Homeಕರ್ನಾಟಕನಮ್ಮ ನಾಯಕ ಅಂದು ಗುಹೆಯೊಳಗೆ, ಇಂದು ನೀರೊಳಗೆ, ಮುಂದೆ ಚಂದ್ರನ ಮೇಲೆ: ಪ್ರಕಾಶ್ ರಾಜ್

ನಮ್ಮ ನಾಯಕ ಅಂದು ಗುಹೆಯೊಳಗೆ, ಇಂದು ನೀರೊಳಗೆ, ಮುಂದೆ ಚಂದ್ರನ ಮೇಲೆ: ಪ್ರಕಾಶ್ ರಾಜ್

- Advertisement -
- Advertisement -

“ನಮಗೊಬ್ಬ ನಾಯಕನಿದ್ದಾನೆ. ಆತ 2019ರಲ್ಲಿ ಕ್ಯಾಮರಾ ಮ್ಯಾನ್‌ಗಳ ಜೊತೆ ಗುಹೆ ಸೇರ್ಕೊಂಡ. ಈಗ ಚುನಾವಣೆ ಬರುವಾಗ ನೀರಿನೊಳಗೆ ಹೋಗಿದ್ದಾನೆ. ಮುಂದಿನ ಚುನಾವಣೆಗೆ ಚಂದ್ರನ ಮೇಲೆ ನಿಂತುಕೊಳ್ಳುತ್ತಾನೆ. ಆತ 20ನೇ ಶತಮಾನದ ದೇಶದ ನಾಯಕನಾ?” ಎಂದು ಬಹುಭಾಷಾ ನಟ ಪ್ರಕಾಶ್ ರಾಜ್ ಪ್ರಧಾನಿ ಮೋದಿ ವಿರುದ್ದ ಪರೋಕ್ಷಾ ವಾಗ್ದಾಳಿ ನಡೆಸಿದ್ದಾರೆ.

ಡೆಮಾಕ್ರಟಿಕ್ ಯೂಥ್ ಫೆಡರೇಶನ್ ಆಫ್ ಇಂಡಿಯಾ (ಡಿವೈಎಫ್ಐ) ದಕ್ಷಿಣ ಕನ್ನಡ ಜಿಲ್ಲೆ ಉಳ್ಳಾಲದಲ್ಲಿ ಆಯೋಜಿಸಿದ್ದ ಮೂರು ದಿನಗಳ 12ನೇ ರಾಜ್ಯ ಮಟ್ಟದ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಅವರು ಮಂಗಳವಾರ ಮಾತನಾಡಿದರು.

“ದೇವಸ್ಥಾನದ ಉದ್ಘಾಟನೆಗೆ ಉಪವಾಸ ಮಾಡುವ ನಾಯಕರಿದ್ದಾರೆ. ಹಾಗಾಗಿ, ನಾವು ಮತ್ತೆ ಸ್ವಾತಂತ್ರ್ಯವನ್ನು, ಪ್ರಜಾಪ್ರಭುತ್ವವನ್ನು ನಮ್ಮ ಕನಸನ್ನು ಸಾರ್ಥಕಗೊಳಿಸುವ ದಾರಿಯನ್ನು ನೋಡಿಕೊಳ್ಳಲು ಇಲ್ಲಿದ್ದೇವೆ” ಎಂದು ಸಮ್ಮೇಳನವನ್ನು ಉದ್ದೇಶಿಸಿ ಪ್ರಕಾಶ್ ರಾಜ್ ಹೇಳಿದರು.

“ಧರ್ಮಗಳನ್ನು ನಂಬುವವರ ಬಗ್ಗೆ ನನಗೆ ಸಮಸ್ಯೆ ಇಲ್ಲ. ಅವರವರ ಭಾವಕ್ಕೆ, ಭಕ್ತಿಗೆ ಧರ್ಮ ಆಚರಿಸಲಿ. ಆದರೆ, ಎಲ್ಲಾ ಧರ್ಮಗಳಲ್ಲಿರುವ ಅಂಧ ಭಕ್ತರ ಬಗ್ಗೆ ನನಗೆ ಸಮಸ್ಯೆಯಿದೆ” ಎಂದರು.

“ನಾನೊಬ್ಬ ಕಲಾವಿದ, ನಾನೊಬ್ಬ ನಿರಂತರ ವಿರೋಧ ಪಕ್ಷ. ನಾನು ಯಾವ ಪಕ್ಷ ಎಂದು ಹಲವರು ಕೇಳುತ್ತಾರೆ. ನಾನು ಯಾವುದೇ ಪಕ್ಷವಲ್ಲ, ನಾನು ಜನರ ಪಕ್ಷ. ಕಲಾವಿದನಾಗಿ ಮಾತನಾಡುವುದು, ಮಾತನಾಡಬೇಕಾಗಿರುವುದು ನನ್ನ ಜವಾಬ್ದಾರಿ. ಯಾವುದಾದರು ಪಕ್ಷ ಸೇರಿದ್ರೆ ಎಲ್ಲೋ ಇರ್ತಿದ್ರಿ ಎಂದು ಹಲವರು ನನಗೆ ಹೇಳುತ್ತಾರೆ. ಯಾಕಿರಬೇಕು? ನಾನೇನು ಬಡವ ಅಲ್ಲ. ಜನರ ಶ್ರೀಮಂತಿಕೆ ನನ್ನತ್ರ ಇದೆ. ನಾನು ಕಳೆದುಕೊಳ್ಳುವಷ್ಟು ಶ್ರೀಮಂತ. ನಿಮ್ಮ ಹಾಗೆ ಸೇರಿಸಿ ಇಡುವಷ್ಟು ಭಿಕ್ಷುಕ ಅಲ್ಲ” ಎಂದು ಹೇಳಿದರು.

“ನಮ್ಮ ದೇಹಕ್ಕಾದ ಗಾಯಗಳು ಕೆಲವೊಮ್ಮೆ ನಾವು ಸುಮ್ಮನ್ನಿದ್ದರೂ ವಾಸಿಯಾಗಿ ಬಿಡುತ್ತವೆ. ಆದರೆ, ದೇಶಕ್ಕಾದ ಗಾಯಗಳು ಸುಮ್ಮನ್ನಿದ್ದಷ್ಟು ಹೆಚ್ಚಾಗುತ್ತವೆ. ನಾವು ಸುಮ್ಮನಿದ್ದಷ್ಟು ಸಮಾಜದ ಗಾಯಗಳು ಹೆಚ್ಚಾಗುತ್ತವೆ. ಅದರಲ್ಲೂ ಧ್ವನಿಯಿಲ್ಲದವರಿಗೆ ಆಗುವ ಗಾಯಗಳು, ಅಲ್ಪ ಸಂಖ್ಯಾತರಿಗೆ ಆಗುವ ಗಾಯಗಳು, ಪಕ್ಕಕ್ಕೆ ತಳ್ಳಿದವರಿಗೆ ಆಗುವ ಗಾಯಗಳು ಹೆಚ್ಚಾಗುತ್ತವೆ. ನಮ್ಮ ಬೆರಳಿಗೆ ಏಟಾದರೆ, ನನ್ನ ಹೆಬ್ಬೆರಳನ್ನು ಕತ್ತರಿಸಿದರೆ, ಅದು ನನ್ನ ನೋವು ಮಾತ್ರ. ಆದರೆ, ಏಕಲವ್ಯನ ಬೆರಳನ್ನು ಕಡಿದರೆ ಅದು ಎಲ್ಲರ ನೋವಾಗಬೇಕು” ಎಂದರು.

“ರಾಜ್ ಕುಮಾರ್, ಎಂಜಿಆರ್, ಎನ್‌ಟಿಆರ್ ಅವರಂತೆ ಈಗ ಸಿನಿಮಾ ನಟರು ರಾಜಕಾರಣಕ್ಕೆ ಬಂದರೆ ಹೇಗಿರುತ್ತದೆ? ಎಂದು ನನ್ನನ್ನು ಒಬ್ಬರು ಕೇಳಿದರು. ಆದರೆ, ಅದಕ್ಕೆ ಅವಕಾಶವೇ ಕೊಟ್ಟಿಲ್ಲ ಅಲ್ವಾ. ಅವನೇ ದೊಡ್ಡ ನಟ ಆಗಿ ಬಿಟ್ಟಿದ್ದಾನಲ್ಲ. ದಿನಕ್ಕೆ ಐದು ವಸ್ತ್ರಗಳನ್ನು ಯಾರಾದರು ಬದಲಾಯಿಸುತ್ತಾರಾ? ಇದು ಯಾರಪ್ಪನ ದುಡ್ಡು?” ಎಂದು ಪ್ರಶ್ನಿಸಿದರು.

ಮೊನ್ನೆ 11 ದಿನಗಳ ಕಾಲ ಉಪವಾಸ ಮಾಡಿ ಓಡಾಡಿದ್ದಾನೆ. ಅಂದರೆ, ದೇಶ ಒಬ್ಬ ಪ್ರಧಾನಿ ಇಲ್ಲದೆ 11 ದಿನ ನಡೆಯಿತು ಎಂದರ್ಥ. ಸಬ್ಕಾ ಸಾಥ್ ಸಬ್ಕಾ ವಿಕಾಸ್, ಬಾಯಿಯೋ ಬೆಹನೋ ಎನ್ನುತ್ತಾರೆ. ಈಗ ಕೋಟಿ ಚೆನ್ನಯ್ಯರನ್ನು ಕಿಡ್ನಾಪ್ ಮಾಡೋಕೆ ಬಂದಿದ್ದಾರೆ. ಆದರೆ, ನೀವು ಬುದ್ದಿ ಕಳಿಸಿದ್ದೀರಿ. ಒಂದೇ ಭಾರತ್ ಎಕ್ಸ್ ಪ್ರೆಸ್‌ಗೆ ಆತ ಫ್ಲ್ಯಾಗ್ ತೋರಿದಷ್ಟು ಸ್ಟೇಷನ್ ಮಾಸ್ಟರ್ ಕೂಡ ರೈಲುಗಳಿಗೆ ಫ್ಲ್ಯಾಗ್ ತೋರಿಸಿರಲು ಸಾಧ್ಯವಿಲ್ಲ. ಮಣಿಪುರ ಹೊತ್ತಿ ಉರಿಯುತ್ತಿದೆ. ಆತ ಅಲಹಾಬಾದ್‌ನಲ್ಲಿ ಐದು ವಂದೇ ಭಾರತ್ ರೈಲು ಉದ್ಘಾಟಿಸುತ್ತಿದ್ದೇನೆ ಎಂದು ಟ್ವೀಟ್ ಮಾಡಿದ್ದ. ಆಗ ನಾನು, ಅದರಲ್ಲಿ ಒಂದಾದರು ಮಣಿಪುರರಕ್ಕೆ ಇದೆಯಾ? ಎಂದು ಕೇಳಿದೆ. ಆತ ಟ್ವೀಟ್ ಡಿಲಿಟ್ ಮಾಡಿದ. ಅಂದರೆ, ನಿರಂತರವಾಗಿ ಪ್ರಶ್ನಿಸಿದರೆ ಕೇಳಿಸಿಕೊಳ್ಳುತ್ತಾರೆ. ಈಗ ನಾವು ಪ್ರಶ್ನೆ ಮಾಡಬೇಕು ಎಂದರು.

ಇದನ್ನೂ ಓದಿ : ‘ಮಾನವತಾವಾದಿ’ ಸಂವಿಧಾನವನ್ನು ‘ಮನುವಾದಿ’ ಮಾಡಲು ಹೊರಟಿದ್ದಾರೆ: ಪ್ರೊ. ನರೇಂದ್ರ ನಾಯಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...