Homeಮುಖಪುಟ"ನನ್ನ ಜನರಿಗೆ ದೇವಸ್ಥಾನಗಳಲ್ಲಿ ಪ್ರವೇಶವಿಲ್ಲ; ನಾನು ಅಯೋಧ್ಯೆಗೆ ಹೋದರೆ ಸಹಿಸುವರೇ?": ಮಲ್ಲಿಕಾರ್ಜುನ ಖರ್ಗೆ

“ನನ್ನ ಜನರಿಗೆ ದೇವಸ್ಥಾನಗಳಲ್ಲಿ ಪ್ರವೇಶವಿಲ್ಲ; ನಾನು ಅಯೋಧ್ಯೆಗೆ ಹೋದರೆ ಸಹಿಸುವರೇ?”: ಮಲ್ಲಿಕಾರ್ಜುನ ಖರ್ಗೆ

- Advertisement -
- Advertisement -

ದೇಶದಾದ್ಯಂತ ಪರಿಶಿಷ್ಟ ಜಾತಿಗಳು (ಎಸ್‌ಸಿಗಳು) ಇನ್ನೂ ತಾರತಮ್ಯವನ್ನು ಎದುರಿಸುತ್ತಿವೆ ಎಂದಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಬಿಜೆಪಿ ಸರ್ಕಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರನ್ನು ‘ಪರಿಶಿಷ್ಟ ಜಾತಿ ಮತ್ತು ಪಂಗಡದ ಕಾರಣ’ಕ್ಕೆ ಅವಮಾನಿಸಿದೆ ಎಂದು ಆರೋಪಿಸಿದ್ದಾರೆ.

ಅಯೋಧ್ಯೆಯ ರಾಮ ಮಂದಿರದ ಶಂಕುಸ್ಥಾಪನೆ ಮತ್ತು ಹೊಸ ಸಂಸತ್ ಭವನದ ಉದ್ಘಾಟನೆಗೆ ಮುರ್ಮು ಅವರನ್ನು ಆಹ್ವಾನಿಸಿಲ್ಲ. ಕೋವಿಂದ್ ಅವರಿಗೆ ಹೊಸ ಸಂಸತ್ ಭವನದ ಶಂಕುಸ್ಥಾಪನೆ ಮಾಡಲು ಅವಕಾಶ ನೀಡಿಲ್ಲ ಎಂದು ಖರ್ಗೆ ಹೇಳಿದ್ದಾರೆ.

ಇಂಡಿಯನ್ ಎಕ್ಸ್ ಪ್ರೆಸ್ ಆಯೋಜಿಸಿದ್ದ ‘ಐಡಿಯಾ ಎಕ್ಸ್ ಚೇಂಜ್’ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಖರ್ಗೆ, ರಾಜಕೀಯ ಬಲವಂತದ ಕಾರಣದಿಂದ ಕಾಂಗ್ರೆಸ್ ರಾಮ ಮಂದಿರದ ಶಂಕುಸ್ಥಾಪನೆಯಿಂದ ದೂರ ಉಳಿದಿದೆ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಆರೋಪಕ್ಕೆ ತಿರುಗೇಟು ನೀಡಿದ್ದಾರೆ.

“ನನ್ನ ಜನರಿಗೆ ಇನ್ನೂ ಅನೇಕ ದೇವಸ್ಥಾನಗಳಿಗೆ ಪ್ರವೇಶಿಸಲು ಅನುಮತಿಯಿಲ್ಲ. ಹೀಗಿರುವಾಗ ನಾನು ಆಯೋಧ್ಯೆಗೆ ಹೋದರೆ ಸಹಿಸಿಕೊಳ್ಳುವರೇ?” ಎಂದು ಪ್ರಶ್ನಿಸಿದ್ದಾರೆ.

ಎನ್‌ಡಿಎ 400 ಸೀಟ್ ಪಡೆಯಲಿದೆ ಎಂಬ ಪ್ರಧಾನಿ ಮೋದಿಯವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಖರ್ಗೆ, “ಜನರು ಬದಲಾವಣೆಗಾಗಿ ಹಾತೊರೆಯುತ್ತಿದ್ದಾರೆ. ಹಾಗಾಗಿ, ಮೂರನೇ ಬಾರಿಯ ಕನಸು ಈಡೇರುವುದಿಲ್ಲ” ಎಂದಿದ್ದಾರೆ. ಮತೊಮ್ಮೆ ಬಿಜೆಪಿ ಸರ್ಕಾರ ರಚಿಸುವ ಬಗ್ಗೆ ಎಚ್ಚರಿಕೆ ನೀಡಿದ ಖರ್ಗೆ, “ಅವರು ಈಗಲೇ ಸಂವಿಧಾನ ಬದಲಾವಣೆಯ ಬಗ್ಗೆ ಮಾತನಾಡುತ್ತಿದ್ದಾರೆ” ಎಂದಿದ್ದಾರೆ.

ಕಾಂಗ್ರೆಸ್ ರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿಬೇಕಿತ್ತು ಎಂದು ನಿಮಗೆ ಅನಿಸಿದೆಯಾ? ಎಂಬ ಪ್ರಶ್ನೆಗೆ ಉತ್ತರಿಸಿದ ಖರ್ಗೆ, ” ಅದು ವೈಯುಕ್ತಿಕ ನಂಬಿಕೆ. ಯಾರು, ಯಾವಾಗ ಬೇಕಾದರು ಅಲ್ಲಿಗೆ ಹೋಗಬಹುದು. ಮೋದಿ ಪೂಜಾರಿಯಲ್ಲ. ರಾಮ ವಿಗ್ರಹ ಪ್ರತಿಷ್ಠಾಪಿಸುವಲ್ಲಿ ಅವರೇಕೆ ಮುಂದಾಳತ್ವ ವಹಿಸಬೇಕು? ಅವರು ಅದನ್ನು ಕೇವಲ ರಾಜಕೀಯ ಉದ್ದೇಶಗಳಿಗಾಗಿ ಮಾಡಿದ್ದಾರೆ. ದೇವಾಲಯದ ಮೂರನೇ ಒಂದು ಭಾಗ ಇನ್ನೂ ಪೂರ್ಣಗೊಂಡಿಲ್ಲ. ಇದು ರಾಜಕೀಯ ಕಾರ್ಯವೇ ಅಥವಾ ಧಾರ್ಮಿಕ ಕಾರ್ಯವೇ? ರಾಜಕೀಯದೊಂದಿಗೆ ಧರ್ಮವನ್ನು ಏಕೆ ಬೆರೆಸುತ್ತಿದ್ದೀರಿ? ಎಂದು ಪ್ರಶ್ನಿಸಿದ್ದಾರೆ.

“ನನ್ನ ಜನರಿಗೆ ಇಂದಿಗೂ ಎಲ್ಲಾ ದೇವಾಲಯಗಳಲ್ಲಿ ಪ್ರವೇಶವಿಲ್ಲ. ರಾಮ ಮಂದಿರ ಬಿಡಿ, ನೀವು ಎಲ್ಲಿಗೆ ಹೋದರೂ, ಪ್ರವೇಶಕ್ಕಾಗಿ ಹೋರಾಟ ಮಾಡಬೇಕು. ಹಳ್ಳಿಯಲ್ಲಿ ಸಣ್ಣ ದೇವಾಲಯಗಳಿಗೂ ಅಲ್ಲಿನ ಪ್ರಬಲ ಜಾತಿಯವರು ಅನುಮತಿಸುವುದಿಲ್ಲ. ಕುಡಿಯುವ ನೀರಿಗೆ ಅವಕಾಶ ನೀಡುವುದಿಲ್ಲ. ಶಿಕ್ಷಣ ಸಂಸ್ಥೆಗಳಿಗೆ ಅವಕಾಶ ನೀಡುವುದಿಲ್ಲ. ಕುದುರೆ ಮೇಲೆ ಮೆರವಣಿಗೆ ಹೋಗುವ ಮದು ಮಗನನ್ನು ಸಹ ನೀವು (ಬಿಜೆಪಿ-ಆರ್‌ಎಸ್‌ಎಸ್‌) ಸಹಿಸುವುದಿಲ್ಲ. ಜನರು ಅವರನ್ನು ಎಳೆದುಕೊಂಡು ಹೊಡೆಯುತ್ತಾರೆ. ದಲಿತರು ಮೀಸೆ ಬಿಟ್ಟರೆ ಸಹಿಸುವುದಿಲ್ಲ. ನಾನು ರಾಮ ಮಂದಿರಕ್ಕೆ ಹೋಗಿದ್ದರೆ, ಅವರು (ಮೋದಿ-ಬಿಜೆಪಿ) ಸಹಿಸಿಕೊಳ್ಳುತ್ತಿದ್ದರೇ? ಎಂದು ಖರ್ಗೆ ಕೇಳಿದ್ದಾರೆ.

ಇದನ್ನೂ ಓದಿ : ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟಿಸಿದ ವಿದ್ಯಾರ್ಥಿಯನ್ನು ಅಮಾನತುಗೊಳಿಸಿದ ಟಿಐಎಸ್‌ಎಸ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...