Homeಮುಖಪುಟಅನ್ಯಾಯದ ವಿರುದ್ಧ ಹೋರಾಡುತ್ತಿರುವ ರೈತರು, ಕಾರ್ಮಿಕರ ಜೊತೆ ನನ್ನ ಹೃದಯವಿದೆ: ರಾಹುಲ್ ಗಾಂಧಿ

ಅನ್ಯಾಯದ ವಿರುದ್ಧ ಹೋರಾಡುತ್ತಿರುವ ರೈತರು, ಕಾರ್ಮಿಕರ ಜೊತೆ ನನ್ನ ಹೃದಯವಿದೆ: ರಾಹುಲ್ ಗಾಂಧಿ

ಹೊಸವರ್ಷದಂದು, ನಾವು ಕಳೆದುಕೊಂಡವರನ್ನು, ನಮ್ಮನ್ನು ರಕ್ಷಿಸಿದವರು ಮತ್ತು ನಮಗಾಗಿ ತ್ಯಾಗ ಮಾಡಿದವರನ್ನು ನೆನಪಿಸಿಕೊಳ್ಳೊಣ ಎಂದಿದ್ದಾರೆ ರಾಹುಲ್ ಗಾಂಧಿ.

- Advertisement -
- Advertisement -

ಹೊಸ ವರ್ಷದಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ದೇಶದ ಜನರಿಗೆ ಶುಭಾಶಯ ಕೋರಿದ್ದಾರೆ. ಕೊರೊನಾ ಪರಿಸ್ಥಿತಿಯಿಂದ ಉಂಟಾಗುವ ಸವಾಲುಗಳನ್ನು ಒಗ್ಗಟ್ಟಿನಿಂದ ಎದುರಿಸೋಣ ಎಂದು ರಾಷ್ಟ್ರಪತಿ ಶುಭಕೋರಿದ್ದಾರೆ. ಉತ್ತಮ ಆರೋಗ್ಯ, ಸಂತೋಷ ಮತ್ತು ಸಮೃದ್ಧಿ ನಿಮ್ಮದಾಗಲಿ ಎಂದು ಪ್ರಧಾನಿ ಹೇಳಿದ್ದಾರೆ.

ಹೊಸವರ್ಷದಂದು ನಾವು ಕಳೆದುಕೊಂಡವರನ್ನು, ನಮ್ಮನ್ನು ರಕ್ಷಿಸಿದವರು ಮತ್ತು ನಮಗಾಗಿ ತ್ಯಾಗ ಮಾಡಿದವರನ್ನು ರಾಹುಲ್ ಗಾಂಧಿ ನೆನಪಿಸಿಕೊಂಡಿದ್ದಾರೆ. ಅನ್ಯಾಯದ ವಿರುದ್ಧ ಘನತೆ ಮತ್ತು ಗೌರವದಿಂದ ಹೋರಾಡುತ್ತಿರುವ ರೈತರು ಮತ್ತು ಕಾರ್ಮಿಕರ ಜೊತೆಗೆ ನನ್ನ ಹೃದಯವಿದೆ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಕೈ ಮುಗಿದು, ತಲೆಬಾಗಿ ರೈತರೊಡನೆ ಚರ್ಚಿಸಲು ಸಿದ್ದನಿದ್ದೇನೆ: ನರೇಂದ್ರ ಮೋದಿ

ಕಳೆದ ತಿಂಗಳಿನಿಂದಲೂ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕರಾಳ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ತಮ್ಮ ಬೆಂಬಲವನ್ನು ಮತ್ತೆ ದೃಢಪಡಿಸಿದ್ದಾರೆ. ರೈತರ ಹೋರಾಟಕ್ಕೆ ಮೊದಲಿನಿಂದಲೂ ಸಾಥ್ ನೀಡಿರುವ ರಾಹುಲ್ ಗಾಂಧಿ ಮುಂದೆಯೂ ತಾವು ರೈತರ ಜೊತೆಗಿರುವುದಾಗಿ ತಿಳಿಸಿದ್ದಾರೆ.

ಇತ್ತ ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಶುಭಾಶಯ ತಿಳಿಸಿದ್ದು, ಈ ವರ್ಷ ಉತ್ತಮ ಆರೋಗ್ಯ, ಸಂತೋಷ ಮತ್ತು ಸಮೃದ್ಧಿಯನ್ನು ತರಲಿ. ಭರವಸೆ ಮತ್ತು ಸ್ವಾಸ್ಥ್ಯದ ಮನೋಭಾವ ಮೇಲುಗೈ ಸಾಧಿಸಲಿ” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಹೋರಾಟನಿರತ ರೈತರನ್ನು ವಿರೋಧ ಪಕ್ಷಗಳು ದಾರಿ ತಪ್ಪಿಸುತ್ತಿವೆ: ನರೇಂದ್ರ ಮೋದಿ

ರಾಷ್ಟ್ರಪತಿ ರಾಮನಾಥ್ ಕೋವಿಂದ್, 2020 ರ ಕೊರೊನಾ ಪರಿಸ್ಥಿತಿಯನ್ನು ಗಮನದಲ್ಲಿರಿಸಿಕೊಂಡು, ಹೊಸ ಆರಂಭಕ್ಕೆ ಹೊಸ ಅವಕಾಶ ಎಂದಿದ್ದಾರೆ.

“ಹೊಸ ವರ್ಷವು ಹೊಸ ಆರಂಭವನ್ನು ನೀಡಲು ಮತ್ತು ವೈಯಕ್ತಿಕ ಮತ್ತು ಸಾಮೂಹಿಕ ಅಭಿವೃದ್ಧಿಗೆ ಪರಿಹಾರವನ್ನು ಒದಗಿಸುತ್ತದೆ. ಕೊರೊನಾ ಪರಿಸ್ಥಿತಿಯಿಂದ ಉಂಟಾಗುವ ಸವಾಲುಗಳು ಒಗ್ಗಟ್ಟಿನಿಂದ ಎದುರಿಸುವ ನಮ್ಮ ದೃಢ ನಿರ್ಧಾರವನ್ನು ಬಲಪಡಿಸುತ್ತವೆ” ಎಂದು ರಾಷ್ಟ್ರಪತಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ರೈತ ಹೋರಾಟ: ರಾಜಸ್ಥಾನ-ಹರಿಯಾಣ ಗಡಿಯಲ್ಲಿನ ಬ್ಯಾರಿಕೇಡ್‌ಗಳನ್ನು ಮುರಿದು ಮುನ್ನುಗ್ಗಿದ ರೈತರು

ಪ್ರೀತಿ ಮತ್ತು ಸಹಾನುಭೂತಿಯ ಮನೋಭಾವದಿಂದ ಕೂಡಿದ ಸಮಾಜವನ್ನು ಸೃಷ್ಟಿಸಲು ನಾವು ಒಟ್ಟಾಗಿ ಕೆಲಸ ಮಾಡುವುದನ್ನು ಮುಂದುವರಿಸೋಣ ಎಂದು ದೇಶದ ಜನರಿಗೆ ಕರೆ ನೀಡಿದ್ದಾರೆ.

ದೇಶದಲ್ಲಿ ಹೆಚ್ಚು ಚರ್ಚೆಗೆ ಒಳಗಾಗುತ್ತಿರುವ ರೈತ ಪ್ರತಿಭಟನೆಯಲ್ಲಿ, ಹೆಚ್ಚಾಗಿ ಪಂಜಾಬ್, ಹರಿಯಾಣ ಮತ್ತು ಇತರ ರಾಜ್ಯಗಳ ರೈತರು ದೆಹಲಿಯ ಗಡಿಯಲ್ಲಿ ಬೀಡುಬಿಟ್ಟಿದ್ದಾರೆ. ವಿವಾದಿತ ಕೃಷಿ ಕಾನೂನುಗಳು ಕನಿಷ್ಟ ಬೆಂಬಲ ಬೆಲೆ ವ್ಯವಸ್ಥೆಯನ್ನು ಹಾಳುಗೆಡವುತ್ತವೆ ಮತ್ತು ದೊಡ್ಡ ಕಾರ್ಪೊರೇಟ್ ಸಂಸ್ಥೆಗಳ ಪರವಾಗಿವೆ ಎಂದು  ಲಕ್ಷಾಂತರ ಮಂದಿ ರೈತರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿದ್ದಾರೆ.

ರೈತ ನಾಯಕರು ಮತ್ತು ಸರ್ಕಾರದ ನಡುವೆ ಹಲವು ಸುತ್ತಿನ ಮಾತುಕತೆಗಳು ನಡೆದು ವಿಫಲಗೊಂಡಿವೆ. ಪ್ರಧಾನಿ ಮೋದಿ ಅವರ ಅನೇಕ ಆಶ್ವಾಸನೆಗಳು ರೈತರ ಪ್ರತಿಭಟನೆಯನ್ನು ತಡೆಯುವಲ್ಲಿ ವಿಫಲವಾಗಿವೆ.

ಈ ಹಿನ್ನೆಲೆ ದೇಶದ ಪರಿಸ್ಥಿತಿಯನ್ನು ಗಮನದಲ್ಲಿರಿಸಿಕೊಂಡು ರೈತರ ಬಗ್ಗೆ ಹೊಸ ವರ್ಷದಂದು ಯಾವುದಾದರೂ ಸಿಹಿ ಸುದ್ದಿ ನೀಡಬಹುದು ಎಂಬ ನಿರೀಕ್ಷೆಯನ್ನು ರಾಷ್ಟ್ರಪತಿ ಮತ್ತು ಪ್ರಧಾನಿ ನರೇಂದ್ರ ಮೋದಿ ಹುಸಿ ಮಾಡಿದ್ದಾರೆ. ರೈತ ಹೋರಾಟ ಆರಂಭದಿಂದಲೂ ರೈತರಿಗೆ ಬೆಂಬಲ ನೀಡಿರುವ ರಾಹುಲ್ ಗಾಂಧಿ ತಮ್ಮ ಬೆಂಬಲ ಮುಂದುವರಿಸುವುದಾಗಿ ಮತ್ತೆ ತಿಳಿಸಿದ್ದಾರೆ.


ಇದನ್ನೂ ಓದಿ: ರೈತ ಹೋರಾಟ-6 ನೇ ಸುತ್ತಿನ ಮಾತುಕತೆಯು ವಿಫಲ; ಹೋರಾಟ ಮುಂದುವರೆಯಲಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...