Homeಕರ್ನಾಟಕ'ಧರ್ಮಸ್ಥಳಕ್ಕೆ ಹೋಗಿದ್ದ ನನ್ನ ಮಗಳು ಕಾಣೆಯಾದ್ಲು, ದಯವಿಟ್ಟು ನ್ಯಾಯ ಕೊಡಿಸಿ': ಅನನ್ಯ ಭಟ್ ತಾಯಿ ಕಣ್ಣೀರು

‘ಧರ್ಮಸ್ಥಳಕ್ಕೆ ಹೋಗಿದ್ದ ನನ್ನ ಮಗಳು ಕಾಣೆಯಾದ್ಲು, ದಯವಿಟ್ಟು ನ್ಯಾಯ ಕೊಡಿಸಿ’: ಅನನ್ಯ ಭಟ್ ತಾಯಿ ಕಣ್ಣೀರು

"ಬೆಳ್ತಂಗಡಿ ಠಾಣೆಗೆ ಹೋದಾಗ ದೂರು ಸ್ವೀಕರಿಸಿಲ್ಲ. ಧರ್ಮಸ್ಥಳದಲ್ಲಿ ಯಾರೋ ನನ್ನನ್ನು ಕೂಡಿ ಹಾಕಿ ಥಳಿಸಿದ್ರು. ಮಗಳ ಅಸ್ತಿ ಸಿಕ್ರೆ ಶ್ರಾದ್ಧ ಮಾಡಿ ಪ್ರಾಣ ಬಿಡ್ತೀನಿ"

- Advertisement -
- Advertisement -

ಧರ್ಮಸ್ಥಳದಲ್ಲಿ  2003ರಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಅನನ್ಯ ಭಟ್ ಅವರ ನಾಪತ್ತೆ ಸಂಬಂಧ ದೂರು ನೀಡಲು ತಾಯಿ ಸುಜಾತಾ ಭಟ್ ಮಂಗಳವಾರ (ಜು.15) ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಡಾ.ಅರುಣ್ ಕೆ ಅವರನ್ನು ಭೇಟಿಯಾಗಿದ್ದರು.

ಪ್ರಕರಣ ಈಗಿನ ಧರ್ಮಸ್ಥಳ ಠಾಣೆ ವ್ಯಾಪ್ತಿಯಲ್ಲಿ ನಡೆದಿರುವುದರಿಂದ, ಅಲ್ಲಿಯೇ ದೂರು ನೀಡುವಂತೆ ಎಸ್ಪಿ ಸಲಹೆ ನೀಡಿದ್ದರು. ಅದರಂತೆ, ರಾತ್ರಿ 8 ಗಂಟೆಯ ಸುಮಾರಿಗೆ ಧರ್ಮಸ್ಥಳ ಪೊಲೀಸ್ ಠಾಣೆಗೆ ತೆರಳಿ ಸಬ್‌ ಇನ್‌ಸ್ಪೆಕ್ಟರ್ ಸಮರ್ಥ್ ಆರ್.ಗಾಣಿಗೇರ ಅವರಿಗೆ ಸುಜಾತಾ ಭಟ್ ದೂರು ನೀಡಿದ್ದಾರೆ. ಪೊಲೀಸರು ದೂರು ಸ್ವೀಕರಿಸಿದ್ದು, ಮುಂದಿನ ತನಿಖೆ ಕೈಗೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.

ಮಂಗಳವಾರ ಸಂಜೆ ವಕೀಲ ಮಂಜುನಾಥ್  ಜೊತೆ ಎಸ್ಪಿಯನ್ನು ಭೇಟಿ ಮಾಡಿದ ಬಳಿಕ ಮಾಧ್ಯಮಗಳ ಮುಂದೆ ಮಾತನಾಡಿದ ಸುಜಾತಾ ಭಟ್, ” ನನ್ನ ಮಗಳು 2003ರಲ್ಲಿ ಧರ್ಮಸ್ಥಳ ದೇವಸ್ಥಾನಕ್ಕೆಂದು ಹೋದಾಕೆ ಕಾಣೆಯಾಗಿದ್ದಳು. ಆಗ ನಾನು ಕೋಲ್ಕತ್ತಾದಲ್ಲಿ ಉದ್ಯೋಗದಲ್ಲಿದ್ದೆ. ಅಲ್ಲಿಂದ ಬರುವಾಗ ಎರಡು ದಿನ ಕಳೆದಿತ್ತು. ಬಂದು ಮಗಳನ್ನು ಹುಡುಕಿದೆ. ಆದರೆ, ಆಕೆ ಸಿಗಲಿಲ್ಲ. ಹಾಗಾಗಿ, ಬೆಳ್ತಂಗಡಿ ಪೊಲೀಸ್ ಠಾಣೆಗೆ ಹೋಗಿ ವಿಚಾರಿಸಿದೆ. ಆಗ ಬೆಳ್ತಂಗಡಿ ಪೊಲೀಸರು “ನೀನೆ ಹುಡ್ಕೋ ಹೋಗಮ್ಮ, ನಿನ್ನ ಮಗಳು ಯಾವನ್ ಜೊತೆಗೋ ಹೋಗಿರಬಹುದು. ನೀನೇ ಹುಡ್ಕೋ, ನಾವು ಹುಡುಕಿ ಕೊಡಲು ನಮಗೇನ್ ಬೇರೆ ಕೆಲ್ಸಾ ಇಲ್ವಾ, ಅದೇ ಕೆಲ್ಸಾನಾ?” ಎಂದು ಗದರಿಸಿ ನನ್ನ ಕಳಿಸಿದರು” ಎಂದು ಹೇಳಿದರು.

ಮುಂದುವರಿದು, “ನಾನು ಬೇರೆ ದಾರಿ ತೋಚದೆ ಧರ್ಮಸ್ಥಳಕ್ಕೆ ಹೋದೆ. ಅಲ್ಲಿ ಮಗಳಿಗಾಗಿ ಹುಡುಕಾಡಿ ಒಂದು ಕಡೆ ಕುಳಿತಿದ್ದೆ. ಆಗ ಯಾರೋ ನಾಲ್ಕು ಜನರು ಬಂದು “ನಿಮ್ಮ ಮಗಳನ್ನು ನೋಡಿದ್ದೀವಿ, ಹುಡುಕಿ ಕೊಡ್ತೀವಿ” ಎಂದು ಕರೆದುಕೊಂಡು ಹೋಗಿ ಕೂಡಿ ಹಾಕಿದ್ರು. ನಂತರ ಮರುದಿನ ಬೆಳಿಗ್ಗೆ ಸುಮಾರು 5 ಗಂಟೆಯ ಹೊತ್ತಿಗೆ ನನ್ನನ್ನು ಹೊರಗಡೆ ಕರೆದುಕೊಂಡು ಬಂದು ಬಿಟ್ರು. ನನ್ನನ್ನು ಕೂಡಿ ಹಾಕಿದವರು ನನ್ನ ತಲೆಗೆ ಹೊಡೆದಿದ್ರು. ಅದರ ಮಾರ್ಕ್ ಈಗಲೂ ಇದೆ. ನನ್ನನ್ನು ಕಟ್ಟಿ ಹಾಕಿದ್ದ ಮಾರ್ಕ್‌ಗಳು ಕೈಯ್ಯಲ್ಲಿ ಇವೆ. ಎರಡೂ ಕೈಗಳಲ್ಲಿ ಮಾರ್ಕ್‌ಗಳು ಇವೆ, ಕೈ ಬೆಂಡಾಗಿವೆ” ಎಂದು ತಲೆ ಮತ್ತು ಕೈಗಳನ್ನು ಸುಜಾತಾ ಭಟ್ ಮಾಧ್ಯಮಗಳ ಮುಂದೆ ತೋರಿಸಿದರು.

“ಹೊಡೆದವರು ಯಾರು? ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಭಟ್, “ಯಾರು ಅಂತ ನನಗೆ ಗೊತ್ತಿಲ್ಲ. ಅವರು ಹೊಡೆದಾಗ ನಾನು ಪ್ರಜ್ಞೆ ತಪ್ಪಿ ಬಿದ್ದಿದ್ದೆ. ಆ ಬಳಿಕ ಯಾರೋ ವ್ಯಕ್ತಿ ಬಂದು ನನ್ನನ್ನು ಬೆಂಗಳೂರಿಗೆ ಕರೆದುಕೊಂಡು ಹೋಗಿ ಆಸ್ಪತ್ರೆಗೆ ಸೇರಿಸಿದ್ದಾರೆ ಅನಿಸುತ್ತೆ. ನಾನು ಕೋಮಾಗೆ ಹೋಗಿದ್ದೆ. ಎಚ್ಚರ ಬಂದಾಗ ಆಸ್ಪತ್ರೆಯಲ್ಲಿ ಇದ್ದೆ. ನನ್ನನ್ನು ಆವತ್ತು ಆಸ್ಪತ್ರೆಗೆ ಸೇರಿಸಿದ ಆ ಪುಣ್ಯಾತ್ಮನಿಗೆ ನಾನು ಚಿರಋಣಿ” ಎಂದರು.

ಮಗಳು ಯಾರ ಜೊತೆ ದೇವಸ್ಥಾನಕ್ಕೆ ಹೋಗಿದ್ದರು? ಎಂಬ ಪ್ರಶ್ನೆಗೆ ಉತ್ತರಿಸಿದ ಸುಜಾತಾ ಭಟ್, “ಆಕೆ ಗೆಳೆಯರೊಂದಿಗೆ ಹೋಗಿರಬಹುದು. ಆ ಬಳಿಕ ಕಾಣೆಯಾಗಿದ್ದಾಳೆ ” ಎಂದು ತಿಳಿಸಿದರು.

“ಮೊನ್ನೆ ಸಾಕ್ಷಿ ದೂರುದಾರ ಹೇಳಿದಂತೆ ಪೊಲೀಸರು ಹುಡುಕಿದಾಗ ತಲೆ ಬುರುಡೆ ಸಿಕ್ಕಿದೆ. ಅದನ್ನು ಪೊಲೀಸರು ಬೆಳ್ತಂಗಡಿ ನ್ಯಾಯಾಲಯದ ಮುಂದೆ ಇಟ್ಟಿದ್ದಾರೆ. ಅದು ನನ್ನ ಮಗಳದ್ದಾಗಿರಬಹುದು ಅಥವಾ ನನ್ನ ಮಗಳದ್ದು ಅದೇ ರೀತಿ ಸಿಗಬಹುದು ಎಂಬ ಆಶಾ ಭಾವನೆಯೊಂದಿಗೆ ಎಸ್ಪಿಗೆ ದೂರು ಕೊಟ್ಟಿದ್ದೇನೆ. ನನ್ನ ಮಗಳ ಅಸ್ತಿ ಏನಾದರು ಸಿಕ್ಕಿದರೆ, ಸನಾತನ ಬ್ರಾಹ್ಮಣ ಹಿಂದೂ ಸಂಪ್ರದಾಯದಂತೆ ನಾನು ಅದರ ಅಂತ್ಯಕ್ರಿಯೆ ಮಾಡಬೇಕು. ಈ ಮೂಲಕ ಆಕೆಯ ಆತ್ಮಕ್ಕೆ ಶಾಂತಿ ಸಿಗಬೇಕು” ಎಂದು ಹೇಳಿದರು.

2003ರಿಂದ ಏಕೆ ಸುಮ್ಮನ್ನಿದ್ದಿರಿ? ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸುಜಾತಾ ಭಟ್, “ನಾನು ಭಯದಿಂದ ಸುಮ್ಮನಿದ್ದೆ. ನನಗೆ ಯಾರ ಬೆಂಬಲವೂ ಇಲ್ಲ. ಬಂದು ಇಲ್ಲ, ಬಳಗವೂ ಇಲ್ಲ. ಇದ್ದ ಒಬ್ಬಳು ಮಗಳನ್ನು ಕಳೆದುಕೊಂಡಿದ್ದೇನೆ. ದಯವಿಟ್ಟು ನನಗೆ ನ್ಯಾಯ ಕೊಡಿಸಿ” ಎಂದು ಕಣ್ಣೀರು ಹಾಕಿದರು.

“ನನ್ನ ಮಗಳು ಮಣಿಪಾಲ್‌ ಕೆಎಂಸಿಯಲ್ಲಿ ಎಂಬಿಬಿಎಸ್‌ ಓದುತ್ತಿದ್ದಳು. ಆಕೆ ಕೋರ್ಸ್‌ಗೆ ಸೇರಿ ಕೇವಲ ಆರು ತಿಂಗಳು ಆಗಿತ್ತು. ಆಕೆ ತುಂಬಾ ಕಷ್ಟಪಟ್ಟು ಓದುತ್ತಿದ್ದಳು. ಇವತ್ತು ಅವಳು ನನ್ನ ಜೊತೆಗಿಲ್ಲ. ಅವಳ ಆತ್ಮ ನನ್ನನ್ನು ಕಾಡ್ತಿದೆ. ಹಾಗಾಗಿ, ಅವಳ ಅಸ್ತಿ ಸಿಕ್ಕಿದರೆ ಪುಣ್ಯ ಬರುತ್ತದೆ ಎಂದು ಎಸ್ಪಿಯವರಿಗೆ ಹೇಳಿದ್ದೇನೆ. ಆಯ್ತಮ್ಮ ಎಂದು ಎಸ್ಪಿ ಹೇಳಿದ್ದಾರೆ. ಅವರಿಗೂ ನಾನು ಚಿರಋಣಿಯಾಗಿರುತ್ತೇನೆ” ಎಂದು ಮಾಧ್ಯಮಗಳ ಮುಂದೆ ಕಣ್ಣೀರು ಹಾಕುತ್ತಾ ಸುಜಾತಾ ಭಟ್ ಕೈ ಮುಗಿದರು.

2003ರಿಂದ ಏನು ಭಯ ಇತ್ತು ಮೇಡಂ? ಎಂಬ ಪ್ರಶ್ನೆಗೆ ಉತ್ತರಿಸಿ ಸುಜಾತಾ ಭಟ್, “ನನಗೆ ಯಾರ ಬೆಂಬಲವೂ ಇಲ್ಲ ಸರ್, ನಾನು ಒಂಟಿಯಾಗಿ ಹೋರಾಟ ಮಾಡಬೇಕಿದೆ ಸರ್ ಎಂದರು. ಮಣಿಪಾಲದ ಪರ್ಕಳದ ಹತ್ತಿರ ಪರಿಕ್ಕಾ ಅಂತ ಒಂದು ಊರಿದೆ. ಅಲ್ಲಿದ್ದ ನನ್ನ ಮನೆ ದೇವರು, ಆಸ್ತಿ ಎಲ್ಲವನ್ನೂ ಕಿತ್ತುಕೊಂಡಿದ್ದಾರೆ. ತಂದೆಯಿಂದ ಬಂದ ನನ್ನ ಪಿತ್ರಾರ್ಜಿತ ಆಸ್ತಿಯನ್ನು ನನ್ನ ಸಹಿಯೂ ಇಲ್ಲದೆ ಖರೀದಿ ಮಾಡಿದ್ದಾರೆ. ಆ ಆಸ್ತಿನೂ ನನ್ನ ಒಂದು ಭಾಗ ಆಗಿತ್ತು. ಈಗ ಅದೂ ಇಲ್ಲ. ನನಗೆ ಯಾರು ಇಲ್ಲ ಸರ್” ಎಂದು ಹೇಳಿದರು.

“ನನ್ನ ಮಗಳು ಧರ್ಮಸ್ಥಳದಲ್ಲೇ ಕಾಣೆಯಾಗಿದ್ದು, ಈ ಬಗ್ಗೆ ನಾನು 2003ರಲ್ಲೇ ಬೆಳ್ತಂಗಡಿ ಠಾಣೆಯಲ್ಲಿ ದೂರು ಕೊಟ್ಟಿದ್ದೆ. ಆದರೆ, ಅವರು ತೆಗೆದುಕೊಂಡಿಲ್ಲ. ಈಗ ನಾನು ಎಸ್ಪಿ ಬಳಿ ದೂರು ಕೊಟ್ಟಿದ್ದೇನೆ. ಅವರು ಧರ್ಮಸ್ಥಳ ಠಾಣೆಗೆ ಹೋಗಲು ಹೇಳಿದ್ದಾರೆ” ಎಂದು ತಿಳಿಸಿದರು.

ಸುಜಾತಾ ಭಟ್ ಪರ ವಕೀಲ ಮಂಜುನಾಥ್ ಮಾತನಾಡಿ, “ಸಾಕ್ಷಿ ದೂರುದಾರ ಮೊನ್ನೆ ನ್ಯಾಯಾಲಯಕ್ಕೆ ಹಾಜರಾಗಿ ಹೇಳಿಕೆ ಕೊಟ್ಟ ಬಳಿಕ ಸುಜಾತಾ ಭಟ್ ನನ್ನನ್ನು ಸಂಪರ್ಕಿಸಿದರು. “ಧರ್ಮಸ್ಥಳದ ಪ್ರಕರಣ ನಡೆಯುತ್ತಿದೆಯಲ್ಲ, ನನ್ನ ಮಗಳದ್ದು ಆ ರೀತಿಯ ಪ್ರಕರಣ ನಡೆದಿದೆ” ಎಂದರು. ಆಗ ನಾನು ಕಾನೂನಿನ ಪ್ರಕಾರ ದೂರು ಕೊಡೋಣ ಎಂದೆ. ಈಗ ದೂರು ಕೊಟ್ಟಿದ್ದೇವೆ. ಇವರ (ಸುಜಾತಾ ಭಟ್) ಬೇಡಿಕೆ ಏನೆಂದರೆ, ಇವರು ಯಾರನ್ನೂ ಜೈಲಿಗೆ ಹಾಕಿ ಎಂದು ಹೇಳುತ್ತಿಲ್ಲ. ಇವರಿಗೆ ಯಾರೂ ಇಲ್ಲ. ಇಲ್ಲಿ ಹೂಳಲಾಗಿದೆ ಎನ್ನಲಾದ ಹೆಣಗಳ ಬಗ್ಗೆ ಹುಡುಕಾಟ ನಡೆಸುವಾಗ ನನ್ನ ಮಗಳ ಅಸ್ತಿ ಏನಾದರು ಸಿಕ್ಕಿ, ಅದು ಡಿಎನ್‌ಎ ಮೂಲಕ ಖಚಿತವಾದರೆ ನನಗೆ ಕೊಡಿ. ಅದಕ್ಕೆ ಶ್ರಾದ್ಧ ಮಾಡಿ, ತಾನೂ ಜೀವ ಬಿಡುತ್ತೇನೆ ಎಂಬ ಸ್ಥಿತಿಯಲ್ಲಿ ಇದ್ದಾರೆ” ಎಂದರು.

“ಎಸ್ಪಿಯವರು ಪಾಸಿಟಿವ್ ಆಗಿ ಪ್ರತಿಕ್ರಿಯಿಸಿದ್ದಾರೆ. ಕಾನೂನಿನ ಪ್ರಕಾರ ಏನು ಮಾಡಬೇಕೋ ಅದು ಮಾಡುತ್ತೇವೆ ಎಂದಿದ್ದಾರೆ. ಎಸ್ಪಿ ಹೇಳಿದಂತೆ ನಾವು ಧರ್ಮಸ್ಥಳ ಠಾಣೆಗೆ ದೂರು ಕೊಡುತ್ತೇವೆ” ಎಂದರು.

ಸುಜಾತಾ ಭಟ್ ಅವರ ಆಸ್ತಿ ವಿಚಾರ ಪ್ರಸ್ತಾಪಿಸಿದಾಗ, “ಅದು ಸಿವಿಲ್ ವ್ಯಾಜ್ಯವಾಗಿದೆ. ಅದನ್ನು ಇಲ್ಲಿ ಪ್ರಸ್ತಾಪಿಸಲು ಆಗುವುದಿಲ್ಲ ಎಂದು ಹೇಳಿದರು.

ದೂರಿನ ಬಗ್ಗೆ ವಿಚಾರಣೆ ನಡೆಸಿ ಕ್ರಮ: ಎಸ್ಪಿ ಡಾ.ಅರುಣ್ 

2003ನೇ ಇಸವಿಯಲ್ಲಿ ಧರ್ಮಸ್ಥಳ ದೇವಸ್ಥಾನದ ವಠಾರದಿಂದ ಅನನ್ಯ ಭಟ್ ಕಣ್ಮರೆಯಾಗಿದ್ದು, ಈ ಬಗ್ಗೆ ವಿಚಾರಣೆ ನಡೆಸುವಂತೆ ಯುವತಿಯ ತಾಯಿ ಜುಲೈ 15ರಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನು ಭೇಟಿ ಮಾಡಿ ದೂರು ನೀಡಿದ್ದಾರೆ. ಈ ದೂರಿನ ಬಗ್ಗೆ ವಿಚಾರಣೆ ನಡೆಸಿ ಸೂಕ್ತ ಕಾನೂನುಕ್ರಮ ಕೈಗೊಳ್ಳಲಾಗುವುದು ಎಂದು ಎಸ್ಪಿ ಕಚೇರಿಯ ಪ್ರಕಟಣೆ ತಿಳಿಸಿದೆ.

ಬೆಂಗಳೂರು| ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಆರೋಪ: ಇಬ್ಬರು ಉಪನ್ಯಾಸಕರು ಸೇರಿ ಮೂವರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...