Homeಕರ್ನಾಟಕ'ಧರ್ಮಸ್ಥಳಕ್ಕೆ ಹೋಗಿದ್ದ ನನ್ನ ಮಗಳು ಕಾಣೆಯಾದ್ಲು, ದಯವಿಟ್ಟು ನ್ಯಾಯ ಕೊಡಿಸಿ': ಅನನ್ಯ ಭಟ್ ತಾಯಿ ಕಣ್ಣೀರು

‘ಧರ್ಮಸ್ಥಳಕ್ಕೆ ಹೋಗಿದ್ದ ನನ್ನ ಮಗಳು ಕಾಣೆಯಾದ್ಲು, ದಯವಿಟ್ಟು ನ್ಯಾಯ ಕೊಡಿಸಿ’: ಅನನ್ಯ ಭಟ್ ತಾಯಿ ಕಣ್ಣೀರು

"ಬೆಳ್ತಂಗಡಿ ಠಾಣೆಗೆ ಹೋದಾಗ ದೂರು ಸ್ವೀಕರಿಸಿಲ್ಲ. ಧರ್ಮಸ್ಥಳದಲ್ಲಿ ಯಾರೋ ನನ್ನನ್ನು ಕೂಡಿ ಹಾಕಿ ಥಳಿಸಿದ್ರು. ಮಗಳ ಅಸ್ತಿ ಸಿಕ್ರೆ ಶ್ರಾದ್ಧ ಮಾಡಿ ಪ್ರಾಣ ಬಿಡ್ತೀನಿ"

- Advertisement -
- Advertisement -

ಧರ್ಮಸ್ಥಳದಲ್ಲಿ  2003ರಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಅನನ್ಯ ಭಟ್ ಅವರ ನಾಪತ್ತೆ ಸಂಬಂಧ ದೂರು ನೀಡಲು ತಾಯಿ ಸುಜಾತಾ ಭಟ್ ಮಂಗಳವಾರ (ಜು.15) ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಡಾ.ಅರುಣ್ ಕೆ ಅವರನ್ನು ಭೇಟಿಯಾಗಿದ್ದರು.

ಪ್ರಕರಣ ಈಗಿನ ಧರ್ಮಸ್ಥಳ ಠಾಣೆ ವ್ಯಾಪ್ತಿಯಲ್ಲಿ ನಡೆದಿರುವುದರಿಂದ, ಅಲ್ಲಿಯೇ ದೂರು ನೀಡುವಂತೆ ಎಸ್ಪಿ ಸಲಹೆ ನೀಡಿದ್ದರು. ಅದರಂತೆ, ರಾತ್ರಿ 8 ಗಂಟೆಯ ಸುಮಾರಿಗೆ ಧರ್ಮಸ್ಥಳ ಪೊಲೀಸ್ ಠಾಣೆಗೆ ತೆರಳಿ ಸಬ್‌ ಇನ್‌ಸ್ಪೆಕ್ಟರ್ ಸಮರ್ಥ್ ಆರ್.ಗಾಣಿಗೇರ ಅವರಿಗೆ ಸುಜಾತಾ ಭಟ್ ದೂರು ನೀಡಿದ್ದಾರೆ. ಪೊಲೀಸರು ದೂರು ಸ್ವೀಕರಿಸಿದ್ದು, ಮುಂದಿನ ತನಿಖೆ ಕೈಗೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.

ಮಂಗಳವಾರ ಸಂಜೆ ವಕೀಲ ಮಂಜುನಾಥ್  ಜೊತೆ ಎಸ್ಪಿಯನ್ನು ಭೇಟಿ ಮಾಡಿದ ಬಳಿಕ ಮಾಧ್ಯಮಗಳ ಮುಂದೆ ಮಾತನಾಡಿದ ಸುಜಾತಾ ಭಟ್, ” ನನ್ನ ಮಗಳು 2003ರಲ್ಲಿ ಧರ್ಮಸ್ಥಳ ದೇವಸ್ಥಾನಕ್ಕೆಂದು ಹೋದಾಕೆ ಕಾಣೆಯಾಗಿದ್ದಳು. ಆಗ ನಾನು ಕೋಲ್ಕತ್ತಾದಲ್ಲಿ ಉದ್ಯೋಗದಲ್ಲಿದ್ದೆ. ಅಲ್ಲಿಂದ ಬರುವಾಗ ಎರಡು ದಿನ ಕಳೆದಿತ್ತು. ಬಂದು ಮಗಳನ್ನು ಹುಡುಕಿದೆ. ಆದರೆ, ಆಕೆ ಸಿಗಲಿಲ್ಲ. ಹಾಗಾಗಿ, ಬೆಳ್ತಂಗಡಿ ಪೊಲೀಸ್ ಠಾಣೆಗೆ ಹೋಗಿ ವಿಚಾರಿಸಿದೆ. ಆಗ ಬೆಳ್ತಂಗಡಿ ಪೊಲೀಸರು “ನೀನೆ ಹುಡ್ಕೋ ಹೋಗಮ್ಮ, ನಿನ್ನ ಮಗಳು ಯಾವನ್ ಜೊತೆಗೋ ಹೋಗಿರಬಹುದು. ನೀನೇ ಹುಡ್ಕೋ, ನಾವು ಹುಡುಕಿ ಕೊಡಲು ನಮಗೇನ್ ಬೇರೆ ಕೆಲ್ಸಾ ಇಲ್ವಾ, ಅದೇ ಕೆಲ್ಸಾನಾ?” ಎಂದು ಗದರಿಸಿ ನನ್ನ ಕಳಿಸಿದರು” ಎಂದು ಹೇಳಿದರು.

ಮುಂದುವರಿದು, “ನಾನು ಬೇರೆ ದಾರಿ ತೋಚದೆ ಧರ್ಮಸ್ಥಳಕ್ಕೆ ಹೋದೆ. ಅಲ್ಲಿ ಮಗಳಿಗಾಗಿ ಹುಡುಕಾಡಿ ಒಂದು ಕಡೆ ಕುಳಿತಿದ್ದೆ. ಆಗ ಯಾರೋ ನಾಲ್ಕು ಜನರು ಬಂದು “ನಿಮ್ಮ ಮಗಳನ್ನು ನೋಡಿದ್ದೀವಿ, ಹುಡುಕಿ ಕೊಡ್ತೀವಿ” ಎಂದು ಕರೆದುಕೊಂಡು ಹೋಗಿ ಕೂಡಿ ಹಾಕಿದ್ರು. ನಂತರ ಮರುದಿನ ಬೆಳಿಗ್ಗೆ ಸುಮಾರು 5 ಗಂಟೆಯ ಹೊತ್ತಿಗೆ ನನ್ನನ್ನು ಹೊರಗಡೆ ಕರೆದುಕೊಂಡು ಬಂದು ಬಿಟ್ರು. ನನ್ನನ್ನು ಕೂಡಿ ಹಾಕಿದವರು ನನ್ನ ತಲೆಗೆ ಹೊಡೆದಿದ್ರು. ಅದರ ಮಾರ್ಕ್ ಈಗಲೂ ಇದೆ. ನನ್ನನ್ನು ಕಟ್ಟಿ ಹಾಕಿದ್ದ ಮಾರ್ಕ್‌ಗಳು ಕೈಯ್ಯಲ್ಲಿ ಇವೆ. ಎರಡೂ ಕೈಗಳಲ್ಲಿ ಮಾರ್ಕ್‌ಗಳು ಇವೆ, ಕೈ ಬೆಂಡಾಗಿವೆ” ಎಂದು ತಲೆ ಮತ್ತು ಕೈಗಳನ್ನು ಸುಜಾತಾ ಭಟ್ ಮಾಧ್ಯಮಗಳ ಮುಂದೆ ತೋರಿಸಿದರು.

“ಹೊಡೆದವರು ಯಾರು? ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಭಟ್, “ಯಾರು ಅಂತ ನನಗೆ ಗೊತ್ತಿಲ್ಲ. ಅವರು ಹೊಡೆದಾಗ ನಾನು ಪ್ರಜ್ಞೆ ತಪ್ಪಿ ಬಿದ್ದಿದ್ದೆ. ಆ ಬಳಿಕ ಯಾರೋ ವ್ಯಕ್ತಿ ಬಂದು ನನ್ನನ್ನು ಬೆಂಗಳೂರಿಗೆ ಕರೆದುಕೊಂಡು ಹೋಗಿ ಆಸ್ಪತ್ರೆಗೆ ಸೇರಿಸಿದ್ದಾರೆ ಅನಿಸುತ್ತೆ. ನಾನು ಕೋಮಾಗೆ ಹೋಗಿದ್ದೆ. ಎಚ್ಚರ ಬಂದಾಗ ಆಸ್ಪತ್ರೆಯಲ್ಲಿ ಇದ್ದೆ. ನನ್ನನ್ನು ಆವತ್ತು ಆಸ್ಪತ್ರೆಗೆ ಸೇರಿಸಿದ ಆ ಪುಣ್ಯಾತ್ಮನಿಗೆ ನಾನು ಚಿರಋಣಿ” ಎಂದರು.

ಮಗಳು ಯಾರ ಜೊತೆ ದೇವಸ್ಥಾನಕ್ಕೆ ಹೋಗಿದ್ದರು? ಎಂಬ ಪ್ರಶ್ನೆಗೆ ಉತ್ತರಿಸಿದ ಸುಜಾತಾ ಭಟ್, “ಆಕೆ ಗೆಳೆಯರೊಂದಿಗೆ ಹೋಗಿರಬಹುದು. ಆ ಬಳಿಕ ಕಾಣೆಯಾಗಿದ್ದಾಳೆ ” ಎಂದು ತಿಳಿಸಿದರು.

“ಮೊನ್ನೆ ಸಾಕ್ಷಿ ದೂರುದಾರ ಹೇಳಿದಂತೆ ಪೊಲೀಸರು ಹುಡುಕಿದಾಗ ತಲೆ ಬುರುಡೆ ಸಿಕ್ಕಿದೆ. ಅದನ್ನು ಪೊಲೀಸರು ಬೆಳ್ತಂಗಡಿ ನ್ಯಾಯಾಲಯದ ಮುಂದೆ ಇಟ್ಟಿದ್ದಾರೆ. ಅದು ನನ್ನ ಮಗಳದ್ದಾಗಿರಬಹುದು ಅಥವಾ ನನ್ನ ಮಗಳದ್ದು ಅದೇ ರೀತಿ ಸಿಗಬಹುದು ಎಂಬ ಆಶಾ ಭಾವನೆಯೊಂದಿಗೆ ಎಸ್ಪಿಗೆ ದೂರು ಕೊಟ್ಟಿದ್ದೇನೆ. ನನ್ನ ಮಗಳ ಅಸ್ತಿ ಏನಾದರು ಸಿಕ್ಕಿದರೆ, ಸನಾತನ ಬ್ರಾಹ್ಮಣ ಹಿಂದೂ ಸಂಪ್ರದಾಯದಂತೆ ನಾನು ಅದರ ಅಂತ್ಯಕ್ರಿಯೆ ಮಾಡಬೇಕು. ಈ ಮೂಲಕ ಆಕೆಯ ಆತ್ಮಕ್ಕೆ ಶಾಂತಿ ಸಿಗಬೇಕು” ಎಂದು ಹೇಳಿದರು.

2003ರಿಂದ ಏಕೆ ಸುಮ್ಮನ್ನಿದ್ದಿರಿ? ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸುಜಾತಾ ಭಟ್, “ನಾನು ಭಯದಿಂದ ಸುಮ್ಮನಿದ್ದೆ. ನನಗೆ ಯಾರ ಬೆಂಬಲವೂ ಇಲ್ಲ. ಬಂದು ಇಲ್ಲ, ಬಳಗವೂ ಇಲ್ಲ. ಇದ್ದ ಒಬ್ಬಳು ಮಗಳನ್ನು ಕಳೆದುಕೊಂಡಿದ್ದೇನೆ. ದಯವಿಟ್ಟು ನನಗೆ ನ್ಯಾಯ ಕೊಡಿಸಿ” ಎಂದು ಕಣ್ಣೀರು ಹಾಕಿದರು.

“ನನ್ನ ಮಗಳು ಮಣಿಪಾಲ್‌ ಕೆಎಂಸಿಯಲ್ಲಿ ಎಂಬಿಬಿಎಸ್‌ ಓದುತ್ತಿದ್ದಳು. ಆಕೆ ಕೋರ್ಸ್‌ಗೆ ಸೇರಿ ಕೇವಲ ಆರು ತಿಂಗಳು ಆಗಿತ್ತು. ಆಕೆ ತುಂಬಾ ಕಷ್ಟಪಟ್ಟು ಓದುತ್ತಿದ್ದಳು. ಇವತ್ತು ಅವಳು ನನ್ನ ಜೊತೆಗಿಲ್ಲ. ಅವಳ ಆತ್ಮ ನನ್ನನ್ನು ಕಾಡ್ತಿದೆ. ಹಾಗಾಗಿ, ಅವಳ ಅಸ್ತಿ ಸಿಕ್ಕಿದರೆ ಪುಣ್ಯ ಬರುತ್ತದೆ ಎಂದು ಎಸ್ಪಿಯವರಿಗೆ ಹೇಳಿದ್ದೇನೆ. ಆಯ್ತಮ್ಮ ಎಂದು ಎಸ್ಪಿ ಹೇಳಿದ್ದಾರೆ. ಅವರಿಗೂ ನಾನು ಚಿರಋಣಿಯಾಗಿರುತ್ತೇನೆ” ಎಂದು ಮಾಧ್ಯಮಗಳ ಮುಂದೆ ಕಣ್ಣೀರು ಹಾಕುತ್ತಾ ಸುಜಾತಾ ಭಟ್ ಕೈ ಮುಗಿದರು.

2003ರಿಂದ ಏನು ಭಯ ಇತ್ತು ಮೇಡಂ? ಎಂಬ ಪ್ರಶ್ನೆಗೆ ಉತ್ತರಿಸಿ ಸುಜಾತಾ ಭಟ್, “ನನಗೆ ಯಾರ ಬೆಂಬಲವೂ ಇಲ್ಲ ಸರ್, ನಾನು ಒಂಟಿಯಾಗಿ ಹೋರಾಟ ಮಾಡಬೇಕಿದೆ ಸರ್ ಎಂದರು. ಮಣಿಪಾಲದ ಪರ್ಕಳದ ಹತ್ತಿರ ಪರಿಕ್ಕಾ ಅಂತ ಒಂದು ಊರಿದೆ. ಅಲ್ಲಿದ್ದ ನನ್ನ ಮನೆ ದೇವರು, ಆಸ್ತಿ ಎಲ್ಲವನ್ನೂ ಕಿತ್ತುಕೊಂಡಿದ್ದಾರೆ. ತಂದೆಯಿಂದ ಬಂದ ನನ್ನ ಪಿತ್ರಾರ್ಜಿತ ಆಸ್ತಿಯನ್ನು ನನ್ನ ಸಹಿಯೂ ಇಲ್ಲದೆ ಖರೀದಿ ಮಾಡಿದ್ದಾರೆ. ಆ ಆಸ್ತಿನೂ ನನ್ನ ಒಂದು ಭಾಗ ಆಗಿತ್ತು. ಈಗ ಅದೂ ಇಲ್ಲ. ನನಗೆ ಯಾರು ಇಲ್ಲ ಸರ್” ಎಂದು ಹೇಳಿದರು.

“ನನ್ನ ಮಗಳು ಧರ್ಮಸ್ಥಳದಲ್ಲೇ ಕಾಣೆಯಾಗಿದ್ದು, ಈ ಬಗ್ಗೆ ನಾನು 2003ರಲ್ಲೇ ಬೆಳ್ತಂಗಡಿ ಠಾಣೆಯಲ್ಲಿ ದೂರು ಕೊಟ್ಟಿದ್ದೆ. ಆದರೆ, ಅವರು ತೆಗೆದುಕೊಂಡಿಲ್ಲ. ಈಗ ನಾನು ಎಸ್ಪಿ ಬಳಿ ದೂರು ಕೊಟ್ಟಿದ್ದೇನೆ. ಅವರು ಧರ್ಮಸ್ಥಳ ಠಾಣೆಗೆ ಹೋಗಲು ಹೇಳಿದ್ದಾರೆ” ಎಂದು ತಿಳಿಸಿದರು.

ಸುಜಾತಾ ಭಟ್ ಪರ ವಕೀಲ ಮಂಜುನಾಥ್ ಮಾತನಾಡಿ, “ಸಾಕ್ಷಿ ದೂರುದಾರ ಮೊನ್ನೆ ನ್ಯಾಯಾಲಯಕ್ಕೆ ಹಾಜರಾಗಿ ಹೇಳಿಕೆ ಕೊಟ್ಟ ಬಳಿಕ ಸುಜಾತಾ ಭಟ್ ನನ್ನನ್ನು ಸಂಪರ್ಕಿಸಿದರು. “ಧರ್ಮಸ್ಥಳದ ಪ್ರಕರಣ ನಡೆಯುತ್ತಿದೆಯಲ್ಲ, ನನ್ನ ಮಗಳದ್ದು ಆ ರೀತಿಯ ಪ್ರಕರಣ ನಡೆದಿದೆ” ಎಂದರು. ಆಗ ನಾನು ಕಾನೂನಿನ ಪ್ರಕಾರ ದೂರು ಕೊಡೋಣ ಎಂದೆ. ಈಗ ದೂರು ಕೊಟ್ಟಿದ್ದೇವೆ. ಇವರ (ಸುಜಾತಾ ಭಟ್) ಬೇಡಿಕೆ ಏನೆಂದರೆ, ಇವರು ಯಾರನ್ನೂ ಜೈಲಿಗೆ ಹಾಕಿ ಎಂದು ಹೇಳುತ್ತಿಲ್ಲ. ಇವರಿಗೆ ಯಾರೂ ಇಲ್ಲ. ಇಲ್ಲಿ ಹೂಳಲಾಗಿದೆ ಎನ್ನಲಾದ ಹೆಣಗಳ ಬಗ್ಗೆ ಹುಡುಕಾಟ ನಡೆಸುವಾಗ ನನ್ನ ಮಗಳ ಅಸ್ತಿ ಏನಾದರು ಸಿಕ್ಕಿ, ಅದು ಡಿಎನ್‌ಎ ಮೂಲಕ ಖಚಿತವಾದರೆ ನನಗೆ ಕೊಡಿ. ಅದಕ್ಕೆ ಶ್ರಾದ್ಧ ಮಾಡಿ, ತಾನೂ ಜೀವ ಬಿಡುತ್ತೇನೆ ಎಂಬ ಸ್ಥಿತಿಯಲ್ಲಿ ಇದ್ದಾರೆ” ಎಂದರು.

“ಎಸ್ಪಿಯವರು ಪಾಸಿಟಿವ್ ಆಗಿ ಪ್ರತಿಕ್ರಿಯಿಸಿದ್ದಾರೆ. ಕಾನೂನಿನ ಪ್ರಕಾರ ಏನು ಮಾಡಬೇಕೋ ಅದು ಮಾಡುತ್ತೇವೆ ಎಂದಿದ್ದಾರೆ. ಎಸ್ಪಿ ಹೇಳಿದಂತೆ ನಾವು ಧರ್ಮಸ್ಥಳ ಠಾಣೆಗೆ ದೂರು ಕೊಡುತ್ತೇವೆ” ಎಂದರು.

ಸುಜಾತಾ ಭಟ್ ಅವರ ಆಸ್ತಿ ವಿಚಾರ ಪ್ರಸ್ತಾಪಿಸಿದಾಗ, “ಅದು ಸಿವಿಲ್ ವ್ಯಾಜ್ಯವಾಗಿದೆ. ಅದನ್ನು ಇಲ್ಲಿ ಪ್ರಸ್ತಾಪಿಸಲು ಆಗುವುದಿಲ್ಲ ಎಂದು ಹೇಳಿದರು.

ದೂರಿನ ಬಗ್ಗೆ ವಿಚಾರಣೆ ನಡೆಸಿ ಕ್ರಮ: ಎಸ್ಪಿ ಡಾ.ಅರುಣ್ 

2003ನೇ ಇಸವಿಯಲ್ಲಿ ಧರ್ಮಸ್ಥಳ ದೇವಸ್ಥಾನದ ವಠಾರದಿಂದ ಅನನ್ಯ ಭಟ್ ಕಣ್ಮರೆಯಾಗಿದ್ದು, ಈ ಬಗ್ಗೆ ವಿಚಾರಣೆ ನಡೆಸುವಂತೆ ಯುವತಿಯ ತಾಯಿ ಜುಲೈ 15ರಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನು ಭೇಟಿ ಮಾಡಿ ದೂರು ನೀಡಿದ್ದಾರೆ. ಈ ದೂರಿನ ಬಗ್ಗೆ ವಿಚಾರಣೆ ನಡೆಸಿ ಸೂಕ್ತ ಕಾನೂನುಕ್ರಮ ಕೈಗೊಳ್ಳಲಾಗುವುದು ಎಂದು ಎಸ್ಪಿ ಕಚೇರಿಯ ಪ್ರಕಟಣೆ ತಿಳಿಸಿದೆ.

ಬೆಂಗಳೂರು| ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಆರೋಪ: ಇಬ್ಬರು ಉಪನ್ಯಾಸಕರು ಸೇರಿ ಮೂವರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...