Homeಕರ್ನಾಟಕನನ್ನ ತಾಯಿ ದೇಶಕ್ಕಾಗಿ ಮಂಗಳಸೂತ್ರವನ್ನು ತ್ಯಾಗ ಮಾಡಿದ್ದಾರೆ: ಪ್ರಿಯಾಂಕ ಗಾಂಧಿ

ನನ್ನ ತಾಯಿ ದೇಶಕ್ಕಾಗಿ ಮಂಗಳಸೂತ್ರವನ್ನು ತ್ಯಾಗ ಮಾಡಿದ್ದಾರೆ: ಪ್ರಿಯಾಂಕ ಗಾಂಧಿ

- Advertisement -
- Advertisement -

‘ನನ್ನ ತಾಯಿ ದೇಶಕ್ಕಾಗಿ ಮಂಗಳಸೂತ್ರವನ್ನು ತ್ಯಾಗ ಮಾಡಿದ್ದಾರೆ’ ಮತ್ತು ‘ನನ್ನ ಅಜ್ಜಿ ಆಡಳಿತದಲ್ಲಿ ದೇಶದ ಯುದ್ಧಕ್ಕಾಗಿ ತಮ್ಮ ಚಿನ್ನವನ್ನು ದಾನ ಮಾಡಿದ್ದಾರೆ’ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಹೇಳಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಸಮಾಜಕ್ಕೆ ಮಹಿಳೆಯರ ಕೊಡುಗೆಯನ್ನು ಅರ್ಥಮಾಡಿಕೊಂಡರೆ ಅಂತಹ “ಅವಹೇಳನಕಾರಿ” ಹೇಳಿಕೆಗಳನ್ನು ಎಂದಿಗೂ ನೀಡುತ್ತಿರಲಿಲ್ಲ ಎಂದು ಹೇಳಿದ್ದಾರೆ.

ಬೆಂಗಳೂರು ದಕ್ಷಿಣ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಸೌಮ್ಯಾ ರೆಡ್ಡಿ ಪರ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಎಚ್‌ಎಸ್‌ಆರ್‌ ಲೇಔಟ್‌ನಲ್ಲಿರುವ ಅಟಲ್‌ ಬಿಹಾರಿ ವಾಜಪೇಯಿ ಕ್ರೀಡಾಂಗಣದಲ್ಲಿ ನಡೆದ ಚುನಾವಣಾ ಪ್ರಚಾರ ಸಮಾವೇಶದಲ್ಲಿ ಮಾತನಾಡಿದ ಪ್ರಿಯಾಂಕ ಗಾಂಧಿ, ಕಾಂಗ್ರೆಸ್‌ ಪಕ್ಷವು ಅಧಿಕಾರಕ್ಕೆ ಬಂದರೆ ಮಹಿಳೆಯರ ಚಿನ್ನ, ಮಂಗಳಸೂತ್ರವನ್ನು ಕಿತ್ತುಕೊಳ್ಳುತ್ತದೆ ಎಂಬ ಪ್ರಧಾನಿಯ ವಿವಾದಾತ್ಮಕ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ, ರೈತ ಪ್ರತಿಭಟನೆಯ ಸಂದರ್ಭದಲ್ಲಿ ಸಾವನ್ನಪ್ಪಿದ 600 ರೈತ ಮಹಿಳೆಯರ ಮಂಗಳಸೂತ್ರಗಳ ಬಗ್ಗೆ ಮೋದಿ ಕಾಳಜಿ ತೋರುತ್ತಿಲ್ಲ. ಕೇವಲ ಮತಕ್ಕಾಗಿ ಮತ್ತು ಮಹಿಳೆಯರನ್ನು ಹೆದರಿಸಲು ಇಂತಹ ಹೇಳಿಕೆಯನ್ನು ನೀಡಲಾಗಿದೆ. ಪ್ರಧಾನಿ ನಾಚಿಕೆಪಡಬೇಕು, ಅವರಿಗೆ ಮಹಿಳೆಯರ ಬಗ್ಗೆ ಕಾಳಜಿ ಇದ್ದರೆ ಅವರ ಮಕ್ಕಳಿಗೆ ಉದ್ಯೋಗ, ವಿದ್ಯಾರ್ಥಿವೇತನ ಮತ್ತು ವ್ಯವಹಾರಗಳಲ್ಲಿ ಸಹಾಯ ಮಾಡುತ್ತಿದ್ದರು ಎಂದು ಹೇಳಿದ್ದಾರೆ.

ಭಾರತದ ಅತ್ಯಂತ ಹೆಚ್ಚು ವಿದ್ಯಾವಂತ ನಗರಗಳಲ್ಲಿ ಒಂದಾದ ಬೆಂಗಳೂರು, ಚುನಾವಣಾ ಸಮಯದಲ್ಲಿ ಉತ್ತಮ ಸಂಭಾಷಣೆಗೆ ಅರ್ಹವಾಗಿದೆ. ಯಾರೂ ಮೂಲಸೌಕರ್ಯ ಅಥವಾ ಸುಸ್ಥಿರ ಅಭಿವೃದ್ಧಿಯ ಬಗ್ಗೆ ಮಾತನಾಡುತ್ತಿಲ್ಲ. ನಾವು ನಿಜವಾಗಿಯೂ ಹಿಂದೂ ಮುಸ್ಲಿಂ ವಿಷಯದ ಮೇಲೆ ಮತ್ತೊಂದು ಚುನಾವಣೆಯನ್ನು ಬಯಸುತ್ತೇವೆಯೇ? ಎಷ್ಟು ವರ್ಷಗಳ ಕಾಲ ಚುನಾವಣೆಯನ್ನು ಧರ್ಮದ ಆಧಾರದಲ್ಲಿ ನಡೆಸುತ್ತೀರಾ? ಈ ಚುನಾವಣೆಯನ್ನು ಬೆಲೆ ಏರಿಕೆ, ನಿರುದ್ಯೋಗ, ಶಿಕ್ಷಣ ಹಾಗೂ ಆರೋಗ್ಯ ಸೌಲಭ್ಯಗಳ ಆಧಾರದ ಮೇಲೆ ಎದುರಿಸಿ ನೋಡೋಣ. ನಿಮಗೆ ನೈತಿಕ ರಾಜಕೀಯ ಬೇಕಾ, ನಾಟಕೀಯ ರಾಜಕೀಯ ಬೇಕಾ, ಆಡಳಿತದ ರಾಜಕೀಯವೋ, ಸತ್ಯದ ರಾಜಕೀಯವೋ, ಪರೋಪಕಾರ ಬೇಕಾ, ಅಹಂಕಾರ ಬೇಕಾ ಎಂಬುದನ್ನು ನೀವೆ ನಿರ್ಧರಿಸಿ ಎಂದು ಪ್ರಿಯಾಂಕ ಗಾಂಧಿ ಕೇಳಿದ್ದಾರೆ.

ಮಣಿಪುರದಲ್ಲಿ ಒಂದು ಹೆಣ್ಣನ್ನು ಬೆತ್ತಲೆ ಮಾಡಿದಾಗ ಮೋದಿ ಎಲ್ಲಿದ್ದರು? ದೇಶದ ಬಗ್ಗೆ ಅವರಿಗೆ ಕಾಳಜಿ ಇಲ್ಲವೇ? ಮೋದಿಯವರಿಗೆ ನಾಚಿಕೆ ಆಗಬೇಕು ಎಂದು ಪ್ರಿಯಾಂಕಾ ಟೀಕಿಸಿದ್ದಾರೆ. ದೇಶದಲ್ಲಿ ಲಾಕ್‌ಡೌನ್‌ ಆದಾಗ ಬಡವರಿಗೆ ಉಟ ಇರಲಿಲ್ಲ. ಎಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡರು. ನಿರುದ್ಯೋಗ ಸಮಸ್ಯೆ ಎಲ್ಲರನ್ನೂ ಕಾಡುತ್ತಿದೆ. ಪ್ರಧಾನಿ ಮೋದಿಯವರ 10 ವರ್ಷಗಳ ಆಡಳಿತ ನೋಡಿದ್ದೀರಾ? ನಿಮ್ಮ ಜೀವನದಲ್ಲಿ ಬದಲಾವಣೆ ಆಗಿದೆಯಾ ಎಂದು ಪ್ರಶ್ನೆ ಮಾಡಬೇಕಿದೆ. ನಿಮ್ಮೆಲ್ಲರ ಮುಂದೆ ಸೂಪರ್ ಮ್ಯಾನ್ ರೀತಿ ಬಂದು ಅವರು ನಿಂತಿದ್ದರು ಎಂದು ವ್ಯಂಗ್ಯವಾಡಿದರು.

ಕೇಸರಿ ಪಕ್ಷವು ಕೆಲ ನಾಯಕರನ್ನು ಭ್ರಷ್ಟರೆಂದು ಕರೆದು ಅವರನ್ನು ನಂತರ ತಮ್ಮ ಪಕ್ಷಕ್ಕೆ ಸೇರಿಸಿಕೊಂಡಿದೆ. ಅವರು ಮಾಂತ್ರಿಕವಾಗಿ ಪ್ರಾಮಾಣಿಕರಾದರು ಎಂಬುವುದು ಆಶ್ಚರ್ಯಕರವಾಗಿದೆ. ಭ್ರಷ್ಟಾಚಾರ ಆರೋಪಕ್ಕೂ ಬಿಜೆಪಿಗೂ ವಿಲಕ್ಷಣ ಸಂಬಂಧವಿದೆ. ಇಬ್ಬರು ಮುಖ್ಯಮಂತ್ರಿಗಳನ್ನು ಬಂಧಿಸಿರುವ ಮತ್ತು ಪ್ರತಿಪಕ್ಷಗಳ ಮೇಲೆ ನಿರಂತರ ದಾಳಿ ನಡೆಸುತ್ತಿರುವ ಮೊದಲ ಚುನಾವಣೆ ಇದಾಗಿದೆ ಎಂದು ಅವರು ಹೇಳಿದ್ದಾರೆ.

ಇದನ್ನು ಓದಿ: ಜಾಗತಿಕ ಮಾದ್ಯಮಗಳಲ್ಲಿ ಸುದ್ದಿಯಾದ ಪ್ರಧಾನಿಯ ದ್ವೇಷ ಭಾಷಣ: ಅಂತರಾಷ್ಟ್ರೀಯ ಮಟ್ಟದಲ್ಲಿ ಮತ್ತೆ ಟೀಕೆಗೆ ಗುರಿಯಾದ ಮೋದಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...

ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರನ್ನು ವಾಪಸ್ ಕರೆತಂದ ಕೇಂದ್ರ ಸರ್ಕಾರ

ವರ್ಷದ ಹಿಂದೆ, ಅಂದರೆ 2025ರ ಜೂನ್ ತಿಂಗಳಲ್ಲಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರು ಬುಧವಾರ (ಜು.8) ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ತಮ್ಮ ಗ್ರಾಮಕ್ಕೆ ಹಿಂದಿರುಗಿದ್ದಾರೆ ಎಂದು ವರದಿಯಾಗಿದೆ. ಸುನಾಲಿ...

ಬೆಂಗಳೂರಿನ ಜ್ವಲಂತ ನಾಗರಿಕ ಸಮಸ್ಯೆಗಳ ವಿರುದ್ಧ ಜುಲೈ 12ಕ್ಕೆ ಬೃಹತ್ ‘ಜನಾಕ್ರೋಶ ಸಮಾವೇಶ

ಸಿಲಿಕಾನ್ ಸಿಟಿ ಬೆಂಗಳೂರಿನ ನಾಗರಿಕರು ಪ್ರತಿನಿತ್ಯ ಎದುರಿಸುತ್ತಿರುವ ನರಕಸದೃಶ ಸಮಸ್ಯೆಗಳ ವಿರುದ್ಧ ಮತ್ತು ಆಡಳಿತ ವ್ಯವಸ್ಥೆಯ ಭ್ರಷ್ಟಾಚಾರವನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೃಹತ್ ‘ಜನಾಕ್ರೋಶ ಸಮಾವೇಶ’ವನ್ನು ಹಮ್ಮಿಕೊಂಡಿದೆ. ಈ ‘ಜನಾಕ್ರೋಶ...

ಭೀಕರ ಪ್ರವಾಹಕ್ಕೆ ಕೊಚ್ಚಿಹೋದ 3 ಸಾವಿರ LPG ಸಿಲಿಂಡರ್

ಮಹಾರಾಷ್ಟ್ರದಲ್ಲಿ ವಾರದಿಂದ ಸುರಿಯುತ್ತಿರುವ ಮಳೆ ಇಡೀ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ಪ್ರಕೃತಿಯ ವಿಕೋಪದ ನಡುವೆ ರಾಯಗಢ ಜಿಲ್ಲೆಯಿಂದ ಅತ್ಯಂತ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದೆ. ಇಲ್ಲಿನ ಎಚ್‌ಪಿಸಿಎಲ್ (HPCL) ಪಾತಾಳಗಂಗಾ ಎಲ್‌ಪಿಜಿ ಬಾಟ್ಲಿಂಗ್...

ಹೈದರಾಬಾದ್‌| ಪವನ್‌ ಕಲ್ಯಾಣ್‌ ಟೀಕಿಸಿದ ಯೂಟ್ಯೂಬರ್ ರಾವಣ್ ಮೇಲೆ ಯುಎಪಿಎ ಕೇಸ್; ನಿವಾಸದಲ್ಲಿ ಪೊಲೀಸರ ಶೋಧ

ತೆಲುಗು ಯೂಟ್ಯೂಬರ್, ಸಾಮಾಜಿಕ ಕಾರ್ಯಕರ್ತ ರಾವಣ್‌ (ಬಚಲಕೂರಿ ಜೋಸೆಫ್) ಅವರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಬಂಧಿಸಿದ್ದು, ಆಂಧ್ರಪ್ರದೇಶ ಪೊಲೀಸರು ಹೈದರಾಬಾದ್‌ನಲ್ಲಿರುವ ಯೂಟ್ಯೂಬರ್ ರಾವಣ್ ನಿವಾಸದಲ್ಲಿ...

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...