Homeಮುಖಪುಟ"ನನ್ನ ಜನರಿಗೆ ದೇವಸ್ಥಾನಗಳಲ್ಲಿ ಪ್ರವೇಶವಿಲ್ಲ; ನಾನು ಅಯೋಧ್ಯೆಗೆ ಹೋದರೆ ಸಹಿಸುವರೇ?": ಮಲ್ಲಿಕಾರ್ಜುನ ಖರ್ಗೆ

“ನನ್ನ ಜನರಿಗೆ ದೇವಸ್ಥಾನಗಳಲ್ಲಿ ಪ್ರವೇಶವಿಲ್ಲ; ನಾನು ಅಯೋಧ್ಯೆಗೆ ಹೋದರೆ ಸಹಿಸುವರೇ?”: ಮಲ್ಲಿಕಾರ್ಜುನ ಖರ್ಗೆ

- Advertisement -
- Advertisement -

ದೇಶದಾದ್ಯಂತ ಪರಿಶಿಷ್ಟ ಜಾತಿಗಳು (ಎಸ್‌ಸಿಗಳು) ಇನ್ನೂ ತಾರತಮ್ಯವನ್ನು ಎದುರಿಸುತ್ತಿವೆ ಎಂದಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಬಿಜೆಪಿ ಸರ್ಕಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರನ್ನು ‘ಪರಿಶಿಷ್ಟ ಜಾತಿ ಮತ್ತು ಪಂಗಡದ ಕಾರಣ’ಕ್ಕೆ ಅವಮಾನಿಸಿದೆ ಎಂದು ಆರೋಪಿಸಿದ್ದಾರೆ.

ಅಯೋಧ್ಯೆಯ ರಾಮ ಮಂದಿರದ ಶಂಕುಸ್ಥಾಪನೆ ಮತ್ತು ಹೊಸ ಸಂಸತ್ ಭವನದ ಉದ್ಘಾಟನೆಗೆ ಮುರ್ಮು ಅವರನ್ನು ಆಹ್ವಾನಿಸಿಲ್ಲ. ಕೋವಿಂದ್ ಅವರಿಗೆ ಹೊಸ ಸಂಸತ್ ಭವನದ ಶಂಕುಸ್ಥಾಪನೆ ಮಾಡಲು ಅವಕಾಶ ನೀಡಿಲ್ಲ ಎಂದು ಖರ್ಗೆ ಹೇಳಿದ್ದಾರೆ.

ಇಂಡಿಯನ್ ಎಕ್ಸ್ ಪ್ರೆಸ್ ಆಯೋಜಿಸಿದ್ದ ‘ಐಡಿಯಾ ಎಕ್ಸ್ ಚೇಂಜ್’ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಖರ್ಗೆ, ರಾಜಕೀಯ ಬಲವಂತದ ಕಾರಣದಿಂದ ಕಾಂಗ್ರೆಸ್ ರಾಮ ಮಂದಿರದ ಶಂಕುಸ್ಥಾಪನೆಯಿಂದ ದೂರ ಉಳಿದಿದೆ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಆರೋಪಕ್ಕೆ ತಿರುಗೇಟು ನೀಡಿದ್ದಾರೆ.

“ನನ್ನ ಜನರಿಗೆ ಇನ್ನೂ ಅನೇಕ ದೇವಸ್ಥಾನಗಳಿಗೆ ಪ್ರವೇಶಿಸಲು ಅನುಮತಿಯಿಲ್ಲ. ಹೀಗಿರುವಾಗ ನಾನು ಆಯೋಧ್ಯೆಗೆ ಹೋದರೆ ಸಹಿಸಿಕೊಳ್ಳುವರೇ?” ಎಂದು ಪ್ರಶ್ನಿಸಿದ್ದಾರೆ.

ಎನ್‌ಡಿಎ 400 ಸೀಟ್ ಪಡೆಯಲಿದೆ ಎಂಬ ಪ್ರಧಾನಿ ಮೋದಿಯವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಖರ್ಗೆ, “ಜನರು ಬದಲಾವಣೆಗಾಗಿ ಹಾತೊರೆಯುತ್ತಿದ್ದಾರೆ. ಹಾಗಾಗಿ, ಮೂರನೇ ಬಾರಿಯ ಕನಸು ಈಡೇರುವುದಿಲ್ಲ” ಎಂದಿದ್ದಾರೆ. ಮತೊಮ್ಮೆ ಬಿಜೆಪಿ ಸರ್ಕಾರ ರಚಿಸುವ ಬಗ್ಗೆ ಎಚ್ಚರಿಕೆ ನೀಡಿದ ಖರ್ಗೆ, “ಅವರು ಈಗಲೇ ಸಂವಿಧಾನ ಬದಲಾವಣೆಯ ಬಗ್ಗೆ ಮಾತನಾಡುತ್ತಿದ್ದಾರೆ” ಎಂದಿದ್ದಾರೆ.

ಕಾಂಗ್ರೆಸ್ ರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿಬೇಕಿತ್ತು ಎಂದು ನಿಮಗೆ ಅನಿಸಿದೆಯಾ? ಎಂಬ ಪ್ರಶ್ನೆಗೆ ಉತ್ತರಿಸಿದ ಖರ್ಗೆ, ” ಅದು ವೈಯುಕ್ತಿಕ ನಂಬಿಕೆ. ಯಾರು, ಯಾವಾಗ ಬೇಕಾದರು ಅಲ್ಲಿಗೆ ಹೋಗಬಹುದು. ಮೋದಿ ಪೂಜಾರಿಯಲ್ಲ. ರಾಮ ವಿಗ್ರಹ ಪ್ರತಿಷ್ಠಾಪಿಸುವಲ್ಲಿ ಅವರೇಕೆ ಮುಂದಾಳತ್ವ ವಹಿಸಬೇಕು? ಅವರು ಅದನ್ನು ಕೇವಲ ರಾಜಕೀಯ ಉದ್ದೇಶಗಳಿಗಾಗಿ ಮಾಡಿದ್ದಾರೆ. ದೇವಾಲಯದ ಮೂರನೇ ಒಂದು ಭಾಗ ಇನ್ನೂ ಪೂರ್ಣಗೊಂಡಿಲ್ಲ. ಇದು ರಾಜಕೀಯ ಕಾರ್ಯವೇ ಅಥವಾ ಧಾರ್ಮಿಕ ಕಾರ್ಯವೇ? ರಾಜಕೀಯದೊಂದಿಗೆ ಧರ್ಮವನ್ನು ಏಕೆ ಬೆರೆಸುತ್ತಿದ್ದೀರಿ? ಎಂದು ಪ್ರಶ್ನಿಸಿದ್ದಾರೆ.

“ನನ್ನ ಜನರಿಗೆ ಇಂದಿಗೂ ಎಲ್ಲಾ ದೇವಾಲಯಗಳಲ್ಲಿ ಪ್ರವೇಶವಿಲ್ಲ. ರಾಮ ಮಂದಿರ ಬಿಡಿ, ನೀವು ಎಲ್ಲಿಗೆ ಹೋದರೂ, ಪ್ರವೇಶಕ್ಕಾಗಿ ಹೋರಾಟ ಮಾಡಬೇಕು. ಹಳ್ಳಿಯಲ್ಲಿ ಸಣ್ಣ ದೇವಾಲಯಗಳಿಗೂ ಅಲ್ಲಿನ ಪ್ರಬಲ ಜಾತಿಯವರು ಅನುಮತಿಸುವುದಿಲ್ಲ. ಕುಡಿಯುವ ನೀರಿಗೆ ಅವಕಾಶ ನೀಡುವುದಿಲ್ಲ. ಶಿಕ್ಷಣ ಸಂಸ್ಥೆಗಳಿಗೆ ಅವಕಾಶ ನೀಡುವುದಿಲ್ಲ. ಕುದುರೆ ಮೇಲೆ ಮೆರವಣಿಗೆ ಹೋಗುವ ಮದು ಮಗನನ್ನು ಸಹ ನೀವು (ಬಿಜೆಪಿ-ಆರ್‌ಎಸ್‌ಎಸ್‌) ಸಹಿಸುವುದಿಲ್ಲ. ಜನರು ಅವರನ್ನು ಎಳೆದುಕೊಂಡು ಹೊಡೆಯುತ್ತಾರೆ. ದಲಿತರು ಮೀಸೆ ಬಿಟ್ಟರೆ ಸಹಿಸುವುದಿಲ್ಲ. ನಾನು ರಾಮ ಮಂದಿರಕ್ಕೆ ಹೋಗಿದ್ದರೆ, ಅವರು (ಮೋದಿ-ಬಿಜೆಪಿ) ಸಹಿಸಿಕೊಳ್ಳುತ್ತಿದ್ದರೇ? ಎಂದು ಖರ್ಗೆ ಕೇಳಿದ್ದಾರೆ.

ಇದನ್ನೂ ಓದಿ : ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟಿಸಿದ ವಿದ್ಯಾರ್ಥಿಯನ್ನು ಅಮಾನತುಗೊಳಿಸಿದ ಟಿಐಎಸ್‌ಎಸ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್ ಬಳಿಕ 9 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಮತದಾರರ ಸಂಖ್ಯೆ 1.70 ಕೋಟಿ ಇಳಿಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ 9 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮತದಾರರ ಒಟ್ಟು ಸಂಖ್ಯೆಯಲ್ಲಿ 1.70 ಕೋಟಿ ಇಳಿಕೆ ಕಂಡಿದೆ. ಗುಜರಾತ್, ಪುದುಚೇರಿ, ಲಕ್ಷದ್ವೀಪ, ರಾಜಸ್ಥಾನ, ಛತ್ತೀಸ್‌ಗಢ, ಅಂಡಮಾನ್...

ಅಫ್ಘಾನ್ ಗಡಿಯಲ್ಲಿ ಪಾಕಿಸ್ತಾನ ವೈಮಾನಿಕ ದಾಳಿ : 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಶಂಕೆ

ಅಫ್ಘಾನಿಸ್ತಾನದ ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನ ಭಾನುವಾರ (ಫೆ.22) ಭಾರೀ ವೈಮಾನಿಕ ದಾಳಿ ನಡೆಸಿರುವುದಾಗಿ ವರದಿಯಾಗಿದೆ. ಪಾಕಿಸ್ತಾನದ ವಾಯುಪಡೆಯು ಅಫ್ಘಾನಿಸ್ತಾನದ ಪಕ್ತಿಕಾ ಮತ್ತು ನಂಗರ್ಹಾರ್ ಪ್ರಾಂತ್ಯಗಳಲ್ಲಿರುವ ಏಳು ಸಶಸ್ತ್ರ ಗುಂಪುಗಳ ಅಡಗುತಾಣಗಳ ಮೇಲೆ ದಾಳಿ ನಡೆಸಿದೆ...

ಹೊಸ ಜಾಗತಿಕ ಸುಂಕವನ್ನು ಶೇ.15ಕ್ಕೆ ಏರಿಸಿದ ಟ್ರಂಪ್

ಪ್ರತಿ ಸುಂಕ ನೀತಿಯನ್ನು ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್ ಆದೇಶಕ್ಕೆ ಸೆಡ್ಡು ಹೊಡೆದು, ಎಲ್ಲಾ ದೇಶಗಳ ಆಮದಿನ ಮೇಲೆ ಹೊಸದಾಗಿ 10 ಶೇಕಡ ಜಾಗತಿಕ ಸುಂಕ ಘೋಷಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಶನಿವಾರ...

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...