Homeಅಂತರಾಷ್ಟ್ರೀಯ’ಮೈ ಫ್ರೆಂಡ್ ಭಾರತವನ್ನಷ್ಟೇ ಹೊಲಸು ಎಂದರು; ನನ್ನನ್ನು ಇನ್ನೂ ಪ್ರೀತಿಸುತ್ತಿದ್ದಾರೆ’

’ಮೈ ಫ್ರೆಂಡ್ ಭಾರತವನ್ನಷ್ಟೇ ಹೊಲಸು ಎಂದರು; ನನ್ನನ್ನು ಇನ್ನೂ ಪ್ರೀತಿಸುತ್ತಿದ್ದಾರೆ’

ಭಾರತವನ್ನು ’ಹೊಲಸು’ ಎಂದು ಕರೆದ ಡೊನಾಲ್ಡ್ ಟ್ರಂಪ್ ವಿರುದ್ದ ಭಾರತೀಯರ ಆಕ್ರೋಶ

- Advertisement -
- Advertisement -

ಮುಂದಿನ ತಿಂಗಳು ಅಮೆರಿಕಾದಲ್ಲಿ ನಡೆಯಲಿರುವ ಚುನಾವಣೆಯ ಹಿನ್ನಲೆಯಲ್ಲಿ ನಡೆದ ಅಧ್ಯಕ್ಷೀಯ ಸಂವಾದದ ಮಧ್ಯೆ ಅಮೆರಿಕಾ ಅಧ್ಯಕ್ಷ ಟೊನಾಲ್ಡ್‌ ಟ್ರಂಪ್, “ಭಾರತದ ಕಡೆ ನೋಡಿ, ಅದು ತುಂಬಾ ಹೊಲಸಾಗಿದೆ” ಎಂದು ಹೇಳಿದ್ದಾರೆ.

“ಚೀನಾ, ರಷ್ಯಾ, ಭಾರತವನ್ನು ನೋಡಿ. ಆ ದೇಶಗಳು ಎಷ್ಟು ಹೊಲಸಾಗಿವೆ. ಭಾರತದಲ್ಲಂತೂ ವಾಯು ಮಾಲಿನ್ಯ ಮಿತಿಮೀರಿದೆ. ವಾತಾವರಣದಲ್ಲಿನ ಬದಲಾವಣೆ ಅಧಿಕವಾಗುತ್ತಿದೆ. ಅದೊಂದು ಹೊಲಸಿನಿಂದ ತುಂಬಿರುವ ದೇಶ. ಇದೇ ಕಾರಣಕ್ಕೆ ನಾನು ಪ್ಯಾರಿಸ್ ಒಪ್ಪಂದದಿಂದ ಹೊರ ನಡೆದಿದ್ದೆ. ಏಕೆಂದರೆ ಇವರು ಪರಿಸರದ ಮೇಲೆ ಮಾಡುವ ಮಾರಕ ದಾಳಿಗೆ ನಾವು ಟ್ರಿಲಿಯನ್ ಡಾಲರ್‌ಗಳಷ್ಟು ನೀಡಬೇಕೆ? ನಾವು ಇಷ್ಟು ಅನುದಾನ ನೀಡಿದ್ದರೂ ಸಹ ನಮ್ಮನ್ನು ಅನ್ಯಾಯವಾಗಿ ನಡೆಸಿಕೊಳ್ಳಲಾಗಿತ್ತು. ಅದಕ್ಕಾಗಿಯೇ ನಾನು ಪ್ಯಾರಿಸ್ ಒಪ್ಪಂದದಿಂದ ಹೊರನಡೆದಿದ್ದೆ” ಎಂದು ಪ್ಯಾರಿಸ್ ಒಪ್ಪಂದದಿಂದ ಅಮೆರಿಕಾ ಹೊರನಡೆದಿದ್ದನ್ನು ಸಮರ್ಥಿಸಿಕೊಂಡಿದ್ದಾರೆ.

ಇದನ್ನೂ ಓದಿ: ನರೇಂದ್ರ ಮೋದಿ ಎದುರಲ್ಲೇ ಪಾಕ್ ಹೊಗಳಿದ ಡೊನಾಲ್ಡ್‌ ಟ್ರಂಪ್ : ವ್ಯಾಪಕ ಟ್ರೋಲ್‌

ಮಾಜಿ ಅಮೆರಿಕಾ ಅಧ್ಯಕ್ಷ ಬರಾಕ್ ಒಬಾಮ ಪ್ರಮುಖ ಪಾತ್ರ ವಹಿಸಿದ್ದ ಜಾಗತಿಕ ಒಪ್ಪಂದವಾದ 2015 ರ ಪ್ಯಾರಿಸ್ ಹವಾಮಾನ ಒಪ್ಪಂದದಿಂದ 2017 ರಲ್ಲಿ ಅಮೆರಿಕಾ ಹೊರಬಂದಿತ್ತು. ಪ್ಯಾರಿಸ್ ಹವಾಮಾನ ಒಪ್ಪಂದವು ಜಾಗತಿಕ ತಾಪಮಾನ ಏರಿಕೆಯನ್ನು ಎರಡು ಡಿಗ್ರಿ ಸೆಲ್ಸಿಯಸ್‌ಗಿಂತಲೂ ಕಡಿಮೆ ಮಾಡುವ ಗುರಿ ಹೊಂದಿದೆ.

 

ಅಮೆರಿಕ ಅಧ್ಯಕ್ಷರ ಹೇಳಿಕೆಗೆ ಭಾರತದಲ್ಲಿ ತೀವ್ರ ಖಂಡನೆ ವ್ಯಕ್ತವಾಗುತ್ತಿದ್ದು, ಅವರ ಹೇಳಿಕೆಗೆ ಖಂಡನೆ ವ್ಯಕ್ತಪಡಿಸುವಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಒತ್ತಾಯಿಸಲಾಗುತ್ತಿದೆ. ಕಾಂಗ್ರೆಸ್ ನ ಕಪಿಲ್ ಸಿಬಲ್ ಅಧ್ಯಕ್ಷ ಟ್ರಂಪ್ ಈ ಹಿಂದೆ ಟ್ರಂಪ್ ಭಾರತದ ಬಗ್ಗೆ ಮಾಡಿದ್ದ ಹೇಳಿಕೆಗಳನ್ನು ಮತ್ತೇ ನೆನಪಿಸಿದರು.

ಇದನ್ನೂ ಓದಿ: ಟ್ರಂಪ್ ಭೇಟಿ ಮತ್ತು ಸ್ಲಂ ಸುತ್ತಲಿನ ಗೋಡೆ; ಅಸಲಿಗೆ ಮೋದಿ ಪ್ರತಿನಿಧಿಸುತ್ತಿರುವ ಭಾರತ ಯಾವುದು?

ಪತ್ರಕರ್ತೆ ರಾಣಾ ಅಯೂಬ್ ಪ್ರಧಾನಿ ಮೋದಿಯ ಕುರಿತು ವ್ಯಂಗ್ಯವಾಗಿ ಪ್ರತಿಕ್ರಿಯಿಸಿದ್ದು, “ನನ್ನ ಸ್ನೇಹಿತ ಡೊನಾಲ್ಡ್ ಟ್ರಂಪ್ ಭಾರತವನ್ನಷ್ಟೇ ಹೊಲಸು ಎಂದು ಕರೆದಿದ್ದಾರೆ. ನನ್ನನ್ನು ಅವರು ಇನ್ನೂ ಪ್ರೀತಿಸುತ್ತಾರೆ ಎಂದು ನನಗೆ ಗೊತ್ತು” ಎಂದಿದ್ದಾರೆ. ಈ ಹಿಂದೆ ಪ್ರಧಾನಿ ನರೇಂದ್ರ ಮೋದಿ ಟ್ರಂಪ್ ಅವರನ್ನು “ನನ್ನ ಸ್ನೇಹಿತ” ಎಂದು ಹೇಳಿದ್ದರು.

 

ಶಿವಸೇನೆ ನಾಯಕಿ ಪ್ರಿಯಾಂಕಾ ಚತುರ್ವೇದಿ, ಟ್ರಂಪ್ ಟೀಕೆಗಳನ್ನು “ದುರದೃಷ್ಟಕರ” ಎಂದು ವಿಷಾದ ವ್ಯಕ್ತಪಡಿಸುತ್ತಾ, ಹವಾಮಾನ ಬದಲಾವಣೆಯ ಗುರಿಗಳಿಗೆ ಭಾರತ ಬದ್ಧವಾಗಿದೆ ಎಂದು ನೆನಪಿಸಿದರು.

 

ನವೆಂಬರ್ 3 ರಂದು ಅಮೆರಿಕಾದಲ್ಲಿ ಚುನಾವಣೆ ನಡೆಯಲಿದ್ದು, ಇದು ಎರಡನೇ ಮತ್ತು ಅಂತಿಮ ಅಧ್ಯಕ್ಷೀಯ ಸಂವಾದವಾಗಿದೆ. ಭಾರತ ಮತ್ತು ಚೀನಾದಂತಹ ದೇಶಗಳು ಹವಾಮಾನ ವೈಪರೀತ್ಯದ ಬಗ್ಗೆ ಸಾಕಷ್ಟು ಕೆಲಸ ಮಾಡುತ್ತಿಲ್ಲ ಎಂದು ಅಮೆರಿಕ ಅಧ್ಯಕ್ಷ ಪದೇ ಪದೇ ದೂಷಿಸುತ್ತಿದ್ದಾರೆ.

2018 ರ ಡಿಸೆಂಬರ್‌ನಲ್ಲಿ ಪ್ರಕಟವಾದ ಗ್ಲೋಬಲ್ ಕಾರ್ಬನ್ ಪ್ರಾಜೆಕ್ಟ್‌ನ ಪ್ರಕ್ಷೇಪಣದ ಪ್ರಕಾರ, 2017 ರಲ್ಲಿ ಜಾಗತಿಕವಾಗಿ ಹೊರಸೂಸುವ ಇಂಗಾಲದ ಡೈಆಕ್ಸೈಡ್‌ನಲ್ಲಿ 7% ರಷ್ಟು ಇಂಗಾಲವನ್ನು ಭಾರತ ಹೊರಸೂಸುತ್ತಿದ್ದು, ವಿಶ್ವದಲ್ಲಿ ನಾಲ್ಕನೇ ಸ್ಥಾನದಲ್ಲಿದೆ.

ಇದನ್ನೂ ಓದಿ: ದಾವೋಸ್‌ನಲ್ಲಿ ಮೋದಿ, ಟ್ರಂಪ್‌ ವಿರುದ್ಧ ವಾಗ್ದಾಳಿ ನಡೆಸಿದ ಬಿಲಿಯನೇರ್ ಜಾರ್ಜ್ ಸೊರೊಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...