Homeಕರ್ನಾಟಕನಮ್ಮ ನಾಯಕ ಅಂದು ಗುಹೆಯೊಳಗೆ, ಇಂದು ನೀರೊಳಗೆ, ಮುಂದೆ ಚಂದ್ರನ ಮೇಲೆ: ಪ್ರಕಾಶ್ ರಾಜ್

ನಮ್ಮ ನಾಯಕ ಅಂದು ಗುಹೆಯೊಳಗೆ, ಇಂದು ನೀರೊಳಗೆ, ಮುಂದೆ ಚಂದ್ರನ ಮೇಲೆ: ಪ್ರಕಾಶ್ ರಾಜ್

- Advertisement -
- Advertisement -

“ನಮಗೊಬ್ಬ ನಾಯಕನಿದ್ದಾನೆ. ಆತ 2019ರಲ್ಲಿ ಕ್ಯಾಮರಾ ಮ್ಯಾನ್‌ಗಳ ಜೊತೆ ಗುಹೆ ಸೇರ್ಕೊಂಡ. ಈಗ ಚುನಾವಣೆ ಬರುವಾಗ ನೀರಿನೊಳಗೆ ಹೋಗಿದ್ದಾನೆ. ಮುಂದಿನ ಚುನಾವಣೆಗೆ ಚಂದ್ರನ ಮೇಲೆ ನಿಂತುಕೊಳ್ಳುತ್ತಾನೆ. ಆತ 20ನೇ ಶತಮಾನದ ದೇಶದ ನಾಯಕನಾ?” ಎಂದು ಬಹುಭಾಷಾ ನಟ ಪ್ರಕಾಶ್ ರಾಜ್ ಪ್ರಧಾನಿ ಮೋದಿ ವಿರುದ್ದ ಪರೋಕ್ಷಾ ವಾಗ್ದಾಳಿ ನಡೆಸಿದ್ದಾರೆ.

ಡೆಮಾಕ್ರಟಿಕ್ ಯೂಥ್ ಫೆಡರೇಶನ್ ಆಫ್ ಇಂಡಿಯಾ (ಡಿವೈಎಫ್ಐ) ದಕ್ಷಿಣ ಕನ್ನಡ ಜಿಲ್ಲೆ ಉಳ್ಳಾಲದಲ್ಲಿ ಆಯೋಜಿಸಿದ್ದ ಮೂರು ದಿನಗಳ 12ನೇ ರಾಜ್ಯ ಮಟ್ಟದ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಅವರು ಮಂಗಳವಾರ ಮಾತನಾಡಿದರು.

“ದೇವಸ್ಥಾನದ ಉದ್ಘಾಟನೆಗೆ ಉಪವಾಸ ಮಾಡುವ ನಾಯಕರಿದ್ದಾರೆ. ಹಾಗಾಗಿ, ನಾವು ಮತ್ತೆ ಸ್ವಾತಂತ್ರ್ಯವನ್ನು, ಪ್ರಜಾಪ್ರಭುತ್ವವನ್ನು ನಮ್ಮ ಕನಸನ್ನು ಸಾರ್ಥಕಗೊಳಿಸುವ ದಾರಿಯನ್ನು ನೋಡಿಕೊಳ್ಳಲು ಇಲ್ಲಿದ್ದೇವೆ” ಎಂದು ಸಮ್ಮೇಳನವನ್ನು ಉದ್ದೇಶಿಸಿ ಪ್ರಕಾಶ್ ರಾಜ್ ಹೇಳಿದರು.

“ಧರ್ಮಗಳನ್ನು ನಂಬುವವರ ಬಗ್ಗೆ ನನಗೆ ಸಮಸ್ಯೆ ಇಲ್ಲ. ಅವರವರ ಭಾವಕ್ಕೆ, ಭಕ್ತಿಗೆ ಧರ್ಮ ಆಚರಿಸಲಿ. ಆದರೆ, ಎಲ್ಲಾ ಧರ್ಮಗಳಲ್ಲಿರುವ ಅಂಧ ಭಕ್ತರ ಬಗ್ಗೆ ನನಗೆ ಸಮಸ್ಯೆಯಿದೆ” ಎಂದರು.

“ನಾನೊಬ್ಬ ಕಲಾವಿದ, ನಾನೊಬ್ಬ ನಿರಂತರ ವಿರೋಧ ಪಕ್ಷ. ನಾನು ಯಾವ ಪಕ್ಷ ಎಂದು ಹಲವರು ಕೇಳುತ್ತಾರೆ. ನಾನು ಯಾವುದೇ ಪಕ್ಷವಲ್ಲ, ನಾನು ಜನರ ಪಕ್ಷ. ಕಲಾವಿದನಾಗಿ ಮಾತನಾಡುವುದು, ಮಾತನಾಡಬೇಕಾಗಿರುವುದು ನನ್ನ ಜವಾಬ್ದಾರಿ. ಯಾವುದಾದರು ಪಕ್ಷ ಸೇರಿದ್ರೆ ಎಲ್ಲೋ ಇರ್ತಿದ್ರಿ ಎಂದು ಹಲವರು ನನಗೆ ಹೇಳುತ್ತಾರೆ. ಯಾಕಿರಬೇಕು? ನಾನೇನು ಬಡವ ಅಲ್ಲ. ಜನರ ಶ್ರೀಮಂತಿಕೆ ನನ್ನತ್ರ ಇದೆ. ನಾನು ಕಳೆದುಕೊಳ್ಳುವಷ್ಟು ಶ್ರೀಮಂತ. ನಿಮ್ಮ ಹಾಗೆ ಸೇರಿಸಿ ಇಡುವಷ್ಟು ಭಿಕ್ಷುಕ ಅಲ್ಲ” ಎಂದು ಹೇಳಿದರು.

“ನಮ್ಮ ದೇಹಕ್ಕಾದ ಗಾಯಗಳು ಕೆಲವೊಮ್ಮೆ ನಾವು ಸುಮ್ಮನ್ನಿದ್ದರೂ ವಾಸಿಯಾಗಿ ಬಿಡುತ್ತವೆ. ಆದರೆ, ದೇಶಕ್ಕಾದ ಗಾಯಗಳು ಸುಮ್ಮನ್ನಿದ್ದಷ್ಟು ಹೆಚ್ಚಾಗುತ್ತವೆ. ನಾವು ಸುಮ್ಮನಿದ್ದಷ್ಟು ಸಮಾಜದ ಗಾಯಗಳು ಹೆಚ್ಚಾಗುತ್ತವೆ. ಅದರಲ್ಲೂ ಧ್ವನಿಯಿಲ್ಲದವರಿಗೆ ಆಗುವ ಗಾಯಗಳು, ಅಲ್ಪ ಸಂಖ್ಯಾತರಿಗೆ ಆಗುವ ಗಾಯಗಳು, ಪಕ್ಕಕ್ಕೆ ತಳ್ಳಿದವರಿಗೆ ಆಗುವ ಗಾಯಗಳು ಹೆಚ್ಚಾಗುತ್ತವೆ. ನಮ್ಮ ಬೆರಳಿಗೆ ಏಟಾದರೆ, ನನ್ನ ಹೆಬ್ಬೆರಳನ್ನು ಕತ್ತರಿಸಿದರೆ, ಅದು ನನ್ನ ನೋವು ಮಾತ್ರ. ಆದರೆ, ಏಕಲವ್ಯನ ಬೆರಳನ್ನು ಕಡಿದರೆ ಅದು ಎಲ್ಲರ ನೋವಾಗಬೇಕು” ಎಂದರು.

“ರಾಜ್ ಕುಮಾರ್, ಎಂಜಿಆರ್, ಎನ್‌ಟಿಆರ್ ಅವರಂತೆ ಈಗ ಸಿನಿಮಾ ನಟರು ರಾಜಕಾರಣಕ್ಕೆ ಬಂದರೆ ಹೇಗಿರುತ್ತದೆ? ಎಂದು ನನ್ನನ್ನು ಒಬ್ಬರು ಕೇಳಿದರು. ಆದರೆ, ಅದಕ್ಕೆ ಅವಕಾಶವೇ ಕೊಟ್ಟಿಲ್ಲ ಅಲ್ವಾ. ಅವನೇ ದೊಡ್ಡ ನಟ ಆಗಿ ಬಿಟ್ಟಿದ್ದಾನಲ್ಲ. ದಿನಕ್ಕೆ ಐದು ವಸ್ತ್ರಗಳನ್ನು ಯಾರಾದರು ಬದಲಾಯಿಸುತ್ತಾರಾ? ಇದು ಯಾರಪ್ಪನ ದುಡ್ಡು?” ಎಂದು ಪ್ರಶ್ನಿಸಿದರು.

ಮೊನ್ನೆ 11 ದಿನಗಳ ಕಾಲ ಉಪವಾಸ ಮಾಡಿ ಓಡಾಡಿದ್ದಾನೆ. ಅಂದರೆ, ದೇಶ ಒಬ್ಬ ಪ್ರಧಾನಿ ಇಲ್ಲದೆ 11 ದಿನ ನಡೆಯಿತು ಎಂದರ್ಥ. ಸಬ್ಕಾ ಸಾಥ್ ಸಬ್ಕಾ ವಿಕಾಸ್, ಬಾಯಿಯೋ ಬೆಹನೋ ಎನ್ನುತ್ತಾರೆ. ಈಗ ಕೋಟಿ ಚೆನ್ನಯ್ಯರನ್ನು ಕಿಡ್ನಾಪ್ ಮಾಡೋಕೆ ಬಂದಿದ್ದಾರೆ. ಆದರೆ, ನೀವು ಬುದ್ದಿ ಕಳಿಸಿದ್ದೀರಿ. ಒಂದೇ ಭಾರತ್ ಎಕ್ಸ್ ಪ್ರೆಸ್‌ಗೆ ಆತ ಫ್ಲ್ಯಾಗ್ ತೋರಿದಷ್ಟು ಸ್ಟೇಷನ್ ಮಾಸ್ಟರ್ ಕೂಡ ರೈಲುಗಳಿಗೆ ಫ್ಲ್ಯಾಗ್ ತೋರಿಸಿರಲು ಸಾಧ್ಯವಿಲ್ಲ. ಮಣಿಪುರ ಹೊತ್ತಿ ಉರಿಯುತ್ತಿದೆ. ಆತ ಅಲಹಾಬಾದ್‌ನಲ್ಲಿ ಐದು ವಂದೇ ಭಾರತ್ ರೈಲು ಉದ್ಘಾಟಿಸುತ್ತಿದ್ದೇನೆ ಎಂದು ಟ್ವೀಟ್ ಮಾಡಿದ್ದ. ಆಗ ನಾನು, ಅದರಲ್ಲಿ ಒಂದಾದರು ಮಣಿಪುರರಕ್ಕೆ ಇದೆಯಾ? ಎಂದು ಕೇಳಿದೆ. ಆತ ಟ್ವೀಟ್ ಡಿಲಿಟ್ ಮಾಡಿದ. ಅಂದರೆ, ನಿರಂತರವಾಗಿ ಪ್ರಶ್ನಿಸಿದರೆ ಕೇಳಿಸಿಕೊಳ್ಳುತ್ತಾರೆ. ಈಗ ನಾವು ಪ್ರಶ್ನೆ ಮಾಡಬೇಕು ಎಂದರು.

ಇದನ್ನೂ ಓದಿ : ‘ಮಾನವತಾವಾದಿ’ ಸಂವಿಧಾನವನ್ನು ‘ಮನುವಾದಿ’ ಮಾಡಲು ಹೊರಟಿದ್ದಾರೆ: ಪ್ರೊ. ನರೇಂದ್ರ ನಾಯಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...