Homeಕರ್ನಾಟಕನಮ್ಮ ನಾಯಕ ಅಂದು ಗುಹೆಯೊಳಗೆ, ಇಂದು ನೀರೊಳಗೆ, ಮುಂದೆ ಚಂದ್ರನ ಮೇಲೆ: ಪ್ರಕಾಶ್ ರಾಜ್

ನಮ್ಮ ನಾಯಕ ಅಂದು ಗುಹೆಯೊಳಗೆ, ಇಂದು ನೀರೊಳಗೆ, ಮುಂದೆ ಚಂದ್ರನ ಮೇಲೆ: ಪ್ರಕಾಶ್ ರಾಜ್

- Advertisement -
- Advertisement -

“ನಮಗೊಬ್ಬ ನಾಯಕನಿದ್ದಾನೆ. ಆತ 2019ರಲ್ಲಿ ಕ್ಯಾಮರಾ ಮ್ಯಾನ್‌ಗಳ ಜೊತೆ ಗುಹೆ ಸೇರ್ಕೊಂಡ. ಈಗ ಚುನಾವಣೆ ಬರುವಾಗ ನೀರಿನೊಳಗೆ ಹೋಗಿದ್ದಾನೆ. ಮುಂದಿನ ಚುನಾವಣೆಗೆ ಚಂದ್ರನ ಮೇಲೆ ನಿಂತುಕೊಳ್ಳುತ್ತಾನೆ. ಆತ 20ನೇ ಶತಮಾನದ ದೇಶದ ನಾಯಕನಾ?” ಎಂದು ಬಹುಭಾಷಾ ನಟ ಪ್ರಕಾಶ್ ರಾಜ್ ಪ್ರಧಾನಿ ಮೋದಿ ವಿರುದ್ದ ಪರೋಕ್ಷಾ ವಾಗ್ದಾಳಿ ನಡೆಸಿದ್ದಾರೆ.

ಡೆಮಾಕ್ರಟಿಕ್ ಯೂಥ್ ಫೆಡರೇಶನ್ ಆಫ್ ಇಂಡಿಯಾ (ಡಿವೈಎಫ್ಐ) ದಕ್ಷಿಣ ಕನ್ನಡ ಜಿಲ್ಲೆ ಉಳ್ಳಾಲದಲ್ಲಿ ಆಯೋಜಿಸಿದ್ದ ಮೂರು ದಿನಗಳ 12ನೇ ರಾಜ್ಯ ಮಟ್ಟದ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಅವರು ಮಂಗಳವಾರ ಮಾತನಾಡಿದರು.

“ದೇವಸ್ಥಾನದ ಉದ್ಘಾಟನೆಗೆ ಉಪವಾಸ ಮಾಡುವ ನಾಯಕರಿದ್ದಾರೆ. ಹಾಗಾಗಿ, ನಾವು ಮತ್ತೆ ಸ್ವಾತಂತ್ರ್ಯವನ್ನು, ಪ್ರಜಾಪ್ರಭುತ್ವವನ್ನು ನಮ್ಮ ಕನಸನ್ನು ಸಾರ್ಥಕಗೊಳಿಸುವ ದಾರಿಯನ್ನು ನೋಡಿಕೊಳ್ಳಲು ಇಲ್ಲಿದ್ದೇವೆ” ಎಂದು ಸಮ್ಮೇಳನವನ್ನು ಉದ್ದೇಶಿಸಿ ಪ್ರಕಾಶ್ ರಾಜ್ ಹೇಳಿದರು.

“ಧರ್ಮಗಳನ್ನು ನಂಬುವವರ ಬಗ್ಗೆ ನನಗೆ ಸಮಸ್ಯೆ ಇಲ್ಲ. ಅವರವರ ಭಾವಕ್ಕೆ, ಭಕ್ತಿಗೆ ಧರ್ಮ ಆಚರಿಸಲಿ. ಆದರೆ, ಎಲ್ಲಾ ಧರ್ಮಗಳಲ್ಲಿರುವ ಅಂಧ ಭಕ್ತರ ಬಗ್ಗೆ ನನಗೆ ಸಮಸ್ಯೆಯಿದೆ” ಎಂದರು.

“ನಾನೊಬ್ಬ ಕಲಾವಿದ, ನಾನೊಬ್ಬ ನಿರಂತರ ವಿರೋಧ ಪಕ್ಷ. ನಾನು ಯಾವ ಪಕ್ಷ ಎಂದು ಹಲವರು ಕೇಳುತ್ತಾರೆ. ನಾನು ಯಾವುದೇ ಪಕ್ಷವಲ್ಲ, ನಾನು ಜನರ ಪಕ್ಷ. ಕಲಾವಿದನಾಗಿ ಮಾತನಾಡುವುದು, ಮಾತನಾಡಬೇಕಾಗಿರುವುದು ನನ್ನ ಜವಾಬ್ದಾರಿ. ಯಾವುದಾದರು ಪಕ್ಷ ಸೇರಿದ್ರೆ ಎಲ್ಲೋ ಇರ್ತಿದ್ರಿ ಎಂದು ಹಲವರು ನನಗೆ ಹೇಳುತ್ತಾರೆ. ಯಾಕಿರಬೇಕು? ನಾನೇನು ಬಡವ ಅಲ್ಲ. ಜನರ ಶ್ರೀಮಂತಿಕೆ ನನ್ನತ್ರ ಇದೆ. ನಾನು ಕಳೆದುಕೊಳ್ಳುವಷ್ಟು ಶ್ರೀಮಂತ. ನಿಮ್ಮ ಹಾಗೆ ಸೇರಿಸಿ ಇಡುವಷ್ಟು ಭಿಕ್ಷುಕ ಅಲ್ಲ” ಎಂದು ಹೇಳಿದರು.

“ನಮ್ಮ ದೇಹಕ್ಕಾದ ಗಾಯಗಳು ಕೆಲವೊಮ್ಮೆ ನಾವು ಸುಮ್ಮನ್ನಿದ್ದರೂ ವಾಸಿಯಾಗಿ ಬಿಡುತ್ತವೆ. ಆದರೆ, ದೇಶಕ್ಕಾದ ಗಾಯಗಳು ಸುಮ್ಮನ್ನಿದ್ದಷ್ಟು ಹೆಚ್ಚಾಗುತ್ತವೆ. ನಾವು ಸುಮ್ಮನಿದ್ದಷ್ಟು ಸಮಾಜದ ಗಾಯಗಳು ಹೆಚ್ಚಾಗುತ್ತವೆ. ಅದರಲ್ಲೂ ಧ್ವನಿಯಿಲ್ಲದವರಿಗೆ ಆಗುವ ಗಾಯಗಳು, ಅಲ್ಪ ಸಂಖ್ಯಾತರಿಗೆ ಆಗುವ ಗಾಯಗಳು, ಪಕ್ಕಕ್ಕೆ ತಳ್ಳಿದವರಿಗೆ ಆಗುವ ಗಾಯಗಳು ಹೆಚ್ಚಾಗುತ್ತವೆ. ನಮ್ಮ ಬೆರಳಿಗೆ ಏಟಾದರೆ, ನನ್ನ ಹೆಬ್ಬೆರಳನ್ನು ಕತ್ತರಿಸಿದರೆ, ಅದು ನನ್ನ ನೋವು ಮಾತ್ರ. ಆದರೆ, ಏಕಲವ್ಯನ ಬೆರಳನ್ನು ಕಡಿದರೆ ಅದು ಎಲ್ಲರ ನೋವಾಗಬೇಕು” ಎಂದರು.

“ರಾಜ್ ಕುಮಾರ್, ಎಂಜಿಆರ್, ಎನ್‌ಟಿಆರ್ ಅವರಂತೆ ಈಗ ಸಿನಿಮಾ ನಟರು ರಾಜಕಾರಣಕ್ಕೆ ಬಂದರೆ ಹೇಗಿರುತ್ತದೆ? ಎಂದು ನನ್ನನ್ನು ಒಬ್ಬರು ಕೇಳಿದರು. ಆದರೆ, ಅದಕ್ಕೆ ಅವಕಾಶವೇ ಕೊಟ್ಟಿಲ್ಲ ಅಲ್ವಾ. ಅವನೇ ದೊಡ್ಡ ನಟ ಆಗಿ ಬಿಟ್ಟಿದ್ದಾನಲ್ಲ. ದಿನಕ್ಕೆ ಐದು ವಸ್ತ್ರಗಳನ್ನು ಯಾರಾದರು ಬದಲಾಯಿಸುತ್ತಾರಾ? ಇದು ಯಾರಪ್ಪನ ದುಡ್ಡು?” ಎಂದು ಪ್ರಶ್ನಿಸಿದರು.

ಮೊನ್ನೆ 11 ದಿನಗಳ ಕಾಲ ಉಪವಾಸ ಮಾಡಿ ಓಡಾಡಿದ್ದಾನೆ. ಅಂದರೆ, ದೇಶ ಒಬ್ಬ ಪ್ರಧಾನಿ ಇಲ್ಲದೆ 11 ದಿನ ನಡೆಯಿತು ಎಂದರ್ಥ. ಸಬ್ಕಾ ಸಾಥ್ ಸಬ್ಕಾ ವಿಕಾಸ್, ಬಾಯಿಯೋ ಬೆಹನೋ ಎನ್ನುತ್ತಾರೆ. ಈಗ ಕೋಟಿ ಚೆನ್ನಯ್ಯರನ್ನು ಕಿಡ್ನಾಪ್ ಮಾಡೋಕೆ ಬಂದಿದ್ದಾರೆ. ಆದರೆ, ನೀವು ಬುದ್ದಿ ಕಳಿಸಿದ್ದೀರಿ. ಒಂದೇ ಭಾರತ್ ಎಕ್ಸ್ ಪ್ರೆಸ್‌ಗೆ ಆತ ಫ್ಲ್ಯಾಗ್ ತೋರಿದಷ್ಟು ಸ್ಟೇಷನ್ ಮಾಸ್ಟರ್ ಕೂಡ ರೈಲುಗಳಿಗೆ ಫ್ಲ್ಯಾಗ್ ತೋರಿಸಿರಲು ಸಾಧ್ಯವಿಲ್ಲ. ಮಣಿಪುರ ಹೊತ್ತಿ ಉರಿಯುತ್ತಿದೆ. ಆತ ಅಲಹಾಬಾದ್‌ನಲ್ಲಿ ಐದು ವಂದೇ ಭಾರತ್ ರೈಲು ಉದ್ಘಾಟಿಸುತ್ತಿದ್ದೇನೆ ಎಂದು ಟ್ವೀಟ್ ಮಾಡಿದ್ದ. ಆಗ ನಾನು, ಅದರಲ್ಲಿ ಒಂದಾದರು ಮಣಿಪುರರಕ್ಕೆ ಇದೆಯಾ? ಎಂದು ಕೇಳಿದೆ. ಆತ ಟ್ವೀಟ್ ಡಿಲಿಟ್ ಮಾಡಿದ. ಅಂದರೆ, ನಿರಂತರವಾಗಿ ಪ್ರಶ್ನಿಸಿದರೆ ಕೇಳಿಸಿಕೊಳ್ಳುತ್ತಾರೆ. ಈಗ ನಾವು ಪ್ರಶ್ನೆ ಮಾಡಬೇಕು ಎಂದರು.

ಇದನ್ನೂ ಓದಿ : ‘ಮಾನವತಾವಾದಿ’ ಸಂವಿಧಾನವನ್ನು ‘ಮನುವಾದಿ’ ಮಾಡಲು ಹೊರಟಿದ್ದಾರೆ: ಪ್ರೊ. ನರೇಂದ್ರ ನಾಯಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...