದಾರೆ. ಎಸ್ಪಿ ಹೇಳಿದಂತೆ ನಾವು ಧರ್ಮಸ್ಥಳ ಠಾಣೆಗೆ ದೂರು ಕೊಡುತ್ತೇವೆ” ಎಂದರು.

ಸುಜಾತಾ ಭಟ್ ಅವರ ಆಸ್ತಿ ವಿಚಾರ ಪ್ರಸ್ತಾಪಿಸಿದಾಗ, “ಅದು ಸಿವಿಲ್ ವ್ಯಾಜ್ಯವಾಗಿದೆ. ಅದನ್ನು ಇಲ್ಲಿ ಪ್ರಸ್ತಾಪಿಸಲು ಆಗುವುದಿಲ್ಲ ಎಂದು ಹೇಳಿದರು.

ದೂರಿನ ಬಗ್ಗೆ ವಿಚಾರಣೆ ನಡೆಸಿ ಕ್ರಮ: ಎಸ್ಪಿ ಡಾ.ಅರುಣ್ 

2003ನೇ ಇಸವಿಯಲ್ಲಿ ಧರ್ಮಸ್ಥಳ ದೇವಸ್ಥಾನದ ವಠಾರದಿಂದ ಅನನ್ಯ ಭಟ್ ಕಣ್ಮರೆಯಾಗಿದ್ದು, ಈ ಬಗ್ಗೆ ವಿಚಾರಣೆ ನಡೆಸುವಂತೆ ಯುವತಿಯ ತಾಯಿ ಜುಲೈ 15ರಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನು ಭೇಟಿ ಮಾಡಿ ದೂರು ನೀಡಿದ್ದಾರೆ. ಈ ದೂರಿನ ಬಗ್ಗೆ ವಿಚಾರಣೆ ನಡೆಸಿ ಸೂಕ್ತ ಕಾನೂನುಕ್ರಮ ಕೈಗೊಳ್ಳಲಾಗುವುದು ಎಂದು ಎಸ್ಪಿ ಕಚೇರಿಯ ಪ್ರಕಟಣೆ ತಿಳಿಸಿದೆ.

ಬೆಂಗಳೂರು| ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಆರೋಪ: ಇಬ್ಬರು ಉಪನ್ಯಾಸಕರು ಸೇರಿ ಮೂವರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...