Homeಮುಖಪುಟ‘ನನ್ನ ತಂದೆ ಮತ್ತು ಲಾಲು ಯಾದವ್‌ ಸ್ನೇಹಿತರು; ತೇಜಸ್ವಿ ನನ್ನ ಸಹೋದರ’ - ಚಿರಾಗ್‌ ಪಾಸ್ವಾನ್‌

‘ನನ್ನ ತಂದೆ ಮತ್ತು ಲಾಲು ಯಾದವ್‌ ಸ್ನೇಹಿತರು; ತೇಜಸ್ವಿ ನನ್ನ ಸಹೋದರ’ – ಚಿರಾಗ್‌ ಪಾಸ್ವಾನ್‌

ಹೊಸ ತಿರುವಿನತ್ತ ಬಿಹಾರದ ರಾಜ್ಯ ರಾಜಕೀಯ

- Advertisement -
- Advertisement -

ಬಿಹಾರದಲ್ಲಿ ಹೊಸ ರಾಜಕೀಯ ಅಲೆ ಬೀಸುತ್ತಿದೆ. ರಾಜ್ಯದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್‌ ಯಾದವ್ ಅವರ ಮಗ ತೇಜಸ್ವಿ ಯಾದವ್ ರಾಜ್ಯದ ಹೊಸ ಶಕ್ತಿಯಾಗಿ ಬೆಳೆಯುತ್ತಿದ್ದಾರೆ. ಒಕ್ಕೂಟ ಸರ್ಕಾರದ ಮಾಜಿ ಮಂತ್ರಿ ದಿವಂಗತ ರಾಮ ವಿಲಾಸ್ ಪಾಸ್ವಾನ್ ಅವರ ಪಕ್ಷ ಎಲ್‌ಜೆಪಿ ಒಡೆದು ಹೋಗಿದೆ. ಈ ನಡುವೆ ಅವರ ಮಗ ಚಿರಾಗ್‌ ಪಾಸ್ವಾನ್ ಅವರನ್ನು ತೇಜಸ್ವಿ ಯಾದವ್ ಅವರು ಮೈತ್ರಿಕೂಟಕ್ಕೆ ಸೇರಲು ಇತ್ತಿಚೆಗಷ್ಟೆ ಆಹ್ವಾನಿಸಿದ್ದರು. ಇದಾಗಿ ದಿನಗಳ ಅಂತದರಲ್ಲಿ, “ತೇಜಸ್ವಿ ಯಾದವ್‌‌ ನನ್ನ ಕಿರಿಯ ಸಹೋದರ ಇದ್ದಂತೆ, ರಾಜ್ಯದಲ್ಲಿ ಚುನಾವಣೆ ನಡೆಯುವ ಸಂದರ್ಭ ಮೈತ್ರಿಯ ಬಗ್ಗೆ ಪಕ್ಷವು ನಿರ್ಧಾರ ತೆಗೆದುಕೊಳ್ಳುತ್ತದೆ” ಎಂದು ಚಿರಾಗ್‌ ಪಾಸ್ವಾನ್ ಹೇಳಿದ್ದಾರೆ.

ಶನಿವಾರ ಮಾಧ್ಯಮದ ಜೊತೆಗೆ ಮಾತನಾಡಿದ ಎಲ್‌ಜೆಪಿ ನಾಯಕ ಚಿರಾಗ್‌ ಪಾಸ್ವಾನ್‌‌, “ನನ್ನ ತಂದೆ ರಾಮ ವಿಲಾಸ್ ಪಾಸ್ವಾನ್‌ ಮತ್ತು ತೇಜಸ್ವಿ ಯಾದವ್‌ ಅವರ ತಂದೆ ಲಾಲು ಪ್ರಸಾದ್ ಯಾದವ್‌‌‌ ಯಾವಾಗಲೂ ಆಪ್ತ ಸ್ನೇಹಿತರಾಗಿದ್ದರು. ತೇಜಸ್ವಿ ಮತ್ತು ನಾನು ಬಾಲ್ಯದಿಂದಲೂ ಒಬ್ಬರಿಗೊಬ್ಬರು ತಿಳಿದಿದ್ದು, ನಮ್ಮಿಬ್ಬರ ನಡುವೆ ನಾವು ನಿಕಟ ಸ್ನೇಹವಿದೆ. ಅವರು ನನ್ನ ಕಿರಿಯ ಸಹೋದರ ಇದ್ದಂತೆ. ಬಿಹಾರದಲ್ಲಿ ಚುನಾವಣಾ ಸಮಯ ಬಂದಾಗ ಪಕ್ಷವು ಮೈತ್ರಿಕೂಟದ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ಆರೆಸ್ಸೆಸ್ ಅಥವಾ ಸಂವಿಧಾನ’ – ಚಿರಾಗ್‌ ಪಾಸ್ವಾನ್‌ಗೆ ಆಯ್ಕೆ ಮುಂದಿಟ್ಟ ತೇಜಸ್ವಿ ಯಾದವ್‌‌!

“ಸಿಎಎ, ಎನ್‌ಆರ್‌ಸಿಯ ವಿಷಯಗಳು ಸೇರಿದಂತೆ ನಾನು ಪ್ರತಿ ಹಂತದಲ್ಲೂ ಬಿಜೆಪಿಯೊಂದಿಗೆ ನಿಂತಿದ್ದೇನೆ. ಆದರೆ, ನಿತೀಶ್‌ ಕುಮಾರ್‌‌ ಇದನ್ನು ಒಪ್ಪಲಿಲ್ಲ. ಮುಂದಿನ ದಿನಗಳಲ್ಲಿ ನನ್ನನ್ನು ಬೆಂಬಲಿಸುತ್ತಾರೆಯೆ ಅಥವಾ ನಿತೀಶ್ ಕುಮಾರ್ ಅವರನ್ನು ಬೆಂಬಲಿಸುತ್ತಾರೆಯೇ ಎಂದು ಬಿಜೆಪಿಯೆ ನಿರ್ಧರಿಸಬೇಕಾಗಿದೆ” ಎಂದು ಅವರು ಹೇಳಿದ್ದಾರೆ.

ಚಿರಾಗ್‌ ಪಾಸ್ವಾನ್‌‌ ತನ್ನ ತಂದೆಯ ಜನ್ಮ ದಿನವಾದ ಜುಲೈ 5 ರಿಂದ ಹಾಜಿಪುರದಿಂದ ಬಿಹಾರ ಯಾತ್ರೆ ಪ್ರಾರಂಭಿಸುವ ಮೂಲಕ ಕಳೆದು ಹೋದ ರಾಜಕೀಯ ನೆಲೆಯನ್ನು ಮರಳಿ ಪಡೆಯಲು ಪ್ರಯತ್ನಿಸುತ್ತಿದ್ದಾರೆ. ಹಾಜಿಪುರ ಲೋಕಸಭಾ ಕ್ಷೇತ್ರವನ್ನು ಚಿರಾಗ್‌ ಪಾಸ್ವಾನ್ ಅವರ ಚಿಕ್ಕಪ್ಪ ಪಶುಪತಿ ಕುಮಾರ್‌ ಪರಾಸ್‌ ಅವರು ಈಗ ಪ್ರತಿನಿಧಿಸುತ್ತಿದ್ದಾರೆ. ಅವರು ಚಿರಾಗ್‌ ವಿರುದ್ಧ ಬಂಡಾಯವೆದ್ದು ಪಕ್ಷದೊಳಗೆ ಬೇರೆಯೆ ಬಣವನ್ನು ಕಟ್ಟಿದ್ದಾರೆ. ಇದು ಬಿಹಾರ ರಾಜಕೀಯ ವಲಯದಲ್ಲಿ ಹೊಸ ಅಲೆಯನ್ನು ಎಬ್ಬಿಸಿದೆ.

ಎಲ್‌ಜೆಪಿಯ ನಡುವಿನಲ್ಲಿ ಉಂಟಾದ ಒಡಕಿನ ಹಿನ್ನಲೆಯಲ್ಲಿ ಚಿರಾಗ್‌ ಪಾಸ್ವಾನ್‌ಗೆ ತಮ್ಮ ಮೈತ್ರಿಕೂಟವನ್ನು ಸೇರಲು ತೇಜಸ್ವಿ ಯಾದವ್‌ ಆಹ್ವಾನಿಸಿದ್ದರು. ಜೊತೆಗೆ ರಾಮ್ ವಿಲಾಸ್ ಪಾಸ್ವಾನ್ ಅವರು ಲೋಕಸಭಾ ಚುನಾವಣೆಯಲ್ಲಿ ಸೋತಾಗ, ಅವರು ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಲು ತಮ್ಮ ತಂದೆ ಲಾಲು ಪ್ರಸಾದ್ ಯಾದವ್‌ ಸಹಾಯ ಮಾಡಿದ್ದರು ಎಂದು ನೆನಪಿಸಿದ್ದರು.

ಇದನ್ನೂ ಓದಿ: ‘ಸರ್ಕಾರಕ್ಕೆ ಯಾವುದೇ ಜವಾಬ್ದಾರಿಯ ಪ್ರಜ್ಞೆ ಇಲ್ಲ’ – ತೇಜಸ್ವಿ ಯಾದವ್‌ ಆಕ್ರೋಶ

“ಚಿರಾಗ್‌‌ ಮುಂದೆ ಎರಡು ಆಯ್ಕೆಗಳಿವೆ ಒಂದು ಆರೆಸ್ಸೆಸ್‌ ಮುಖಂಡ ಎಂ.ಎಸ್. ಗೋಲ್ವಾಲ್ಕರ್ ಬರೆದ ಬಂಚ್‌ ಆಫ್‌ ಥಾಟ್‌, ಇನ್ನೊಂದು ಬಾಬಾಸಾಹೇಬ್‌ ಅಂಬೇಡ್ಕರ್‌ ಅವರು ಬರೆದ ಸಂವಿಧಾನ. ಇದರಲ್ಲಿ ಯಾವುದನ್ನು ಆಯ್ಕೆ ಮಾಡಿಕೊಳ್ಳುತ್ತಾರೆ ಎಂದು ಅವರು ನಿರ್ಧರಿಸಬೇಕು” ಎಂದು ತೇಜಸ್ವಿ ಯಾದವ್ ಹೇಳಿದ್ದರು.

ಕಳೆದ ಬಿಹಾರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ನೀತಿಶ್‌ ಕುಮಾರ್‌ ವಿರುದ್ದ ದಂಗೆ ಎದ್ದಿದ್ದ ಚಿರಾಗ್‌ ಪಾಸ್ವಾನ್‌ ಅವರ ಎಲ್‌ಜೆಪಿ ಪಕ್ಷವು ಬಿಜೆಪಿ ನೇತೃತ್ವದ ಎನ್‌ಡಿಎ ಒಕ್ಕೂಟದಿಂದ ಹೊರ ನಡೆದಿತ್ತು. ನಂತರ ವಿಧಾನಸಭಾ ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಿದ್ದ ಎಲ್‌ಜೆಪಿ, ನಿತೀಶ್‌ ಕುಮಾರ್ ನೇತೃತ್ವದ ಜೆಡಿಯುಗೆ ತೀವ್ರ ಹೊಡೆತ ನೀಡಿತ್ತು.

ಇದನ್ನೂ ಓದಿ: ‘ನಾಝಿ ಆಡಳಿತ ಬೇಟೆಯಾಡುತ್ತಿದೆ’ – ಕೇಂದ್ರದ ವಿರುದ್ದ ತೇಜಸ್ವಿ ಯಾದವ್‌ ತೀವ್ರ ವಾಗ್ದಾಳಿ

ಆದರೆ ಇತ್ತೀಚೆಗೆ ಎಲ್‌ಜೆಪಿ ಒಳಗಿನ ಆಂತರಿಕ ದಂಗೆಯಿಂದ ಪಕ್ಷ ಒಡೆದು ವಿಭಜನೆಯಾಗಿದೆ. ಇದಕ್ಕೆ ನಿತೀಶ್‌ ಕುಮಾರ್‌ ಕಾರಣವಾಗಿದ್ದು, ಅವರು ವಿಧಾನಸಭಾ ಚುನಾವಣೆಯ ಸೇಡು ತೀರಿಸಿಕೊಳ್ಳುತ್ತಿದ್ದಾರೆ ಎಂದು ಚಿರಾಗ್‌ ಪಾಸ್ವಾನ್ ಅವರ ಆಪ್ತರು ಆರೋಪಿಸಿದ್ದರು.

ಅಲ್ಲದೆ, ಎಲ್‌ಜೆಪಿಯಲ್ಲಾಗಿರುವ ಎಲ್ಲಾ ಬೆಳವಣಿಗೆಗಳಿಗೆ, ಮುಖ್ಯವಾಗಿ ಎಲ್‌ಜೆಪಿ ವಿಭಜನೆಯ ಹಿಂದೆ ಬಿಹಾರ ಸಿಎಂ ನಿತೀಶ್‌ ಕುಮಾರ್‌ ಮಾಸ್ಟರ್ ಮೈಂಡ್‌ ಕೆಲಸ ಮಾಡಿದೆ. ಈ ಹಿಂದೆ 2005 ಮತ್ತು 2010 ರಲ್ಲಿ ಎಲ್‌ಜೆಪಿ ಇದೇ ರೀತಿ ವಿಭಜನೆಯಾಗಲು ನಿತೀಶ್ ಕುಮಾರ್ ಅವರ ಜೆಡಿಯು ಅನುಕೂಲ ಮಾಡಿಕೊಟ್ಟಿತ್ತು ಎಂಬುದನ್ನು ಚಿರಾಗ್‌ ಪಾಸ್ವಾನ್‌ ಅವರಿಗೆ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ನೆನಪಿಸಿದ್ದರು.

ಈ ನಡುವೆ, ಚಿರಾಗ್ ಪಾಸ್ವಾನ್ ಅವರ ತಂದೆ, ಮಾಜಿ ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಅವರ ಜನ್ಮದಿನವಾದ ಜುಲೈ 5 ರಂದು ಗೌರವ ಸಲ್ಲಿಸಲು ತೇಜಸ್ವಿ ಯಾದವ್ ಯೋಜಿಸುತ್ತಿದ್ದಾರೆ. ಅದೇ ದಿನ ತೇಜಸ್ವಿ ಯಾದವ್ ಅವರ ಪಕ್ಷವಾದ ಆರ್‌ಜೆಡಿಯ ಸಂಸ್ಥಾಪನಾ ದಿನವೂ ಆಗಿದ್ದು, ಅಂದಿನ ಕಾರ್ಯಕ್ರಮದಲ್ಲಿ ಕಳೆದ ವರ್ಷ ಅಕ್ಟೋಬರ್‌ನಲ್ಲಿ ನಿಧನರಾದ ರಾಮ್ ವಿಲಾಸ್ ಪಾಸ್ವಾನ್ ಅವರಿಗೆ ಗೌರವ ಸಲ್ಲಿಸಲು ಮುಂದಾಗಿದ್ದಾರೆ.

ಇದನ್ನೂ ಓದಿ: ‘ನಾನು ತೇಜಸ್ವಿ ಯಾದವ್ ಮಾತಾಡುತ್ತಿದ್ದೇನೆ’: ಡಿಸಿಯೊಂದಿಗಿನ ಖಡಕ್ ಸಂಭಾಷಣೆ ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...