Homeಕರ್ನಾಟಕನಮ್ಮ ನಾಯಕ ಅಂದು ಗುಹೆಯೊಳಗೆ, ಇಂದು ನೀರೊಳಗೆ, ಮುಂದೆ ಚಂದ್ರನ ಮೇಲೆ: ಪ್ರಕಾಶ್ ರಾಜ್

ನಮ್ಮ ನಾಯಕ ಅಂದು ಗುಹೆಯೊಳಗೆ, ಇಂದು ನೀರೊಳಗೆ, ಮುಂದೆ ಚಂದ್ರನ ಮೇಲೆ: ಪ್ರಕಾಶ್ ರಾಜ್

- Advertisement -
- Advertisement -

“ನಮಗೊಬ್ಬ ನಾಯಕನಿದ್ದಾನೆ. ಆತ 2019ರಲ್ಲಿ ಕ್ಯಾಮರಾ ಮ್ಯಾನ್‌ಗಳ ಜೊತೆ ಗುಹೆ ಸೇರ್ಕೊಂಡ. ಈಗ ಚುನಾವಣೆ ಬರುವಾಗ ನೀರಿನೊಳಗೆ ಹೋಗಿದ್ದಾನೆ. ಮುಂದಿನ ಚುನಾವಣೆಗೆ ಚಂದ್ರನ ಮೇಲೆ ನಿಂತುಕೊಳ್ಳುತ್ತಾನೆ. ಆತ 20ನೇ ಶತಮಾನದ ದೇಶದ ನಾಯಕನಾ?” ಎಂದು ಬಹುಭಾಷಾ ನಟ ಪ್ರಕಾಶ್ ರಾಜ್ ಪ್ರಧಾನಿ ಮೋದಿ ವಿರುದ್ದ ಪರೋಕ್ಷಾ ವಾಗ್ದಾಳಿ ನಡೆಸಿದ್ದಾರೆ.

ಡೆಮಾಕ್ರಟಿಕ್ ಯೂಥ್ ಫೆಡರೇಶನ್ ಆಫ್ ಇಂಡಿಯಾ (ಡಿವೈಎಫ್ಐ) ದಕ್ಷಿಣ ಕನ್ನಡ ಜಿಲ್ಲೆ ಉಳ್ಳಾಲದಲ್ಲಿ ಆಯೋಜಿಸಿದ್ದ ಮೂರು ದಿನಗಳ 12ನೇ ರಾಜ್ಯ ಮಟ್ಟದ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಅವರು ಮಂಗಳವಾರ ಮಾತನಾಡಿದರು.

“ದೇವಸ್ಥಾನದ ಉದ್ಘಾಟನೆಗೆ ಉಪವಾಸ ಮಾಡುವ ನಾಯಕರಿದ್ದಾರೆ. ಹಾಗಾಗಿ, ನಾವು ಮತ್ತೆ ಸ್ವಾತಂತ್ರ್ಯವನ್ನು, ಪ್ರಜಾಪ್ರಭುತ್ವವನ್ನು ನಮ್ಮ ಕನಸನ್ನು ಸಾರ್ಥಕಗೊಳಿಸುವ ದಾರಿಯನ್ನು ನೋಡಿಕೊಳ್ಳಲು ಇಲ್ಲಿದ್ದೇವೆ” ಎಂದು ಸಮ್ಮೇಳನವನ್ನು ಉದ್ದೇಶಿಸಿ ಪ್ರಕಾಶ್ ರಾಜ್ ಹೇಳಿದರು.

“ಧರ್ಮಗಳನ್ನು ನಂಬುವವರ ಬಗ್ಗೆ ನನಗೆ ಸಮಸ್ಯೆ ಇಲ್ಲ. ಅವರವರ ಭಾವಕ್ಕೆ, ಭಕ್ತಿಗೆ ಧರ್ಮ ಆಚರಿಸಲಿ. ಆದರೆ, ಎಲ್ಲಾ ಧರ್ಮಗಳಲ್ಲಿರುವ ಅಂಧ ಭಕ್ತರ ಬಗ್ಗೆ ನನಗೆ ಸಮಸ್ಯೆಯಿದೆ” ಎಂದರು.

“ನಾನೊಬ್ಬ ಕಲಾವಿದ, ನಾನೊಬ್ಬ ನಿರಂತರ ವಿರೋಧ ಪಕ್ಷ. ನಾನು ಯಾವ ಪಕ್ಷ ಎಂದು ಹಲವರು ಕೇಳುತ್ತಾರೆ. ನಾನು ಯಾವುದೇ ಪಕ್ಷವಲ್ಲ, ನಾನು ಜನರ ಪಕ್ಷ. ಕಲಾವಿದನಾಗಿ ಮಾತನಾಡುವುದು, ಮಾತನಾಡಬೇಕಾಗಿರುವುದು ನನ್ನ ಜವಾಬ್ದಾರಿ. ಯಾವುದಾದರು ಪಕ್ಷ ಸೇರಿದ್ರೆ ಎಲ್ಲೋ ಇರ್ತಿದ್ರಿ ಎಂದು ಹಲವರು ನನಗೆ ಹೇಳುತ್ತಾರೆ. ಯಾಕಿರಬೇಕು? ನಾನೇನು ಬಡವ ಅಲ್ಲ. ಜನರ ಶ್ರೀಮಂತಿಕೆ ನನ್ನತ್ರ ಇದೆ. ನಾನು ಕಳೆದುಕೊಳ್ಳುವಷ್ಟು ಶ್ರೀಮಂತ. ನಿಮ್ಮ ಹಾಗೆ ಸೇರಿಸಿ ಇಡುವಷ್ಟು ಭಿಕ್ಷುಕ ಅಲ್ಲ” ಎಂದು ಹೇಳಿದರು.

“ನಮ್ಮ ದೇಹಕ್ಕಾದ ಗಾಯಗಳು ಕೆಲವೊಮ್ಮೆ ನಾವು ಸುಮ್ಮನ್ನಿದ್ದರೂ ವಾಸಿಯಾಗಿ ಬಿಡುತ್ತವೆ. ಆದರೆ, ದೇಶಕ್ಕಾದ ಗಾಯಗಳು ಸುಮ್ಮನ್ನಿದ್ದಷ್ಟು ಹೆಚ್ಚಾಗುತ್ತವೆ. ನಾವು ಸುಮ್ಮನಿದ್ದಷ್ಟು ಸಮಾಜದ ಗಾಯಗಳು ಹೆಚ್ಚಾಗುತ್ತವೆ. ಅದರಲ್ಲೂ ಧ್ವನಿಯಿಲ್ಲದವರಿಗೆ ಆಗುವ ಗಾಯಗಳು, ಅಲ್ಪ ಸಂಖ್ಯಾತರಿಗೆ ಆಗುವ ಗಾಯಗಳು, ಪಕ್ಕಕ್ಕೆ ತಳ್ಳಿದವರಿಗೆ ಆಗುವ ಗಾಯಗಳು ಹೆಚ್ಚಾಗುತ್ತವೆ. ನಮ್ಮ ಬೆರಳಿಗೆ ಏಟಾದರೆ, ನನ್ನ ಹೆಬ್ಬೆರಳನ್ನು ಕತ್ತರಿಸಿದರೆ, ಅದು ನನ್ನ ನೋವು ಮಾತ್ರ. ಆದರೆ, ಏಕಲವ್ಯನ ಬೆರಳನ್ನು ಕಡಿದರೆ ಅದು ಎಲ್ಲರ ನೋವಾಗಬೇಕು” ಎಂದರು.

“ರಾಜ್ ಕುಮಾರ್, ಎಂಜಿಆರ್, ಎನ್‌ಟಿಆರ್ ಅವರಂತೆ ಈಗ ಸಿನಿಮಾ ನಟರು ರಾಜಕಾರಣಕ್ಕೆ ಬಂದರೆ ಹೇಗಿರುತ್ತದೆ? ಎಂದು ನನ್ನನ್ನು ಒಬ್ಬರು ಕೇಳಿದರು. ಆದರೆ, ಅದಕ್ಕೆ ಅವಕಾಶವೇ ಕೊಟ್ಟಿಲ್ಲ ಅಲ್ವಾ. ಅವನೇ ದೊಡ್ಡ ನಟ ಆಗಿ ಬಿಟ್ಟಿದ್ದಾನಲ್ಲ. ದಿನಕ್ಕೆ ಐದು ವಸ್ತ್ರಗಳನ್ನು ಯಾರಾದರು ಬದಲಾಯಿಸುತ್ತಾರಾ? ಇದು ಯಾರಪ್ಪನ ದುಡ್ಡು?” ಎಂದು ಪ್ರಶ್ನಿಸಿದರು.

ಮೊನ್ನೆ 11 ದಿನಗಳ ಕಾಲ ಉಪವಾಸ ಮಾಡಿ ಓಡಾಡಿದ್ದಾನೆ. ಅಂದರೆ, ದೇಶ ಒಬ್ಬ ಪ್ರಧಾನಿ ಇಲ್ಲದೆ 11 ದಿನ ನಡೆಯಿತು ಎಂದರ್ಥ. ಸಬ್ಕಾ ಸಾಥ್ ಸಬ್ಕಾ ವಿಕಾಸ್, ಬಾಯಿಯೋ ಬೆಹನೋ ಎನ್ನುತ್ತಾರೆ. ಈಗ ಕೋಟಿ ಚೆನ್ನಯ್ಯರನ್ನು ಕಿಡ್ನಾಪ್ ಮಾಡೋಕೆ ಬಂದಿದ್ದಾರೆ. ಆದರೆ, ನೀವು ಬುದ್ದಿ ಕಳಿಸಿದ್ದೀರಿ. ಒಂದೇ ಭಾರತ್ ಎಕ್ಸ್ ಪ್ರೆಸ್‌ಗೆ ಆತ ಫ್ಲ್ಯಾಗ್ ತೋರಿದಷ್ಟು ಸ್ಟೇಷನ್ ಮಾಸ್ಟರ್ ಕೂಡ ರೈಲುಗಳಿಗೆ ಫ್ಲ್ಯಾಗ್ ತೋರಿಸಿರಲು ಸಾಧ್ಯವಿಲ್ಲ. ಮಣಿಪುರ ಹೊತ್ತಿ ಉರಿಯುತ್ತಿದೆ. ಆತ ಅಲಹಾಬಾದ್‌ನಲ್ಲಿ ಐದು ವಂದೇ ಭಾರತ್ ರೈಲು ಉದ್ಘಾಟಿಸುತ್ತಿದ್ದೇನೆ ಎಂದು ಟ್ವೀಟ್ ಮಾಡಿದ್ದ. ಆಗ ನಾನು, ಅದರಲ್ಲಿ ಒಂದಾದರು ಮಣಿಪುರರಕ್ಕೆ ಇದೆಯಾ? ಎಂದು ಕೇಳಿದೆ. ಆತ ಟ್ವೀಟ್ ಡಿಲಿಟ್ ಮಾಡಿದ. ಅಂದರೆ, ನಿರಂತರವಾಗಿ ಪ್ರಶ್ನಿಸಿದರೆ ಕೇಳಿಸಿಕೊಳ್ಳುತ್ತಾರೆ. ಈಗ ನಾವು ಪ್ರಶ್ನೆ ಮಾಡಬೇಕು ಎಂದರು.

ಇದನ್ನೂ ಓದಿ : ‘ಮಾನವತಾವಾದಿ’ ಸಂವಿಧಾನವನ್ನು ‘ಮನುವಾದಿ’ ಮಾಡಲು ಹೊರಟಿದ್ದಾರೆ: ಪ್ರೊ. ನರೇಂದ್ರ ನಾಯಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...