Homeಕರ್ನಾಟಕನಮ್ಮ ನಾಯಕ ಅಂದು ಗುಹೆಯೊಳಗೆ, ಇಂದು ನೀರೊಳಗೆ, ಮುಂದೆ ಚಂದ್ರನ ಮೇಲೆ: ಪ್ರಕಾಶ್ ರಾಜ್

ನಮ್ಮ ನಾಯಕ ಅಂದು ಗುಹೆಯೊಳಗೆ, ಇಂದು ನೀರೊಳಗೆ, ಮುಂದೆ ಚಂದ್ರನ ಮೇಲೆ: ಪ್ರಕಾಶ್ ರಾಜ್

- Advertisement -
- Advertisement -

“ನಮಗೊಬ್ಬ ನಾಯಕನಿದ್ದಾನೆ. ಆತ 2019ರಲ್ಲಿ ಕ್ಯಾಮರಾ ಮ್ಯಾನ್‌ಗಳ ಜೊತೆ ಗುಹೆ ಸೇರ್ಕೊಂಡ. ಈಗ ಚುನಾವಣೆ ಬರುವಾಗ ನೀರಿನೊಳಗೆ ಹೋಗಿದ್ದಾನೆ. ಮುಂದಿನ ಚುನಾವಣೆಗೆ ಚಂದ್ರನ ಮೇಲೆ ನಿಂತುಕೊಳ್ಳುತ್ತಾನೆ. ಆತ 20ನೇ ಶತಮಾನದ ದೇಶದ ನಾಯಕನಾ?” ಎಂದು ಬಹುಭಾಷಾ ನಟ ಪ್ರಕಾಶ್ ರಾಜ್ ಪ್ರಧಾನಿ ಮೋದಿ ವಿರುದ್ದ ಪರೋಕ್ಷಾ ವಾಗ್ದಾಳಿ ನಡೆಸಿದ್ದಾರೆ.

ಡೆಮಾಕ್ರಟಿಕ್ ಯೂಥ್ ಫೆಡರೇಶನ್ ಆಫ್ ಇಂಡಿಯಾ (ಡಿವೈಎಫ್ಐ) ದಕ್ಷಿಣ ಕನ್ನಡ ಜಿಲ್ಲೆ ಉಳ್ಳಾಲದಲ್ಲಿ ಆಯೋಜಿಸಿದ್ದ ಮೂರು ದಿನಗಳ 12ನೇ ರಾಜ್ಯ ಮಟ್ಟದ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಅವರು ಮಂಗಳವಾರ ಮಾತನಾಡಿದರು.

“ದೇವಸ್ಥಾನದ ಉದ್ಘಾಟನೆಗೆ ಉಪವಾಸ ಮಾಡುವ ನಾಯಕರಿದ್ದಾರೆ. ಹಾಗಾಗಿ, ನಾವು ಮತ್ತೆ ಸ್ವಾತಂತ್ರ್ಯವನ್ನು, ಪ್ರಜಾಪ್ರಭುತ್ವವನ್ನು ನಮ್ಮ ಕನಸನ್ನು ಸಾರ್ಥಕಗೊಳಿಸುವ ದಾರಿಯನ್ನು ನೋಡಿಕೊಳ್ಳಲು ಇಲ್ಲಿದ್ದೇವೆ” ಎಂದು ಸಮ್ಮೇಳನವನ್ನು ಉದ್ದೇಶಿಸಿ ಪ್ರಕಾಶ್ ರಾಜ್ ಹೇಳಿದರು.

“ಧರ್ಮಗಳನ್ನು ನಂಬುವವರ ಬಗ್ಗೆ ನನಗೆ ಸಮಸ್ಯೆ ಇಲ್ಲ. ಅವರವರ ಭಾವಕ್ಕೆ, ಭಕ್ತಿಗೆ ಧರ್ಮ ಆಚರಿಸಲಿ. ಆದರೆ, ಎಲ್ಲಾ ಧರ್ಮಗಳಲ್ಲಿರುವ ಅಂಧ ಭಕ್ತರ ಬಗ್ಗೆ ನನಗೆ ಸಮಸ್ಯೆಯಿದೆ” ಎಂದರು.

“ನಾನೊಬ್ಬ ಕಲಾವಿದ, ನಾನೊಬ್ಬ ನಿರಂತರ ವಿರೋಧ ಪಕ್ಷ. ನಾನು ಯಾವ ಪಕ್ಷ ಎಂದು ಹಲವರು ಕೇಳುತ್ತಾರೆ. ನಾನು ಯಾವುದೇ ಪಕ್ಷವಲ್ಲ, ನಾನು ಜನರ ಪಕ್ಷ. ಕಲಾವಿದನಾಗಿ ಮಾತನಾಡುವುದು, ಮಾತನಾಡಬೇಕಾಗಿರುವುದು ನನ್ನ ಜವಾಬ್ದಾರಿ. ಯಾವುದಾದರು ಪಕ್ಷ ಸೇರಿದ್ರೆ ಎಲ್ಲೋ ಇರ್ತಿದ್ರಿ ಎಂದು ಹಲವರು ನನಗೆ ಹೇಳುತ್ತಾರೆ. ಯಾಕಿರಬೇಕು? ನಾನೇನು ಬಡವ ಅಲ್ಲ. ಜನರ ಶ್ರೀಮಂತಿಕೆ ನನ್ನತ್ರ ಇದೆ. ನಾನು ಕಳೆದುಕೊಳ್ಳುವಷ್ಟು ಶ್ರೀಮಂತ. ನಿಮ್ಮ ಹಾಗೆ ಸೇರಿಸಿ ಇಡುವಷ್ಟು ಭಿಕ್ಷುಕ ಅಲ್ಲ” ಎಂದು ಹೇಳಿದರು.

“ನಮ್ಮ ದೇಹಕ್ಕಾದ ಗಾಯಗಳು ಕೆಲವೊಮ್ಮೆ ನಾವು ಸುಮ್ಮನ್ನಿದ್ದರೂ ವಾಸಿಯಾಗಿ ಬಿಡುತ್ತವೆ. ಆದರೆ, ದೇಶಕ್ಕಾದ ಗಾಯಗಳು ಸುಮ್ಮನ್ನಿದ್ದಷ್ಟು ಹೆಚ್ಚಾಗುತ್ತವೆ. ನಾವು ಸುಮ್ಮನಿದ್ದಷ್ಟು ಸಮಾಜದ ಗಾಯಗಳು ಹೆಚ್ಚಾಗುತ್ತವೆ. ಅದರಲ್ಲೂ ಧ್ವನಿಯಿಲ್ಲದವರಿಗೆ ಆಗುವ ಗಾಯಗಳು, ಅಲ್ಪ ಸಂಖ್ಯಾತರಿಗೆ ಆಗುವ ಗಾಯಗಳು, ಪಕ್ಕಕ್ಕೆ ತಳ್ಳಿದವರಿಗೆ ಆಗುವ ಗಾಯಗಳು ಹೆಚ್ಚಾಗುತ್ತವೆ. ನಮ್ಮ ಬೆರಳಿಗೆ ಏಟಾದರೆ, ನನ್ನ ಹೆಬ್ಬೆರಳನ್ನು ಕತ್ತರಿಸಿದರೆ, ಅದು ನನ್ನ ನೋವು ಮಾತ್ರ. ಆದರೆ, ಏಕಲವ್ಯನ ಬೆರಳನ್ನು ಕಡಿದರೆ ಅದು ಎಲ್ಲರ ನೋವಾಗಬೇಕು” ಎಂದರು.

“ರಾಜ್ ಕುಮಾರ್, ಎಂಜಿಆರ್, ಎನ್‌ಟಿಆರ್ ಅವರಂತೆ ಈಗ ಸಿನಿಮಾ ನಟರು ರಾಜಕಾರಣಕ್ಕೆ ಬಂದರೆ ಹೇಗಿರುತ್ತದೆ? ಎಂದು ನನ್ನನ್ನು ಒಬ್ಬರು ಕೇಳಿದರು. ಆದರೆ, ಅದಕ್ಕೆ ಅವಕಾಶವೇ ಕೊಟ್ಟಿಲ್ಲ ಅಲ್ವಾ. ಅವನೇ ದೊಡ್ಡ ನಟ ಆಗಿ ಬಿಟ್ಟಿದ್ದಾನಲ್ಲ. ದಿನಕ್ಕೆ ಐದು ವಸ್ತ್ರಗಳನ್ನು ಯಾರಾದರು ಬದಲಾಯಿಸುತ್ತಾರಾ? ಇದು ಯಾರಪ್ಪನ ದುಡ್ಡು?” ಎಂದು ಪ್ರಶ್ನಿಸಿದರು.

ಮೊನ್ನೆ 11 ದಿನಗಳ ಕಾಲ ಉಪವಾಸ ಮಾಡಿ ಓಡಾಡಿದ್ದಾನೆ. ಅಂದರೆ, ದೇಶ ಒಬ್ಬ ಪ್ರಧಾನಿ ಇಲ್ಲದೆ 11 ದಿನ ನಡೆಯಿತು ಎಂದರ್ಥ. ಸಬ್ಕಾ ಸಾಥ್ ಸಬ್ಕಾ ವಿಕಾಸ್, ಬಾಯಿಯೋ ಬೆಹನೋ ಎನ್ನುತ್ತಾರೆ. ಈಗ ಕೋಟಿ ಚೆನ್ನಯ್ಯರನ್ನು ಕಿಡ್ನಾಪ್ ಮಾಡೋಕೆ ಬಂದಿದ್ದಾರೆ. ಆದರೆ, ನೀವು ಬುದ್ದಿ ಕಳಿಸಿದ್ದೀರಿ. ಒಂದೇ ಭಾರತ್ ಎಕ್ಸ್ ಪ್ರೆಸ್‌ಗೆ ಆತ ಫ್ಲ್ಯಾಗ್ ತೋರಿದಷ್ಟು ಸ್ಟೇಷನ್ ಮಾಸ್ಟರ್ ಕೂಡ ರೈಲುಗಳಿಗೆ ಫ್ಲ್ಯಾಗ್ ತೋರಿಸಿರಲು ಸಾಧ್ಯವಿಲ್ಲ. ಮಣಿಪುರ ಹೊತ್ತಿ ಉರಿಯುತ್ತಿದೆ. ಆತ ಅಲಹಾಬಾದ್‌ನಲ್ಲಿ ಐದು ವಂದೇ ಭಾರತ್ ರೈಲು ಉದ್ಘಾಟಿಸುತ್ತಿದ್ದೇನೆ ಎಂದು ಟ್ವೀಟ್ ಮಾಡಿದ್ದ. ಆಗ ನಾನು, ಅದರಲ್ಲಿ ಒಂದಾದರು ಮಣಿಪುರರಕ್ಕೆ ಇದೆಯಾ? ಎಂದು ಕೇಳಿದೆ. ಆತ ಟ್ವೀಟ್ ಡಿಲಿಟ್ ಮಾಡಿದ. ಅಂದರೆ, ನಿರಂತರವಾಗಿ ಪ್ರಶ್ನಿಸಿದರೆ ಕೇಳಿಸಿಕೊಳ್ಳುತ್ತಾರೆ. ಈಗ ನಾವು ಪ್ರಶ್ನೆ ಮಾಡಬೇಕು ಎಂದರು.

ಇದನ್ನೂ ಓದಿ : ‘ಮಾನವತಾವಾದಿ’ ಸಂವಿಧಾನವನ್ನು ‘ಮನುವಾದಿ’ ಮಾಡಲು ಹೊರಟಿದ್ದಾರೆ: ಪ್ರೊ. ನರೇಂದ್ರ ನಾಯಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...