ವಿನಾಕಾರಣ ಟ್ರೋಲ್ಗಳಿಗೆ ಒಳಗಾಗುತ್ತಿರುವ ಬಹುಭಾಷಾ ನಟಿ, ಕೊಡಗಿನ ರಶ್ಮಿಕಾ ಮಂದಣ್ಣ ಅವರು ತಮಗಾಗುತ್ತಿರುವ ಬೇಸರವನ್ನು ಹಂಚಿಕೊಂಡಿದ್ದಾರೆ.
ಯಾವುದೇ ಸ್ಪಷ್ಟ ಕಾರಣವಿಲ್ಲದೆ ಸಾಮಾಜಿಕ ಮಾಧ್ಯಮಗಳಲ್ಲಿ ಬಿತ್ತಲಾಗುತ್ತಿರುವ ತಮ್ಮ ವಿರುದ್ಧದ ದ್ವೇಷದ ಅಭಿಯಾನ ಹಾಗೂ ಅಪಹಾಸ್ಯದ ವಿರುದ್ಧ ಇನ್ಸ್ಟಾಗ್ರಾಮ್ನಲ್ಲಿ ಬರೆದುಕೊಂಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others
ರಶ್ಮಿಕಾ ಮಾತುಗಳು:
“ಕಳೆದ ಕೆಲವು ದಿನಗಳು, ವಾರಗಳು, ತಿಂಗಳುಗಳು ಅಥವಾ ಬಹುಶಃ ವರ್ಷಗಳಲ್ಲಿ ಒಂದೆರಡು ವಿಷಯಗಳು ನನ್ನನ್ನು ಸಮಸ್ಯೆಗೆ ದೂಡಿವೆ. ನಾನು ಅದನ್ನು ಪರಿಹರಿಸುವ ಸಮಯ ಇದೆಂದು ನಾನು ಭಾವಿಸುತ್ತೇನೆ. ನಾನು ನನಗಾಗಿ ಮಾತ್ರ ಮಾತನಾಡುತ್ತಿದ್ದೇನೆ. ಇದನ್ನು ನಾನು ವರ್ಷಗಳ ಹಿಂದೆಯೇ ಮಾಡಬೇಕಾಗಿತ್ತು. ನಾನು ನನ್ನ ವೃತ್ತಿಜೀವನವನ್ನು ಪ್ರಾರಂಭಿಸಿದಾಗಿನಿಂದಲೂ ಬಹಳಷ್ಟು ದ್ವೇಷವನ್ನು ಸ್ವೀಕರಿಸುತ್ತಿದ್ದೇನೆ. ಸಾಕಷ್ಟು ಟ್ರೋಲ್ ಮತ್ತು ನಕಾರಾತ್ಮಕತೆಗೆ ಒಳಗಾಗಿದ್ದೇನೆ” ಎಂದು ಅವರು ಬರೆದಿದ್ದಾರೆ.
“ನಾನು ಆಯ್ಕೆ ಮಾಡಿದ ಜೀವನವು ಮೌಲ್ಯದೊಂದಿಗೆ ಕೂಡಿದೆ ಎಂದು ನನಗೆ ತಿಳಿದಿದೆ. ನಾನು ಪ್ರತಿಯೊಬ್ಬರ ಕಪ್ ಆಫ್ ಟೀ ಅಲ್ಲ. ಖಂಡಿತವಾಗಿಯೂ ಪ್ರತಿಯೊಬ್ಬ ವ್ಯಕ್ತಿಯಿಂದಲೂ ಪ್ರೀತಿಸಲ್ಪಡಬೇಕೆಂದು ನಾನು ನಿರೀಕ್ಷಿಸುವುದಿಲ್ಲ ಎಂಬುದನ್ನು ಅರ್ಥಮಾಡಿಕೊಂಡಿದ್ದೇನೆ. ನೀವು ನನ್ನನ್ನು ಒಪ್ಪದ ಕಾರಣ ನೀವು ನಕಾರಾತ್ಮಕತೆಯನ್ನು ಹೊರಹಾಕಬಹುದು ಎಂದು ಇದರ ಅರ್ಥವಲ್ಲ. ನೀವೆಲ್ಲರೂ ಖುಷಿಯಿಂದರಲು ನಾನು ಯಾವ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದೇನೆ ಎಂದು ನನಗೆ ಮಾತ್ರ ತಿಳಿದಿದೆ. ನಾನು ಮಾಡಿದ ಕಾರ್ಯಕ್ಕೆ ನೀವು ಖುಷಿಯಾದಾಗ ನಾನು ಹೆಚ್ಚು ಕಾಳಜಿ ವಹಿಸುತ್ತೇನೆ. ನೀವು ಮತ್ತು ನಾನು ಹೆಮ್ಮೆಪಡುವ ವಿಷಯಗಳನ್ನು ಹಂಚಿಕೊಳ್ಳಲು ನಾನು ನಿಜವಾಗಿಯೂ ಪ್ರಯತ್ನಿಸುತ್ತಿದ್ದೇನೆ.”
“ನಾನು ಹೇಳದೆ ಇರುವ ವಿಷಯಗಳ ಕಾರಣಕ್ಕಾಗಿ ನನ್ನನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಅಪಹಾಸ್ಯ ಮಾಡಿದಾಗ ನನ್ನ ಹೃದಯ ಘಾಸಿಯಾಗುತ್ತದೆ. ಸಂದರ್ಶನಗಳಲ್ಲಿ ನಾನು ಹೇಳಿದ ಕೆಲವು ವಿಷಯಗಳು ನನ್ನ ವಿರುದ್ಧವೇ ಬಳಕೆಯಾಗುತ್ತಿವೆ ಎಂಬುದನ್ನು ಕಂಡುಕೊಂಡಿದ್ದೇನೆ. ಅಂತರ್ಜಾಲದಲ್ಲಿ ಫೇಕ್ ನೆರೆಟಿವ್ಗಳನ್ನು (ನಕಲಿ ನಿರೂಪಣೆಗಳನ್ನು) ಹರಡಲಾಗುತ್ತಿದೆ. ಇದರಿಂದ ನನಗೆ, ಹೊರಗಿನ ವೃತ್ತಿ ಬಾಂಧವ್ಯಗಳಿಗೆ ತುಂಬಾ ಹಾನಿಕಾರಕವಾಗಿದೆ”.
“ನಾನು ರಚನಾತ್ಮಕ ಟೀಕೆಗಳನ್ನು ಸ್ವಾಗತಿಸುತ್ತೇನೆ. ಏಕೆಂದರೆ ಇವುಗಳಿಂದ ನನ್ನನ್ನು ಸುಧಾರಿಸಲು ಸಾಧ್ಯವಾಗುತ್ತದೆ. ಆದರೆ ನಕಾರಾತ್ಮಕತೆ ಮತ್ತು ದ್ವೇಷದಿಂದ ಏನು ಸಾಧ್ಯ? ಇದನ್ನು ನಿರ್ಲಕ್ಷಿಸುವಂತೆ ಹಿಂದೆಯೇ ಹೇಳಿದ್ದೇನೆ. ಆದರೆ ಪರಿಸ್ಥಿತಿ ಹದಗೆಟ್ಟಿದೆ. ನಾನು ಯಾರನ್ನೂ ಗೆಲ್ಲಲು ಪ್ರಯತ್ನಿಸುತ್ತಿಲ್ಲ. ನಾನು ಸ್ವೀಕರಿಸುತ್ತಿರುವ ಈ ದ್ವೇಷದ ಕಾರಣದಿಂದಾಗಿ ಬದಲಾಗಲು ಬಯಸುವುದಿಲ್ಲ”.
“ನಿಮ್ಮ ಉಳಿದವರಿಂದ ಸ್ವೀಕರಿಸುತ್ತಿರುವ ಎಲ್ಲಾ ಪ್ರೀತಿಯನ್ನು ಗುರುತಿಸುತ್ತೇನೆ ಮತ್ತು ಅಂಗೀಕರಿಸುತ್ತೇನೆ. ನಿಮ್ಮ ನಿರಂತರ ಪ್ರೀತಿ ಮತ್ತು ಬೆಂಬಲವೇ ನನ್ನನ್ನು ಬೆಳೆಸಿದೆ. ಇದನ್ನು ಹೇಳಲು ನನಗೆ ಧೈರ್ಯವನ್ನು ನೀಡಿದೆ. ನನ್ನ ಸುತ್ತಲಿರುವ ಎಲ್ಲರ ಮೇಲೆ ಪ್ರೀತಿ ಇದೆ. ನಾನು ವೃತ್ತಿ ಬದುಕಿನ ಎಲ್ಲರನ್ನೂ ಮೆಚ್ಚಿಕೊಂಡಿದ್ದೇನೆ. ನಾನು ಕಷ್ಟಪಟ್ಟು ಕೆಲಸ ಮಾಡುವುದನ್ನು ಮುಂದುವರಿಸುತ್ತೇನೆ. ಏಕೆಂದರೆ ನಾನು ಹೇಳಿದಂತೆ, ನಿಮ್ಮನ್ನು ರಂಜಿಸುತ್ತೇನೆ. ಅದುವೇ ನನ್ನ ಸಂತೋಷ. ಎಲ್ಲರೂ ದಯೆಯಿಂದಿರಿ. ನಾವೆಲ್ಲರೂ ನಮ್ಮ ಕೈಲಾದದ್ದನ್ನು ಮಾಡಲು ಪ್ರಯತ್ನಿಸುತ್ತಿದ್ದೇವೆ”- ಎಂದು ರಶ್ಮಿಕಾ ಬರೆದುಕೊಂಡಿದ್ದಾರೆ.
ಇದನ್ನೂ ಓದಿರಿ: ಮಕ್ಕಳಿಗೆ ಉಚಿತವಾಗಿ ‘ಗಂಧದಗುಡಿ’ ತೋರಿಸಬೇಕು, ಏಕೆಂದರೆ..,: ಮಂಸೋರೆ ಮನದ ಮಾತು
‘ಕಿರಿಕ್ ಪಾರ್ಟಿ’ ಸಿನಿಮಾ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟ ರಶ್ಮಿಕಾ ಅವರು ಬಹುಭಾಷಾ ನಟಿಯಾಗಿ ಬೆಳೆದರು. ಬದುಕಿನ ಏರಿಳಿತಗಳನ್ನು ಕಂಡರು. ತಮ್ಮ ಬದುಕಿನ ಭವಿಷ್ಯವನ್ನು ನೆನೆದು ತಮ್ಮದೇ ಆಯ್ಕೆಗಳನ್ನು ಮಾಡಿಕೊಂಡರು. ಆನಂತರದಲ್ಲಿ ಅವರ ವಿರುದ್ಧ ಟ್ರೋಲ್ಗಳು ಆರಂಭವಾದವು. ಕನ್ನಡದ ಮುಖ್ಯವಾಹಿನಿ ಕೆಲವು ಮಾಧ್ಯಮಗಳಲ್ಲಿ, ಸುದ್ದಿ ಜಾಲತಾಣಗಳಲ್ಲಿ ವಿನಾಕಾರಣ ರಶ್ಮಿಕಾ ವಿರುದ್ಧ ದ್ವೇಷಕಾರುವ ರೀತಿಯ ಸುದ್ದಿಗಳು ಪ್ರಕಟವಾಗುತ್ತಲೇ ಇರುತ್ತವೆ.
ಇತ್ತೀಚೆಗೆ, “ನಾನಿನ್ನು ಕಾಂತಾರ ಸಿನಿಮಾ ನೋಡಿಲ್ಲ” ಎಂದು ರಶ್ಮಿಕಾ ಅವರು ಹೇಳಿದ ತಕ್ಷಣ ದೊಡ್ಡ ಅಪರಾಧವೆಂಬಂತೆ ಮಾಧ್ಯಮಗಳು ವರದಿ ಮಾಡಿದ್ದವು. ಇದರಿಂದ ಟ್ರೋಲರ್ಗಳು ರಶ್ಮಿಕಾ ಅವರ ಮೇಲೆ ಮುಗಿಬಿದ್ದಿದ್ದರು.
ಪತ್ರಕರ್ತ ಪಿ.ಟಿ.ಬೋಪಣ್ಣ ಈ ಟ್ರೋಲ್ ವಿರುದ್ಧ ಬರೆದಿದ್ದರು. ಕೊಡಗು ಮೂಲದ ನಟಿಯ ಬಗ್ಗೆ ಆಗುತ್ತಿರುವ ಅಪಪ್ರಚಾರವನ್ನು ಖಂಡಿಸಿದ್ದರು. ಕಾಂತಾರ ಸಿನಿಮಾದಲ್ಲಿ ಕಾಣೆಯಾಗಿರುವ ಲಿಂಗ ಸೂಕ್ಷ್ಮತೆಯನ್ನು ಉಲ್ಲೇಖಿಸಿದ್ದರು. “ನಟನಾ ಕೌಶಲ್ಯದಿಂದ ಲಕ್ಷಾಂತರ ಹೃದಯಗಳನ್ನು ಗೆದ್ದಿರುವ ರಶ್ಮಿಕಾ ಅವರನ್ನು ಟ್ರೋಲ್ ಮಾಡುವ ಬದಲು ಕಾಂತಾರ ಚಿತ್ರದ ಬಗ್ಗೆ ನಿಷ್ಪಕ್ಷಪಾತವಾದ ಮೌಲ್ಯಮಾಪನ ನಡೆಯಬೇಕು” ಎಂದಿದ್ದರು.