Homeಕರ್ನಾಟಕ‘ನನ್ನಪ್ಪ ಒಬ್ಬ ಪರಿಪೂರ್ಣ ಕಮ್ಯುನಿಸ್ಟ್’: ಕ್ರಾಂತಿಕಾರಿ ‘ಚೆ’ ಮಗಳು ಅಲಿಡಾ ಗುವೆರಾ

‘ನನ್ನಪ್ಪ ಒಬ್ಬ ಪರಿಪೂರ್ಣ ಕಮ್ಯುನಿಸ್ಟ್’: ಕ್ರಾಂತಿಕಾರಿ ‘ಚೆ’ ಮಗಳು ಅಲಿಡಾ ಗುವೆರಾ

- Advertisement -
- Advertisement -

‘ಚೆ’ ಎಷ್ಟು ಕ್ರಾಂತಿಕಾರಿಯು ಅಷ್ಟೆ ರೊಮ್ಯಾಂಟಿಕ್ ಕೂಡಾ ಆಗಿದ್ದರು. ಮನುಕುಲವನ್ನು ಪ್ರೀತಿಸುವ ಸಾಮರ್ಥ್ಯ ಇದ್ದರೆ ಮಾತ್ರ ಅವರು ಸಮರ್ಥ ವ್ಯಕ್ತಿ ಎಂದೆಣಿಸಿಕೊಳ್ಳಬಹುದು. ನನ್ನಪ್ಪ ಒಬ್ಬ ಪರಿಪೂರ್ಣ ಕಮ್ಯುನಿಸ್ಟ್ ಎಂದು ಕ್ರಾಂತಿಕಾರಿ ಚೆ ಗೆವಾರ ಅವರ ಮಗಳು, ಮಕ್ಕಳ ವೈದ್ಯೆ, ಮಾನವ ಹಕ್ಕುಗಳ ಹೋರಾಟಗಾರ್ತಿ ಡಾ. ಅಲಿಡಾ ಗೆವಾರ ಅಭಿಪ್ರಾಯಪಟ್ಟರು. ಅವರು ಗುರುವಾರ ಸಂಜೆ ಬೆಂಗಳೂರಿನಲ್ಲಿ ನಡೆದ ‘ಪ್ರಗತಿಪರ ಸಂಘಟನೆಗಳು’ ಹಾಗೂ ‘ಕ್ಯೂಬಾ ಸೌಹಾರ್ದತಾ ಸಮಿತಿ’ ಆಯೋಜಿಸಿದ್ದ ‘ನಾಗರೀಕ ಸನ್ಮಾನ’ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.

ತಂದೆ ಚೆ ಗೆವೆರಾ ಅವರ ಒಡನಾಟವನ್ನು ಸ್ಮರಿಸಿದ ಅಲಿಡಾ ಗುವೆರಾ,“ನನ್ನ ತಂದೆ ಕವನಗಳೆಂದರೆ ಬಹಳ ಪ್ರೀತಿ. ಕವಿತೆಗಳನ್ನು ಹಾಡುತ್ತಿದ್ದರು ಮತ್ತು ಬರೆಯುತ್ತಿದ್ದರು. ಅವರ ಬರಹಗಳಿಗೆ ಅವರೇ ವಿಮರ್ಶಕರೂ ಆಗಿರುತ್ತಿದ್ದರು. ಹಾಗಾಗಿ ಅವರು ಅವರೇ ಬರೆದ ಕವಿತೆಗಳನ್ನು ಓದುತ್ತಿರಲಿಲ್ಲ. ಆದರೆ ರಾತ್ರಿ ಹೊತ್ತಿನಲ್ಲಿ ನನ್ನ ತಾಯಿಗಾಗಿ ನನ್ನ ತಂದೆ ಚೆ ಗುವೆರಾ ಕವಿತೆಗಳನ್ನು ಓದುತ್ತಿದ್ದರು. ಅಪ್ಪ ಕ್ರಾಂತಿಗಾಗಿ ಕಾಂಗೋಗೆ ಹೊರಡುವಾಗ ನನ್ನ ತಾಯಿಗಾಗಿ ಅವರೇ ವಾಚನ ಮಾಡಿದ ಕವನಗಳನ್ನು ರೆಕಾರ್ಡ್ ಮಾಡಿ ಕೊಟ್ಟು ಹೋಗಿದ್ದರು” ಎಂದು ತಂದೆಯನ್ನು ನೆನಪಿಸಿಕೊಂಡರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನಿಜವಾದ ಕ್ರಾಂತಿಯಲ್ಲಿ ಯಾವತ್ತೂ ಕೂಡಾ ಪುರುಷ ಮತ್ತು‌ ಮಹಿಳೆ ಸಮಾನವಾಗಿ ಒಳಗೊಂಡಿರಬೇಕು. ಕ್ರಾಂತಿಯಲ್ಲಿ ಪುರುಷ ಮತ್ತು ಮಹಿಳೆಯರ ಸಮಾನ ಪಾಲುದಾರಿಕೆ ಇರಬೇಕು ಎಂದು ತಂದೆ ಚೆಗುವೆರಾ ನಂಬಿದ್ದರು” ಎಂದು ಅವರು ಹೇಳಿದರು.

ಸದ್ಯದ ಕ್ಯೂಬಾ ಸ್ಥಿತಿಗಳನ್ನು ವಿವರಿಸಿದ ಅವರು,“ಕೋವಿಡ್ ಸಾಂಕ್ರಾಮಿಕದಿಂದಾಗಿ ಕಳೆದ ಎರಡು ವರ್ಷಗಳಿಂದ ಕ್ಯೂಬಾ ದೊಡ್ಡ ಪ್ರಮಾಣದಲ್ಲಿ ಅರ್ಥಿಕ ಸಂಕಷ್ಟವನ್ನು ಎದುರಿಸುತ್ತಿದೆ. ಸಂಪನ್ಮೂಲಗಳ ಕೊರತೆ ಎದುರಾಗಿದೆ. ಅಲ್ಲಿನ ಸರ್ಕಾರ ಚೇತರಿಕೆಗಾಗಿ ಶ್ರಮಿಸುತ್ತಿದೆ” ಎಂದು ತಿಳಿಸಿದರು.

“ಚೆ ಗುವೆರಾ ಎಷ್ಟು ಕ್ರಾಂತಿಕಾರಿಯೋ ಅಷ್ಟೆ ರೊಮ್ಯಾಂಟಿಕ್ ಕೂಡಾ ಆಗಿದ್ದರು. ಹೇಗೆ ಪ್ರೀತಿಸಬೇಕು ಎಂದು ಅವರು ತಿಳಿದಿದ್ದರು. ಹೇಗೆ ಒಬ್ಬ ವ್ಯಕ್ತಿ ತನ್ನ ಮಗಳು ಮತ್ತು ಪತ್ನಿಯ ಜೊತೆ ಬದುಕುತ್ತಲೇ, ಅವರನ್ನೂ ಕ್ರಾಂತಿಯ ಭಾಗವಾಗಿಸಿಕೊಂಡು ಜಗತ್ತಿಗಾಗಿ ಹೇಗೆ ಹೋರಾಡಬೇಕು ಎಂದು ತಿಳಿಸಿಕೊಟ್ಟರು. ಮನುಕುಲವನ್ನು ಪ್ರೀತಿಸುವ ಸಾಮರ್ಥ್ಯ ಇದ್ದರೆ ಮಾತ್ರ ಅವರು ಸಮರ್ಥ ವ್ಯಕ್ತಿ. ನನ್ನಪ್ಪ ಚೆಗುವೆರಾ ಒಬ್ಬ ಪರಿಪೂರ್ಣ ಕಮ್ಯುನಿಸ್ಟ್” ಎಂದು ಅವರು ಹೆಮ್ಮೆಪಟ್ಟುಕೊಂಡರು

“ನಾವು ಮಾತನಾಡುವಾಗ ಹೆಚ್ಚು ಜಾಗರೂಕರಾಗಿರಬೇಕು. ಸರಿಯಾದುದನ್ನೇ ಹೇಳಿದರೂ ಹೇಗೆ ಹೇಳಬೇಕು ಎಂಬ ಬಗ್ಗೆ ಹೆಚ್ಚು ಜಾಗರೂಕರಾಗಿರಬೇಕು. ಮಾಹಿತಿಗಳ ತಿರುಚುವಿಕೆ ಮತ್ತು ತಪ್ಪಾಗಿ ಪ್ರಸಾರ ಮಾಡುವಿಕೆಯೂ ಈಗಿನ ಮನುಕುಲವನ್ನು ಕಾಡುತ್ತಿರುವ ದೊಡ್ಡ ಸಮಸ್ಯೆಗಳಲ್ಲಿ ಒಂದು” ಎಂದು ಹೇಳಿದ ಅವರು ‘ಚೆ’ ಹೇಳದ ಮಾತುಗಳನ್ನು ಅವರ ಹೆಸರಿನಲ್ಲಿ ಹರಿದಾಡಿದ ಘಟನೆಯೊಂದನ್ನು ಹಂಚಿಕೊಂಡರು.

“ಭಾರತ ಮತ್ತು ಕ್ಯೂಬಾ ಭಾವನಾತ್ಮಕವಾಗಿ ದೂರವೇನಿಲ್ಲ. ಭಾರತದ ಜನರು ಕ್ಯೂಬಾ ಬೆಂಬಲಕ್ಕೆ ನಿಂತಿದ್ದರು. ಈಗಲೂ ಭಾರತ-ಕ್ಯೂಬಾ ಜೊತೆಯಲ್ಲೇ ಇದ್ದೇವೆ. ಇದೇ ಭಾರತ-ಕ್ಯೂಬಾ ಸೌಂದರ್ಯ. ‘ಭಾರತ-ಕ್ಯೂಬಾ ಭಾವನಾತ್ಮಕ ಒಗ್ಗಟ್ಟು’ ಎನ್ನುವುದು ಮಾನವತೆಯ ಸೌಂದರ್ಯವಾಗಿದೆ ಎಂದು ನಾನು ನಂಬಿದ್ದೇನೆ” ಎಂದು ಅವರು ಹೇಳಿದರು.

“ಎರಡು ವರ್ಷ ಕೊರೋನಾ ಸಾಂಕ್ರಾಮಿಕ ರೋಗದಿಂದ ನಾವು ಕಷ್ಟಕ್ಕೀಡಾದೆವು. ಕ್ಯೂಬಾ ಆಗ ಆರ್ಥಿಕತೆಯಿಂದಲೂ ಬಳಲಿತ್ತು. ಆದರೆ ನಾವು ಜನರ ಬದುಕನ್ನು ರಕ್ಷಣೆ ಮಾಡಲೇಬೇಕಿತ್ತು ಮತ್ತು ಅದನ್ನು ನಾವು ಮಾಡಿದೆವು ಕೂಡ. ಗಂಭೀರ ಆರ್ಥಿಕ‌ ಸಮಸ್ಯೆ ಎದುರಾದಾಗಲೂ ಅದನ್ನು ನಿಭಾಯಿಸಿದೆವು. ನಾವು ಬಹಿಷ್ಕಾರದ ಬಗ್ಗೆ ಸುಲಭವಾಗಿ ಮಾತಾಡಬಹುದು‌. ಆದರೆ ಬಹಿಷ್ಕಾರವನ್ನೇ ಬದುಕುವುದು ಅಷ್ಟು ಸುಲಭವಲ್ಲ. ನಮ್ಮಲ್ಲಿದ್ದ ಎಲ್ಲಾ ಅನುದಾನವನ್ನು ನಾವು ನಾಗರಿಕರಿಗಾಗಿ ಬಳಸಿದ್ದೇವೆ” ಎಂದು ತಿಳಿಸಿದರು.

“ಜಗತ್ತಿನ ದುರಂತ ಏನೆಂದರೆ ಎಲ್ಲಾ ಜೀವರಕ್ಷಕ ಔಷಧಿಗಳ ಪೇಟೆಂಟ್ ಅಮೇರಿಕಾದ ಬಳಿ ಇದೆ. ನಾವು ಹಣ ಕೊಟ್ಟರೂ ಅಮೇರಿಕಾ ನಮಗೆ ಔಷಧಿಗಳನ್ನು ಕೊಡುವುದಿಲ್ಲ. ಬೇರೆ ಯಾರಾದರೂ ಕೊಂಡು, ಅವರ ಬಳಿ ನಾವು ಕೊಂಡರೆ ಅವರಿಗೂ ಅಮೇರಿಕಾ ತೊಂದರೆ ಕೊಡುತ್ತದೆ. ಅದಕ್ಕೆ ನಾವು ಉಪಾಯವಾಗಿ ಕನಿಷ್ಠ ಐದು ದೇಶದ ಕೈದಾಟಿದ ಮೇಲೆ ಅವರಿಂದ ನಾವು ಔಷಧಿ ಕೊಳ್ಳುವ ವ್ಯವಸ್ಥೆ ಮಾಡಿದೆವು. ಆಗ ಔಷದಿಯ ಬೆಲೆ ಐದು ಪಟ್ಟು ಹೆಚ್ಚಾಗುತ್ತದೆ. ಇಷ್ಟಾದರೂ ನಾವು ನಮ್ಮ ಜನರಿಗೆ ಸಂಪೂರ್ಣ ಉಚಿತವಾದ ವೈದ್ಯಕೀಯ ಸೌಲಭ್ಯ ಕೊಡುತ್ತೇವೆ” ಎಂದು ಅವರು ಹೇಳಿದರು.

“ನಮ್ಮ ವಿಜ್ಞಾನಿಗಳು ಕ್ಯೂಬಾದಲ್ಲಿ ಒಟ್ಟು ಐದು ಬಗೆಯ ಕೋವಿಡ್ ವ್ಯಾಕ್ಸಿನ್‌ಗಳನ್ನು ಕಂಡುಹಿಡಿದರು. ಆದರೆ ಅದಕ್ಕೆ ಬೇಕಾದ ಸಿರಿಂಜ್‌ಗಳ ಮೇಲೂ ಅಮೇರಿಕಾ ನಿರ್ಬಂಧ ಹೇರಿತ್ತು. ಕಡೆಗೆ ನಾವು ಮೂಗಿನ ಹೊಳ್ಳೆಗಳ ಮೂಲಕ ವ್ಯಾಕ್ಸಿನ್ ಅನ್ನು ಜನರಿಗೆ ನೀಡಿ ಯಶಸ್ಸು ಗಳಿಸಿದೆವು. ಇದೀಗ ಕ್ಯೂಬಾ ಮತ್ತೊಂದು ಹೊಸ ವ್ಯಾಕ್ಸಿನ್ ಕಂಡು ಹಿಡಿದಿದ್ದು, ಅದನ್ನೂ ಕೂಡಾ ಮೂಗಿನ ಮೂಲಕ ಕೊಡಲಾಗುತ್ತದೆ. ಹಾಗಾಗಿ ನಮಗೆ ಅಮೇರಿಕಾದ ಸಿರೀಂಜು ಅಗತ್ಯವಿಲ್ಲ” ಎಂದು ಹೇಳಿದರು.

“ಕ್ಯೂಬಾ ಜೊತೆಗೆ ಕೇರಳ ತನ್ನ ಬೆಂಬಲವನ್ನು ನೀಡಿತು. ಕ್ಯೂಬಾ ಒಂದು ದೇಶವಾಗಿ ಕೇರಳದ ಜೊತೆ ಜೊತೆಗೆ ಸಾಗುತ್ತಿದ್ದೇವೆ. ಇದಕ್ಕೆ ನಾವು ಒಗ್ಗಟ್ಟು ಎನ್ನುತ್ತೇವೆ. ಆಯುರ್ವೇದಿಕೆ ಮೆಡಿಸಿನ್ ಗಳನ್ನು ಕ್ಯೂಬಾದಲ್ಲಿ ಅಭಿವೃದ್ದಿಪಡಿಸಲು ಕೇರಳದ ಸಹಕಾರ ನೀಡಿದೆ. ಕೇರಳ ಮತ್ತು ಕ್ಯೂಬಾದ ಮನೋಧರ್ಮ ಒಂದೇ ಆಗಿದೆ. ಹಾಗಾಗಿ ಕೇರಳ ಮತ್ತು ಕ್ಯೂಬಾದಲ್ಲಿ ಒಂದೇ ರೀತಿಯ ಯೋಜನೆ ಮತ್ತು ಯೋಚನೆಗಳಿವೆ. ಕ್ಯೂಬಾ ಮತ್ತು ಕೇರಳದ ಈ ಸಂಬಂಧದಿಂದ ಜಗತ್ತು ಕಲಿಯುವಂತದ್ದು ಬಹಳ ಇದೆ” ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ, ಅಲಿಡಾ ಗೆವಾರ ಅವರ ಪುತ್ರಿ ಅರ್ಥಶಾಸ್ತ್ರಜ್ಞೆ ಎಸ್ತೆಫಾನಿಯಾ, ಹಿರಿಯ ಸಾಹಿತಿ ಪ್ರೊ. ಬರಗೂರು ರಾಮಚಂದ್ರಪ್ಪ, ಕೇರಳದ ಮಾಜಿ ಸಚಿವ, ಕ್ಯೂಬಾ ಸೌಹಾರ್ದ ಸಮಿತಿ ಅಧ್ಯಕ್ಷ ಎಂ.ಎ. ಬೇಬಿ, ನಿವೃತ್ತ ನ್ಯಾಯಮೂರ್ತಿ ಎಚ್.ಎಸ್. ನಾಗಮೋಹನ ದಾಸ್, ದಲಿತ ಹಕ್ಕುಗಳ ಹೋರಾಟಗಾರ ಹಿರಿಯ ಮುಖಂಡ ಮಾವಳ್ಳಿ ಶಂಕರ್, ಹಿರಿಯ ಪತ್ರಕರ್ತೆ ಡಾ. ವಿಜಯಾ, ಲೇಖಕಿಯರ ಸಂಘದ ಅಧ್ಯಕ್ಷೆ ಎಚ್.ಎಲ್. ಪುಷ್ಪ, ಸಿಪಿಐ ಮುಖಂಡ ಸಿದ್ದನಗೌಡ ಪಾಟೀಲ್, ಹಿರಿಯ ವಿಧ್ವಾಂಸ ಜಿ. ರಾಮಕೃಷ್ಣ, ಸಿಪಿಐಎಂಎಲ್‌‌ ನಾಯಕಿ ಮೈತ್ರೇಯಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಇದನ್ನೂ ಓದಿ: ಬಹುತ್ವ ನಾಶ ಮಾಡಲು ಹೊರಟವರಿಗೆ ‘ಚೆ’ ಅಭಿಮಾನಿಗಳು ಉತ್ತರಿಸುತ್ತೇವೆ: ಪ್ರೊ. ಬರಗೂರು ರಾಮಚಂದ್ರಪ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...