Homeಕರ್ನಾಟಕನಮ್ಮ ನಾಯಕ ಅಂದು ಗುಹೆಯೊಳಗೆ, ಇಂದು ನೀರೊಳಗೆ, ಮುಂದೆ ಚಂದ್ರನ ಮೇಲೆ: ಪ್ರಕಾಶ್ ರಾಜ್

ನಮ್ಮ ನಾಯಕ ಅಂದು ಗುಹೆಯೊಳಗೆ, ಇಂದು ನೀರೊಳಗೆ, ಮುಂದೆ ಚಂದ್ರನ ಮೇಲೆ: ಪ್ರಕಾಶ್ ರಾಜ್

- Advertisement -
- Advertisement -

“ನಮಗೊಬ್ಬ ನಾಯಕನಿದ್ದಾನೆ. ಆತ 2019ರಲ್ಲಿ ಕ್ಯಾಮರಾ ಮ್ಯಾನ್‌ಗಳ ಜೊತೆ ಗುಹೆ ಸೇರ್ಕೊಂಡ. ಈಗ ಚುನಾವಣೆ ಬರುವಾಗ ನೀರಿನೊಳಗೆ ಹೋಗಿದ್ದಾನೆ. ಮುಂದಿನ ಚುನಾವಣೆಗೆ ಚಂದ್ರನ ಮೇಲೆ ನಿಂತುಕೊಳ್ಳುತ್ತಾನೆ. ಆತ 20ನೇ ಶತಮಾನದ ದೇಶದ ನಾಯಕನಾ?” ಎಂದು ಬಹುಭಾಷಾ ನಟ ಪ್ರಕಾಶ್ ರಾಜ್ ಪ್ರಧಾನಿ ಮೋದಿ ವಿರುದ್ದ ಪರೋಕ್ಷಾ ವಾಗ್ದಾಳಿ ನಡೆಸಿದ್ದಾರೆ.

ಡೆಮಾಕ್ರಟಿಕ್ ಯೂಥ್ ಫೆಡರೇಶನ್ ಆಫ್ ಇಂಡಿಯಾ (ಡಿವೈಎಫ್ಐ) ದಕ್ಷಿಣ ಕನ್ನಡ ಜಿಲ್ಲೆ ಉಳ್ಳಾಲದಲ್ಲಿ ಆಯೋಜಿಸಿದ್ದ ಮೂರು ದಿನಗಳ 12ನೇ ರಾಜ್ಯ ಮಟ್ಟದ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಅವರು ಮಂಗಳವಾರ ಮಾತನಾಡಿದರು.

“ದೇವಸ್ಥಾನದ ಉದ್ಘಾಟನೆಗೆ ಉಪವಾಸ ಮಾಡುವ ನಾಯಕರಿದ್ದಾರೆ. ಹಾಗಾಗಿ, ನಾವು ಮತ್ತೆ ಸ್ವಾತಂತ್ರ್ಯವನ್ನು, ಪ್ರಜಾಪ್ರಭುತ್ವವನ್ನು ನಮ್ಮ ಕನಸನ್ನು ಸಾರ್ಥಕಗೊಳಿಸುವ ದಾರಿಯನ್ನು ನೋಡಿಕೊಳ್ಳಲು ಇಲ್ಲಿದ್ದೇವೆ” ಎಂದು ಸಮ್ಮೇಳನವನ್ನು ಉದ್ದೇಶಿಸಿ ಪ್ರಕಾಶ್ ರಾಜ್ ಹೇಳಿದರು.

“ಧರ್ಮಗಳನ್ನು ನಂಬುವವರ ಬಗ್ಗೆ ನನಗೆ ಸಮಸ್ಯೆ ಇಲ್ಲ. ಅವರವರ ಭಾವಕ್ಕೆ, ಭಕ್ತಿಗೆ ಧರ್ಮ ಆಚರಿಸಲಿ. ಆದರೆ, ಎಲ್ಲಾ ಧರ್ಮಗಳಲ್ಲಿರುವ ಅಂಧ ಭಕ್ತರ ಬಗ್ಗೆ ನನಗೆ ಸಮಸ್ಯೆಯಿದೆ” ಎಂದರು.

“ನಾನೊಬ್ಬ ಕಲಾವಿದ, ನಾನೊಬ್ಬ ನಿರಂತರ ವಿರೋಧ ಪಕ್ಷ. ನಾನು ಯಾವ ಪಕ್ಷ ಎಂದು ಹಲವರು ಕೇಳುತ್ತಾರೆ. ನಾನು ಯಾವುದೇ ಪಕ್ಷವಲ್ಲ, ನಾನು ಜನರ ಪಕ್ಷ. ಕಲಾವಿದನಾಗಿ ಮಾತನಾಡುವುದು, ಮಾತನಾಡಬೇಕಾಗಿರುವುದು ನನ್ನ ಜವಾಬ್ದಾರಿ. ಯಾವುದಾದರು ಪಕ್ಷ ಸೇರಿದ್ರೆ ಎಲ್ಲೋ ಇರ್ತಿದ್ರಿ ಎಂದು ಹಲವರು ನನಗೆ ಹೇಳುತ್ತಾರೆ. ಯಾಕಿರಬೇಕು? ನಾನೇನು ಬಡವ ಅಲ್ಲ. ಜನರ ಶ್ರೀಮಂತಿಕೆ ನನ್ನತ್ರ ಇದೆ. ನಾನು ಕಳೆದುಕೊಳ್ಳುವಷ್ಟು ಶ್ರೀಮಂತ. ನಿಮ್ಮ ಹಾಗೆ ಸೇರಿಸಿ ಇಡುವಷ್ಟು ಭಿಕ್ಷುಕ ಅಲ್ಲ” ಎಂದು ಹೇಳಿದರು.

“ನಮ್ಮ ದೇಹಕ್ಕಾದ ಗಾಯಗಳು ಕೆಲವೊಮ್ಮೆ ನಾವು ಸುಮ್ಮನ್ನಿದ್ದರೂ ವಾಸಿಯಾಗಿ ಬಿಡುತ್ತವೆ. ಆದರೆ, ದೇಶಕ್ಕಾದ ಗಾಯಗಳು ಸುಮ್ಮನ್ನಿದ್ದಷ್ಟು ಹೆಚ್ಚಾಗುತ್ತವೆ. ನಾವು ಸುಮ್ಮನಿದ್ದಷ್ಟು ಸಮಾಜದ ಗಾಯಗಳು ಹೆಚ್ಚಾಗುತ್ತವೆ. ಅದರಲ್ಲೂ ಧ್ವನಿಯಿಲ್ಲದವರಿಗೆ ಆಗುವ ಗಾಯಗಳು, ಅಲ್ಪ ಸಂಖ್ಯಾತರಿಗೆ ಆಗುವ ಗಾಯಗಳು, ಪಕ್ಕಕ್ಕೆ ತಳ್ಳಿದವರಿಗೆ ಆಗುವ ಗಾಯಗಳು ಹೆಚ್ಚಾಗುತ್ತವೆ. ನಮ್ಮ ಬೆರಳಿಗೆ ಏಟಾದರೆ, ನನ್ನ ಹೆಬ್ಬೆರಳನ್ನು ಕತ್ತರಿಸಿದರೆ, ಅದು ನನ್ನ ನೋವು ಮಾತ್ರ. ಆದರೆ, ಏಕಲವ್ಯನ ಬೆರಳನ್ನು ಕಡಿದರೆ ಅದು ಎಲ್ಲರ ನೋವಾಗಬೇಕು” ಎಂದರು.

“ರಾಜ್ ಕುಮಾರ್, ಎಂಜಿಆರ್, ಎನ್‌ಟಿಆರ್ ಅವರಂತೆ ಈಗ ಸಿನಿಮಾ ನಟರು ರಾಜಕಾರಣಕ್ಕೆ ಬಂದರೆ ಹೇಗಿರುತ್ತದೆ? ಎಂದು ನನ್ನನ್ನು ಒಬ್ಬರು ಕೇಳಿದರು. ಆದರೆ, ಅದಕ್ಕೆ ಅವಕಾಶವೇ ಕೊಟ್ಟಿಲ್ಲ ಅಲ್ವಾ. ಅವನೇ ದೊಡ್ಡ ನಟ ಆಗಿ ಬಿಟ್ಟಿದ್ದಾನಲ್ಲ. ದಿನಕ್ಕೆ ಐದು ವಸ್ತ್ರಗಳನ್ನು ಯಾರಾದರು ಬದಲಾಯಿಸುತ್ತಾರಾ? ಇದು ಯಾರಪ್ಪನ ದುಡ್ಡು?” ಎಂದು ಪ್ರಶ್ನಿಸಿದರು.

ಮೊನ್ನೆ 11 ದಿನಗಳ ಕಾಲ ಉಪವಾಸ ಮಾಡಿ ಓಡಾಡಿದ್ದಾನೆ. ಅಂದರೆ, ದೇಶ ಒಬ್ಬ ಪ್ರಧಾನಿ ಇಲ್ಲದೆ 11 ದಿನ ನಡೆಯಿತು ಎಂದರ್ಥ. ಸಬ್ಕಾ ಸಾಥ್ ಸಬ್ಕಾ ವಿಕಾಸ್, ಬಾಯಿಯೋ ಬೆಹನೋ ಎನ್ನುತ್ತಾರೆ. ಈಗ ಕೋಟಿ ಚೆನ್ನಯ್ಯರನ್ನು ಕಿಡ್ನಾಪ್ ಮಾಡೋಕೆ ಬಂದಿದ್ದಾರೆ. ಆದರೆ, ನೀವು ಬುದ್ದಿ ಕಳಿಸಿದ್ದೀರಿ. ಒಂದೇ ಭಾರತ್ ಎಕ್ಸ್ ಪ್ರೆಸ್‌ಗೆ ಆತ ಫ್ಲ್ಯಾಗ್ ತೋರಿದಷ್ಟು ಸ್ಟೇಷನ್ ಮಾಸ್ಟರ್ ಕೂಡ ರೈಲುಗಳಿಗೆ ಫ್ಲ್ಯಾಗ್ ತೋರಿಸಿರಲು ಸಾಧ್ಯವಿಲ್ಲ. ಮಣಿಪುರ ಹೊತ್ತಿ ಉರಿಯುತ್ತಿದೆ. ಆತ ಅಲಹಾಬಾದ್‌ನಲ್ಲಿ ಐದು ವಂದೇ ಭಾರತ್ ರೈಲು ಉದ್ಘಾಟಿಸುತ್ತಿದ್ದೇನೆ ಎಂದು ಟ್ವೀಟ್ ಮಾಡಿದ್ದ. ಆಗ ನಾನು, ಅದರಲ್ಲಿ ಒಂದಾದರು ಮಣಿಪುರರಕ್ಕೆ ಇದೆಯಾ? ಎಂದು ಕೇಳಿದೆ. ಆತ ಟ್ವೀಟ್ ಡಿಲಿಟ್ ಮಾಡಿದ. ಅಂದರೆ, ನಿರಂತರವಾಗಿ ಪ್ರಶ್ನಿಸಿದರೆ ಕೇಳಿಸಿಕೊಳ್ಳುತ್ತಾರೆ. ಈಗ ನಾವು ಪ್ರಶ್ನೆ ಮಾಡಬೇಕು ಎಂದರು.

ಇದನ್ನೂ ಓದಿ : ‘ಮಾನವತಾವಾದಿ’ ಸಂವಿಧಾನವನ್ನು ‘ಮನುವಾದಿ’ ಮಾಡಲು ಹೊರಟಿದ್ದಾರೆ: ಪ್ರೊ. ನರೇಂದ್ರ ನಾಯಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...