Homeಕರ್ನಾಟಕ‘ನನ್ನಪ್ಪ ಒಬ್ಬ ಪರಿಪೂರ್ಣ ಕಮ್ಯುನಿಸ್ಟ್’: ಕ್ರಾಂತಿಕಾರಿ ‘ಚೆ’ ಮಗಳು ಅಲಿಡಾ ಗುವೆರಾ

‘ನನ್ನಪ್ಪ ಒಬ್ಬ ಪರಿಪೂರ್ಣ ಕಮ್ಯುನಿಸ್ಟ್’: ಕ್ರಾಂತಿಕಾರಿ ‘ಚೆ’ ಮಗಳು ಅಲಿಡಾ ಗುವೆರಾ

- Advertisement -
- Advertisement -

‘ಚೆ’ ಎಷ್ಟು ಕ್ರಾಂತಿಕಾರಿಯು ಅಷ್ಟೆ ರೊಮ್ಯಾಂಟಿಕ್ ಕೂಡಾ ಆಗಿದ್ದರು. ಮನುಕುಲವನ್ನು ಪ್ರೀತಿಸುವ ಸಾಮರ್ಥ್ಯ ಇದ್ದರೆ ಮಾತ್ರ ಅವರು ಸಮರ್ಥ ವ್ಯಕ್ತಿ ಎಂದೆಣಿಸಿಕೊಳ್ಳಬಹುದು. ನನ್ನಪ್ಪ ಒಬ್ಬ ಪರಿಪೂರ್ಣ ಕಮ್ಯುನಿಸ್ಟ್ ಎಂದು ಕ್ರಾಂತಿಕಾರಿ ಚೆ ಗೆವಾರ ಅವರ ಮಗಳು, ಮಕ್ಕಳ ವೈದ್ಯೆ, ಮಾನವ ಹಕ್ಕುಗಳ ಹೋರಾಟಗಾರ್ತಿ ಡಾ. ಅಲಿಡಾ ಗೆವಾರ ಅಭಿಪ್ರಾಯಪಟ್ಟರು. ಅವರು ಗುರುವಾರ ಸಂಜೆ ಬೆಂಗಳೂರಿನಲ್ಲಿ ನಡೆದ ‘ಪ್ರಗತಿಪರ ಸಂಘಟನೆಗಳು’ ಹಾಗೂ ‘ಕ್ಯೂಬಾ ಸೌಹಾರ್ದತಾ ಸಮಿತಿ’ ಆಯೋಜಿಸಿದ್ದ ‘ನಾಗರೀಕ ಸನ್ಮಾನ’ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.

ತಂದೆ ಚೆ ಗೆವೆರಾ ಅವರ ಒಡನಾಟವನ್ನು ಸ್ಮರಿಸಿದ ಅಲಿಡಾ ಗುವೆರಾ,“ನನ್ನ ತಂದೆ ಕವನಗಳೆಂದರೆ ಬಹಳ ಪ್ರೀತಿ. ಕವಿತೆಗಳನ್ನು ಹಾಡುತ್ತಿದ್ದರು ಮತ್ತು ಬರೆಯುತ್ತಿದ್ದರು. ಅವರ ಬರಹಗಳಿಗೆ ಅವರೇ ವಿಮರ್ಶಕರೂ ಆಗಿರುತ್ತಿದ್ದರು. ಹಾಗಾಗಿ ಅವರು ಅವರೇ ಬರೆದ ಕವಿತೆಗಳನ್ನು ಓದುತ್ತಿರಲಿಲ್ಲ. ಆದರೆ ರಾತ್ರಿ ಹೊತ್ತಿನಲ್ಲಿ ನನ್ನ ತಾಯಿಗಾಗಿ ನನ್ನ ತಂದೆ ಚೆ ಗುವೆರಾ ಕವಿತೆಗಳನ್ನು ಓದುತ್ತಿದ್ದರು. ಅಪ್ಪ ಕ್ರಾಂತಿಗಾಗಿ ಕಾಂಗೋಗೆ ಹೊರಡುವಾಗ ನನ್ನ ತಾಯಿಗಾಗಿ ಅವರೇ ವಾಚನ ಮಾಡಿದ ಕವನಗಳನ್ನು ರೆಕಾರ್ಡ್ ಮಾಡಿ ಕೊಟ್ಟು ಹೋಗಿದ್ದರು” ಎಂದು ತಂದೆಯನ್ನು ನೆನಪಿಸಿಕೊಂಡರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನಿಜವಾದ ಕ್ರಾಂತಿಯಲ್ಲಿ ಯಾವತ್ತೂ ಕೂಡಾ ಪುರುಷ ಮತ್ತು‌ ಮಹಿಳೆ ಸಮಾನವಾಗಿ ಒಳಗೊಂಡಿರಬೇಕು. ಕ್ರಾಂತಿಯಲ್ಲಿ ಪುರುಷ ಮತ್ತು ಮಹಿಳೆಯರ ಸಮಾನ ಪಾಲುದಾರಿಕೆ ಇರಬೇಕು ಎಂದು ತಂದೆ ಚೆಗುವೆರಾ ನಂಬಿದ್ದರು” ಎಂದು ಅವರು ಹೇಳಿದರು.

ಸದ್ಯದ ಕ್ಯೂಬಾ ಸ್ಥಿತಿಗಳನ್ನು ವಿವರಿಸಿದ ಅವರು,“ಕೋವಿಡ್ ಸಾಂಕ್ರಾಮಿಕದಿಂದಾಗಿ ಕಳೆದ ಎರಡು ವರ್ಷಗಳಿಂದ ಕ್ಯೂಬಾ ದೊಡ್ಡ ಪ್ರಮಾಣದಲ್ಲಿ ಅರ್ಥಿಕ ಸಂಕಷ್ಟವನ್ನು ಎದುರಿಸುತ್ತಿದೆ. ಸಂಪನ್ಮೂಲಗಳ ಕೊರತೆ ಎದುರಾಗಿದೆ. ಅಲ್ಲಿನ ಸರ್ಕಾರ ಚೇತರಿಕೆಗಾಗಿ ಶ್ರಮಿಸುತ್ತಿದೆ” ಎಂದು ತಿಳಿಸಿದರು.

“ಚೆ ಗುವೆರಾ ಎಷ್ಟು ಕ್ರಾಂತಿಕಾರಿಯೋ ಅಷ್ಟೆ ರೊಮ್ಯಾಂಟಿಕ್ ಕೂಡಾ ಆಗಿದ್ದರು. ಹೇಗೆ ಪ್ರೀತಿಸಬೇಕು ಎಂದು ಅವರು ತಿಳಿದಿದ್ದರು. ಹೇಗೆ ಒಬ್ಬ ವ್ಯಕ್ತಿ ತನ್ನ ಮಗಳು ಮತ್ತು ಪತ್ನಿಯ ಜೊತೆ ಬದುಕುತ್ತಲೇ, ಅವರನ್ನೂ ಕ್ರಾಂತಿಯ ಭಾಗವಾಗಿಸಿಕೊಂಡು ಜಗತ್ತಿಗಾಗಿ ಹೇಗೆ ಹೋರಾಡಬೇಕು ಎಂದು ತಿಳಿಸಿಕೊಟ್ಟರು. ಮನುಕುಲವನ್ನು ಪ್ರೀತಿಸುವ ಸಾಮರ್ಥ್ಯ ಇದ್ದರೆ ಮಾತ್ರ ಅವರು ಸಮರ್ಥ ವ್ಯಕ್ತಿ. ನನ್ನಪ್ಪ ಚೆಗುವೆರಾ ಒಬ್ಬ ಪರಿಪೂರ್ಣ ಕಮ್ಯುನಿಸ್ಟ್” ಎಂದು ಅವರು ಹೆಮ್ಮೆಪಟ್ಟುಕೊಂಡರು

“ನಾವು ಮಾತನಾಡುವಾಗ ಹೆಚ್ಚು ಜಾಗರೂಕರಾಗಿರಬೇಕು. ಸರಿಯಾದುದನ್ನೇ ಹೇಳಿದರೂ ಹೇಗೆ ಹೇಳಬೇಕು ಎಂಬ ಬಗ್ಗೆ ಹೆಚ್ಚು ಜಾಗರೂಕರಾಗಿರಬೇಕು. ಮಾಹಿತಿಗಳ ತಿರುಚುವಿಕೆ ಮತ್ತು ತಪ್ಪಾಗಿ ಪ್ರಸಾರ ಮಾಡುವಿಕೆಯೂ ಈಗಿನ ಮನುಕುಲವನ್ನು ಕಾಡುತ್ತಿರುವ ದೊಡ್ಡ ಸಮಸ್ಯೆಗಳಲ್ಲಿ ಒಂದು” ಎಂದು ಹೇಳಿದ ಅವರು ‘ಚೆ’ ಹೇಳದ ಮಾತುಗಳನ್ನು ಅವರ ಹೆಸರಿನಲ್ಲಿ ಹರಿದಾಡಿದ ಘಟನೆಯೊಂದನ್ನು ಹಂಚಿಕೊಂಡರು.

“ಭಾರತ ಮತ್ತು ಕ್ಯೂಬಾ ಭಾವನಾತ್ಮಕವಾಗಿ ದೂರವೇನಿಲ್ಲ. ಭಾರತದ ಜನರು ಕ್ಯೂಬಾ ಬೆಂಬಲಕ್ಕೆ ನಿಂತಿದ್ದರು. ಈಗಲೂ ಭಾರತ-ಕ್ಯೂಬಾ ಜೊತೆಯಲ್ಲೇ ಇದ್ದೇವೆ. ಇದೇ ಭಾರತ-ಕ್ಯೂಬಾ ಸೌಂದರ್ಯ. ‘ಭಾರತ-ಕ್ಯೂಬಾ ಭಾವನಾತ್ಮಕ ಒಗ್ಗಟ್ಟು’ ಎನ್ನುವುದು ಮಾನವತೆಯ ಸೌಂದರ್ಯವಾಗಿದೆ ಎಂದು ನಾನು ನಂಬಿದ್ದೇನೆ” ಎಂದು ಅವರು ಹೇಳಿದರು.

“ಎರಡು ವರ್ಷ ಕೊರೋನಾ ಸಾಂಕ್ರಾಮಿಕ ರೋಗದಿಂದ ನಾವು ಕಷ್ಟಕ್ಕೀಡಾದೆವು. ಕ್ಯೂಬಾ ಆಗ ಆರ್ಥಿಕತೆಯಿಂದಲೂ ಬಳಲಿತ್ತು. ಆದರೆ ನಾವು ಜನರ ಬದುಕನ್ನು ರಕ್ಷಣೆ ಮಾಡಲೇಬೇಕಿತ್ತು ಮತ್ತು ಅದನ್ನು ನಾವು ಮಾಡಿದೆವು ಕೂಡ. ಗಂಭೀರ ಆರ್ಥಿಕ‌ ಸಮಸ್ಯೆ ಎದುರಾದಾಗಲೂ ಅದನ್ನು ನಿಭಾಯಿಸಿದೆವು. ನಾವು ಬಹಿಷ್ಕಾರದ ಬಗ್ಗೆ ಸುಲಭವಾಗಿ ಮಾತಾಡಬಹುದು‌. ಆದರೆ ಬಹಿಷ್ಕಾರವನ್ನೇ ಬದುಕುವುದು ಅಷ್ಟು ಸುಲಭವಲ್ಲ. ನಮ್ಮಲ್ಲಿದ್ದ ಎಲ್ಲಾ ಅನುದಾನವನ್ನು ನಾವು ನಾಗರಿಕರಿಗಾಗಿ ಬಳಸಿದ್ದೇವೆ” ಎಂದು ತಿಳಿಸಿದರು.

“ಜಗತ್ತಿನ ದುರಂತ ಏನೆಂದರೆ ಎಲ್ಲಾ ಜೀವರಕ್ಷಕ ಔಷಧಿಗಳ ಪೇಟೆಂಟ್ ಅಮೇರಿಕಾದ ಬಳಿ ಇದೆ. ನಾವು ಹಣ ಕೊಟ್ಟರೂ ಅಮೇರಿಕಾ ನಮಗೆ ಔಷಧಿಗಳನ್ನು ಕೊಡುವುದಿಲ್ಲ. ಬೇರೆ ಯಾರಾದರೂ ಕೊಂಡು, ಅವರ ಬಳಿ ನಾವು ಕೊಂಡರೆ ಅವರಿಗೂ ಅಮೇರಿಕಾ ತೊಂದರೆ ಕೊಡುತ್ತದೆ. ಅದಕ್ಕೆ ನಾವು ಉಪಾಯವಾಗಿ ಕನಿಷ್ಠ ಐದು ದೇಶದ ಕೈದಾಟಿದ ಮೇಲೆ ಅವರಿಂದ ನಾವು ಔಷಧಿ ಕೊಳ್ಳುವ ವ್ಯವಸ್ಥೆ ಮಾಡಿದೆವು. ಆಗ ಔಷದಿಯ ಬೆಲೆ ಐದು ಪಟ್ಟು ಹೆಚ್ಚಾಗುತ್ತದೆ. ಇಷ್ಟಾದರೂ ನಾವು ನಮ್ಮ ಜನರಿಗೆ ಸಂಪೂರ್ಣ ಉಚಿತವಾದ ವೈದ್ಯಕೀಯ ಸೌಲಭ್ಯ ಕೊಡುತ್ತೇವೆ” ಎಂದು ಅವರು ಹೇಳಿದರು.

“ನಮ್ಮ ವಿಜ್ಞಾನಿಗಳು ಕ್ಯೂಬಾದಲ್ಲಿ ಒಟ್ಟು ಐದು ಬಗೆಯ ಕೋವಿಡ್ ವ್ಯಾಕ್ಸಿನ್‌ಗಳನ್ನು ಕಂಡುಹಿಡಿದರು. ಆದರೆ ಅದಕ್ಕೆ ಬೇಕಾದ ಸಿರಿಂಜ್‌ಗಳ ಮೇಲೂ ಅಮೇರಿಕಾ ನಿರ್ಬಂಧ ಹೇರಿತ್ತು. ಕಡೆಗೆ ನಾವು ಮೂಗಿನ ಹೊಳ್ಳೆಗಳ ಮೂಲಕ ವ್ಯಾಕ್ಸಿನ್ ಅನ್ನು ಜನರಿಗೆ ನೀಡಿ ಯಶಸ್ಸು ಗಳಿಸಿದೆವು. ಇದೀಗ ಕ್ಯೂಬಾ ಮತ್ತೊಂದು ಹೊಸ ವ್ಯಾಕ್ಸಿನ್ ಕಂಡು ಹಿಡಿದಿದ್ದು, ಅದನ್ನೂ ಕೂಡಾ ಮೂಗಿನ ಮೂಲಕ ಕೊಡಲಾಗುತ್ತದೆ. ಹಾಗಾಗಿ ನಮಗೆ ಅಮೇರಿಕಾದ ಸಿರೀಂಜು ಅಗತ್ಯವಿಲ್ಲ” ಎಂದು ಹೇಳಿದರು.

“ಕ್ಯೂಬಾ ಜೊತೆಗೆ ಕೇರಳ ತನ್ನ ಬೆಂಬಲವನ್ನು ನೀಡಿತು. ಕ್ಯೂಬಾ ಒಂದು ದೇಶವಾಗಿ ಕೇರಳದ ಜೊತೆ ಜೊತೆಗೆ ಸಾಗುತ್ತಿದ್ದೇವೆ. ಇದಕ್ಕೆ ನಾವು ಒಗ್ಗಟ್ಟು ಎನ್ನುತ್ತೇವೆ. ಆಯುರ್ವೇದಿಕೆ ಮೆಡಿಸಿನ್ ಗಳನ್ನು ಕ್ಯೂಬಾದಲ್ಲಿ ಅಭಿವೃದ್ದಿಪಡಿಸಲು ಕೇರಳದ ಸಹಕಾರ ನೀಡಿದೆ. ಕೇರಳ ಮತ್ತು ಕ್ಯೂಬಾದ ಮನೋಧರ್ಮ ಒಂದೇ ಆಗಿದೆ. ಹಾಗಾಗಿ ಕೇರಳ ಮತ್ತು ಕ್ಯೂಬಾದಲ್ಲಿ ಒಂದೇ ರೀತಿಯ ಯೋಜನೆ ಮತ್ತು ಯೋಚನೆಗಳಿವೆ. ಕ್ಯೂಬಾ ಮತ್ತು ಕೇರಳದ ಈ ಸಂಬಂಧದಿಂದ ಜಗತ್ತು ಕಲಿಯುವಂತದ್ದು ಬಹಳ ಇದೆ” ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ, ಅಲಿಡಾ ಗೆವಾರ ಅವರ ಪುತ್ರಿ ಅರ್ಥಶಾಸ್ತ್ರಜ್ಞೆ ಎಸ್ತೆಫಾನಿಯಾ, ಹಿರಿಯ ಸಾಹಿತಿ ಪ್ರೊ. ಬರಗೂರು ರಾಮಚಂದ್ರಪ್ಪ, ಕೇರಳದ ಮಾಜಿ ಸಚಿವ, ಕ್ಯೂಬಾ ಸೌಹಾರ್ದ ಸಮಿತಿ ಅಧ್ಯಕ್ಷ ಎಂ.ಎ. ಬೇಬಿ, ನಿವೃತ್ತ ನ್ಯಾಯಮೂರ್ತಿ ಎಚ್.ಎಸ್. ನಾಗಮೋಹನ ದಾಸ್, ದಲಿತ ಹಕ್ಕುಗಳ ಹೋರಾಟಗಾರ ಹಿರಿಯ ಮುಖಂಡ ಮಾವಳ್ಳಿ ಶಂಕರ್, ಹಿರಿಯ ಪತ್ರಕರ್ತೆ ಡಾ. ವಿಜಯಾ, ಲೇಖಕಿಯರ ಸಂಘದ ಅಧ್ಯಕ್ಷೆ ಎಚ್.ಎಲ್. ಪುಷ್ಪ, ಸಿಪಿಐ ಮುಖಂಡ ಸಿದ್ದನಗೌಡ ಪಾಟೀಲ್, ಹಿರಿಯ ವಿಧ್ವಾಂಸ ಜಿ. ರಾಮಕೃಷ್ಣ, ಸಿಪಿಐಎಂಎಲ್‌‌ ನಾಯಕಿ ಮೈತ್ರೇಯಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಇದನ್ನೂ ಓದಿ: ಬಹುತ್ವ ನಾಶ ಮಾಡಲು ಹೊರಟವರಿಗೆ ‘ಚೆ’ ಅಭಿಮಾನಿಗಳು ಉತ್ತರಿಸುತ್ತೇವೆ: ಪ್ರೊ. ಬರಗೂರು ರಾಮಚಂದ್ರಪ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....