Homeಕರ್ನಾಟಕ‘ನನ್ನಪ್ಪ ಒಬ್ಬ ಪರಿಪೂರ್ಣ ಕಮ್ಯುನಿಸ್ಟ್’: ಕ್ರಾಂತಿಕಾರಿ ‘ಚೆ’ ಮಗಳು ಅಲಿಡಾ ಗುವೆರಾ

‘ನನ್ನಪ್ಪ ಒಬ್ಬ ಪರಿಪೂರ್ಣ ಕಮ್ಯುನಿಸ್ಟ್’: ಕ್ರಾಂತಿಕಾರಿ ‘ಚೆ’ ಮಗಳು ಅಲಿಡಾ ಗುವೆರಾ

- Advertisement -
- Advertisement -

‘ಚೆ’ ಎಷ್ಟು ಕ್ರಾಂತಿಕಾರಿಯು ಅಷ್ಟೆ ರೊಮ್ಯಾಂಟಿಕ್ ಕೂಡಾ ಆಗಿದ್ದರು. ಮನುಕುಲವನ್ನು ಪ್ರೀತಿಸುವ ಸಾಮರ್ಥ್ಯ ಇದ್ದರೆ ಮಾತ್ರ ಅವರು ಸಮರ್ಥ ವ್ಯಕ್ತಿ ಎಂದೆಣಿಸಿಕೊಳ್ಳಬಹುದು. ನನ್ನಪ್ಪ ಒಬ್ಬ ಪರಿಪೂರ್ಣ ಕಮ್ಯುನಿಸ್ಟ್ ಎಂದು ಕ್ರಾಂತಿಕಾರಿ ಚೆ ಗೆವಾರ ಅವರ ಮಗಳು, ಮಕ್ಕಳ ವೈದ್ಯೆ, ಮಾನವ ಹಕ್ಕುಗಳ ಹೋರಾಟಗಾರ್ತಿ ಡಾ. ಅಲಿಡಾ ಗೆವಾರ ಅಭಿಪ್ರಾಯಪಟ್ಟರು. ಅವರು ಗುರುವಾರ ಸಂಜೆ ಬೆಂಗಳೂರಿನಲ್ಲಿ ನಡೆದ ‘ಪ್ರಗತಿಪರ ಸಂಘಟನೆಗಳು’ ಹಾಗೂ ‘ಕ್ಯೂಬಾ ಸೌಹಾರ್ದತಾ ಸಮಿತಿ’ ಆಯೋಜಿಸಿದ್ದ ‘ನಾಗರೀಕ ಸನ್ಮಾನ’ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.

ತಂದೆ ಚೆ ಗೆವೆರಾ ಅವರ ಒಡನಾಟವನ್ನು ಸ್ಮರಿಸಿದ ಅಲಿಡಾ ಗುವೆರಾ,“ನನ್ನ ತಂದೆ ಕವನಗಳೆಂದರೆ ಬಹಳ ಪ್ರೀತಿ. ಕವಿತೆಗಳನ್ನು ಹಾಡುತ್ತಿದ್ದರು ಮತ್ತು ಬರೆಯುತ್ತಿದ್ದರು. ಅವರ ಬರಹಗಳಿಗೆ ಅವರೇ ವಿಮರ್ಶಕರೂ ಆಗಿರುತ್ತಿದ್ದರು. ಹಾಗಾಗಿ ಅವರು ಅವರೇ ಬರೆದ ಕವಿತೆಗಳನ್ನು ಓದುತ್ತಿರಲಿಲ್ಲ. ಆದರೆ ರಾತ್ರಿ ಹೊತ್ತಿನಲ್ಲಿ ನನ್ನ ತಾಯಿಗಾಗಿ ನನ್ನ ತಂದೆ ಚೆ ಗುವೆರಾ ಕವಿತೆಗಳನ್ನು ಓದುತ್ತಿದ್ದರು. ಅಪ್ಪ ಕ್ರಾಂತಿಗಾಗಿ ಕಾಂಗೋಗೆ ಹೊರಡುವಾಗ ನನ್ನ ತಾಯಿಗಾಗಿ ಅವರೇ ವಾಚನ ಮಾಡಿದ ಕವನಗಳನ್ನು ರೆಕಾರ್ಡ್ ಮಾಡಿ ಕೊಟ್ಟು ಹೋಗಿದ್ದರು” ಎಂದು ತಂದೆಯನ್ನು ನೆನಪಿಸಿಕೊಂಡರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನಿಜವಾದ ಕ್ರಾಂತಿಯಲ್ಲಿ ಯಾವತ್ತೂ ಕೂಡಾ ಪುರುಷ ಮತ್ತು‌ ಮಹಿಳೆ ಸಮಾನವಾಗಿ ಒಳಗೊಂಡಿರಬೇಕು. ಕ್ರಾಂತಿಯಲ್ಲಿ ಪುರುಷ ಮತ್ತು ಮಹಿಳೆಯರ ಸಮಾನ ಪಾಲುದಾರಿಕೆ ಇರಬೇಕು ಎಂದು ತಂದೆ ಚೆಗುವೆರಾ ನಂಬಿದ್ದರು” ಎಂದು ಅವರು ಹೇಳಿದರು.

ಸದ್ಯದ ಕ್ಯೂಬಾ ಸ್ಥಿತಿಗಳನ್ನು ವಿವರಿಸಿದ ಅವರು,“ಕೋವಿಡ್ ಸಾಂಕ್ರಾಮಿಕದಿಂದಾಗಿ ಕಳೆದ ಎರಡು ವರ್ಷಗಳಿಂದ ಕ್ಯೂಬಾ ದೊಡ್ಡ ಪ್ರಮಾಣದಲ್ಲಿ ಅರ್ಥಿಕ ಸಂಕಷ್ಟವನ್ನು ಎದುರಿಸುತ್ತಿದೆ. ಸಂಪನ್ಮೂಲಗಳ ಕೊರತೆ ಎದುರಾಗಿದೆ. ಅಲ್ಲಿನ ಸರ್ಕಾರ ಚೇತರಿಕೆಗಾಗಿ ಶ್ರಮಿಸುತ್ತಿದೆ” ಎಂದು ತಿಳಿಸಿದರು.

“ಚೆ ಗುವೆರಾ ಎಷ್ಟು ಕ್ರಾಂತಿಕಾರಿಯೋ ಅಷ್ಟೆ ರೊಮ್ಯಾಂಟಿಕ್ ಕೂಡಾ ಆಗಿದ್ದರು. ಹೇಗೆ ಪ್ರೀತಿಸಬೇಕು ಎಂದು ಅವರು ತಿಳಿದಿದ್ದರು. ಹೇಗೆ ಒಬ್ಬ ವ್ಯಕ್ತಿ ತನ್ನ ಮಗಳು ಮತ್ತು ಪತ್ನಿಯ ಜೊತೆ ಬದುಕುತ್ತಲೇ, ಅವರನ್ನೂ ಕ್ರಾಂತಿಯ ಭಾಗವಾಗಿಸಿಕೊಂಡು ಜಗತ್ತಿಗಾಗಿ ಹೇಗೆ ಹೋರಾಡಬೇಕು ಎಂದು ತಿಳಿಸಿಕೊಟ್ಟರು. ಮನುಕುಲವನ್ನು ಪ್ರೀತಿಸುವ ಸಾಮರ್ಥ್ಯ ಇದ್ದರೆ ಮಾತ್ರ ಅವರು ಸಮರ್ಥ ವ್ಯಕ್ತಿ. ನನ್ನಪ್ಪ ಚೆಗುವೆರಾ ಒಬ್ಬ ಪರಿಪೂರ್ಣ ಕಮ್ಯುನಿಸ್ಟ್” ಎಂದು ಅವರು ಹೆಮ್ಮೆಪಟ್ಟುಕೊಂಡರು

“ನಾವು ಮಾತನಾಡುವಾಗ ಹೆಚ್ಚು ಜಾಗರೂಕರಾಗಿರಬೇಕು. ಸರಿಯಾದುದನ್ನೇ ಹೇಳಿದರೂ ಹೇಗೆ ಹೇಳಬೇಕು ಎಂಬ ಬಗ್ಗೆ ಹೆಚ್ಚು ಜಾಗರೂಕರಾಗಿರಬೇಕು. ಮಾಹಿತಿಗಳ ತಿರುಚುವಿಕೆ ಮತ್ತು ತಪ್ಪಾಗಿ ಪ್ರಸಾರ ಮಾಡುವಿಕೆಯೂ ಈಗಿನ ಮನುಕುಲವನ್ನು ಕಾಡುತ್ತಿರುವ ದೊಡ್ಡ ಸಮಸ್ಯೆಗಳಲ್ಲಿ ಒಂದು” ಎಂದು ಹೇಳಿದ ಅವರು ‘ಚೆ’ ಹೇಳದ ಮಾತುಗಳನ್ನು ಅವರ ಹೆಸರಿನಲ್ಲಿ ಹರಿದಾಡಿದ ಘಟನೆಯೊಂದನ್ನು ಹಂಚಿಕೊಂಡರು.

“ಭಾರತ ಮತ್ತು ಕ್ಯೂಬಾ ಭಾವನಾತ್ಮಕವಾಗಿ ದೂರವೇನಿಲ್ಲ. ಭಾರತದ ಜನರು ಕ್ಯೂಬಾ ಬೆಂಬಲಕ್ಕೆ ನಿಂತಿದ್ದರು. ಈಗಲೂ ಭಾರತ-ಕ್ಯೂಬಾ ಜೊತೆಯಲ್ಲೇ ಇದ್ದೇವೆ. ಇದೇ ಭಾರತ-ಕ್ಯೂಬಾ ಸೌಂದರ್ಯ. ‘ಭಾರತ-ಕ್ಯೂಬಾ ಭಾವನಾತ್ಮಕ ಒಗ್ಗಟ್ಟು’ ಎನ್ನುವುದು ಮಾನವತೆಯ ಸೌಂದರ್ಯವಾಗಿದೆ ಎಂದು ನಾನು ನಂಬಿದ್ದೇನೆ” ಎಂದು ಅವರು ಹೇಳಿದರು.

“ಎರಡು ವರ್ಷ ಕೊರೋನಾ ಸಾಂಕ್ರಾಮಿಕ ರೋಗದಿಂದ ನಾವು ಕಷ್ಟಕ್ಕೀಡಾದೆವು. ಕ್ಯೂಬಾ ಆಗ ಆರ್ಥಿಕತೆಯಿಂದಲೂ ಬಳಲಿತ್ತು. ಆದರೆ ನಾವು ಜನರ ಬದುಕನ್ನು ರಕ್ಷಣೆ ಮಾಡಲೇಬೇಕಿತ್ತು ಮತ್ತು ಅದನ್ನು ನಾವು ಮಾಡಿದೆವು ಕೂಡ. ಗಂಭೀರ ಆರ್ಥಿಕ‌ ಸಮಸ್ಯೆ ಎದುರಾದಾಗಲೂ ಅದನ್ನು ನಿಭಾಯಿಸಿದೆವು. ನಾವು ಬಹಿಷ್ಕಾರದ ಬಗ್ಗೆ ಸುಲಭವಾಗಿ ಮಾತಾಡಬಹುದು‌. ಆದರೆ ಬಹಿಷ್ಕಾರವನ್ನೇ ಬದುಕುವುದು ಅಷ್ಟು ಸುಲಭವಲ್ಲ. ನಮ್ಮಲ್ಲಿದ್ದ ಎಲ್ಲಾ ಅನುದಾನವನ್ನು ನಾವು ನಾಗರಿಕರಿಗಾಗಿ ಬಳಸಿದ್ದೇವೆ” ಎಂದು ತಿಳಿಸಿದರು.

“ಜಗತ್ತಿನ ದುರಂತ ಏನೆಂದರೆ ಎಲ್ಲಾ ಜೀವರಕ್ಷಕ ಔಷಧಿಗಳ ಪೇಟೆಂಟ್ ಅಮೇರಿಕಾದ ಬಳಿ ಇದೆ. ನಾವು ಹಣ ಕೊಟ್ಟರೂ ಅಮೇರಿಕಾ ನಮಗೆ ಔಷಧಿಗಳನ್ನು ಕೊಡುವುದಿಲ್ಲ. ಬೇರೆ ಯಾರಾದರೂ ಕೊಂಡು, ಅವರ ಬಳಿ ನಾವು ಕೊಂಡರೆ ಅವರಿಗೂ ಅಮೇರಿಕಾ ತೊಂದರೆ ಕೊಡುತ್ತದೆ. ಅದಕ್ಕೆ ನಾವು ಉಪಾಯವಾಗಿ ಕನಿಷ್ಠ ಐದು ದೇಶದ ಕೈದಾಟಿದ ಮೇಲೆ ಅವರಿಂದ ನಾವು ಔಷಧಿ ಕೊಳ್ಳುವ ವ್ಯವಸ್ಥೆ ಮಾಡಿದೆವು. ಆಗ ಔಷದಿಯ ಬೆಲೆ ಐದು ಪಟ್ಟು ಹೆಚ್ಚಾಗುತ್ತದೆ. ಇಷ್ಟಾದರೂ ನಾವು ನಮ್ಮ ಜನರಿಗೆ ಸಂಪೂರ್ಣ ಉಚಿತವಾದ ವೈದ್ಯಕೀಯ ಸೌಲಭ್ಯ ಕೊಡುತ್ತೇವೆ” ಎಂದು ಅವರು ಹೇಳಿದರು.

“ನಮ್ಮ ವಿಜ್ಞಾನಿಗಳು ಕ್ಯೂಬಾದಲ್ಲಿ ಒಟ್ಟು ಐದು ಬಗೆಯ ಕೋವಿಡ್ ವ್ಯಾಕ್ಸಿನ್‌ಗಳನ್ನು ಕಂಡುಹಿಡಿದರು. ಆದರೆ ಅದಕ್ಕೆ ಬೇಕಾದ ಸಿರಿಂಜ್‌ಗಳ ಮೇಲೂ ಅಮೇರಿಕಾ ನಿರ್ಬಂಧ ಹೇರಿತ್ತು. ಕಡೆಗೆ ನಾವು ಮೂಗಿನ ಹೊಳ್ಳೆಗಳ ಮೂಲಕ ವ್ಯಾಕ್ಸಿನ್ ಅನ್ನು ಜನರಿಗೆ ನೀಡಿ ಯಶಸ್ಸು ಗಳಿಸಿದೆವು. ಇದೀಗ ಕ್ಯೂಬಾ ಮತ್ತೊಂದು ಹೊಸ ವ್ಯಾಕ್ಸಿನ್ ಕಂಡು ಹಿಡಿದಿದ್ದು, ಅದನ್ನೂ ಕೂಡಾ ಮೂಗಿನ ಮೂಲಕ ಕೊಡಲಾಗುತ್ತದೆ. ಹಾಗಾಗಿ ನಮಗೆ ಅಮೇರಿಕಾದ ಸಿರೀಂಜು ಅಗತ್ಯವಿಲ್ಲ” ಎಂದು ಹೇಳಿದರು.

“ಕ್ಯೂಬಾ ಜೊತೆಗೆ ಕೇರಳ ತನ್ನ ಬೆಂಬಲವನ್ನು ನೀಡಿತು. ಕ್ಯೂಬಾ ಒಂದು ದೇಶವಾಗಿ ಕೇರಳದ ಜೊತೆ ಜೊತೆಗೆ ಸಾಗುತ್ತಿದ್ದೇವೆ. ಇದಕ್ಕೆ ನಾವು ಒಗ್ಗಟ್ಟು ಎನ್ನುತ್ತೇವೆ. ಆಯುರ್ವೇದಿಕೆ ಮೆಡಿಸಿನ್ ಗಳನ್ನು ಕ್ಯೂಬಾದಲ್ಲಿ ಅಭಿವೃದ್ದಿಪಡಿಸಲು ಕೇರಳದ ಸಹಕಾರ ನೀಡಿದೆ. ಕೇರಳ ಮತ್ತು ಕ್ಯೂಬಾದ ಮನೋಧರ್ಮ ಒಂದೇ ಆಗಿದೆ. ಹಾಗಾಗಿ ಕೇರಳ ಮತ್ತು ಕ್ಯೂಬಾದಲ್ಲಿ ಒಂದೇ ರೀತಿಯ ಯೋಜನೆ ಮತ್ತು ಯೋಚನೆಗಳಿವೆ. ಕ್ಯೂಬಾ ಮತ್ತು ಕೇರಳದ ಈ ಸಂಬಂಧದಿಂದ ಜಗತ್ತು ಕಲಿಯುವಂತದ್ದು ಬಹಳ ಇದೆ” ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ, ಅಲಿಡಾ ಗೆವಾರ ಅವರ ಪುತ್ರಿ ಅರ್ಥಶಾಸ್ತ್ರಜ್ಞೆ ಎಸ್ತೆಫಾನಿಯಾ, ಹಿರಿಯ ಸಾಹಿತಿ ಪ್ರೊ. ಬರಗೂರು ರಾಮಚಂದ್ರಪ್ಪ, ಕೇರಳದ ಮಾಜಿ ಸಚಿವ, ಕ್ಯೂಬಾ ಸೌಹಾರ್ದ ಸಮಿತಿ ಅಧ್ಯಕ್ಷ ಎಂ.ಎ. ಬೇಬಿ, ನಿವೃತ್ತ ನ್ಯಾಯಮೂರ್ತಿ ಎಚ್.ಎಸ್. ನಾಗಮೋಹನ ದಾಸ್, ದಲಿತ ಹಕ್ಕುಗಳ ಹೋರಾಟಗಾರ ಹಿರಿಯ ಮುಖಂಡ ಮಾವಳ್ಳಿ ಶಂಕರ್, ಹಿರಿಯ ಪತ್ರಕರ್ತೆ ಡಾ. ವಿಜಯಾ, ಲೇಖಕಿಯರ ಸಂಘದ ಅಧ್ಯಕ್ಷೆ ಎಚ್.ಎಲ್. ಪುಷ್ಪ, ಸಿಪಿಐ ಮುಖಂಡ ಸಿದ್ದನಗೌಡ ಪಾಟೀಲ್, ಹಿರಿಯ ವಿಧ್ವಾಂಸ ಜಿ. ರಾಮಕೃಷ್ಣ, ಸಿಪಿಐಎಂಎಲ್‌‌ ನಾಯಕಿ ಮೈತ್ರೇಯಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಇದನ್ನೂ ಓದಿ: ಬಹುತ್ವ ನಾಶ ಮಾಡಲು ಹೊರಟವರಿಗೆ ‘ಚೆ’ ಅಭಿಮಾನಿಗಳು ಉತ್ತರಿಸುತ್ತೇವೆ: ಪ್ರೊ. ಬರಗೂರು ರಾಮಚಂದ್ರಪ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...