Homeಅಂತರಾಷ್ಟ್ರೀಯ’ಮೈ ಫ್ರೆಂಡ್ ಭಾರತವನ್ನಷ್ಟೇ ಹೊಲಸು ಎಂದರು; ನನ್ನನ್ನು ಇನ್ನೂ ಪ್ರೀತಿಸುತ್ತಿದ್ದಾರೆ’

’ಮೈ ಫ್ರೆಂಡ್ ಭಾರತವನ್ನಷ್ಟೇ ಹೊಲಸು ಎಂದರು; ನನ್ನನ್ನು ಇನ್ನೂ ಪ್ರೀತಿಸುತ್ತಿದ್ದಾರೆ’

ಭಾರತವನ್ನು ’ಹೊಲಸು’ ಎಂದು ಕರೆದ ಡೊನಾಲ್ಡ್ ಟ್ರಂಪ್ ವಿರುದ್ದ ಭಾರತೀಯರ ಆಕ್ರೋಶ

- Advertisement -
- Advertisement -

ಮುಂದಿನ ತಿಂಗಳು ಅಮೆರಿಕಾದಲ್ಲಿ ನಡೆಯಲಿರುವ ಚುನಾವಣೆಯ ಹಿನ್ನಲೆಯಲ್ಲಿ ನಡೆದ ಅಧ್ಯಕ್ಷೀಯ ಸಂವಾದದ ಮಧ್ಯೆ ಅಮೆರಿಕಾ ಅಧ್ಯಕ್ಷ ಟೊನಾಲ್ಡ್‌ ಟ್ರಂಪ್, “ಭಾರತದ ಕಡೆ ನೋಡಿ, ಅದು ತುಂಬಾ ಹೊಲಸಾಗಿದೆ” ಎಂದು ಹೇಳಿದ್ದಾರೆ.

“ಚೀನಾ, ರಷ್ಯಾ, ಭಾರತವನ್ನು ನೋಡಿ. ಆ ದೇಶಗಳು ಎಷ್ಟು ಹೊಲಸಾಗಿವೆ. ಭಾರತದಲ್ಲಂತೂ ವಾಯು ಮಾಲಿನ್ಯ ಮಿತಿಮೀರಿದೆ. ವಾತಾವರಣದಲ್ಲಿನ ಬದಲಾವಣೆ ಅಧಿಕವಾಗುತ್ತಿದೆ. ಅದೊಂದು ಹೊಲಸಿನಿಂದ ತುಂಬಿರುವ ದೇಶ. ಇದೇ ಕಾರಣಕ್ಕೆ ನಾನು ಪ್ಯಾರಿಸ್ ಒಪ್ಪಂದದಿಂದ ಹೊರ ನಡೆದಿದ್ದೆ. ಏಕೆಂದರೆ ಇವರು ಪರಿಸರದ ಮೇಲೆ ಮಾಡುವ ಮಾರಕ ದಾಳಿಗೆ ನಾವು ಟ್ರಿಲಿಯನ್ ಡಾಲರ್‌ಗಳಷ್ಟು ನೀಡಬೇಕೆ? ನಾವು ಇಷ್ಟು ಅನುದಾನ ನೀಡಿದ್ದರೂ ಸಹ ನಮ್ಮನ್ನು ಅನ್ಯಾಯವಾಗಿ ನಡೆಸಿಕೊಳ್ಳಲಾಗಿತ್ತು. ಅದಕ್ಕಾಗಿಯೇ ನಾನು ಪ್ಯಾರಿಸ್ ಒಪ್ಪಂದದಿಂದ ಹೊರನಡೆದಿದ್ದೆ” ಎಂದು ಪ್ಯಾರಿಸ್ ಒಪ್ಪಂದದಿಂದ ಅಮೆರಿಕಾ ಹೊರನಡೆದಿದ್ದನ್ನು ಸಮರ್ಥಿಸಿಕೊಂಡಿದ್ದಾರೆ.

ಇದನ್ನೂ ಓದಿ: ನರೇಂದ್ರ ಮೋದಿ ಎದುರಲ್ಲೇ ಪಾಕ್ ಹೊಗಳಿದ ಡೊನಾಲ್ಡ್‌ ಟ್ರಂಪ್ : ವ್ಯಾಪಕ ಟ್ರೋಲ್‌

ಮಾಜಿ ಅಮೆರಿಕಾ ಅಧ್ಯಕ್ಷ ಬರಾಕ್ ಒಬಾಮ ಪ್ರಮುಖ ಪಾತ್ರ ವಹಿಸಿದ್ದ ಜಾಗತಿಕ ಒಪ್ಪಂದವಾದ 2015 ರ ಪ್ಯಾರಿಸ್ ಹವಾಮಾನ ಒಪ್ಪಂದದಿಂದ 2017 ರಲ್ಲಿ ಅಮೆರಿಕಾ ಹೊರಬಂದಿತ್ತು. ಪ್ಯಾರಿಸ್ ಹವಾಮಾನ ಒಪ್ಪಂದವು ಜಾಗತಿಕ ತಾಪಮಾನ ಏರಿಕೆಯನ್ನು ಎರಡು ಡಿಗ್ರಿ ಸೆಲ್ಸಿಯಸ್‌ಗಿಂತಲೂ ಕಡಿಮೆ ಮಾಡುವ ಗುರಿ ಹೊಂದಿದೆ.

 

ಅಮೆರಿಕ ಅಧ್ಯಕ್ಷರ ಹೇಳಿಕೆಗೆ ಭಾರತದಲ್ಲಿ ತೀವ್ರ ಖಂಡನೆ ವ್ಯಕ್ತವಾಗುತ್ತಿದ್ದು, ಅವರ ಹೇಳಿಕೆಗೆ ಖಂಡನೆ ವ್ಯಕ್ತಪಡಿಸುವಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಒತ್ತಾಯಿಸಲಾಗುತ್ತಿದೆ. ಕಾಂಗ್ರೆಸ್ ನ ಕಪಿಲ್ ಸಿಬಲ್ ಅಧ್ಯಕ್ಷ ಟ್ರಂಪ್ ಈ ಹಿಂದೆ ಟ್ರಂಪ್ ಭಾರತದ ಬಗ್ಗೆ ಮಾಡಿದ್ದ ಹೇಳಿಕೆಗಳನ್ನು ಮತ್ತೇ ನೆನಪಿಸಿದರು.

ಇದನ್ನೂ ಓದಿ: ಟ್ರಂಪ್ ಭೇಟಿ ಮತ್ತು ಸ್ಲಂ ಸುತ್ತಲಿನ ಗೋಡೆ; ಅಸಲಿಗೆ ಮೋದಿ ಪ್ರತಿನಿಧಿಸುತ್ತಿರುವ ಭಾರತ ಯಾವುದು?

ಪತ್ರಕರ್ತೆ ರಾಣಾ ಅಯೂಬ್ ಪ್ರಧಾನಿ ಮೋದಿಯ ಕುರಿತು ವ್ಯಂಗ್ಯವಾಗಿ ಪ್ರತಿಕ್ರಿಯಿಸಿದ್ದು, “ನನ್ನ ಸ್ನೇಹಿತ ಡೊನಾಲ್ಡ್ ಟ್ರಂಪ್ ಭಾರತವನ್ನಷ್ಟೇ ಹೊಲಸು ಎಂದು ಕರೆದಿದ್ದಾರೆ. ನನ್ನನ್ನು ಅವರು ಇನ್ನೂ ಪ್ರೀತಿಸುತ್ತಾರೆ ಎಂದು ನನಗೆ ಗೊತ್ತು” ಎಂದಿದ್ದಾರೆ. ಈ ಹಿಂದೆ ಪ್ರಧಾನಿ ನರೇಂದ್ರ ಮೋದಿ ಟ್ರಂಪ್ ಅವರನ್ನು “ನನ್ನ ಸ್ನೇಹಿತ” ಎಂದು ಹೇಳಿದ್ದರು.

 

ಶಿವಸೇನೆ ನಾಯಕಿ ಪ್ರಿಯಾಂಕಾ ಚತುರ್ವೇದಿ, ಟ್ರಂಪ್ ಟೀಕೆಗಳನ್ನು “ದುರದೃಷ್ಟಕರ” ಎಂದು ವಿಷಾದ ವ್ಯಕ್ತಪಡಿಸುತ್ತಾ, ಹವಾಮಾನ ಬದಲಾವಣೆಯ ಗುರಿಗಳಿಗೆ ಭಾರತ ಬದ್ಧವಾಗಿದೆ ಎಂದು ನೆನಪಿಸಿದರು.

 

ನವೆಂಬರ್ 3 ರಂದು ಅಮೆರಿಕಾದಲ್ಲಿ ಚುನಾವಣೆ ನಡೆಯಲಿದ್ದು, ಇದು ಎರಡನೇ ಮತ್ತು ಅಂತಿಮ ಅಧ್ಯಕ್ಷೀಯ ಸಂವಾದವಾಗಿದೆ. ಭಾರತ ಮತ್ತು ಚೀನಾದಂತಹ ದೇಶಗಳು ಹವಾಮಾನ ವೈಪರೀತ್ಯದ ಬಗ್ಗೆ ಸಾಕಷ್ಟು ಕೆಲಸ ಮಾಡುತ್ತಿಲ್ಲ ಎಂದು ಅಮೆರಿಕ ಅಧ್ಯಕ್ಷ ಪದೇ ಪದೇ ದೂಷಿಸುತ್ತಿದ್ದಾರೆ.

2018 ರ ಡಿಸೆಂಬರ್‌ನಲ್ಲಿ ಪ್ರಕಟವಾದ ಗ್ಲೋಬಲ್ ಕಾರ್ಬನ್ ಪ್ರಾಜೆಕ್ಟ್‌ನ ಪ್ರಕ್ಷೇಪಣದ ಪ್ರಕಾರ, 2017 ರಲ್ಲಿ ಜಾಗತಿಕವಾಗಿ ಹೊರಸೂಸುವ ಇಂಗಾಲದ ಡೈಆಕ್ಸೈಡ್‌ನಲ್ಲಿ 7% ರಷ್ಟು ಇಂಗಾಲವನ್ನು ಭಾರತ ಹೊರಸೂಸುತ್ತಿದ್ದು, ವಿಶ್ವದಲ್ಲಿ ನಾಲ್ಕನೇ ಸ್ಥಾನದಲ್ಲಿದೆ.

ಇದನ್ನೂ ಓದಿ: ದಾವೋಸ್‌ನಲ್ಲಿ ಮೋದಿ, ಟ್ರಂಪ್‌ ವಿರುದ್ಧ ವಾಗ್ದಾಳಿ ನಡೆಸಿದ ಬಿಲಿಯನೇರ್ ಜಾರ್ಜ್ ಸೊರೊಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...