Homeಮುಖಪುಟನನ್ನ ಹೃದಯ ಘಾಸಿಯಾಗಿದೆ: ದ್ವೇಷದ ಟ್ರೋಲ್‌ಗಳಿಂದ ಮನನೊಂದು ರಶ್ಮಿಕಾ ಪೋಸ್ಟ್‌

ನನ್ನ ಹೃದಯ ಘಾಸಿಯಾಗಿದೆ: ದ್ವೇಷದ ಟ್ರೋಲ್‌ಗಳಿಂದ ಮನನೊಂದು ರಶ್ಮಿಕಾ ಪೋಸ್ಟ್‌

- Advertisement -
- Advertisement -

ವಿನಾಕಾರಣ ಟ್ರೋಲ್‌ಗಳಿಗೆ ಒಳಗಾಗುತ್ತಿರುವ ಬಹುಭಾಷಾ ನಟಿ, ಕೊಡಗಿನ ರಶ್ಮಿಕಾ ಮಂದಣ್ಣ ಅವರು ತಮಗಾಗುತ್ತಿರುವ ಬೇಸರವನ್ನು ಹಂಚಿಕೊಂಡಿದ್ದಾರೆ.

ಯಾವುದೇ ಸ್ಪಷ್ಟ ಕಾರಣವಿಲ್ಲದೆ ಸಾಮಾಜಿಕ ಮಾಧ್ಯಮಗಳಲ್ಲಿ ಬಿತ್ತಲಾಗುತ್ತಿರುವ ತಮ್ಮ ವಿರುದ್ಧದ ದ್ವೇಷದ ಅಭಿಯಾನ ಹಾಗೂ ಅಪಹಾಸ್ಯದ ವಿರುದ್ಧ ಇನ್‌ಸ್ಟಾಗ್ರಾಮ್‌ನಲ್ಲಿ ಬರೆದುಕೊಂಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರಶ್ಮಿಕಾ ಮಾತುಗಳು:

“ಕಳೆದ ಕೆಲವು ದಿನಗಳು, ವಾರಗಳು, ತಿಂಗಳುಗಳು ಅಥವಾ ಬಹುಶಃ ವರ್ಷಗಳಲ್ಲಿ ಒಂದೆರಡು ವಿಷಯಗಳು ನನ್ನನ್ನು ಸಮಸ್ಯೆಗೆ ದೂಡಿವೆ. ನಾನು ಅದನ್ನು ಪರಿಹರಿಸುವ ಸಮಯ ಇದೆಂದು ನಾನು ಭಾವಿಸುತ್ತೇನೆ. ನಾನು ನನಗಾಗಿ ಮಾತ್ರ ಮಾತನಾಡುತ್ತಿದ್ದೇನೆ. ಇದನ್ನು ನಾನು ವರ್ಷಗಳ ಹಿಂದೆಯೇ ಮಾಡಬೇಕಾಗಿತ್ತು. ನಾನು ನನ್ನ ವೃತ್ತಿಜೀವನವನ್ನು ಪ್ರಾರಂಭಿಸಿದಾಗಿನಿಂದಲೂ ಬಹಳಷ್ಟು ದ್ವೇಷವನ್ನು ಸ್ವೀಕರಿಸುತ್ತಿದ್ದೇನೆ. ಸಾಕಷ್ಟು ಟ್ರೋಲ್‌ ಮತ್ತು ನಕಾರಾತ್ಮಕತೆಗೆ ಒಳಗಾಗಿದ್ದೇನೆ” ಎಂದು ಅವರು ಬರೆದಿದ್ದಾರೆ.

“ನಾನು ಆಯ್ಕೆ ಮಾಡಿದ ಜೀವನವು ಮೌಲ್ಯದೊಂದಿಗೆ ಕೂಡಿದೆ ಎಂದು ನನಗೆ ತಿಳಿದಿದೆ. ನಾನು ಪ್ರತಿಯೊಬ್ಬರ ಕಪ್‌ ಆಫ್‌ ಟೀ ಅಲ್ಲ. ಖಂಡಿತವಾಗಿಯೂ ಪ್ರತಿಯೊಬ್ಬ ವ್ಯಕ್ತಿಯಿಂದಲೂ ಪ್ರೀತಿಸಲ್ಪಡಬೇಕೆಂದು ನಾನು ನಿರೀಕ್ಷಿಸುವುದಿಲ್ಲ ಎಂಬುದನ್ನು ಅರ್ಥಮಾಡಿಕೊಂಡಿದ್ದೇನೆ. ನೀವು ನನ್ನನ್ನು ಒಪ್ಪದ ಕಾರಣ ನೀವು ನಕಾರಾತ್ಮಕತೆಯನ್ನು ಹೊರಹಾಕಬಹುದು ಎಂದು ಇದರ ಅರ್ಥವಲ್ಲ. ನೀವೆಲ್ಲರೂ ಖುಷಿಯಿಂದರಲು ನಾನು ಯಾವ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದೇನೆ ಎಂದು ನನಗೆ ಮಾತ್ರ ತಿಳಿದಿದೆ. ನಾನು ಮಾಡಿದ ಕಾರ್ಯಕ್ಕೆ ನೀವು ಖುಷಿಯಾದಾಗ ನಾನು ಹೆಚ್ಚು ಕಾಳಜಿ ವಹಿಸುತ್ತೇನೆ. ನೀವು ಮತ್ತು ನಾನು ಹೆಮ್ಮೆಪಡುವ ವಿಷಯಗಳನ್ನು ಹಂಚಿಕೊಳ್ಳಲು ನಾನು ನಿಜವಾಗಿಯೂ ಪ್ರಯತ್ನಿಸುತ್ತಿದ್ದೇನೆ.”

“ನಾನು ಹೇಳದೆ ಇರುವ ವಿಷಯಗಳ ಕಾರಣಕ್ಕಾಗಿ ನನ್ನನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಅಪಹಾಸ್ಯ ಮಾಡಿದಾಗ ನನ್ನ ಹೃದಯ ಘಾಸಿಯಾಗುತ್ತದೆ. ಸಂದರ್ಶನಗಳಲ್ಲಿ ನಾನು ಹೇಳಿದ ಕೆಲವು ವಿಷಯಗಳು ನನ್ನ ವಿರುದ್ಧವೇ ಬಳಕೆಯಾಗುತ್ತಿವೆ ಎಂಬುದನ್ನು ಕಂಡುಕೊಂಡಿದ್ದೇನೆ. ಅಂತರ್ಜಾಲದಲ್ಲಿ ಫೇಕ್‌ ನೆರೆಟಿವ್‌ಗಳನ್ನು (ನಕಲಿ ನಿರೂಪಣೆಗಳನ್ನು) ಹರಡಲಾಗುತ್ತಿದೆ. ಇದರಿಂದ ನನಗೆ, ಹೊರಗಿನ ವೃತ್ತಿ ಬಾಂಧವ್ಯಗಳಿಗೆ ತುಂಬಾ ಹಾನಿಕಾರಕವಾಗಿದೆ”.

“ನಾನು ರಚನಾತ್ಮಕ ಟೀಕೆಗಳನ್ನು ಸ್ವಾಗತಿಸುತ್ತೇನೆ. ಏಕೆಂದರೆ ಇವುಗಳಿಂದ ನನ್ನನ್ನು ಸುಧಾರಿಸಲು ಸಾಧ್ಯವಾಗುತ್ತದೆ. ಆದರೆ ನಕಾರಾತ್ಮಕತೆ ಮತ್ತು ದ್ವೇಷದಿಂದ ಏನು ಸಾಧ್ಯ? ಇದನ್ನು ನಿರ್ಲಕ್ಷಿಸುವಂತೆ ಹಿಂದೆಯೇ ಹೇಳಿದ್ದೇನೆ. ಆದರೆ ಪರಿಸ್ಥಿತಿ ಹದಗೆಟ್ಟಿದೆ. ನಾನು ಯಾರನ್ನೂ ಗೆಲ್ಲಲು ಪ್ರಯತ್ನಿಸುತ್ತಿಲ್ಲ. ನಾನು ಸ್ವೀಕರಿಸುತ್ತಿರುವ ಈ ದ್ವೇಷದ ಕಾರಣದಿಂದಾಗಿ ಬದಲಾಗಲು ಬಯಸುವುದಿಲ್ಲ”.

“ನಿಮ್ಮ ಉಳಿದವರಿಂದ ಸ್ವೀಕರಿಸುತ್ತಿರುವ ಎಲ್ಲಾ ಪ್ರೀತಿಯನ್ನು ಗುರುತಿಸುತ್ತೇನೆ ಮತ್ತು ಅಂಗೀಕರಿಸುತ್ತೇನೆ. ನಿಮ್ಮ ನಿರಂತರ ಪ್ರೀತಿ ಮತ್ತು ಬೆಂಬಲವೇ ನನ್ನನ್ನು ಬೆಳೆಸಿದೆ. ಇದನ್ನು ಹೇಳಲು ನನಗೆ ಧೈರ್ಯವನ್ನು ನೀಡಿದೆ. ನನ್ನ ಸುತ್ತಲಿರುವ ಎಲ್ಲರ ಮೇಲೆ ಪ್ರೀತಿ ಇದೆ. ನಾನು ವೃತ್ತಿ ಬದುಕಿನ ಎಲ್ಲರನ್ನೂ ಮೆಚ್ಚಿಕೊಂಡಿದ್ದೇನೆ. ನಾನು ಕಷ್ಟಪಟ್ಟು ಕೆಲಸ ಮಾಡುವುದನ್ನು ಮುಂದುವರಿಸುತ್ತೇನೆ. ಏಕೆಂದರೆ ನಾನು ಹೇಳಿದಂತೆ, ನಿಮ್ಮನ್ನು ರಂಜಿಸುತ್ತೇನೆ. ಅದುವೇ ನನ್ನ ಸಂತೋಷ. ಎಲ್ಲರೂ ದಯೆಯಿಂದಿರಿ. ನಾವೆಲ್ಲರೂ ನಮ್ಮ ಕೈಲಾದದ್ದನ್ನು ಮಾಡಲು ಪ್ರಯತ್ನಿಸುತ್ತಿದ್ದೇವೆ”- ಎಂದು ರಶ್ಮಿಕಾ ಬರೆದುಕೊಂಡಿದ್ದಾರೆ.

ಇದನ್ನೂ ಓದಿರಿ: ಮಕ್ಕಳಿಗೆ ಉಚಿತವಾಗಿ ‘ಗಂಧದಗುಡಿ’ ತೋರಿಸಬೇಕು, ಏಕೆಂದರೆ..,: ಮಂಸೋರೆ ಮನದ ಮಾತು

‘ಕಿರಿಕ್‌ ಪಾರ್ಟಿ’ ಸಿನಿಮಾ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟ ರಶ್ಮಿಕಾ ಅವರು ಬಹುಭಾಷಾ ನಟಿಯಾಗಿ ಬೆಳೆದರು. ಬದುಕಿನ ಏರಿಳಿತಗಳನ್ನು ಕಂಡರು. ತಮ್ಮ ಬದುಕಿನ ಭವಿಷ್ಯವನ್ನು ನೆನೆದು ತಮ್ಮದೇ ಆಯ್ಕೆಗಳನ್ನು ಮಾಡಿಕೊಂಡರು. ಆನಂತರದಲ್ಲಿ ಅವರ ವಿರುದ್ಧ ಟ್ರೋಲ್‌ಗಳು ಆರಂಭವಾದವು. ಕನ್ನಡದ ಮುಖ್ಯವಾಹಿನಿ ಕೆಲವು ಮಾಧ್ಯಮಗಳಲ್ಲಿ, ಸುದ್ದಿ ಜಾಲತಾಣಗಳಲ್ಲಿ ವಿನಾಕಾರಣ ರಶ್ಮಿಕಾ ವಿರುದ್ಧ ದ್ವೇಷಕಾರುವ ರೀತಿಯ ಸುದ್ದಿಗಳು ಪ್ರಕಟವಾಗುತ್ತಲೇ ಇರುತ್ತವೆ.

ಇತ್ತೀಚೆಗೆ, “ನಾನಿನ್ನು ಕಾಂತಾರ ಸಿನಿಮಾ ನೋಡಿಲ್ಲ” ಎಂದು ರಶ್ಮಿಕಾ ಅವರು ಹೇಳಿದ ತಕ್ಷಣ ದೊಡ್ಡ ಅಪರಾಧವೆಂಬಂತೆ ಮಾಧ್ಯಮಗಳು ವರದಿ ಮಾಡಿದ್ದವು. ಇದರಿಂದ ಟ್ರೋಲರ್‌ಗಳು ರಶ್ಮಿಕಾ ಅವರ ಮೇಲೆ ಮುಗಿಬಿದ್ದಿದ್ದರು.

ಪತ್ರಕರ್ತ ಪಿ.ಟಿ.ಬೋಪಣ್ಣ ಈ ಟ್ರೋಲ್‌ ವಿರುದ್ಧ ಬರೆದಿದ್ದರು. ಕೊಡಗು ಮೂಲದ ನಟಿಯ ಬಗ್ಗೆ ಆಗುತ್ತಿರುವ ಅಪಪ್ರಚಾರವನ್ನು ಖಂಡಿಸಿದ್ದರು. ಕಾಂತಾರ ಸಿನಿಮಾದಲ್ಲಿ ಕಾಣೆಯಾಗಿರುವ ಲಿಂಗ ಸೂಕ್ಷ್ಮತೆಯನ್ನು ಉಲ್ಲೇಖಿಸಿದ್ದರು. “ನಟನಾ ಕೌಶಲ್ಯದಿಂದ ಲಕ್ಷಾಂತರ ಹೃದಯಗಳನ್ನು ಗೆದ್ದಿರುವ ರಶ್ಮಿಕಾ ಅವರನ್ನು ಟ್ರೋಲ್ ಮಾಡುವ ಬದಲು ಕಾಂತಾರ ಚಿತ್ರದ ಬಗ್ಗೆ ನಿಷ್ಪಕ್ಷಪಾತವಾದ ಮೌಲ್ಯಮಾಪನ ನಡೆಯಬೇಕು” ಎಂದಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...