Homeಅಂತರಾಷ್ಟ್ರೀಯಅಮೆರಿಕ ಇತಿಹಾಸದಲ್ಲೆ ನನ್ನ ಅವಧಿ ಅತ್ಯುತ್ತಮ; ಅದೀಗ ಕೊನೆಯಾಗುತ್ತಿದೆ- ಟ್ರಂಪ್

ಅಮೆರಿಕ ಇತಿಹಾಸದಲ್ಲೆ ನನ್ನ ಅವಧಿ ಅತ್ಯುತ್ತಮ; ಅದೀಗ ಕೊನೆಯಾಗುತ್ತಿದೆ- ಟ್ರಂಪ್

ಕೊನೆಗೂ ತನ್ನ ಅಧಿಕಾರ ಹಸ್ತಾಂತರಕ್ಕೆ ಒಪ್ಪಿಕೊಂಡ ‌ಅಮೆರಿಕಾದ ನಿರ್ಗಮಿತ ಅಧ್ಯಕ್ಷ

- Advertisement -
- Advertisement -

ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಜೋ ಬೈಡೆನ್ ಗೆಲುವನ್ನು ಡೊನಾಲ್ಡ್ ಟ್ರಂಪ್ ಕೊನೆಗೂ ಒಪ್ಪಿಕೊಂಡಿದ್ದಾರೆ. ಸುಗಮ, ಕ್ರಮಬದ್ದ ಹಾಗೂ ತಡೆರಹಿತವಾಗಿ ಅಧಿಕಾರವನ್ನು ಹಸ್ತಾಂತರಿಸುವುದಾಗಿ ಅವರು ತಿಳಿಸಿದ್ದಾರೆ. ಅಲ್ಲದೆ ಸಂಸತ್‌ ಕಟ್ಟಡದ ಮೇಲೆ ನಡೆದ ದಾಳಿಯನ್ನು ಅವರು ಖಂಡಿಸಿದ್ದಾರೆ.

ಬುಧವಾರ ಅಮೆರಿಕ ಸಂಸತ್‌‌ನಲ್ಲಿ ಜೋ ಬೈಡೆನ್ ಗೆಲುವನ್ನು ಪ್ರಮಾಣೀಕರಿಸುವ ಕಾರ್ಯಕ್ರಮದ ಸಮಯದಲ್ಲಿ ಕಟ್ಟಡಕ್ಕೆ ಮುತ್ತಿಗೆ ಹಾಕಿರುವ ಟ್ರಂಪ್ ಬೆಂಬಲಿಗರು ಹಿಂಸಾಚಾರ ನಡೆಸಿದ್ದರು. ಈ ವೇಳೆ ನಾಲ್ವರು ಮೃತಪಟ್ಟಿದ್ದರು. ಅಮೆರಿಕ ಸಂಸತ್‌ ಚುನಾವಣಾ ಫಲಿತಾಂಶಗಳನ್ನು ಪ್ರಮಾಣೀಕರಿಸಿದ್ದು, ನೂತನ ಆಡಳಿತ ಜನವರಿ 20 ರಂದು ಪ್ರಾರಂಭವಾಲಿದೆ.

ಇದನ್ನೂ ಓದಿ: ಅಮೆರಿಕ ಸಂಸತ್‌ ದಾಳಿಯಲ್ಲಿ ಭಾರತೀಯ ಧ್ವಜ ಹಾರಾಟ: ವ್ಯಾಪಕ ಟೀಕೆ

“ಚುನಾವಣಾ ಫಲಿತಾಂಶಕ್ಕೆ ನನ್ನ ಸಮ್ಮತಿಯಿಲ್ಲವಾದರೂ, ಜನವರಿ 20 ರಂದು ಅಧಿಕಾರ ಹಸ್ತಾಂತರ ಸುಗಮವಾಗಿ ನಡೆಯಲಿದೆ. ನನ್ನ ಅಧಿಕಾರಾವಧಿ ಅಮೆರಿಕದ ಅಧ್ಯಕ್ಷೀಯ ಇತಿಹಾಸದಲ್ಲೇ ಮೊದಲ ಅತ್ಯುತ್ತಮ ಅವಧಿಯಾಗಿದೆ. ಅದು ಈಗ ಕೊನೆಯಾಗುತ್ತಿದೆಯಾದರೂ, ಅವೆುರಿಕವನ್ನು ಮತ್ತೆ ಶ್ರೇಷ್ಠ ದೇಶವನ್ನಾಗಿಸುವ ನಮ್ಮ ಹೋರಾಟದ ಆರಂಭವಾಗಿದೆ” ಎಂದು ಅವರು ಹೇಳಿದ್ದಾರೆ.

ಅಲ್ಲದೆ ತಮ್ಮ ಬೆಂಬಲಿಗರ ಹಿಂಸಾಚಾರವನ್ನು ಡೊನಾಲ್ಡ್ ಟ್ರಂಪ್ ಖಂಡಿಸಿದ್ದಾರೆ. “ಇದೊಂದು ಹೇಯ ಕೃತ್ಯ. ಎಲ್ಲ ಅಮೆರಿಕನ್ನರಂತೆ ನಾನು ಕೂಡಾ ಹಿಂಸಾಚಾರ, ಕಾನೂನು ಬಾಹಿರ ಚಟುವಟಿಕೆ ಮತ್ತು ಹಾನಿಕರ ಘಟನೆಯಿಂದ ಅಸಮಾಧಾನಗೊಂಡಿದ್ದೇನೆ. ಅಮೆರಿಕ ಸಂಸತ್‌ ಕಟ್ಟಡವನ್ನು ಸುರಕ್ಷಿತವಾಗಿರಿಸಲು ಮತ್ತು ಒಳನುಗ್ಗಿದ ಪ್ರತಿಭಟನಕಾರರನ್ನು ಹೊರಹಾಕಲು ತಕ್ಷಣ ನ್ಯಾಷನಲ್ ಗಾರ್ಡ್ ನಿಯೋಜಿಸಿ ಫೆಡರಲ್ ಕಾನೂನು ಜಾರಿಗೊಳಿಸಿದ್ದೇನೆ. ಅಮೆರಿಕ ಯಾವತ್ತೂ ಕಾನೂನು ಸುವ್ಯವಸ್ಥೆಯ ರಾಷ್ಟ್ರವಾಗಿರಬೇಕು” ಎಂದು ಹೇಳಿದ್ದಾರೆ.

ಗಲಭೆಕೋರರನ್ನು ದೇಶೀಯ ಭಯೋತ್ಪಾದಕರೆಂದ ನಿಯೋಜಿತ ಅಧ್ಯಕ್ಷ ಜೋ ಬೈಡೆನ್

ಸಂಸತ್‌ ಕಟ್ಟಡದ ಮೇಲೆ ನಡೆದ ದಾಳಿಯನ್ನು ಬಲವಾಗಿ ಖಂಡಿಸಿರುವ ನಿಯೋಜಿತ ಅಧ್ಯಕ್ಷ ಜೋ ಬೈಡೆನ್, ಗಲಭೆಕೋರರನ್ನು ದೇಶೀಯ ಭಯೋತ್ಪಾದಕರು ಎಂದು ಕರೆದಿದ್ದಾರೆ. ಅಲ್ಲದೆ ಘಟನೆಗೆ ಡೊನಾಲ್ಡ್ ಟ್ರಂಪ್ ಕಾರಣ ಎಂದು ಆರೋಪಿಸಿದ ಅವರು, ಇದು ದೇಶದ ಇತಿಹಾಸದಲ್ಲೇ ಅತ್ಯಂತ ಕರಾಳ ದಿನ ಎಂದಿದ್ದಾರೆ.

ಇದನ್ನೂ ಓದಿ: ಜೋ ಬೈಡನ್-ಕಮಲಾ ಹ್ಯಾರಿಸ್ ಗೆಲುವನ್ನು ಅಂಗೀಕರಿಸಿದ ಅಮೆರಿಕ ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...