Homeಕರ್ನಾಟಕ‘ನನ್ನಪ್ಪ ಒಬ್ಬ ಪರಿಪೂರ್ಣ ಕಮ್ಯುನಿಸ್ಟ್’: ಕ್ರಾಂತಿಕಾರಿ ‘ಚೆ’ ಮಗಳು ಅಲಿಡಾ ಗುವೆರಾ

‘ನನ್ನಪ್ಪ ಒಬ್ಬ ಪರಿಪೂರ್ಣ ಕಮ್ಯುನಿಸ್ಟ್’: ಕ್ರಾಂತಿಕಾರಿ ‘ಚೆ’ ಮಗಳು ಅಲಿಡಾ ಗುವೆರಾ

- Advertisement -
- Advertisement -

‘ಚೆ’ ಎಷ್ಟು ಕ್ರಾಂತಿಕಾರಿಯು ಅಷ್ಟೆ ರೊಮ್ಯಾಂಟಿಕ್ ಕೂಡಾ ಆಗಿದ್ದರು. ಮನುಕುಲವನ್ನು ಪ್ರೀತಿಸುವ ಸಾಮರ್ಥ್ಯ ಇದ್ದರೆ ಮಾತ್ರ ಅವರು ಸಮರ್ಥ ವ್ಯಕ್ತಿ ಎಂದೆಣಿಸಿಕೊಳ್ಳಬಹುದು. ನನ್ನಪ್ಪ ಒಬ್ಬ ಪರಿಪೂರ್ಣ ಕಮ್ಯುನಿಸ್ಟ್ ಎಂದು ಕ್ರಾಂತಿಕಾರಿ ಚೆ ಗೆವಾರ ಅವರ ಮಗಳು, ಮಕ್ಕಳ ವೈದ್ಯೆ, ಮಾನವ ಹಕ್ಕುಗಳ ಹೋರಾಟಗಾರ್ತಿ ಡಾ. ಅಲಿಡಾ ಗೆವಾರ ಅಭಿಪ್ರಾಯಪಟ್ಟರು. ಅವರು ಗುರುವಾರ ಸಂಜೆ ಬೆಂಗಳೂರಿನಲ್ಲಿ ನಡೆದ ‘ಪ್ರಗತಿಪರ ಸಂಘಟನೆಗಳು’ ಹಾಗೂ ‘ಕ್ಯೂಬಾ ಸೌಹಾರ್ದತಾ ಸಮಿತಿ’ ಆಯೋಜಿಸಿದ್ದ ‘ನಾಗರೀಕ ಸನ್ಮಾನ’ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.

ತಂದೆ ಚೆ ಗೆವೆರಾ ಅವರ ಒಡನಾಟವನ್ನು ಸ್ಮರಿಸಿದ ಅಲಿಡಾ ಗುವೆರಾ,“ನನ್ನ ತಂದೆ ಕವನಗಳೆಂದರೆ ಬಹಳ ಪ್ರೀತಿ. ಕವಿತೆಗಳನ್ನು ಹಾಡುತ್ತಿದ್ದರು ಮತ್ತು ಬರೆಯುತ್ತಿದ್ದರು. ಅವರ ಬರಹಗಳಿಗೆ ಅವರೇ ವಿಮರ್ಶಕರೂ ಆಗಿರುತ್ತಿದ್ದರು. ಹಾಗಾಗಿ ಅವರು ಅವರೇ ಬರೆದ ಕವಿತೆಗಳನ್ನು ಓದುತ್ತಿರಲಿಲ್ಲ. ಆದರೆ ರಾತ್ರಿ ಹೊತ್ತಿನಲ್ಲಿ ನನ್ನ ತಾಯಿಗಾಗಿ ನನ್ನ ತಂದೆ ಚೆ ಗುವೆರಾ ಕವಿತೆಗಳನ್ನು ಓದುತ್ತಿದ್ದರು. ಅಪ್ಪ ಕ್ರಾಂತಿಗಾಗಿ ಕಾಂಗೋಗೆ ಹೊರಡುವಾಗ ನನ್ನ ತಾಯಿಗಾಗಿ ಅವರೇ ವಾಚನ ಮಾಡಿದ ಕವನಗಳನ್ನು ರೆಕಾರ್ಡ್ ಮಾಡಿ ಕೊಟ್ಟು ಹೋಗಿದ್ದರು” ಎಂದು ತಂದೆಯನ್ನು ನೆನಪಿಸಿಕೊಂಡರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನಿಜವಾದ ಕ್ರಾಂತಿಯಲ್ಲಿ ಯಾವತ್ತೂ ಕೂಡಾ ಪುರುಷ ಮತ್ತು‌ ಮಹಿಳೆ ಸಮಾನವಾಗಿ ಒಳಗೊಂಡಿರಬೇಕು. ಕ್ರಾಂತಿಯಲ್ಲಿ ಪುರುಷ ಮತ್ತು ಮಹಿಳೆಯರ ಸಮಾನ ಪಾಲುದಾರಿಕೆ ಇರಬೇಕು ಎಂದು ತಂದೆ ಚೆಗುವೆರಾ ನಂಬಿದ್ದರು” ಎಂದು ಅವರು ಹೇಳಿದರು.

ಸದ್ಯದ ಕ್ಯೂಬಾ ಸ್ಥಿತಿಗಳನ್ನು ವಿವರಿಸಿದ ಅವರು,“ಕೋವಿಡ್ ಸಾಂಕ್ರಾಮಿಕದಿಂದಾಗಿ ಕಳೆದ ಎರಡು ವರ್ಷಗಳಿಂದ ಕ್ಯೂಬಾ ದೊಡ್ಡ ಪ್ರಮಾಣದಲ್ಲಿ ಅರ್ಥಿಕ ಸಂಕಷ್ಟವನ್ನು ಎದುರಿಸುತ್ತಿದೆ. ಸಂಪನ್ಮೂಲಗಳ ಕೊರತೆ ಎದುರಾಗಿದೆ. ಅಲ್ಲಿನ ಸರ್ಕಾರ ಚೇತರಿಕೆಗಾಗಿ ಶ್ರಮಿಸುತ್ತಿದೆ” ಎಂದು ತಿಳಿಸಿದರು.

“ಚೆ ಗುವೆರಾ ಎಷ್ಟು ಕ್ರಾಂತಿಕಾರಿಯೋ ಅಷ್ಟೆ ರೊಮ್ಯಾಂಟಿಕ್ ಕೂಡಾ ಆಗಿದ್ದರು. ಹೇಗೆ ಪ್ರೀತಿಸಬೇಕು ಎಂದು ಅವರು ತಿಳಿದಿದ್ದರು. ಹೇಗೆ ಒಬ್ಬ ವ್ಯಕ್ತಿ ತನ್ನ ಮಗಳು ಮತ್ತು ಪತ್ನಿಯ ಜೊತೆ ಬದುಕುತ್ತಲೇ, ಅವರನ್ನೂ ಕ್ರಾಂತಿಯ ಭಾಗವಾಗಿಸಿಕೊಂಡು ಜಗತ್ತಿಗಾಗಿ ಹೇಗೆ ಹೋರಾಡಬೇಕು ಎಂದು ತಿಳಿಸಿಕೊಟ್ಟರು. ಮನುಕುಲವನ್ನು ಪ್ರೀತಿಸುವ ಸಾಮರ್ಥ್ಯ ಇದ್ದರೆ ಮಾತ್ರ ಅವರು ಸಮರ್ಥ ವ್ಯಕ್ತಿ. ನನ್ನಪ್ಪ ಚೆಗುವೆರಾ ಒಬ್ಬ ಪರಿಪೂರ್ಣ ಕಮ್ಯುನಿಸ್ಟ್” ಎಂದು ಅವರು ಹೆಮ್ಮೆಪಟ್ಟುಕೊಂಡರು

“ನಾವು ಮಾತನಾಡುವಾಗ ಹೆಚ್ಚು ಜಾಗರೂಕರಾಗಿರಬೇಕು. ಸರಿಯಾದುದನ್ನೇ ಹೇಳಿದರೂ ಹೇಗೆ ಹೇಳಬೇಕು ಎಂಬ ಬಗ್ಗೆ ಹೆಚ್ಚು ಜಾಗರೂಕರಾಗಿರಬೇಕು. ಮಾಹಿತಿಗಳ ತಿರುಚುವಿಕೆ ಮತ್ತು ತಪ್ಪಾಗಿ ಪ್ರಸಾರ ಮಾಡುವಿಕೆಯೂ ಈಗಿನ ಮನುಕುಲವನ್ನು ಕಾಡುತ್ತಿರುವ ದೊಡ್ಡ ಸಮಸ್ಯೆಗಳಲ್ಲಿ ಒಂದು” ಎಂದು ಹೇಳಿದ ಅವರು ‘ಚೆ’ ಹೇಳದ ಮಾತುಗಳನ್ನು ಅವರ ಹೆಸರಿನಲ್ಲಿ ಹರಿದಾಡಿದ ಘಟನೆಯೊಂದನ್ನು ಹಂಚಿಕೊಂಡರು.

“ಭಾರತ ಮತ್ತು ಕ್ಯೂಬಾ ಭಾವನಾತ್ಮಕವಾಗಿ ದೂರವೇನಿಲ್ಲ. ಭಾರತದ ಜನರು ಕ್ಯೂಬಾ ಬೆಂಬಲಕ್ಕೆ ನಿಂತಿದ್ದರು. ಈಗಲೂ ಭಾರತ-ಕ್ಯೂಬಾ ಜೊತೆಯಲ್ಲೇ ಇದ್ದೇವೆ. ಇದೇ ಭಾರತ-ಕ್ಯೂಬಾ ಸೌಂದರ್ಯ. ‘ಭಾರತ-ಕ್ಯೂಬಾ ಭಾವನಾತ್ಮಕ ಒಗ್ಗಟ್ಟು’ ಎನ್ನುವುದು ಮಾನವತೆಯ ಸೌಂದರ್ಯವಾಗಿದೆ ಎಂದು ನಾನು ನಂಬಿದ್ದೇನೆ” ಎಂದು ಅವರು ಹೇಳಿದರು.

“ಎರಡು ವರ್ಷ ಕೊರೋನಾ ಸಾಂಕ್ರಾಮಿಕ ರೋಗದಿಂದ ನಾವು ಕಷ್ಟಕ್ಕೀಡಾದೆವು. ಕ್ಯೂಬಾ ಆಗ ಆರ್ಥಿಕತೆಯಿಂದಲೂ ಬಳಲಿತ್ತು. ಆದರೆ ನಾವು ಜನರ ಬದುಕನ್ನು ರಕ್ಷಣೆ ಮಾಡಲೇಬೇಕಿತ್ತು ಮತ್ತು ಅದನ್ನು ನಾವು ಮಾಡಿದೆವು ಕೂಡ. ಗಂಭೀರ ಆರ್ಥಿಕ‌ ಸಮಸ್ಯೆ ಎದುರಾದಾಗಲೂ ಅದನ್ನು ನಿಭಾಯಿಸಿದೆವು. ನಾವು ಬಹಿಷ್ಕಾರದ ಬಗ್ಗೆ ಸುಲಭವಾಗಿ ಮಾತಾಡಬಹುದು‌. ಆದರೆ ಬಹಿಷ್ಕಾರವನ್ನೇ ಬದುಕುವುದು ಅಷ್ಟು ಸುಲಭವಲ್ಲ. ನಮ್ಮಲ್ಲಿದ್ದ ಎಲ್ಲಾ ಅನುದಾನವನ್ನು ನಾವು ನಾಗರಿಕರಿಗಾಗಿ ಬಳಸಿದ್ದೇವೆ” ಎಂದು ತಿಳಿಸಿದರು.

“ಜಗತ್ತಿನ ದುರಂತ ಏನೆಂದರೆ ಎಲ್ಲಾ ಜೀವರಕ್ಷಕ ಔಷಧಿಗಳ ಪೇಟೆಂಟ್ ಅಮೇರಿಕಾದ ಬಳಿ ಇದೆ. ನಾವು ಹಣ ಕೊಟ್ಟರೂ ಅಮೇರಿಕಾ ನಮಗೆ ಔಷಧಿಗಳನ್ನು ಕೊಡುವುದಿಲ್ಲ. ಬೇರೆ ಯಾರಾದರೂ ಕೊಂಡು, ಅವರ ಬಳಿ ನಾವು ಕೊಂಡರೆ ಅವರಿಗೂ ಅಮೇರಿಕಾ ತೊಂದರೆ ಕೊಡುತ್ತದೆ. ಅದಕ್ಕೆ ನಾವು ಉಪಾಯವಾಗಿ ಕನಿಷ್ಠ ಐದು ದೇಶದ ಕೈದಾಟಿದ ಮೇಲೆ ಅವರಿಂದ ನಾವು ಔಷಧಿ ಕೊಳ್ಳುವ ವ್ಯವಸ್ಥೆ ಮಾಡಿದೆವು. ಆಗ ಔಷದಿಯ ಬೆಲೆ ಐದು ಪಟ್ಟು ಹೆಚ್ಚಾಗುತ್ತದೆ. ಇಷ್ಟಾದರೂ ನಾವು ನಮ್ಮ ಜನರಿಗೆ ಸಂಪೂರ್ಣ ಉಚಿತವಾದ ವೈದ್ಯಕೀಯ ಸೌಲಭ್ಯ ಕೊಡುತ್ತೇವೆ” ಎಂದು ಅವರು ಹೇಳಿದರು.

“ನಮ್ಮ ವಿಜ್ಞಾನಿಗಳು ಕ್ಯೂಬಾದಲ್ಲಿ ಒಟ್ಟು ಐದು ಬಗೆಯ ಕೋವಿಡ್ ವ್ಯಾಕ್ಸಿನ್‌ಗಳನ್ನು ಕಂಡುಹಿಡಿದರು. ಆದರೆ ಅದಕ್ಕೆ ಬೇಕಾದ ಸಿರಿಂಜ್‌ಗಳ ಮೇಲೂ ಅಮೇರಿಕಾ ನಿರ್ಬಂಧ ಹೇರಿತ್ತು. ಕಡೆಗೆ ನಾವು ಮೂಗಿನ ಹೊಳ್ಳೆಗಳ ಮೂಲಕ ವ್ಯಾಕ್ಸಿನ್ ಅನ್ನು ಜನರಿಗೆ ನೀಡಿ ಯಶಸ್ಸು ಗಳಿಸಿದೆವು. ಇದೀಗ ಕ್ಯೂಬಾ ಮತ್ತೊಂದು ಹೊಸ ವ್ಯಾಕ್ಸಿನ್ ಕಂಡು ಹಿಡಿದಿದ್ದು, ಅದನ್ನೂ ಕೂಡಾ ಮೂಗಿನ ಮೂಲಕ ಕೊಡಲಾಗುತ್ತದೆ. ಹಾಗಾಗಿ ನಮಗೆ ಅಮೇರಿಕಾದ ಸಿರೀಂಜು ಅಗತ್ಯವಿಲ್ಲ” ಎಂದು ಹೇಳಿದರು.

“ಕ್ಯೂಬಾ ಜೊತೆಗೆ ಕೇರಳ ತನ್ನ ಬೆಂಬಲವನ್ನು ನೀಡಿತು. ಕ್ಯೂಬಾ ಒಂದು ದೇಶವಾಗಿ ಕೇರಳದ ಜೊತೆ ಜೊತೆಗೆ ಸಾಗುತ್ತಿದ್ದೇವೆ. ಇದಕ್ಕೆ ನಾವು ಒಗ್ಗಟ್ಟು ಎನ್ನುತ್ತೇವೆ. ಆಯುರ್ವೇದಿಕೆ ಮೆಡಿಸಿನ್ ಗಳನ್ನು ಕ್ಯೂಬಾದಲ್ಲಿ ಅಭಿವೃದ್ದಿಪಡಿಸಲು ಕೇರಳದ ಸಹಕಾರ ನೀಡಿದೆ. ಕೇರಳ ಮತ್ತು ಕ್ಯೂಬಾದ ಮನೋಧರ್ಮ ಒಂದೇ ಆಗಿದೆ. ಹಾಗಾಗಿ ಕೇರಳ ಮತ್ತು ಕ್ಯೂಬಾದಲ್ಲಿ ಒಂದೇ ರೀತಿಯ ಯೋಜನೆ ಮತ್ತು ಯೋಚನೆಗಳಿವೆ. ಕ್ಯೂಬಾ ಮತ್ತು ಕೇರಳದ ಈ ಸಂಬಂಧದಿಂದ ಜಗತ್ತು ಕಲಿಯುವಂತದ್ದು ಬಹಳ ಇದೆ” ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ, ಅಲಿಡಾ ಗೆವಾರ ಅವರ ಪುತ್ರಿ ಅರ್ಥಶಾಸ್ತ್ರಜ್ಞೆ ಎಸ್ತೆಫಾನಿಯಾ, ಹಿರಿಯ ಸಾಹಿತಿ ಪ್ರೊ. ಬರಗೂರು ರಾಮಚಂದ್ರಪ್ಪ, ಕೇರಳದ ಮಾಜಿ ಸಚಿವ, ಕ್ಯೂಬಾ ಸೌಹಾರ್ದ ಸಮಿತಿ ಅಧ್ಯಕ್ಷ ಎಂ.ಎ. ಬೇಬಿ, ನಿವೃತ್ತ ನ್ಯಾಯಮೂರ್ತಿ ಎಚ್.ಎಸ್. ನಾಗಮೋಹನ ದಾಸ್, ದಲಿತ ಹಕ್ಕುಗಳ ಹೋರಾಟಗಾರ ಹಿರಿಯ ಮುಖಂಡ ಮಾವಳ್ಳಿ ಶಂಕರ್, ಹಿರಿಯ ಪತ್ರಕರ್ತೆ ಡಾ. ವಿಜಯಾ, ಲೇಖಕಿಯರ ಸಂಘದ ಅಧ್ಯಕ್ಷೆ ಎಚ್.ಎಲ್. ಪುಷ್ಪ, ಸಿಪಿಐ ಮುಖಂಡ ಸಿದ್ದನಗೌಡ ಪಾಟೀಲ್, ಹಿರಿಯ ವಿಧ್ವಾಂಸ ಜಿ. ರಾಮಕೃಷ್ಣ, ಸಿಪಿಐಎಂಎಲ್‌‌ ನಾಯಕಿ ಮೈತ್ರೇಯಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಇದನ್ನೂ ಓದಿ: ಬಹುತ್ವ ನಾಶ ಮಾಡಲು ಹೊರಟವರಿಗೆ ‘ಚೆ’ ಅಭಿಮಾನಿಗಳು ಉತ್ತರಿಸುತ್ತೇವೆ: ಪ್ರೊ. ಬರಗೂರು ರಾಮಚಂದ್ರಪ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...