Homeಕರ್ನಾಟಕನಮ್ಮ ನಾಯಕ ಅಂದು ಗುಹೆಯೊಳಗೆ, ಇಂದು ನೀರೊಳಗೆ, ಮುಂದೆ ಚಂದ್ರನ ಮೇಲೆ: ಪ್ರಕಾಶ್ ರಾಜ್

ನಮ್ಮ ನಾಯಕ ಅಂದು ಗುಹೆಯೊಳಗೆ, ಇಂದು ನೀರೊಳಗೆ, ಮುಂದೆ ಚಂದ್ರನ ಮೇಲೆ: ಪ್ರಕಾಶ್ ರಾಜ್

- Advertisement -
- Advertisement -

“ನಮಗೊಬ್ಬ ನಾಯಕನಿದ್ದಾನೆ. ಆತ 2019ರಲ್ಲಿ ಕ್ಯಾಮರಾ ಮ್ಯಾನ್‌ಗಳ ಜೊತೆ ಗುಹೆ ಸೇರ್ಕೊಂಡ. ಈಗ ಚುನಾವಣೆ ಬರುವಾಗ ನೀರಿನೊಳಗೆ ಹೋಗಿದ್ದಾನೆ. ಮುಂದಿನ ಚುನಾವಣೆಗೆ ಚಂದ್ರನ ಮೇಲೆ ನಿಂತುಕೊಳ್ಳುತ್ತಾನೆ. ಆತ 20ನೇ ಶತಮಾನದ ದೇಶದ ನಾಯಕನಾ?” ಎಂದು ಬಹುಭಾಷಾ ನಟ ಪ್ರಕಾಶ್ ರಾಜ್ ಪ್ರಧಾನಿ ಮೋದಿ ವಿರುದ್ದ ಪರೋಕ್ಷಾ ವಾಗ್ದಾಳಿ ನಡೆಸಿದ್ದಾರೆ.

ಡೆಮಾಕ್ರಟಿಕ್ ಯೂಥ್ ಫೆಡರೇಶನ್ ಆಫ್ ಇಂಡಿಯಾ (ಡಿವೈಎಫ್ಐ) ದಕ್ಷಿಣ ಕನ್ನಡ ಜಿಲ್ಲೆ ಉಳ್ಳಾಲದಲ್ಲಿ ಆಯೋಜಿಸಿದ್ದ ಮೂರು ದಿನಗಳ 12ನೇ ರಾಜ್ಯ ಮಟ್ಟದ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಅವರು ಮಂಗಳವಾರ ಮಾತನಾಡಿದರು.

“ದೇವಸ್ಥಾನದ ಉದ್ಘಾಟನೆಗೆ ಉಪವಾಸ ಮಾಡುವ ನಾಯಕರಿದ್ದಾರೆ. ಹಾಗಾಗಿ, ನಾವು ಮತ್ತೆ ಸ್ವಾತಂತ್ರ್ಯವನ್ನು, ಪ್ರಜಾಪ್ರಭುತ್ವವನ್ನು ನಮ್ಮ ಕನಸನ್ನು ಸಾರ್ಥಕಗೊಳಿಸುವ ದಾರಿಯನ್ನು ನೋಡಿಕೊಳ್ಳಲು ಇಲ್ಲಿದ್ದೇವೆ” ಎಂದು ಸಮ್ಮೇಳನವನ್ನು ಉದ್ದೇಶಿಸಿ ಪ್ರಕಾಶ್ ರಾಜ್ ಹೇಳಿದರು.

“ಧರ್ಮಗಳನ್ನು ನಂಬುವವರ ಬಗ್ಗೆ ನನಗೆ ಸಮಸ್ಯೆ ಇಲ್ಲ. ಅವರವರ ಭಾವಕ್ಕೆ, ಭಕ್ತಿಗೆ ಧರ್ಮ ಆಚರಿಸಲಿ. ಆದರೆ, ಎಲ್ಲಾ ಧರ್ಮಗಳಲ್ಲಿರುವ ಅಂಧ ಭಕ್ತರ ಬಗ್ಗೆ ನನಗೆ ಸಮಸ್ಯೆಯಿದೆ” ಎಂದರು.

“ನಾನೊಬ್ಬ ಕಲಾವಿದ, ನಾನೊಬ್ಬ ನಿರಂತರ ವಿರೋಧ ಪಕ್ಷ. ನಾನು ಯಾವ ಪಕ್ಷ ಎಂದು ಹಲವರು ಕೇಳುತ್ತಾರೆ. ನಾನು ಯಾವುದೇ ಪಕ್ಷವಲ್ಲ, ನಾನು ಜನರ ಪಕ್ಷ. ಕಲಾವಿದನಾಗಿ ಮಾತನಾಡುವುದು, ಮಾತನಾಡಬೇಕಾಗಿರುವುದು ನನ್ನ ಜವಾಬ್ದಾರಿ. ಯಾವುದಾದರು ಪಕ್ಷ ಸೇರಿದ್ರೆ ಎಲ್ಲೋ ಇರ್ತಿದ್ರಿ ಎಂದು ಹಲವರು ನನಗೆ ಹೇಳುತ್ತಾರೆ. ಯಾಕಿರಬೇಕು? ನಾನೇನು ಬಡವ ಅಲ್ಲ. ಜನರ ಶ್ರೀಮಂತಿಕೆ ನನ್ನತ್ರ ಇದೆ. ನಾನು ಕಳೆದುಕೊಳ್ಳುವಷ್ಟು ಶ್ರೀಮಂತ. ನಿಮ್ಮ ಹಾಗೆ ಸೇರಿಸಿ ಇಡುವಷ್ಟು ಭಿಕ್ಷುಕ ಅಲ್ಲ” ಎಂದು ಹೇಳಿದರು.

“ನಮ್ಮ ದೇಹಕ್ಕಾದ ಗಾಯಗಳು ಕೆಲವೊಮ್ಮೆ ನಾವು ಸುಮ್ಮನ್ನಿದ್ದರೂ ವಾಸಿಯಾಗಿ ಬಿಡುತ್ತವೆ. ಆದರೆ, ದೇಶಕ್ಕಾದ ಗಾಯಗಳು ಸುಮ್ಮನ್ನಿದ್ದಷ್ಟು ಹೆಚ್ಚಾಗುತ್ತವೆ. ನಾವು ಸುಮ್ಮನಿದ್ದಷ್ಟು ಸಮಾಜದ ಗಾಯಗಳು ಹೆಚ್ಚಾಗುತ್ತವೆ. ಅದರಲ್ಲೂ ಧ್ವನಿಯಿಲ್ಲದವರಿಗೆ ಆಗುವ ಗಾಯಗಳು, ಅಲ್ಪ ಸಂಖ್ಯಾತರಿಗೆ ಆಗುವ ಗಾಯಗಳು, ಪಕ್ಕಕ್ಕೆ ತಳ್ಳಿದವರಿಗೆ ಆಗುವ ಗಾಯಗಳು ಹೆಚ್ಚಾಗುತ್ತವೆ. ನಮ್ಮ ಬೆರಳಿಗೆ ಏಟಾದರೆ, ನನ್ನ ಹೆಬ್ಬೆರಳನ್ನು ಕತ್ತರಿಸಿದರೆ, ಅದು ನನ್ನ ನೋವು ಮಾತ್ರ. ಆದರೆ, ಏಕಲವ್ಯನ ಬೆರಳನ್ನು ಕಡಿದರೆ ಅದು ಎಲ್ಲರ ನೋವಾಗಬೇಕು” ಎಂದರು.

“ರಾಜ್ ಕುಮಾರ್, ಎಂಜಿಆರ್, ಎನ್‌ಟಿಆರ್ ಅವರಂತೆ ಈಗ ಸಿನಿಮಾ ನಟರು ರಾಜಕಾರಣಕ್ಕೆ ಬಂದರೆ ಹೇಗಿರುತ್ತದೆ? ಎಂದು ನನ್ನನ್ನು ಒಬ್ಬರು ಕೇಳಿದರು. ಆದರೆ, ಅದಕ್ಕೆ ಅವಕಾಶವೇ ಕೊಟ್ಟಿಲ್ಲ ಅಲ್ವಾ. ಅವನೇ ದೊಡ್ಡ ನಟ ಆಗಿ ಬಿಟ್ಟಿದ್ದಾನಲ್ಲ. ದಿನಕ್ಕೆ ಐದು ವಸ್ತ್ರಗಳನ್ನು ಯಾರಾದರು ಬದಲಾಯಿಸುತ್ತಾರಾ? ಇದು ಯಾರಪ್ಪನ ದುಡ್ಡು?” ಎಂದು ಪ್ರಶ್ನಿಸಿದರು.

ಮೊನ್ನೆ 11 ದಿನಗಳ ಕಾಲ ಉಪವಾಸ ಮಾಡಿ ಓಡಾಡಿದ್ದಾನೆ. ಅಂದರೆ, ದೇಶ ಒಬ್ಬ ಪ್ರಧಾನಿ ಇಲ್ಲದೆ 11 ದಿನ ನಡೆಯಿತು ಎಂದರ್ಥ. ಸಬ್ಕಾ ಸಾಥ್ ಸಬ್ಕಾ ವಿಕಾಸ್, ಬಾಯಿಯೋ ಬೆಹನೋ ಎನ್ನುತ್ತಾರೆ. ಈಗ ಕೋಟಿ ಚೆನ್ನಯ್ಯರನ್ನು ಕಿಡ್ನಾಪ್ ಮಾಡೋಕೆ ಬಂದಿದ್ದಾರೆ. ಆದರೆ, ನೀವು ಬುದ್ದಿ ಕಳಿಸಿದ್ದೀರಿ. ಒಂದೇ ಭಾರತ್ ಎಕ್ಸ್ ಪ್ರೆಸ್‌ಗೆ ಆತ ಫ್ಲ್ಯಾಗ್ ತೋರಿದಷ್ಟು ಸ್ಟೇಷನ್ ಮಾಸ್ಟರ್ ಕೂಡ ರೈಲುಗಳಿಗೆ ಫ್ಲ್ಯಾಗ್ ತೋರಿಸಿರಲು ಸಾಧ್ಯವಿಲ್ಲ. ಮಣಿಪುರ ಹೊತ್ತಿ ಉರಿಯುತ್ತಿದೆ. ಆತ ಅಲಹಾಬಾದ್‌ನಲ್ಲಿ ಐದು ವಂದೇ ಭಾರತ್ ರೈಲು ಉದ್ಘಾಟಿಸುತ್ತಿದ್ದೇನೆ ಎಂದು ಟ್ವೀಟ್ ಮಾಡಿದ್ದ. ಆಗ ನಾನು, ಅದರಲ್ಲಿ ಒಂದಾದರು ಮಣಿಪುರರಕ್ಕೆ ಇದೆಯಾ? ಎಂದು ಕೇಳಿದೆ. ಆತ ಟ್ವೀಟ್ ಡಿಲಿಟ್ ಮಾಡಿದ. ಅಂದರೆ, ನಿರಂತರವಾಗಿ ಪ್ರಶ್ನಿಸಿದರೆ ಕೇಳಿಸಿಕೊಳ್ಳುತ್ತಾರೆ. ಈಗ ನಾವು ಪ್ರಶ್ನೆ ಮಾಡಬೇಕು ಎಂದರು.

ಇದನ್ನೂ ಓದಿ : ‘ಮಾನವತಾವಾದಿ’ ಸಂವಿಧಾನವನ್ನು ‘ಮನುವಾದಿ’ ಮಾಡಲು ಹೊರಟಿದ್ದಾರೆ: ಪ್ರೊ. ನರೇಂದ್ರ ನಾಯಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...