Homeಕರ್ನಾಟಕ‘ನನ್ನಪ್ಪ ಒಬ್ಬ ಪರಿಪೂರ್ಣ ಕಮ್ಯುನಿಸ್ಟ್’: ಕ್ರಾಂತಿಕಾರಿ ‘ಚೆ’ ಮಗಳು ಅಲಿಡಾ ಗುವೆರಾ

‘ನನ್ನಪ್ಪ ಒಬ್ಬ ಪರಿಪೂರ್ಣ ಕಮ್ಯುನಿಸ್ಟ್’: ಕ್ರಾಂತಿಕಾರಿ ‘ಚೆ’ ಮಗಳು ಅಲಿಡಾ ಗುವೆರಾ

- Advertisement -
- Advertisement -

‘ಚೆ’ ಎಷ್ಟು ಕ್ರಾಂತಿಕಾರಿಯು ಅಷ್ಟೆ ರೊಮ್ಯಾಂಟಿಕ್ ಕೂಡಾ ಆಗಿದ್ದರು. ಮನುಕುಲವನ್ನು ಪ್ರೀತಿಸುವ ಸಾಮರ್ಥ್ಯ ಇದ್ದರೆ ಮಾತ್ರ ಅವರು ಸಮರ್ಥ ವ್ಯಕ್ತಿ ಎಂದೆಣಿಸಿಕೊಳ್ಳಬಹುದು. ನನ್ನಪ್ಪ ಒಬ್ಬ ಪರಿಪೂರ್ಣ ಕಮ್ಯುನಿಸ್ಟ್ ಎಂದು ಕ್ರಾಂತಿಕಾರಿ ಚೆ ಗೆವಾರ ಅವರ ಮಗಳು, ಮಕ್ಕಳ ವೈದ್ಯೆ, ಮಾನವ ಹಕ್ಕುಗಳ ಹೋರಾಟಗಾರ್ತಿ ಡಾ. ಅಲಿಡಾ ಗೆವಾರ ಅಭಿಪ್ರಾಯಪಟ್ಟರು. ಅವರು ಗುರುವಾರ ಸಂಜೆ ಬೆಂಗಳೂರಿನಲ್ಲಿ ನಡೆದ ‘ಪ್ರಗತಿಪರ ಸಂಘಟನೆಗಳು’ ಹಾಗೂ ‘ಕ್ಯೂಬಾ ಸೌಹಾರ್ದತಾ ಸಮಿತಿ’ ಆಯೋಜಿಸಿದ್ದ ‘ನಾಗರೀಕ ಸನ್ಮಾನ’ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.

ತಂದೆ ಚೆ ಗೆವೆರಾ ಅವರ ಒಡನಾಟವನ್ನು ಸ್ಮರಿಸಿದ ಅಲಿಡಾ ಗುವೆರಾ,“ನನ್ನ ತಂದೆ ಕವನಗಳೆಂದರೆ ಬಹಳ ಪ್ರೀತಿ. ಕವಿತೆಗಳನ್ನು ಹಾಡುತ್ತಿದ್ದರು ಮತ್ತು ಬರೆಯುತ್ತಿದ್ದರು. ಅವರ ಬರಹಗಳಿಗೆ ಅವರೇ ವಿಮರ್ಶಕರೂ ಆಗಿರುತ್ತಿದ್ದರು. ಹಾಗಾಗಿ ಅವರು ಅವರೇ ಬರೆದ ಕವಿತೆಗಳನ್ನು ಓದುತ್ತಿರಲಿಲ್ಲ. ಆದರೆ ರಾತ್ರಿ ಹೊತ್ತಿನಲ್ಲಿ ನನ್ನ ತಾಯಿಗಾಗಿ ನನ್ನ ತಂದೆ ಚೆ ಗುವೆರಾ ಕವಿತೆಗಳನ್ನು ಓದುತ್ತಿದ್ದರು. ಅಪ್ಪ ಕ್ರಾಂತಿಗಾಗಿ ಕಾಂಗೋಗೆ ಹೊರಡುವಾಗ ನನ್ನ ತಾಯಿಗಾಗಿ ಅವರೇ ವಾಚನ ಮಾಡಿದ ಕವನಗಳನ್ನು ರೆಕಾರ್ಡ್ ಮಾಡಿ ಕೊಟ್ಟು ಹೋಗಿದ್ದರು” ಎಂದು ತಂದೆಯನ್ನು ನೆನಪಿಸಿಕೊಂಡರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನಿಜವಾದ ಕ್ರಾಂತಿಯಲ್ಲಿ ಯಾವತ್ತೂ ಕೂಡಾ ಪುರುಷ ಮತ್ತು‌ ಮಹಿಳೆ ಸಮಾನವಾಗಿ ಒಳಗೊಂಡಿರಬೇಕು. ಕ್ರಾಂತಿಯಲ್ಲಿ ಪುರುಷ ಮತ್ತು ಮಹಿಳೆಯರ ಸಮಾನ ಪಾಲುದಾರಿಕೆ ಇರಬೇಕು ಎಂದು ತಂದೆ ಚೆಗುವೆರಾ ನಂಬಿದ್ದರು” ಎಂದು ಅವರು ಹೇಳಿದರು.

ಸದ್ಯದ ಕ್ಯೂಬಾ ಸ್ಥಿತಿಗಳನ್ನು ವಿವರಿಸಿದ ಅವರು,“ಕೋವಿಡ್ ಸಾಂಕ್ರಾಮಿಕದಿಂದಾಗಿ ಕಳೆದ ಎರಡು ವರ್ಷಗಳಿಂದ ಕ್ಯೂಬಾ ದೊಡ್ಡ ಪ್ರಮಾಣದಲ್ಲಿ ಅರ್ಥಿಕ ಸಂಕಷ್ಟವನ್ನು ಎದುರಿಸುತ್ತಿದೆ. ಸಂಪನ್ಮೂಲಗಳ ಕೊರತೆ ಎದುರಾಗಿದೆ. ಅಲ್ಲಿನ ಸರ್ಕಾರ ಚೇತರಿಕೆಗಾಗಿ ಶ್ರಮಿಸುತ್ತಿದೆ” ಎಂದು ತಿಳಿಸಿದರು.

“ಚೆ ಗುವೆರಾ ಎಷ್ಟು ಕ್ರಾಂತಿಕಾರಿಯೋ ಅಷ್ಟೆ ರೊಮ್ಯಾಂಟಿಕ್ ಕೂಡಾ ಆಗಿದ್ದರು. ಹೇಗೆ ಪ್ರೀತಿಸಬೇಕು ಎಂದು ಅವರು ತಿಳಿದಿದ್ದರು. ಹೇಗೆ ಒಬ್ಬ ವ್ಯಕ್ತಿ ತನ್ನ ಮಗಳು ಮತ್ತು ಪತ್ನಿಯ ಜೊತೆ ಬದುಕುತ್ತಲೇ, ಅವರನ್ನೂ ಕ್ರಾಂತಿಯ ಭಾಗವಾಗಿಸಿಕೊಂಡು ಜಗತ್ತಿಗಾಗಿ ಹೇಗೆ ಹೋರಾಡಬೇಕು ಎಂದು ತಿಳಿಸಿಕೊಟ್ಟರು. ಮನುಕುಲವನ್ನು ಪ್ರೀತಿಸುವ ಸಾಮರ್ಥ್ಯ ಇದ್ದರೆ ಮಾತ್ರ ಅವರು ಸಮರ್ಥ ವ್ಯಕ್ತಿ. ನನ್ನಪ್ಪ ಚೆಗುವೆರಾ ಒಬ್ಬ ಪರಿಪೂರ್ಣ ಕಮ್ಯುನಿಸ್ಟ್” ಎಂದು ಅವರು ಹೆಮ್ಮೆಪಟ್ಟುಕೊಂಡರು

“ನಾವು ಮಾತನಾಡುವಾಗ ಹೆಚ್ಚು ಜಾಗರೂಕರಾಗಿರಬೇಕು. ಸರಿಯಾದುದನ್ನೇ ಹೇಳಿದರೂ ಹೇಗೆ ಹೇಳಬೇಕು ಎಂಬ ಬಗ್ಗೆ ಹೆಚ್ಚು ಜಾಗರೂಕರಾಗಿರಬೇಕು. ಮಾಹಿತಿಗಳ ತಿರುಚುವಿಕೆ ಮತ್ತು ತಪ್ಪಾಗಿ ಪ್ರಸಾರ ಮಾಡುವಿಕೆಯೂ ಈಗಿನ ಮನುಕುಲವನ್ನು ಕಾಡುತ್ತಿರುವ ದೊಡ್ಡ ಸಮಸ್ಯೆಗಳಲ್ಲಿ ಒಂದು” ಎಂದು ಹೇಳಿದ ಅವರು ‘ಚೆ’ ಹೇಳದ ಮಾತುಗಳನ್ನು ಅವರ ಹೆಸರಿನಲ್ಲಿ ಹರಿದಾಡಿದ ಘಟನೆಯೊಂದನ್ನು ಹಂಚಿಕೊಂಡರು.

“ಭಾರತ ಮತ್ತು ಕ್ಯೂಬಾ ಭಾವನಾತ್ಮಕವಾಗಿ ದೂರವೇನಿಲ್ಲ. ಭಾರತದ ಜನರು ಕ್ಯೂಬಾ ಬೆಂಬಲಕ್ಕೆ ನಿಂತಿದ್ದರು. ಈಗಲೂ ಭಾರತ-ಕ್ಯೂಬಾ ಜೊತೆಯಲ್ಲೇ ಇದ್ದೇವೆ. ಇದೇ ಭಾರತ-ಕ್ಯೂಬಾ ಸೌಂದರ್ಯ. ‘ಭಾರತ-ಕ್ಯೂಬಾ ಭಾವನಾತ್ಮಕ ಒಗ್ಗಟ್ಟು’ ಎನ್ನುವುದು ಮಾನವತೆಯ ಸೌಂದರ್ಯವಾಗಿದೆ ಎಂದು ನಾನು ನಂಬಿದ್ದೇನೆ” ಎಂದು ಅವರು ಹೇಳಿದರು.

“ಎರಡು ವರ್ಷ ಕೊರೋನಾ ಸಾಂಕ್ರಾಮಿಕ ರೋಗದಿಂದ ನಾವು ಕಷ್ಟಕ್ಕೀಡಾದೆವು. ಕ್ಯೂಬಾ ಆಗ ಆರ್ಥಿಕತೆಯಿಂದಲೂ ಬಳಲಿತ್ತು. ಆದರೆ ನಾವು ಜನರ ಬದುಕನ್ನು ರಕ್ಷಣೆ ಮಾಡಲೇಬೇಕಿತ್ತು ಮತ್ತು ಅದನ್ನು ನಾವು ಮಾಡಿದೆವು ಕೂಡ. ಗಂಭೀರ ಆರ್ಥಿಕ‌ ಸಮಸ್ಯೆ ಎದುರಾದಾಗಲೂ ಅದನ್ನು ನಿಭಾಯಿಸಿದೆವು. ನಾವು ಬಹಿಷ್ಕಾರದ ಬಗ್ಗೆ ಸುಲಭವಾಗಿ ಮಾತಾಡಬಹುದು‌. ಆದರೆ ಬಹಿಷ್ಕಾರವನ್ನೇ ಬದುಕುವುದು ಅಷ್ಟು ಸುಲಭವಲ್ಲ. ನಮ್ಮಲ್ಲಿದ್ದ ಎಲ್ಲಾ ಅನುದಾನವನ್ನು ನಾವು ನಾಗರಿಕರಿಗಾಗಿ ಬಳಸಿದ್ದೇವೆ” ಎಂದು ತಿಳಿಸಿದರು.

“ಜಗತ್ತಿನ ದುರಂತ ಏನೆಂದರೆ ಎಲ್ಲಾ ಜೀವರಕ್ಷಕ ಔಷಧಿಗಳ ಪೇಟೆಂಟ್ ಅಮೇರಿಕಾದ ಬಳಿ ಇದೆ. ನಾವು ಹಣ ಕೊಟ್ಟರೂ ಅಮೇರಿಕಾ ನಮಗೆ ಔಷಧಿಗಳನ್ನು ಕೊಡುವುದಿಲ್ಲ. ಬೇರೆ ಯಾರಾದರೂ ಕೊಂಡು, ಅವರ ಬಳಿ ನಾವು ಕೊಂಡರೆ ಅವರಿಗೂ ಅಮೇರಿಕಾ ತೊಂದರೆ ಕೊಡುತ್ತದೆ. ಅದಕ್ಕೆ ನಾವು ಉಪಾಯವಾಗಿ ಕನಿಷ್ಠ ಐದು ದೇಶದ ಕೈದಾಟಿದ ಮೇಲೆ ಅವರಿಂದ ನಾವು ಔಷಧಿ ಕೊಳ್ಳುವ ವ್ಯವಸ್ಥೆ ಮಾಡಿದೆವು. ಆಗ ಔಷದಿಯ ಬೆಲೆ ಐದು ಪಟ್ಟು ಹೆಚ್ಚಾಗುತ್ತದೆ. ಇಷ್ಟಾದರೂ ನಾವು ನಮ್ಮ ಜನರಿಗೆ ಸಂಪೂರ್ಣ ಉಚಿತವಾದ ವೈದ್ಯಕೀಯ ಸೌಲಭ್ಯ ಕೊಡುತ್ತೇವೆ” ಎಂದು ಅವರು ಹೇಳಿದರು.

“ನಮ್ಮ ವಿಜ್ಞಾನಿಗಳು ಕ್ಯೂಬಾದಲ್ಲಿ ಒಟ್ಟು ಐದು ಬಗೆಯ ಕೋವಿಡ್ ವ್ಯಾಕ್ಸಿನ್‌ಗಳನ್ನು ಕಂಡುಹಿಡಿದರು. ಆದರೆ ಅದಕ್ಕೆ ಬೇಕಾದ ಸಿರಿಂಜ್‌ಗಳ ಮೇಲೂ ಅಮೇರಿಕಾ ನಿರ್ಬಂಧ ಹೇರಿತ್ತು. ಕಡೆಗೆ ನಾವು ಮೂಗಿನ ಹೊಳ್ಳೆಗಳ ಮೂಲಕ ವ್ಯಾಕ್ಸಿನ್ ಅನ್ನು ಜನರಿಗೆ ನೀಡಿ ಯಶಸ್ಸು ಗಳಿಸಿದೆವು. ಇದೀಗ ಕ್ಯೂಬಾ ಮತ್ತೊಂದು ಹೊಸ ವ್ಯಾಕ್ಸಿನ್ ಕಂಡು ಹಿಡಿದಿದ್ದು, ಅದನ್ನೂ ಕೂಡಾ ಮೂಗಿನ ಮೂಲಕ ಕೊಡಲಾಗುತ್ತದೆ. ಹಾಗಾಗಿ ನಮಗೆ ಅಮೇರಿಕಾದ ಸಿರೀಂಜು ಅಗತ್ಯವಿಲ್ಲ” ಎಂದು ಹೇಳಿದರು.

“ಕ್ಯೂಬಾ ಜೊತೆಗೆ ಕೇರಳ ತನ್ನ ಬೆಂಬಲವನ್ನು ನೀಡಿತು. ಕ್ಯೂಬಾ ಒಂದು ದೇಶವಾಗಿ ಕೇರಳದ ಜೊತೆ ಜೊತೆಗೆ ಸಾಗುತ್ತಿದ್ದೇವೆ. ಇದಕ್ಕೆ ನಾವು ಒಗ್ಗಟ್ಟು ಎನ್ನುತ್ತೇವೆ. ಆಯುರ್ವೇದಿಕೆ ಮೆಡಿಸಿನ್ ಗಳನ್ನು ಕ್ಯೂಬಾದಲ್ಲಿ ಅಭಿವೃದ್ದಿಪಡಿಸಲು ಕೇರಳದ ಸಹಕಾರ ನೀಡಿದೆ. ಕೇರಳ ಮತ್ತು ಕ್ಯೂಬಾದ ಮನೋಧರ್ಮ ಒಂದೇ ಆಗಿದೆ. ಹಾಗಾಗಿ ಕೇರಳ ಮತ್ತು ಕ್ಯೂಬಾದಲ್ಲಿ ಒಂದೇ ರೀತಿಯ ಯೋಜನೆ ಮತ್ತು ಯೋಚನೆಗಳಿವೆ. ಕ್ಯೂಬಾ ಮತ್ತು ಕೇರಳದ ಈ ಸಂಬಂಧದಿಂದ ಜಗತ್ತು ಕಲಿಯುವಂತದ್ದು ಬಹಳ ಇದೆ” ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ, ಅಲಿಡಾ ಗೆವಾರ ಅವರ ಪುತ್ರಿ ಅರ್ಥಶಾಸ್ತ್ರಜ್ಞೆ ಎಸ್ತೆಫಾನಿಯಾ, ಹಿರಿಯ ಸಾಹಿತಿ ಪ್ರೊ. ಬರಗೂರು ರಾಮಚಂದ್ರಪ್ಪ, ಕೇರಳದ ಮಾಜಿ ಸಚಿವ, ಕ್ಯೂಬಾ ಸೌಹಾರ್ದ ಸಮಿತಿ ಅಧ್ಯಕ್ಷ ಎಂ.ಎ. ಬೇಬಿ, ನಿವೃತ್ತ ನ್ಯಾಯಮೂರ್ತಿ ಎಚ್.ಎಸ್. ನಾಗಮೋಹನ ದಾಸ್, ದಲಿತ ಹಕ್ಕುಗಳ ಹೋರಾಟಗಾರ ಹಿರಿಯ ಮುಖಂಡ ಮಾವಳ್ಳಿ ಶಂಕರ್, ಹಿರಿಯ ಪತ್ರಕರ್ತೆ ಡಾ. ವಿಜಯಾ, ಲೇಖಕಿಯರ ಸಂಘದ ಅಧ್ಯಕ್ಷೆ ಎಚ್.ಎಲ್. ಪುಷ್ಪ, ಸಿಪಿಐ ಮುಖಂಡ ಸಿದ್ದನಗೌಡ ಪಾಟೀಲ್, ಹಿರಿಯ ವಿಧ್ವಾಂಸ ಜಿ. ರಾಮಕೃಷ್ಣ, ಸಿಪಿಐಎಂಎಲ್‌‌ ನಾಯಕಿ ಮೈತ್ರೇಯಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಇದನ್ನೂ ಓದಿ: ಬಹುತ್ವ ನಾಶ ಮಾಡಲು ಹೊರಟವರಿಗೆ ‘ಚೆ’ ಅಭಿಮಾನಿಗಳು ಉತ್ತರಿಸುತ್ತೇವೆ: ಪ್ರೊ. ಬರಗೂರು ರಾಮಚಂದ್ರಪ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...