Homeಕರ್ನಾಟಕ'ಧರ್ಮಸ್ಥಳಕ್ಕೆ ಹೋಗಿದ್ದ ನನ್ನ ಮಗಳು ಕಾಣೆಯಾದ್ಲು, ದಯವಿಟ್ಟು ನ್ಯಾಯ ಕೊಡಿಸಿ': ಅನನ್ಯ ಭಟ್ ತಾಯಿ ಕಣ್ಣೀರು

‘ಧರ್ಮಸ್ಥಳಕ್ಕೆ ಹೋಗಿದ್ದ ನನ್ನ ಮಗಳು ಕಾಣೆಯಾದ್ಲು, ದಯವಿಟ್ಟು ನ್ಯಾಯ ಕೊಡಿಸಿ’: ಅನನ್ಯ ಭಟ್ ತಾಯಿ ಕಣ್ಣೀರು

"ಬೆಳ್ತಂಗಡಿ ಠಾಣೆಗೆ ಹೋದಾಗ ದೂರು ಸ್ವೀಕರಿಸಿಲ್ಲ. ಧರ್ಮಸ್ಥಳದಲ್ಲಿ ಯಾರೋ ನನ್ನನ್ನು ಕೂಡಿ ಹಾಕಿ ಥಳಿಸಿದ್ರು. ಮಗಳ ಅಸ್ತಿ ಸಿಕ್ರೆ ಶ್ರಾದ್ಧ ಮಾಡಿ ಪ್ರಾಣ ಬಿಡ್ತೀನಿ"

- Advertisement -
- Advertisement -

ಧರ್ಮಸ್ಥಳದಲ್ಲಿ  2003ರಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಅನನ್ಯ ಭಟ್ ಅವರ ನಾಪತ್ತೆ ಸಂಬಂಧ ದೂರು ನೀಡಲು ತಾಯಿ ಸುಜಾತಾ ಭಟ್ ಮಂಗಳವಾರ (ಜು.15) ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಡಾ.ಅರುಣ್ ಕೆ ಅವರನ್ನು ಭೇಟಿಯಾಗಿದ್ದರು.

ಪ್ರಕರಣ ಈಗಿನ ಧರ್ಮಸ್ಥಳ ಠಾಣೆ ವ್ಯಾಪ್ತಿಯಲ್ಲಿ ನಡೆದಿರುವುದರಿಂದ, ಅಲ್ಲಿಯೇ ದೂರು ನೀಡುವಂತೆ ಎಸ್ಪಿ ಸಲಹೆ ನೀಡಿದ್ದರು. ಅದರಂತೆ, ರಾತ್ರಿ 8 ಗಂಟೆಯ ಸುಮಾರಿಗೆ ಧರ್ಮಸ್ಥಳ ಪೊಲೀಸ್ ಠಾಣೆಗೆ ತೆರಳಿ ಸಬ್‌ ಇನ್‌ಸ್ಪೆಕ್ಟರ್ ಸಮರ್ಥ್ ಆರ್.ಗಾಣಿಗೇರ ಅವರಿಗೆ ಸುಜಾತಾ ಭಟ್ ದೂರು ನೀಡಿದ್ದಾರೆ. ಪೊಲೀಸರು ದೂರು ಸ್ವೀಕರಿಸಿದ್ದು, ಮುಂದಿನ ತನಿಖೆ ಕೈಗೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.

ಮಂಗಳವಾರ ಸಂಜೆ ವಕೀಲ ಮಂಜುನಾಥ್  ಜೊತೆ ಎಸ್ಪಿಯನ್ನು ಭೇಟಿ ಮಾಡಿದ ಬಳಿಕ ಮಾಧ್ಯಮಗಳ ಮುಂದೆ ಮಾತನಾಡಿದ ಸುಜಾತಾ ಭಟ್, ” ನನ್ನ ಮಗಳು 2003ರಲ್ಲಿ ಧರ್ಮಸ್ಥಳ ದೇವಸ್ಥಾನಕ್ಕೆಂದು ಹೋದಾಕೆ ಕಾಣೆಯಾಗಿದ್ದಳು. ಆಗ ನಾನು ಕೋಲ್ಕತ್ತಾದಲ್ಲಿ ಉದ್ಯೋಗದಲ್ಲಿದ್ದೆ. ಅಲ್ಲಿಂದ ಬರುವಾಗ ಎರಡು ದಿನ ಕಳೆದಿತ್ತು. ಬಂದು ಮಗಳನ್ನು ಹುಡುಕಿದೆ. ಆದರೆ, ಆಕೆ ಸಿಗಲಿಲ್ಲ. ಹಾಗಾಗಿ, ಬೆಳ್ತಂಗಡಿ ಪೊಲೀಸ್ ಠಾಣೆಗೆ ಹೋಗಿ ವಿಚಾರಿಸಿದೆ. ಆಗ ಬೆಳ್ತಂಗಡಿ ಪೊಲೀಸರು “ನೀನೆ ಹುಡ್ಕೋ ಹೋಗಮ್ಮ, ನಿನ್ನ ಮಗಳು ಯಾವನ್ ಜೊತೆಗೋ ಹೋಗಿರಬಹುದು. ನೀನೇ ಹುಡ್ಕೋ, ನಾವು ಹುಡುಕಿ ಕೊಡಲು ನಮಗೇನ್ ಬೇರೆ ಕೆಲ್ಸಾ ಇಲ್ವಾ, ಅದೇ ಕೆಲ್ಸಾನಾ?” ಎಂದು ಗದರಿಸಿ ನನ್ನ ಕಳಿಸಿದರು” ಎಂದು ಹೇಳಿದರು.

ಮುಂದುವರಿದು, “ನಾನು ಬೇರೆ ದಾರಿ ತೋಚದೆ ಧರ್ಮಸ್ಥಳಕ್ಕೆ ಹೋದೆ. ಅಲ್ಲಿ ಮಗಳಿಗಾಗಿ ಹುಡುಕಾಡಿ ಒಂದು ಕಡೆ ಕುಳಿತಿದ್ದೆ. ಆಗ ಯಾರೋ ನಾಲ್ಕು ಜನರು ಬಂದು “ನಿಮ್ಮ ಮಗಳನ್ನು ನೋಡಿದ್ದೀವಿ, ಹುಡುಕಿ ಕೊಡ್ತೀವಿ” ಎಂದು ಕರೆದುಕೊಂಡು ಹೋಗಿ ಕೂಡಿ ಹಾಕಿದ್ರು. ನಂತರ ಮರುದಿನ ಬೆಳಿಗ್ಗೆ ಸುಮಾರು 5 ಗಂಟೆಯ ಹೊತ್ತಿಗೆ ನನ್ನನ್ನು ಹೊರಗಡೆ ಕರೆದುಕೊಂಡು ಬಂದು ಬಿಟ್ರು. ನನ್ನನ್ನು ಕೂಡಿ ಹಾಕಿದವರು ನನ್ನ ತಲೆಗೆ ಹೊಡೆದಿದ್ರು. ಅದರ ಮಾರ್ಕ್ ಈಗಲೂ ಇದೆ. ನನ್ನನ್ನು ಕಟ್ಟಿ ಹಾಕಿದ್ದ ಮಾರ್ಕ್‌ಗಳು ಕೈಯ್ಯಲ್ಲಿ ಇವೆ. ಎರಡೂ ಕೈಗಳಲ್ಲಿ ಮಾರ್ಕ್‌ಗಳು ಇವೆ, ಕೈ ಬೆಂಡಾಗಿವೆ” ಎಂದು ತಲೆ ಮತ್ತು ಕೈಗಳನ್ನು ಸುಜಾತಾ ಭಟ್ ಮಾಧ್ಯಮಗಳ ಮುಂದೆ ತೋರಿಸಿದರು.

“ಹೊಡೆದವರು ಯಾರು? ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಭಟ್, “ಯಾರು ಅಂತ ನನಗೆ ಗೊತ್ತಿಲ್ಲ. ಅವರು ಹೊಡೆದಾಗ ನಾನು ಪ್ರಜ್ಞೆ ತಪ್ಪಿ ಬಿದ್ದಿದ್ದೆ. ಆ ಬಳಿಕ ಯಾರೋ ವ್ಯಕ್ತಿ ಬಂದು ನನ್ನನ್ನು ಬೆಂಗಳೂರಿಗೆ ಕರೆದುಕೊಂಡು ಹೋಗಿ ಆಸ್ಪತ್ರೆಗೆ ಸೇರಿಸಿದ್ದಾರೆ ಅನಿಸುತ್ತೆ. ನಾನು ಕೋಮಾಗೆ ಹೋಗಿದ್ದೆ. ಎಚ್ಚರ ಬಂದಾಗ ಆಸ್ಪತ್ರೆಯಲ್ಲಿ ಇದ್ದೆ. ನನ್ನನ್ನು ಆವತ್ತು ಆಸ್ಪತ್ರೆಗೆ ಸೇರಿಸಿದ ಆ ಪುಣ್ಯಾತ್ಮನಿಗೆ ನಾನು ಚಿರಋಣಿ” ಎಂದರು.

ಮಗಳು ಯಾರ ಜೊತೆ ದೇವಸ್ಥಾನಕ್ಕೆ ಹೋಗಿದ್ದರು? ಎಂಬ ಪ್ರಶ್ನೆಗೆ ಉತ್ತರಿಸಿದ ಸುಜಾತಾ ಭಟ್, “ಆಕೆ ಗೆಳೆಯರೊಂದಿಗೆ ಹೋಗಿರಬಹುದು. ಆ ಬಳಿಕ ಕಾಣೆಯಾಗಿದ್ದಾಳೆ ” ಎಂದು ತಿಳಿಸಿದರು.

“ಮೊನ್ನೆ ಸಾಕ್ಷಿ ದೂರುದಾರ ಹೇಳಿದಂತೆ ಪೊಲೀಸರು ಹುಡುಕಿದಾಗ ತಲೆ ಬುರುಡೆ ಸಿಕ್ಕಿದೆ. ಅದನ್ನು ಪೊಲೀಸರು ಬೆಳ್ತಂಗಡಿ ನ್ಯಾಯಾಲಯದ ಮುಂದೆ ಇಟ್ಟಿದ್ದಾರೆ. ಅದು ನನ್ನ ಮಗಳದ್ದಾಗಿರಬಹುದು ಅಥವಾ ನನ್ನ ಮಗಳದ್ದು ಅದೇ ರೀತಿ ಸಿಗಬಹುದು ಎಂಬ ಆಶಾ ಭಾವನೆಯೊಂದಿಗೆ ಎಸ್ಪಿಗೆ ದೂರು ಕೊಟ್ಟಿದ್ದೇನೆ. ನನ್ನ ಮಗಳ ಅಸ್ತಿ ಏನಾದರು ಸಿಕ್ಕಿದರೆ, ಸನಾತನ ಬ್ರಾಹ್ಮಣ ಹಿಂದೂ ಸಂಪ್ರದಾಯದಂತೆ ನಾನು ಅದರ ಅಂತ್ಯಕ್ರಿಯೆ ಮಾಡಬೇಕು. ಈ ಮೂಲಕ ಆಕೆಯ ಆತ್ಮಕ್ಕೆ ಶಾಂತಿ ಸಿಗಬೇಕು” ಎಂದು ಹೇಳಿದರು.

2003ರಿಂದ ಏಕೆ ಸುಮ್ಮನ್ನಿದ್ದಿರಿ? ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸುಜಾತಾ ಭಟ್, “ನಾನು ಭಯದಿಂದ ಸುಮ್ಮನಿದ್ದೆ. ನನಗೆ ಯಾರ ಬೆಂಬಲವೂ ಇಲ್ಲ. ಬಂದು ಇಲ್ಲ, ಬಳಗವೂ ಇಲ್ಲ. ಇದ್ದ ಒಬ್ಬಳು ಮಗಳನ್ನು ಕಳೆದುಕೊಂಡಿದ್ದೇನೆ. ದಯವಿಟ್ಟು ನನಗೆ ನ್ಯಾಯ ಕೊಡಿಸಿ” ಎಂದು ಕಣ್ಣೀರು ಹಾಕಿದರು.

“ನನ್ನ ಮಗಳು ಮಣಿಪಾಲ್‌ ಕೆಎಂಸಿಯಲ್ಲಿ ಎಂಬಿಬಿಎಸ್‌ ಓದುತ್ತಿದ್ದಳು. ಆಕೆ ಕೋರ್ಸ್‌ಗೆ ಸೇರಿ ಕೇವಲ ಆರು ತಿಂಗಳು ಆಗಿತ್ತು. ಆಕೆ ತುಂಬಾ ಕಷ್ಟಪಟ್ಟು ಓದುತ್ತಿದ್ದಳು. ಇವತ್ತು ಅವಳು ನನ್ನ ಜೊತೆಗಿಲ್ಲ. ಅವಳ ಆತ್ಮ ನನ್ನನ್ನು ಕಾಡ್ತಿದೆ. ಹಾಗಾಗಿ, ಅವಳ ಅಸ್ತಿ ಸಿಕ್ಕಿದರೆ ಪುಣ್ಯ ಬರುತ್ತದೆ ಎಂದು ಎಸ್ಪಿಯವರಿಗೆ ಹೇಳಿದ್ದೇನೆ. ಆಯ್ತಮ್ಮ ಎಂದು ಎಸ್ಪಿ ಹೇಳಿದ್ದಾರೆ. ಅವರಿಗೂ ನಾನು ಚಿರಋಣಿಯಾಗಿರುತ್ತೇನೆ” ಎಂದು ಮಾಧ್ಯಮಗಳ ಮುಂದೆ ಕಣ್ಣೀರು ಹಾಕುತ್ತಾ ಸುಜಾತಾ ಭಟ್ ಕೈ ಮುಗಿದರು.

2003ರಿಂದ ಏನು ಭಯ ಇತ್ತು ಮೇಡಂ? ಎಂಬ ಪ್ರಶ್ನೆಗೆ ಉತ್ತರಿಸಿ ಸುಜಾತಾ ಭಟ್, “ನನಗೆ ಯಾರ ಬೆಂಬಲವೂ ಇಲ್ಲ ಸರ್, ನಾನು ಒಂಟಿಯಾಗಿ ಹೋರಾಟ ಮಾಡಬೇಕಿದೆ ಸರ್ ಎಂದರು. ಮಣಿಪಾಲದ ಪರ್ಕಳದ ಹತ್ತಿರ ಪರಿಕ್ಕಾ ಅಂತ ಒಂದು ಊರಿದೆ. ಅಲ್ಲಿದ್ದ ನನ್ನ ಮನೆ ದೇವರು, ಆಸ್ತಿ ಎಲ್ಲವನ್ನೂ ಕಿತ್ತುಕೊಂಡಿದ್ದಾರೆ. ತಂದೆಯಿಂದ ಬಂದ ನನ್ನ ಪಿತ್ರಾರ್ಜಿತ ಆಸ್ತಿಯನ್ನು ನನ್ನ ಸಹಿಯೂ ಇಲ್ಲದೆ ಖರೀದಿ ಮಾಡಿದ್ದಾರೆ. ಆ ಆಸ್ತಿನೂ ನನ್ನ ಒಂದು ಭಾಗ ಆಗಿತ್ತು. ಈಗ ಅದೂ ಇಲ್ಲ. ನನಗೆ ಯಾರು ಇಲ್ಲ ಸರ್” ಎಂದು ಹೇಳಿದರು.

“ನನ್ನ ಮಗಳು ಧರ್ಮಸ್ಥಳದಲ್ಲೇ ಕಾಣೆಯಾಗಿದ್ದು, ಈ ಬಗ್ಗೆ ನಾನು 2003ರಲ್ಲೇ ಬೆಳ್ತಂಗಡಿ ಠಾಣೆಯಲ್ಲಿ ದೂರು ಕೊಟ್ಟಿದ್ದೆ. ಆದರೆ, ಅವರು ತೆಗೆದುಕೊಂಡಿಲ್ಲ. ಈಗ ನಾನು ಎಸ್ಪಿ ಬಳಿ ದೂರು ಕೊಟ್ಟಿದ್ದೇನೆ. ಅವರು ಧರ್ಮಸ್ಥಳ ಠಾಣೆಗೆ ಹೋಗಲು ಹೇಳಿದ್ದಾರೆ” ಎಂದು ತಿಳಿಸಿದರು.

ಸುಜಾತಾ ಭಟ್ ಪರ ವಕೀಲ ಮಂಜುನಾಥ್ ಮಾತನಾಡಿ, “ಸಾಕ್ಷಿ ದೂರುದಾರ ಮೊನ್ನೆ ನ್ಯಾಯಾಲಯಕ್ಕೆ ಹಾಜರಾಗಿ ಹೇಳಿಕೆ ಕೊಟ್ಟ ಬಳಿಕ ಸುಜಾತಾ ಭಟ್ ನನ್ನನ್ನು ಸಂಪರ್ಕಿಸಿದರು. “ಧರ್ಮಸ್ಥಳದ ಪ್ರಕರಣ ನಡೆಯುತ್ತಿದೆಯಲ್ಲ, ನನ್ನ ಮಗಳದ್ದು ಆ ರೀತಿಯ ಪ್ರಕರಣ ನಡೆದಿದೆ” ಎಂದರು. ಆಗ ನಾನು ಕಾನೂನಿನ ಪ್ರಕಾರ ದೂರು ಕೊಡೋಣ ಎಂದೆ. ಈಗ ದೂರು ಕೊಟ್ಟಿದ್ದೇವೆ. ಇವರ (ಸುಜಾತಾ ಭಟ್) ಬೇಡಿಕೆ ಏನೆಂದರೆ, ಇವರು ಯಾರನ್ನೂ ಜೈಲಿಗೆ ಹಾಕಿ ಎಂದು ಹೇಳುತ್ತಿಲ್ಲ. ಇವರಿಗೆ ಯಾರೂ ಇಲ್ಲ. ಇಲ್ಲಿ ಹೂಳಲಾಗಿದೆ ಎನ್ನಲಾದ ಹೆಣಗಳ ಬಗ್ಗೆ ಹುಡುಕಾಟ ನಡೆಸುವಾಗ ನನ್ನ ಮಗಳ ಅಸ್ತಿ ಏನಾದರು ಸಿಕ್ಕಿ, ಅದು ಡಿಎನ್‌ಎ ಮೂಲಕ ಖಚಿತವಾದರೆ ನನಗೆ ಕೊಡಿ. ಅದಕ್ಕೆ ಶ್ರಾದ್ಧ ಮಾಡಿ, ತಾನೂ ಜೀವ ಬಿಡುತ್ತೇನೆ ಎಂಬ ಸ್ಥಿತಿಯಲ್ಲಿ ಇದ್ದಾರೆ” ಎಂದರು.

“ಎಸ್ಪಿಯವರು ಪಾಸಿಟಿವ್ ಆಗಿ ಪ್ರತಿಕ್ರಿಯಿಸಿದ್ದಾರೆ. ಕಾನೂನಿನ ಪ್ರಕಾರ ಏನು ಮಾಡಬೇಕೋ ಅದು ಮಾಡುತ್ತೇವೆ ಎಂದಿದ್ದಾರೆ. ಎಸ್ಪಿ ಹೇಳಿದಂತೆ ನಾವು ಧರ್ಮಸ್ಥಳ ಠಾಣೆಗೆ ದೂರು ಕೊಡುತ್ತೇವೆ” ಎಂದರು.

ಸುಜಾತಾ ಭಟ್ ಅವರ ಆಸ್ತಿ ವಿಚಾರ ಪ್ರಸ್ತಾಪಿಸಿದಾಗ, “ಅದು ಸಿವಿಲ್ ವ್ಯಾಜ್ಯವಾಗಿದೆ. ಅದನ್ನು ಇಲ್ಲಿ ಪ್ರಸ್ತಾಪಿಸಲು ಆಗುವುದಿಲ್ಲ ಎಂದು ಹೇಳಿದರು.

ದೂರಿನ ಬಗ್ಗೆ ವಿಚಾರಣೆ ನಡೆಸಿ ಕ್ರಮ: ಎಸ್ಪಿ ಡಾ.ಅರುಣ್ 

2003ನೇ ಇಸವಿಯಲ್ಲಿ ಧರ್ಮಸ್ಥಳ ದೇವಸ್ಥಾನದ ವಠಾರದಿಂದ ಅನನ್ಯ ಭಟ್ ಕಣ್ಮರೆಯಾಗಿದ್ದು, ಈ ಬಗ್ಗೆ ವಿಚಾರಣೆ ನಡೆಸುವಂತೆ ಯುವತಿಯ ತಾಯಿ ಜುಲೈ 15ರಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನು ಭೇಟಿ ಮಾಡಿ ದೂರು ನೀಡಿದ್ದಾರೆ. ಈ ದೂರಿನ ಬಗ್ಗೆ ವಿಚಾರಣೆ ನಡೆಸಿ ಸೂಕ್ತ ಕಾನೂನುಕ್ರಮ ಕೈಗೊಳ್ಳಲಾಗುವುದು ಎಂದು ಎಸ್ಪಿ ಕಚೇರಿಯ ಪ್ರಕಟಣೆ ತಿಳಿಸಿದೆ.

ಬೆಂಗಳೂರು| ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಆರೋಪ: ಇಬ್ಬರು ಉಪನ್ಯಾಸಕರು ಸೇರಿ ಮೂವರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...