Homeಅಂತರಾಷ್ಟ್ರೀಯ’ಮೈ ಫ್ರೆಂಡ್ ಭಾರತವನ್ನಷ್ಟೇ ಹೊಲಸು ಎಂದರು; ನನ್ನನ್ನು ಇನ್ನೂ ಪ್ರೀತಿಸುತ್ತಿದ್ದಾರೆ’

’ಮೈ ಫ್ರೆಂಡ್ ಭಾರತವನ್ನಷ್ಟೇ ಹೊಲಸು ಎಂದರು; ನನ್ನನ್ನು ಇನ್ನೂ ಪ್ರೀತಿಸುತ್ತಿದ್ದಾರೆ’

ಭಾರತವನ್ನು ’ಹೊಲಸು’ ಎಂದು ಕರೆದ ಡೊನಾಲ್ಡ್ ಟ್ರಂಪ್ ವಿರುದ್ದ ಭಾರತೀಯರ ಆಕ್ರೋಶ

- Advertisement -
- Advertisement -

ಮುಂದಿನ ತಿಂಗಳು ಅಮೆರಿಕಾದಲ್ಲಿ ನಡೆಯಲಿರುವ ಚುನಾವಣೆಯ ಹಿನ್ನಲೆಯಲ್ಲಿ ನಡೆದ ಅಧ್ಯಕ್ಷೀಯ ಸಂವಾದದ ಮಧ್ಯೆ ಅಮೆರಿಕಾ ಅಧ್ಯಕ್ಷ ಟೊನಾಲ್ಡ್‌ ಟ್ರಂಪ್, “ಭಾರತದ ಕಡೆ ನೋಡಿ, ಅದು ತುಂಬಾ ಹೊಲಸಾಗಿದೆ” ಎಂದು ಹೇಳಿದ್ದಾರೆ.

“ಚೀನಾ, ರಷ್ಯಾ, ಭಾರತವನ್ನು ನೋಡಿ. ಆ ದೇಶಗಳು ಎಷ್ಟು ಹೊಲಸಾಗಿವೆ. ಭಾರತದಲ್ಲಂತೂ ವಾಯು ಮಾಲಿನ್ಯ ಮಿತಿಮೀರಿದೆ. ವಾತಾವರಣದಲ್ಲಿನ ಬದಲಾವಣೆ ಅಧಿಕವಾಗುತ್ತಿದೆ. ಅದೊಂದು ಹೊಲಸಿನಿಂದ ತುಂಬಿರುವ ದೇಶ. ಇದೇ ಕಾರಣಕ್ಕೆ ನಾನು ಪ್ಯಾರಿಸ್ ಒಪ್ಪಂದದಿಂದ ಹೊರ ನಡೆದಿದ್ದೆ. ಏಕೆಂದರೆ ಇವರು ಪರಿಸರದ ಮೇಲೆ ಮಾಡುವ ಮಾರಕ ದಾಳಿಗೆ ನಾವು ಟ್ರಿಲಿಯನ್ ಡಾಲರ್‌ಗಳಷ್ಟು ನೀಡಬೇಕೆ? ನಾವು ಇಷ್ಟು ಅನುದಾನ ನೀಡಿದ್ದರೂ ಸಹ ನಮ್ಮನ್ನು ಅನ್ಯಾಯವಾಗಿ ನಡೆಸಿಕೊಳ್ಳಲಾಗಿತ್ತು. ಅದಕ್ಕಾಗಿಯೇ ನಾನು ಪ್ಯಾರಿಸ್ ಒಪ್ಪಂದದಿಂದ ಹೊರನಡೆದಿದ್ದೆ” ಎಂದು ಪ್ಯಾರಿಸ್ ಒಪ್ಪಂದದಿಂದ ಅಮೆರಿಕಾ ಹೊರನಡೆದಿದ್ದನ್ನು ಸಮರ್ಥಿಸಿಕೊಂಡಿದ್ದಾರೆ.

ಇದನ್ನೂ ಓದಿ: ನರೇಂದ್ರ ಮೋದಿ ಎದುರಲ್ಲೇ ಪಾಕ್ ಹೊಗಳಿದ ಡೊನಾಲ್ಡ್‌ ಟ್ರಂಪ್ : ವ್ಯಾಪಕ ಟ್ರೋಲ್‌

ಮಾಜಿ ಅಮೆರಿಕಾ ಅಧ್ಯಕ್ಷ ಬರಾಕ್ ಒಬಾಮ ಪ್ರಮುಖ ಪಾತ್ರ ವಹಿಸಿದ್ದ ಜಾಗತಿಕ ಒಪ್ಪಂದವಾದ 2015 ರ ಪ್ಯಾರಿಸ್ ಹವಾಮಾನ ಒಪ್ಪಂದದಿಂದ 2017 ರಲ್ಲಿ ಅಮೆರಿಕಾ ಹೊರಬಂದಿತ್ತು. ಪ್ಯಾರಿಸ್ ಹವಾಮಾನ ಒಪ್ಪಂದವು ಜಾಗತಿಕ ತಾಪಮಾನ ಏರಿಕೆಯನ್ನು ಎರಡು ಡಿಗ್ರಿ ಸೆಲ್ಸಿಯಸ್‌ಗಿಂತಲೂ ಕಡಿಮೆ ಮಾಡುವ ಗುರಿ ಹೊಂದಿದೆ.

 

ಅಮೆರಿಕ ಅಧ್ಯಕ್ಷರ ಹೇಳಿಕೆಗೆ ಭಾರತದಲ್ಲಿ ತೀವ್ರ ಖಂಡನೆ ವ್ಯಕ್ತವಾಗುತ್ತಿದ್ದು, ಅವರ ಹೇಳಿಕೆಗೆ ಖಂಡನೆ ವ್ಯಕ್ತಪಡಿಸುವಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಒತ್ತಾಯಿಸಲಾಗುತ್ತಿದೆ. ಕಾಂಗ್ರೆಸ್ ನ ಕಪಿಲ್ ಸಿಬಲ್ ಅಧ್ಯಕ್ಷ ಟ್ರಂಪ್ ಈ ಹಿಂದೆ ಟ್ರಂಪ್ ಭಾರತದ ಬಗ್ಗೆ ಮಾಡಿದ್ದ ಹೇಳಿಕೆಗಳನ್ನು ಮತ್ತೇ ನೆನಪಿಸಿದರು.

ಇದನ್ನೂ ಓದಿ: ಟ್ರಂಪ್ ಭೇಟಿ ಮತ್ತು ಸ್ಲಂ ಸುತ್ತಲಿನ ಗೋಡೆ; ಅಸಲಿಗೆ ಮೋದಿ ಪ್ರತಿನಿಧಿಸುತ್ತಿರುವ ಭಾರತ ಯಾವುದು?

ಪತ್ರಕರ್ತೆ ರಾಣಾ ಅಯೂಬ್ ಪ್ರಧಾನಿ ಮೋದಿಯ ಕುರಿತು ವ್ಯಂಗ್ಯವಾಗಿ ಪ್ರತಿಕ್ರಿಯಿಸಿದ್ದು, “ನನ್ನ ಸ್ನೇಹಿತ ಡೊನಾಲ್ಡ್ ಟ್ರಂಪ್ ಭಾರತವನ್ನಷ್ಟೇ ಹೊಲಸು ಎಂದು ಕರೆದಿದ್ದಾರೆ. ನನ್ನನ್ನು ಅವರು ಇನ್ನೂ ಪ್ರೀತಿಸುತ್ತಾರೆ ಎಂದು ನನಗೆ ಗೊತ್ತು” ಎಂದಿದ್ದಾರೆ. ಈ ಹಿಂದೆ ಪ್ರಧಾನಿ ನರೇಂದ್ರ ಮೋದಿ ಟ್ರಂಪ್ ಅವರನ್ನು “ನನ್ನ ಸ್ನೇಹಿತ” ಎಂದು ಹೇಳಿದ್ದರು.

 

ಶಿವಸೇನೆ ನಾಯಕಿ ಪ್ರಿಯಾಂಕಾ ಚತುರ್ವೇದಿ, ಟ್ರಂಪ್ ಟೀಕೆಗಳನ್ನು “ದುರದೃಷ್ಟಕರ” ಎಂದು ವಿಷಾದ ವ್ಯಕ್ತಪಡಿಸುತ್ತಾ, ಹವಾಮಾನ ಬದಲಾವಣೆಯ ಗುರಿಗಳಿಗೆ ಭಾರತ ಬದ್ಧವಾಗಿದೆ ಎಂದು ನೆನಪಿಸಿದರು.

 

ನವೆಂಬರ್ 3 ರಂದು ಅಮೆರಿಕಾದಲ್ಲಿ ಚುನಾವಣೆ ನಡೆಯಲಿದ್ದು, ಇದು ಎರಡನೇ ಮತ್ತು ಅಂತಿಮ ಅಧ್ಯಕ್ಷೀಯ ಸಂವಾದವಾಗಿದೆ. ಭಾರತ ಮತ್ತು ಚೀನಾದಂತಹ ದೇಶಗಳು ಹವಾಮಾನ ವೈಪರೀತ್ಯದ ಬಗ್ಗೆ ಸಾಕಷ್ಟು ಕೆಲಸ ಮಾಡುತ್ತಿಲ್ಲ ಎಂದು ಅಮೆರಿಕ ಅಧ್ಯಕ್ಷ ಪದೇ ಪದೇ ದೂಷಿಸುತ್ತಿದ್ದಾರೆ.

2018 ರ ಡಿಸೆಂಬರ್‌ನಲ್ಲಿ ಪ್ರಕಟವಾದ ಗ್ಲೋಬಲ್ ಕಾರ್ಬನ್ ಪ್ರಾಜೆಕ್ಟ್‌ನ ಪ್ರಕ್ಷೇಪಣದ ಪ್ರಕಾರ, 2017 ರಲ್ಲಿ ಜಾಗತಿಕವಾಗಿ ಹೊರಸೂಸುವ ಇಂಗಾಲದ ಡೈಆಕ್ಸೈಡ್‌ನಲ್ಲಿ 7% ರಷ್ಟು ಇಂಗಾಲವನ್ನು ಭಾರತ ಹೊರಸೂಸುತ್ತಿದ್ದು, ವಿಶ್ವದಲ್ಲಿ ನಾಲ್ಕನೇ ಸ್ಥಾನದಲ್ಲಿದೆ.

ಇದನ್ನೂ ಓದಿ: ದಾವೋಸ್‌ನಲ್ಲಿ ಮೋದಿ, ಟ್ರಂಪ್‌ ವಿರುದ್ಧ ವಾಗ್ದಾಳಿ ನಡೆಸಿದ ಬಿಲಿಯನೇರ್ ಜಾರ್ಜ್ ಸೊರೊಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...