Homeಮುಖಪುಟನನ್ನ ಹೃದಯ ಘಾಸಿಯಾಗಿದೆ: ದ್ವೇಷದ ಟ್ರೋಲ್‌ಗಳಿಂದ ಮನನೊಂದು ರಶ್ಮಿಕಾ ಪೋಸ್ಟ್‌

ನನ್ನ ಹೃದಯ ಘಾಸಿಯಾಗಿದೆ: ದ್ವೇಷದ ಟ್ರೋಲ್‌ಗಳಿಂದ ಮನನೊಂದು ರಶ್ಮಿಕಾ ಪೋಸ್ಟ್‌

- Advertisement -
- Advertisement -

ವಿನಾಕಾರಣ ಟ್ರೋಲ್‌ಗಳಿಗೆ ಒಳಗಾಗುತ್ತಿರುವ ಬಹುಭಾಷಾ ನಟಿ, ಕೊಡಗಿನ ರಶ್ಮಿಕಾ ಮಂದಣ್ಣ ಅವರು ತಮಗಾಗುತ್ತಿರುವ ಬೇಸರವನ್ನು ಹಂಚಿಕೊಂಡಿದ್ದಾರೆ.

ಯಾವುದೇ ಸ್ಪಷ್ಟ ಕಾರಣವಿಲ್ಲದೆ ಸಾಮಾಜಿಕ ಮಾಧ್ಯಮಗಳಲ್ಲಿ ಬಿತ್ತಲಾಗುತ್ತಿರುವ ತಮ್ಮ ವಿರುದ್ಧದ ದ್ವೇಷದ ಅಭಿಯಾನ ಹಾಗೂ ಅಪಹಾಸ್ಯದ ವಿರುದ್ಧ ಇನ್‌ಸ್ಟಾಗ್ರಾಮ್‌ನಲ್ಲಿ ಬರೆದುಕೊಂಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರಶ್ಮಿಕಾ ಮಾತುಗಳು:

“ಕಳೆದ ಕೆಲವು ದಿನಗಳು, ವಾರಗಳು, ತಿಂಗಳುಗಳು ಅಥವಾ ಬಹುಶಃ ವರ್ಷಗಳಲ್ಲಿ ಒಂದೆರಡು ವಿಷಯಗಳು ನನ್ನನ್ನು ಸಮಸ್ಯೆಗೆ ದೂಡಿವೆ. ನಾನು ಅದನ್ನು ಪರಿಹರಿಸುವ ಸಮಯ ಇದೆಂದು ನಾನು ಭಾವಿಸುತ್ತೇನೆ. ನಾನು ನನಗಾಗಿ ಮಾತ್ರ ಮಾತನಾಡುತ್ತಿದ್ದೇನೆ. ಇದನ್ನು ನಾನು ವರ್ಷಗಳ ಹಿಂದೆಯೇ ಮಾಡಬೇಕಾಗಿತ್ತು. ನಾನು ನನ್ನ ವೃತ್ತಿಜೀವನವನ್ನು ಪ್ರಾರಂಭಿಸಿದಾಗಿನಿಂದಲೂ ಬಹಳಷ್ಟು ದ್ವೇಷವನ್ನು ಸ್ವೀಕರಿಸುತ್ತಿದ್ದೇನೆ. ಸಾಕಷ್ಟು ಟ್ರೋಲ್‌ ಮತ್ತು ನಕಾರಾತ್ಮಕತೆಗೆ ಒಳಗಾಗಿದ್ದೇನೆ” ಎಂದು ಅವರು ಬರೆದಿದ್ದಾರೆ.

“ನಾನು ಆಯ್ಕೆ ಮಾಡಿದ ಜೀವನವು ಮೌಲ್ಯದೊಂದಿಗೆ ಕೂಡಿದೆ ಎಂದು ನನಗೆ ತಿಳಿದಿದೆ. ನಾನು ಪ್ರತಿಯೊಬ್ಬರ ಕಪ್‌ ಆಫ್‌ ಟೀ ಅಲ್ಲ. ಖಂಡಿತವಾಗಿಯೂ ಪ್ರತಿಯೊಬ್ಬ ವ್ಯಕ್ತಿಯಿಂದಲೂ ಪ್ರೀತಿಸಲ್ಪಡಬೇಕೆಂದು ನಾನು ನಿರೀಕ್ಷಿಸುವುದಿಲ್ಲ ಎಂಬುದನ್ನು ಅರ್ಥಮಾಡಿಕೊಂಡಿದ್ದೇನೆ. ನೀವು ನನ್ನನ್ನು ಒಪ್ಪದ ಕಾರಣ ನೀವು ನಕಾರಾತ್ಮಕತೆಯನ್ನು ಹೊರಹಾಕಬಹುದು ಎಂದು ಇದರ ಅರ್ಥವಲ್ಲ. ನೀವೆಲ್ಲರೂ ಖುಷಿಯಿಂದರಲು ನಾನು ಯಾವ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದೇನೆ ಎಂದು ನನಗೆ ಮಾತ್ರ ತಿಳಿದಿದೆ. ನಾನು ಮಾಡಿದ ಕಾರ್ಯಕ್ಕೆ ನೀವು ಖುಷಿಯಾದಾಗ ನಾನು ಹೆಚ್ಚು ಕಾಳಜಿ ವಹಿಸುತ್ತೇನೆ. ನೀವು ಮತ್ತು ನಾನು ಹೆಮ್ಮೆಪಡುವ ವಿಷಯಗಳನ್ನು ಹಂಚಿಕೊಳ್ಳಲು ನಾನು ನಿಜವಾಗಿಯೂ ಪ್ರಯತ್ನಿಸುತ್ತಿದ್ದೇನೆ.”

“ನಾನು ಹೇಳದೆ ಇರುವ ವಿಷಯಗಳ ಕಾರಣಕ್ಕಾಗಿ ನನ್ನನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಅಪಹಾಸ್ಯ ಮಾಡಿದಾಗ ನನ್ನ ಹೃದಯ ಘಾಸಿಯಾಗುತ್ತದೆ. ಸಂದರ್ಶನಗಳಲ್ಲಿ ನಾನು ಹೇಳಿದ ಕೆಲವು ವಿಷಯಗಳು ನನ್ನ ವಿರುದ್ಧವೇ ಬಳಕೆಯಾಗುತ್ತಿವೆ ಎಂಬುದನ್ನು ಕಂಡುಕೊಂಡಿದ್ದೇನೆ. ಅಂತರ್ಜಾಲದಲ್ಲಿ ಫೇಕ್‌ ನೆರೆಟಿವ್‌ಗಳನ್ನು (ನಕಲಿ ನಿರೂಪಣೆಗಳನ್ನು) ಹರಡಲಾಗುತ್ತಿದೆ. ಇದರಿಂದ ನನಗೆ, ಹೊರಗಿನ ವೃತ್ತಿ ಬಾಂಧವ್ಯಗಳಿಗೆ ತುಂಬಾ ಹಾನಿಕಾರಕವಾಗಿದೆ”.

“ನಾನು ರಚನಾತ್ಮಕ ಟೀಕೆಗಳನ್ನು ಸ್ವಾಗತಿಸುತ್ತೇನೆ. ಏಕೆಂದರೆ ಇವುಗಳಿಂದ ನನ್ನನ್ನು ಸುಧಾರಿಸಲು ಸಾಧ್ಯವಾಗುತ್ತದೆ. ಆದರೆ ನಕಾರಾತ್ಮಕತೆ ಮತ್ತು ದ್ವೇಷದಿಂದ ಏನು ಸಾಧ್ಯ? ಇದನ್ನು ನಿರ್ಲಕ್ಷಿಸುವಂತೆ ಹಿಂದೆಯೇ ಹೇಳಿದ್ದೇನೆ. ಆದರೆ ಪರಿಸ್ಥಿತಿ ಹದಗೆಟ್ಟಿದೆ. ನಾನು ಯಾರನ್ನೂ ಗೆಲ್ಲಲು ಪ್ರಯತ್ನಿಸುತ್ತಿಲ್ಲ. ನಾನು ಸ್ವೀಕರಿಸುತ್ತಿರುವ ಈ ದ್ವೇಷದ ಕಾರಣದಿಂದಾಗಿ ಬದಲಾಗಲು ಬಯಸುವುದಿಲ್ಲ”.

“ನಿಮ್ಮ ಉಳಿದವರಿಂದ ಸ್ವೀಕರಿಸುತ್ತಿರುವ ಎಲ್ಲಾ ಪ್ರೀತಿಯನ್ನು ಗುರುತಿಸುತ್ತೇನೆ ಮತ್ತು ಅಂಗೀಕರಿಸುತ್ತೇನೆ. ನಿಮ್ಮ ನಿರಂತರ ಪ್ರೀತಿ ಮತ್ತು ಬೆಂಬಲವೇ ನನ್ನನ್ನು ಬೆಳೆಸಿದೆ. ಇದನ್ನು ಹೇಳಲು ನನಗೆ ಧೈರ್ಯವನ್ನು ನೀಡಿದೆ. ನನ್ನ ಸುತ್ತಲಿರುವ ಎಲ್ಲರ ಮೇಲೆ ಪ್ರೀತಿ ಇದೆ. ನಾನು ವೃತ್ತಿ ಬದುಕಿನ ಎಲ್ಲರನ್ನೂ ಮೆಚ್ಚಿಕೊಂಡಿದ್ದೇನೆ. ನಾನು ಕಷ್ಟಪಟ್ಟು ಕೆಲಸ ಮಾಡುವುದನ್ನು ಮುಂದುವರಿಸುತ್ತೇನೆ. ಏಕೆಂದರೆ ನಾನು ಹೇಳಿದಂತೆ, ನಿಮ್ಮನ್ನು ರಂಜಿಸುತ್ತೇನೆ. ಅದುವೇ ನನ್ನ ಸಂತೋಷ. ಎಲ್ಲರೂ ದಯೆಯಿಂದಿರಿ. ನಾವೆಲ್ಲರೂ ನಮ್ಮ ಕೈಲಾದದ್ದನ್ನು ಮಾಡಲು ಪ್ರಯತ್ನಿಸುತ್ತಿದ್ದೇವೆ”- ಎಂದು ರಶ್ಮಿಕಾ ಬರೆದುಕೊಂಡಿದ್ದಾರೆ.

ಇದನ್ನೂ ಓದಿರಿ: ಮಕ್ಕಳಿಗೆ ಉಚಿತವಾಗಿ ‘ಗಂಧದಗುಡಿ’ ತೋರಿಸಬೇಕು, ಏಕೆಂದರೆ..,: ಮಂಸೋರೆ ಮನದ ಮಾತು

‘ಕಿರಿಕ್‌ ಪಾರ್ಟಿ’ ಸಿನಿಮಾ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟ ರಶ್ಮಿಕಾ ಅವರು ಬಹುಭಾಷಾ ನಟಿಯಾಗಿ ಬೆಳೆದರು. ಬದುಕಿನ ಏರಿಳಿತಗಳನ್ನು ಕಂಡರು. ತಮ್ಮ ಬದುಕಿನ ಭವಿಷ್ಯವನ್ನು ನೆನೆದು ತಮ್ಮದೇ ಆಯ್ಕೆಗಳನ್ನು ಮಾಡಿಕೊಂಡರು. ಆನಂತರದಲ್ಲಿ ಅವರ ವಿರುದ್ಧ ಟ್ರೋಲ್‌ಗಳು ಆರಂಭವಾದವು. ಕನ್ನಡದ ಮುಖ್ಯವಾಹಿನಿ ಕೆಲವು ಮಾಧ್ಯಮಗಳಲ್ಲಿ, ಸುದ್ದಿ ಜಾಲತಾಣಗಳಲ್ಲಿ ವಿನಾಕಾರಣ ರಶ್ಮಿಕಾ ವಿರುದ್ಧ ದ್ವೇಷಕಾರುವ ರೀತಿಯ ಸುದ್ದಿಗಳು ಪ್ರಕಟವಾಗುತ್ತಲೇ ಇರುತ್ತವೆ.

ಇತ್ತೀಚೆಗೆ, “ನಾನಿನ್ನು ಕಾಂತಾರ ಸಿನಿಮಾ ನೋಡಿಲ್ಲ” ಎಂದು ರಶ್ಮಿಕಾ ಅವರು ಹೇಳಿದ ತಕ್ಷಣ ದೊಡ್ಡ ಅಪರಾಧವೆಂಬಂತೆ ಮಾಧ್ಯಮಗಳು ವರದಿ ಮಾಡಿದ್ದವು. ಇದರಿಂದ ಟ್ರೋಲರ್‌ಗಳು ರಶ್ಮಿಕಾ ಅವರ ಮೇಲೆ ಮುಗಿಬಿದ್ದಿದ್ದರು.

ಪತ್ರಕರ್ತ ಪಿ.ಟಿ.ಬೋಪಣ್ಣ ಈ ಟ್ರೋಲ್‌ ವಿರುದ್ಧ ಬರೆದಿದ್ದರು. ಕೊಡಗು ಮೂಲದ ನಟಿಯ ಬಗ್ಗೆ ಆಗುತ್ತಿರುವ ಅಪಪ್ರಚಾರವನ್ನು ಖಂಡಿಸಿದ್ದರು. ಕಾಂತಾರ ಸಿನಿಮಾದಲ್ಲಿ ಕಾಣೆಯಾಗಿರುವ ಲಿಂಗ ಸೂಕ್ಷ್ಮತೆಯನ್ನು ಉಲ್ಲೇಖಿಸಿದ್ದರು. “ನಟನಾ ಕೌಶಲ್ಯದಿಂದ ಲಕ್ಷಾಂತರ ಹೃದಯಗಳನ್ನು ಗೆದ್ದಿರುವ ರಶ್ಮಿಕಾ ಅವರನ್ನು ಟ್ರೋಲ್ ಮಾಡುವ ಬದಲು ಕಾಂತಾರ ಚಿತ್ರದ ಬಗ್ಗೆ ನಿಷ್ಪಕ್ಷಪಾತವಾದ ಮೌಲ್ಯಮಾಪನ ನಡೆಯಬೇಕು” ಎಂದಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...