Homeಕರ್ನಾಟಕನಮ್ಮ ನಾಯಕ ಅಂದು ಗುಹೆಯೊಳಗೆ, ಇಂದು ನೀರೊಳಗೆ, ಮುಂದೆ ಚಂದ್ರನ ಮೇಲೆ: ಪ್ರಕಾಶ್ ರಾಜ್

ನಮ್ಮ ನಾಯಕ ಅಂದು ಗುಹೆಯೊಳಗೆ, ಇಂದು ನೀರೊಳಗೆ, ಮುಂದೆ ಚಂದ್ರನ ಮೇಲೆ: ಪ್ರಕಾಶ್ ರಾಜ್

- Advertisement -
- Advertisement -

“ನಮಗೊಬ್ಬ ನಾಯಕನಿದ್ದಾನೆ. ಆತ 2019ರಲ್ಲಿ ಕ್ಯಾಮರಾ ಮ್ಯಾನ್‌ಗಳ ಜೊತೆ ಗುಹೆ ಸೇರ್ಕೊಂಡ. ಈಗ ಚುನಾವಣೆ ಬರುವಾಗ ನೀರಿನೊಳಗೆ ಹೋಗಿದ್ದಾನೆ. ಮುಂದಿನ ಚುನಾವಣೆಗೆ ಚಂದ್ರನ ಮೇಲೆ ನಿಂತುಕೊಳ್ಳುತ್ತಾನೆ. ಆತ 20ನೇ ಶತಮಾನದ ದೇಶದ ನಾಯಕನಾ?” ಎಂದು ಬಹುಭಾಷಾ ನಟ ಪ್ರಕಾಶ್ ರಾಜ್ ಪ್ರಧಾನಿ ಮೋದಿ ವಿರುದ್ದ ಪರೋಕ್ಷಾ ವಾಗ್ದಾಳಿ ನಡೆಸಿದ್ದಾರೆ.

ಡೆಮಾಕ್ರಟಿಕ್ ಯೂಥ್ ಫೆಡರೇಶನ್ ಆಫ್ ಇಂಡಿಯಾ (ಡಿವೈಎಫ್ಐ) ದಕ್ಷಿಣ ಕನ್ನಡ ಜಿಲ್ಲೆ ಉಳ್ಳಾಲದಲ್ಲಿ ಆಯೋಜಿಸಿದ್ದ ಮೂರು ದಿನಗಳ 12ನೇ ರಾಜ್ಯ ಮಟ್ಟದ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಅವರು ಮಂಗಳವಾರ ಮಾತನಾಡಿದರು.

“ದೇವಸ್ಥಾನದ ಉದ್ಘಾಟನೆಗೆ ಉಪವಾಸ ಮಾಡುವ ನಾಯಕರಿದ್ದಾರೆ. ಹಾಗಾಗಿ, ನಾವು ಮತ್ತೆ ಸ್ವಾತಂತ್ರ್ಯವನ್ನು, ಪ್ರಜಾಪ್ರಭುತ್ವವನ್ನು ನಮ್ಮ ಕನಸನ್ನು ಸಾರ್ಥಕಗೊಳಿಸುವ ದಾರಿಯನ್ನು ನೋಡಿಕೊಳ್ಳಲು ಇಲ್ಲಿದ್ದೇವೆ” ಎಂದು ಸಮ್ಮೇಳನವನ್ನು ಉದ್ದೇಶಿಸಿ ಪ್ರಕಾಶ್ ರಾಜ್ ಹೇಳಿದರು.

“ಧರ್ಮಗಳನ್ನು ನಂಬುವವರ ಬಗ್ಗೆ ನನಗೆ ಸಮಸ್ಯೆ ಇಲ್ಲ. ಅವರವರ ಭಾವಕ್ಕೆ, ಭಕ್ತಿಗೆ ಧರ್ಮ ಆಚರಿಸಲಿ. ಆದರೆ, ಎಲ್ಲಾ ಧರ್ಮಗಳಲ್ಲಿರುವ ಅಂಧ ಭಕ್ತರ ಬಗ್ಗೆ ನನಗೆ ಸಮಸ್ಯೆಯಿದೆ” ಎಂದರು.

“ನಾನೊಬ್ಬ ಕಲಾವಿದ, ನಾನೊಬ್ಬ ನಿರಂತರ ವಿರೋಧ ಪಕ್ಷ. ನಾನು ಯಾವ ಪಕ್ಷ ಎಂದು ಹಲವರು ಕೇಳುತ್ತಾರೆ. ನಾನು ಯಾವುದೇ ಪಕ್ಷವಲ್ಲ, ನಾನು ಜನರ ಪಕ್ಷ. ಕಲಾವಿದನಾಗಿ ಮಾತನಾಡುವುದು, ಮಾತನಾಡಬೇಕಾಗಿರುವುದು ನನ್ನ ಜವಾಬ್ದಾರಿ. ಯಾವುದಾದರು ಪಕ್ಷ ಸೇರಿದ್ರೆ ಎಲ್ಲೋ ಇರ್ತಿದ್ರಿ ಎಂದು ಹಲವರು ನನಗೆ ಹೇಳುತ್ತಾರೆ. ಯಾಕಿರಬೇಕು? ನಾನೇನು ಬಡವ ಅಲ್ಲ. ಜನರ ಶ್ರೀಮಂತಿಕೆ ನನ್ನತ್ರ ಇದೆ. ನಾನು ಕಳೆದುಕೊಳ್ಳುವಷ್ಟು ಶ್ರೀಮಂತ. ನಿಮ್ಮ ಹಾಗೆ ಸೇರಿಸಿ ಇಡುವಷ್ಟು ಭಿಕ್ಷುಕ ಅಲ್ಲ” ಎಂದು ಹೇಳಿದರು.

“ನಮ್ಮ ದೇಹಕ್ಕಾದ ಗಾಯಗಳು ಕೆಲವೊಮ್ಮೆ ನಾವು ಸುಮ್ಮನ್ನಿದ್ದರೂ ವಾಸಿಯಾಗಿ ಬಿಡುತ್ತವೆ. ಆದರೆ, ದೇಶಕ್ಕಾದ ಗಾಯಗಳು ಸುಮ್ಮನ್ನಿದ್ದಷ್ಟು ಹೆಚ್ಚಾಗುತ್ತವೆ. ನಾವು ಸುಮ್ಮನಿದ್ದಷ್ಟು ಸಮಾಜದ ಗಾಯಗಳು ಹೆಚ್ಚಾಗುತ್ತವೆ. ಅದರಲ್ಲೂ ಧ್ವನಿಯಿಲ್ಲದವರಿಗೆ ಆಗುವ ಗಾಯಗಳು, ಅಲ್ಪ ಸಂಖ್ಯಾತರಿಗೆ ಆಗುವ ಗಾಯಗಳು, ಪಕ್ಕಕ್ಕೆ ತಳ್ಳಿದವರಿಗೆ ಆಗುವ ಗಾಯಗಳು ಹೆಚ್ಚಾಗುತ್ತವೆ. ನಮ್ಮ ಬೆರಳಿಗೆ ಏಟಾದರೆ, ನನ್ನ ಹೆಬ್ಬೆರಳನ್ನು ಕತ್ತರಿಸಿದರೆ, ಅದು ನನ್ನ ನೋವು ಮಾತ್ರ. ಆದರೆ, ಏಕಲವ್ಯನ ಬೆರಳನ್ನು ಕಡಿದರೆ ಅದು ಎಲ್ಲರ ನೋವಾಗಬೇಕು” ಎಂದರು.

“ರಾಜ್ ಕುಮಾರ್, ಎಂಜಿಆರ್, ಎನ್‌ಟಿಆರ್ ಅವರಂತೆ ಈಗ ಸಿನಿಮಾ ನಟರು ರಾಜಕಾರಣಕ್ಕೆ ಬಂದರೆ ಹೇಗಿರುತ್ತದೆ? ಎಂದು ನನ್ನನ್ನು ಒಬ್ಬರು ಕೇಳಿದರು. ಆದರೆ, ಅದಕ್ಕೆ ಅವಕಾಶವೇ ಕೊಟ್ಟಿಲ್ಲ ಅಲ್ವಾ. ಅವನೇ ದೊಡ್ಡ ನಟ ಆಗಿ ಬಿಟ್ಟಿದ್ದಾನಲ್ಲ. ದಿನಕ್ಕೆ ಐದು ವಸ್ತ್ರಗಳನ್ನು ಯಾರಾದರು ಬದಲಾಯಿಸುತ್ತಾರಾ? ಇದು ಯಾರಪ್ಪನ ದುಡ್ಡು?” ಎಂದು ಪ್ರಶ್ನಿಸಿದರು.

ಮೊನ್ನೆ 11 ದಿನಗಳ ಕಾಲ ಉಪವಾಸ ಮಾಡಿ ಓಡಾಡಿದ್ದಾನೆ. ಅಂದರೆ, ದೇಶ ಒಬ್ಬ ಪ್ರಧಾನಿ ಇಲ್ಲದೆ 11 ದಿನ ನಡೆಯಿತು ಎಂದರ್ಥ. ಸಬ್ಕಾ ಸಾಥ್ ಸಬ್ಕಾ ವಿಕಾಸ್, ಬಾಯಿಯೋ ಬೆಹನೋ ಎನ್ನುತ್ತಾರೆ. ಈಗ ಕೋಟಿ ಚೆನ್ನಯ್ಯರನ್ನು ಕಿಡ್ನಾಪ್ ಮಾಡೋಕೆ ಬಂದಿದ್ದಾರೆ. ಆದರೆ, ನೀವು ಬುದ್ದಿ ಕಳಿಸಿದ್ದೀರಿ. ಒಂದೇ ಭಾರತ್ ಎಕ್ಸ್ ಪ್ರೆಸ್‌ಗೆ ಆತ ಫ್ಲ್ಯಾಗ್ ತೋರಿದಷ್ಟು ಸ್ಟೇಷನ್ ಮಾಸ್ಟರ್ ಕೂಡ ರೈಲುಗಳಿಗೆ ಫ್ಲ್ಯಾಗ್ ತೋರಿಸಿರಲು ಸಾಧ್ಯವಿಲ್ಲ. ಮಣಿಪುರ ಹೊತ್ತಿ ಉರಿಯುತ್ತಿದೆ. ಆತ ಅಲಹಾಬಾದ್‌ನಲ್ಲಿ ಐದು ವಂದೇ ಭಾರತ್ ರೈಲು ಉದ್ಘಾಟಿಸುತ್ತಿದ್ದೇನೆ ಎಂದು ಟ್ವೀಟ್ ಮಾಡಿದ್ದ. ಆಗ ನಾನು, ಅದರಲ್ಲಿ ಒಂದಾದರು ಮಣಿಪುರರಕ್ಕೆ ಇದೆಯಾ? ಎಂದು ಕೇಳಿದೆ. ಆತ ಟ್ವೀಟ್ ಡಿಲಿಟ್ ಮಾಡಿದ. ಅಂದರೆ, ನಿರಂತರವಾಗಿ ಪ್ರಶ್ನಿಸಿದರೆ ಕೇಳಿಸಿಕೊಳ್ಳುತ್ತಾರೆ. ಈಗ ನಾವು ಪ್ರಶ್ನೆ ಮಾಡಬೇಕು ಎಂದರು.

ಇದನ್ನೂ ಓದಿ : ‘ಮಾನವತಾವಾದಿ’ ಸಂವಿಧಾನವನ್ನು ‘ಮನುವಾದಿ’ ಮಾಡಲು ಹೊರಟಿದ್ದಾರೆ: ಪ್ರೊ. ನರೇಂದ್ರ ನಾಯಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...