Homeಮುಖಪುಟ‘ನನ್ನ ತಂದೆ ಮತ್ತು ಲಾಲು ಯಾದವ್‌ ಸ್ನೇಹಿತರು; ತೇಜಸ್ವಿ ನನ್ನ ಸಹೋದರ’ - ಚಿರಾಗ್‌ ಪಾಸ್ವಾನ್‌

‘ನನ್ನ ತಂದೆ ಮತ್ತು ಲಾಲು ಯಾದವ್‌ ಸ್ನೇಹಿತರು; ತೇಜಸ್ವಿ ನನ್ನ ಸಹೋದರ’ – ಚಿರಾಗ್‌ ಪಾಸ್ವಾನ್‌

ಹೊಸ ತಿರುವಿನತ್ತ ಬಿಹಾರದ ರಾಜ್ಯ ರಾಜಕೀಯ

- Advertisement -
- Advertisement -

ಬಿಹಾರದಲ್ಲಿ ಹೊಸ ರಾಜಕೀಯ ಅಲೆ ಬೀಸುತ್ತಿದೆ. ರಾಜ್ಯದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್‌ ಯಾದವ್ ಅವರ ಮಗ ತೇಜಸ್ವಿ ಯಾದವ್ ರಾಜ್ಯದ ಹೊಸ ಶಕ್ತಿಯಾಗಿ ಬೆಳೆಯುತ್ತಿದ್ದಾರೆ. ಒಕ್ಕೂಟ ಸರ್ಕಾರದ ಮಾಜಿ ಮಂತ್ರಿ ದಿವಂಗತ ರಾಮ ವಿಲಾಸ್ ಪಾಸ್ವಾನ್ ಅವರ ಪಕ್ಷ ಎಲ್‌ಜೆಪಿ ಒಡೆದು ಹೋಗಿದೆ. ಈ ನಡುವೆ ಅವರ ಮಗ ಚಿರಾಗ್‌ ಪಾಸ್ವಾನ್ ಅವರನ್ನು ತೇಜಸ್ವಿ ಯಾದವ್ ಅವರು ಮೈತ್ರಿಕೂಟಕ್ಕೆ ಸೇರಲು ಇತ್ತಿಚೆಗಷ್ಟೆ ಆಹ್ವಾನಿಸಿದ್ದರು. ಇದಾಗಿ ದಿನಗಳ ಅಂತದರಲ್ಲಿ, “ತೇಜಸ್ವಿ ಯಾದವ್‌‌ ನನ್ನ ಕಿರಿಯ ಸಹೋದರ ಇದ್ದಂತೆ, ರಾಜ್ಯದಲ್ಲಿ ಚುನಾವಣೆ ನಡೆಯುವ ಸಂದರ್ಭ ಮೈತ್ರಿಯ ಬಗ್ಗೆ ಪಕ್ಷವು ನಿರ್ಧಾರ ತೆಗೆದುಕೊಳ್ಳುತ್ತದೆ” ಎಂದು ಚಿರಾಗ್‌ ಪಾಸ್ವಾನ್ ಹೇಳಿದ್ದಾರೆ.

ಶನಿವಾರ ಮಾಧ್ಯಮದ ಜೊತೆಗೆ ಮಾತನಾಡಿದ ಎಲ್‌ಜೆಪಿ ನಾಯಕ ಚಿರಾಗ್‌ ಪಾಸ್ವಾನ್‌‌, “ನನ್ನ ತಂದೆ ರಾಮ ವಿಲಾಸ್ ಪಾಸ್ವಾನ್‌ ಮತ್ತು ತೇಜಸ್ವಿ ಯಾದವ್‌ ಅವರ ತಂದೆ ಲಾಲು ಪ್ರಸಾದ್ ಯಾದವ್‌‌‌ ಯಾವಾಗಲೂ ಆಪ್ತ ಸ್ನೇಹಿತರಾಗಿದ್ದರು. ತೇಜಸ್ವಿ ಮತ್ತು ನಾನು ಬಾಲ್ಯದಿಂದಲೂ ಒಬ್ಬರಿಗೊಬ್ಬರು ತಿಳಿದಿದ್ದು, ನಮ್ಮಿಬ್ಬರ ನಡುವೆ ನಾವು ನಿಕಟ ಸ್ನೇಹವಿದೆ. ಅವರು ನನ್ನ ಕಿರಿಯ ಸಹೋದರ ಇದ್ದಂತೆ. ಬಿಹಾರದಲ್ಲಿ ಚುನಾವಣಾ ಸಮಯ ಬಂದಾಗ ಪಕ್ಷವು ಮೈತ್ರಿಕೂಟದ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ಆರೆಸ್ಸೆಸ್ ಅಥವಾ ಸಂವಿಧಾನ’ – ಚಿರಾಗ್‌ ಪಾಸ್ವಾನ್‌ಗೆ ಆಯ್ಕೆ ಮುಂದಿಟ್ಟ ತೇಜಸ್ವಿ ಯಾದವ್‌‌!

“ಸಿಎಎ, ಎನ್‌ಆರ್‌ಸಿಯ ವಿಷಯಗಳು ಸೇರಿದಂತೆ ನಾನು ಪ್ರತಿ ಹಂತದಲ್ಲೂ ಬಿಜೆಪಿಯೊಂದಿಗೆ ನಿಂತಿದ್ದೇನೆ. ಆದರೆ, ನಿತೀಶ್‌ ಕುಮಾರ್‌‌ ಇದನ್ನು ಒಪ್ಪಲಿಲ್ಲ. ಮುಂದಿನ ದಿನಗಳಲ್ಲಿ ನನ್ನನ್ನು ಬೆಂಬಲಿಸುತ್ತಾರೆಯೆ ಅಥವಾ ನಿತೀಶ್ ಕುಮಾರ್ ಅವರನ್ನು ಬೆಂಬಲಿಸುತ್ತಾರೆಯೇ ಎಂದು ಬಿಜೆಪಿಯೆ ನಿರ್ಧರಿಸಬೇಕಾಗಿದೆ” ಎಂದು ಅವರು ಹೇಳಿದ್ದಾರೆ.

ಚಿರಾಗ್‌ ಪಾಸ್ವಾನ್‌‌ ತನ್ನ ತಂದೆಯ ಜನ್ಮ ದಿನವಾದ ಜುಲೈ 5 ರಿಂದ ಹಾಜಿಪುರದಿಂದ ಬಿಹಾರ ಯಾತ್ರೆ ಪ್ರಾರಂಭಿಸುವ ಮೂಲಕ ಕಳೆದು ಹೋದ ರಾಜಕೀಯ ನೆಲೆಯನ್ನು ಮರಳಿ ಪಡೆಯಲು ಪ್ರಯತ್ನಿಸುತ್ತಿದ್ದಾರೆ. ಹಾಜಿಪುರ ಲೋಕಸಭಾ ಕ್ಷೇತ್ರವನ್ನು ಚಿರಾಗ್‌ ಪಾಸ್ವಾನ್ ಅವರ ಚಿಕ್ಕಪ್ಪ ಪಶುಪತಿ ಕುಮಾರ್‌ ಪರಾಸ್‌ ಅವರು ಈಗ ಪ್ರತಿನಿಧಿಸುತ್ತಿದ್ದಾರೆ. ಅವರು ಚಿರಾಗ್‌ ವಿರುದ್ಧ ಬಂಡಾಯವೆದ್ದು ಪಕ್ಷದೊಳಗೆ ಬೇರೆಯೆ ಬಣವನ್ನು ಕಟ್ಟಿದ್ದಾರೆ. ಇದು ಬಿಹಾರ ರಾಜಕೀಯ ವಲಯದಲ್ಲಿ ಹೊಸ ಅಲೆಯನ್ನು ಎಬ್ಬಿಸಿದೆ.

ಎಲ್‌ಜೆಪಿಯ ನಡುವಿನಲ್ಲಿ ಉಂಟಾದ ಒಡಕಿನ ಹಿನ್ನಲೆಯಲ್ಲಿ ಚಿರಾಗ್‌ ಪಾಸ್ವಾನ್‌ಗೆ ತಮ್ಮ ಮೈತ್ರಿಕೂಟವನ್ನು ಸೇರಲು ತೇಜಸ್ವಿ ಯಾದವ್‌ ಆಹ್ವಾನಿಸಿದ್ದರು. ಜೊತೆಗೆ ರಾಮ್ ವಿಲಾಸ್ ಪಾಸ್ವಾನ್ ಅವರು ಲೋಕಸಭಾ ಚುನಾವಣೆಯಲ್ಲಿ ಸೋತಾಗ, ಅವರು ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಲು ತಮ್ಮ ತಂದೆ ಲಾಲು ಪ್ರಸಾದ್ ಯಾದವ್‌ ಸಹಾಯ ಮಾಡಿದ್ದರು ಎಂದು ನೆನಪಿಸಿದ್ದರು.

ಇದನ್ನೂ ಓದಿ: ‘ಸರ್ಕಾರಕ್ಕೆ ಯಾವುದೇ ಜವಾಬ್ದಾರಿಯ ಪ್ರಜ್ಞೆ ಇಲ್ಲ’ – ತೇಜಸ್ವಿ ಯಾದವ್‌ ಆಕ್ರೋಶ

“ಚಿರಾಗ್‌‌ ಮುಂದೆ ಎರಡು ಆಯ್ಕೆಗಳಿವೆ ಒಂದು ಆರೆಸ್ಸೆಸ್‌ ಮುಖಂಡ ಎಂ.ಎಸ್. ಗೋಲ್ವಾಲ್ಕರ್ ಬರೆದ ಬಂಚ್‌ ಆಫ್‌ ಥಾಟ್‌, ಇನ್ನೊಂದು ಬಾಬಾಸಾಹೇಬ್‌ ಅಂಬೇಡ್ಕರ್‌ ಅವರು ಬರೆದ ಸಂವಿಧಾನ. ಇದರಲ್ಲಿ ಯಾವುದನ್ನು ಆಯ್ಕೆ ಮಾಡಿಕೊಳ್ಳುತ್ತಾರೆ ಎಂದು ಅವರು ನಿರ್ಧರಿಸಬೇಕು” ಎಂದು ತೇಜಸ್ವಿ ಯಾದವ್ ಹೇಳಿದ್ದರು.

ಕಳೆದ ಬಿಹಾರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ನೀತಿಶ್‌ ಕುಮಾರ್‌ ವಿರುದ್ದ ದಂಗೆ ಎದ್ದಿದ್ದ ಚಿರಾಗ್‌ ಪಾಸ್ವಾನ್‌ ಅವರ ಎಲ್‌ಜೆಪಿ ಪಕ್ಷವು ಬಿಜೆಪಿ ನೇತೃತ್ವದ ಎನ್‌ಡಿಎ ಒಕ್ಕೂಟದಿಂದ ಹೊರ ನಡೆದಿತ್ತು. ನಂತರ ವಿಧಾನಸಭಾ ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಿದ್ದ ಎಲ್‌ಜೆಪಿ, ನಿತೀಶ್‌ ಕುಮಾರ್ ನೇತೃತ್ವದ ಜೆಡಿಯುಗೆ ತೀವ್ರ ಹೊಡೆತ ನೀಡಿತ್ತು.

ಇದನ್ನೂ ಓದಿ: ‘ನಾಝಿ ಆಡಳಿತ ಬೇಟೆಯಾಡುತ್ತಿದೆ’ – ಕೇಂದ್ರದ ವಿರುದ್ದ ತೇಜಸ್ವಿ ಯಾದವ್‌ ತೀವ್ರ ವಾಗ್ದಾಳಿ

ಆದರೆ ಇತ್ತೀಚೆಗೆ ಎಲ್‌ಜೆಪಿ ಒಳಗಿನ ಆಂತರಿಕ ದಂಗೆಯಿಂದ ಪಕ್ಷ ಒಡೆದು ವಿಭಜನೆಯಾಗಿದೆ. ಇದಕ್ಕೆ ನಿತೀಶ್‌ ಕುಮಾರ್‌ ಕಾರಣವಾಗಿದ್ದು, ಅವರು ವಿಧಾನಸಭಾ ಚುನಾವಣೆಯ ಸೇಡು ತೀರಿಸಿಕೊಳ್ಳುತ್ತಿದ್ದಾರೆ ಎಂದು ಚಿರಾಗ್‌ ಪಾಸ್ವಾನ್ ಅವರ ಆಪ್ತರು ಆರೋಪಿಸಿದ್ದರು.

ಅಲ್ಲದೆ, ಎಲ್‌ಜೆಪಿಯಲ್ಲಾಗಿರುವ ಎಲ್ಲಾ ಬೆಳವಣಿಗೆಗಳಿಗೆ, ಮುಖ್ಯವಾಗಿ ಎಲ್‌ಜೆಪಿ ವಿಭಜನೆಯ ಹಿಂದೆ ಬಿಹಾರ ಸಿಎಂ ನಿತೀಶ್‌ ಕುಮಾರ್‌ ಮಾಸ್ಟರ್ ಮೈಂಡ್‌ ಕೆಲಸ ಮಾಡಿದೆ. ಈ ಹಿಂದೆ 2005 ಮತ್ತು 2010 ರಲ್ಲಿ ಎಲ್‌ಜೆಪಿ ಇದೇ ರೀತಿ ವಿಭಜನೆಯಾಗಲು ನಿತೀಶ್ ಕುಮಾರ್ ಅವರ ಜೆಡಿಯು ಅನುಕೂಲ ಮಾಡಿಕೊಟ್ಟಿತ್ತು ಎಂಬುದನ್ನು ಚಿರಾಗ್‌ ಪಾಸ್ವಾನ್‌ ಅವರಿಗೆ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ನೆನಪಿಸಿದ್ದರು.

ಈ ನಡುವೆ, ಚಿರಾಗ್ ಪಾಸ್ವಾನ್ ಅವರ ತಂದೆ, ಮಾಜಿ ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಅವರ ಜನ್ಮದಿನವಾದ ಜುಲೈ 5 ರಂದು ಗೌರವ ಸಲ್ಲಿಸಲು ತೇಜಸ್ವಿ ಯಾದವ್ ಯೋಜಿಸುತ್ತಿದ್ದಾರೆ. ಅದೇ ದಿನ ತೇಜಸ್ವಿ ಯಾದವ್ ಅವರ ಪಕ್ಷವಾದ ಆರ್‌ಜೆಡಿಯ ಸಂಸ್ಥಾಪನಾ ದಿನವೂ ಆಗಿದ್ದು, ಅಂದಿನ ಕಾರ್ಯಕ್ರಮದಲ್ಲಿ ಕಳೆದ ವರ್ಷ ಅಕ್ಟೋಬರ್‌ನಲ್ಲಿ ನಿಧನರಾದ ರಾಮ್ ವಿಲಾಸ್ ಪಾಸ್ವಾನ್ ಅವರಿಗೆ ಗೌರವ ಸಲ್ಲಿಸಲು ಮುಂದಾಗಿದ್ದಾರೆ.

ಇದನ್ನೂ ಓದಿ: ‘ನಾನು ತೇಜಸ್ವಿ ಯಾದವ್ ಮಾತಾಡುತ್ತಿದ್ದೇನೆ’: ಡಿಸಿಯೊಂದಿಗಿನ ಖಡಕ್ ಸಂಭಾಷಣೆ ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...