Homeಅಂತರಾಷ್ಟ್ರೀಯಅಮೆರಿಕ ಇತಿಹಾಸದಲ್ಲೆ ನನ್ನ ಅವಧಿ ಅತ್ಯುತ್ತಮ; ಅದೀಗ ಕೊನೆಯಾಗುತ್ತಿದೆ- ಟ್ರಂಪ್

ಅಮೆರಿಕ ಇತಿಹಾಸದಲ್ಲೆ ನನ್ನ ಅವಧಿ ಅತ್ಯುತ್ತಮ; ಅದೀಗ ಕೊನೆಯಾಗುತ್ತಿದೆ- ಟ್ರಂಪ್

ಕೊನೆಗೂ ತನ್ನ ಅಧಿಕಾರ ಹಸ್ತಾಂತರಕ್ಕೆ ಒಪ್ಪಿಕೊಂಡ ‌ಅಮೆರಿಕಾದ ನಿರ್ಗಮಿತ ಅಧ್ಯಕ್ಷ

- Advertisement -
- Advertisement -

ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಜೋ ಬೈಡೆನ್ ಗೆಲುವನ್ನು ಡೊನಾಲ್ಡ್ ಟ್ರಂಪ್ ಕೊನೆಗೂ ಒಪ್ಪಿಕೊಂಡಿದ್ದಾರೆ. ಸುಗಮ, ಕ್ರಮಬದ್ದ ಹಾಗೂ ತಡೆರಹಿತವಾಗಿ ಅಧಿಕಾರವನ್ನು ಹಸ್ತಾಂತರಿಸುವುದಾಗಿ ಅವರು ತಿಳಿಸಿದ್ದಾರೆ. ಅಲ್ಲದೆ ಸಂಸತ್‌ ಕಟ್ಟಡದ ಮೇಲೆ ನಡೆದ ದಾಳಿಯನ್ನು ಅವರು ಖಂಡಿಸಿದ್ದಾರೆ.

ಬುಧವಾರ ಅಮೆರಿಕ ಸಂಸತ್‌‌ನಲ್ಲಿ ಜೋ ಬೈಡೆನ್ ಗೆಲುವನ್ನು ಪ್ರಮಾಣೀಕರಿಸುವ ಕಾರ್ಯಕ್ರಮದ ಸಮಯದಲ್ಲಿ ಕಟ್ಟಡಕ್ಕೆ ಮುತ್ತಿಗೆ ಹಾಕಿರುವ ಟ್ರಂಪ್ ಬೆಂಬಲಿಗರು ಹಿಂಸಾಚಾರ ನಡೆಸಿದ್ದರು. ಈ ವೇಳೆ ನಾಲ್ವರು ಮೃತಪಟ್ಟಿದ್ದರು. ಅಮೆರಿಕ ಸಂಸತ್‌ ಚುನಾವಣಾ ಫಲಿತಾಂಶಗಳನ್ನು ಪ್ರಮಾಣೀಕರಿಸಿದ್ದು, ನೂತನ ಆಡಳಿತ ಜನವರಿ 20 ರಂದು ಪ್ರಾರಂಭವಾಲಿದೆ.

ಇದನ್ನೂ ಓದಿ: ಅಮೆರಿಕ ಸಂಸತ್‌ ದಾಳಿಯಲ್ಲಿ ಭಾರತೀಯ ಧ್ವಜ ಹಾರಾಟ: ವ್ಯಾಪಕ ಟೀಕೆ

“ಚುನಾವಣಾ ಫಲಿತಾಂಶಕ್ಕೆ ನನ್ನ ಸಮ್ಮತಿಯಿಲ್ಲವಾದರೂ, ಜನವರಿ 20 ರಂದು ಅಧಿಕಾರ ಹಸ್ತಾಂತರ ಸುಗಮವಾಗಿ ನಡೆಯಲಿದೆ. ನನ್ನ ಅಧಿಕಾರಾವಧಿ ಅಮೆರಿಕದ ಅಧ್ಯಕ್ಷೀಯ ಇತಿಹಾಸದಲ್ಲೇ ಮೊದಲ ಅತ್ಯುತ್ತಮ ಅವಧಿಯಾಗಿದೆ. ಅದು ಈಗ ಕೊನೆಯಾಗುತ್ತಿದೆಯಾದರೂ, ಅವೆುರಿಕವನ್ನು ಮತ್ತೆ ಶ್ರೇಷ್ಠ ದೇಶವನ್ನಾಗಿಸುವ ನಮ್ಮ ಹೋರಾಟದ ಆರಂಭವಾಗಿದೆ” ಎಂದು ಅವರು ಹೇಳಿದ್ದಾರೆ.

ಅಲ್ಲದೆ ತಮ್ಮ ಬೆಂಬಲಿಗರ ಹಿಂಸಾಚಾರವನ್ನು ಡೊನಾಲ್ಡ್ ಟ್ರಂಪ್ ಖಂಡಿಸಿದ್ದಾರೆ. “ಇದೊಂದು ಹೇಯ ಕೃತ್ಯ. ಎಲ್ಲ ಅಮೆರಿಕನ್ನರಂತೆ ನಾನು ಕೂಡಾ ಹಿಂಸಾಚಾರ, ಕಾನೂನು ಬಾಹಿರ ಚಟುವಟಿಕೆ ಮತ್ತು ಹಾನಿಕರ ಘಟನೆಯಿಂದ ಅಸಮಾಧಾನಗೊಂಡಿದ್ದೇನೆ. ಅಮೆರಿಕ ಸಂಸತ್‌ ಕಟ್ಟಡವನ್ನು ಸುರಕ್ಷಿತವಾಗಿರಿಸಲು ಮತ್ತು ಒಳನುಗ್ಗಿದ ಪ್ರತಿಭಟನಕಾರರನ್ನು ಹೊರಹಾಕಲು ತಕ್ಷಣ ನ್ಯಾಷನಲ್ ಗಾರ್ಡ್ ನಿಯೋಜಿಸಿ ಫೆಡರಲ್ ಕಾನೂನು ಜಾರಿಗೊಳಿಸಿದ್ದೇನೆ. ಅಮೆರಿಕ ಯಾವತ್ತೂ ಕಾನೂನು ಸುವ್ಯವಸ್ಥೆಯ ರಾಷ್ಟ್ರವಾಗಿರಬೇಕು” ಎಂದು ಹೇಳಿದ್ದಾರೆ.

ಗಲಭೆಕೋರರನ್ನು ದೇಶೀಯ ಭಯೋತ್ಪಾದಕರೆಂದ ನಿಯೋಜಿತ ಅಧ್ಯಕ್ಷ ಜೋ ಬೈಡೆನ್

ಸಂಸತ್‌ ಕಟ್ಟಡದ ಮೇಲೆ ನಡೆದ ದಾಳಿಯನ್ನು ಬಲವಾಗಿ ಖಂಡಿಸಿರುವ ನಿಯೋಜಿತ ಅಧ್ಯಕ್ಷ ಜೋ ಬೈಡೆನ್, ಗಲಭೆಕೋರರನ್ನು ದೇಶೀಯ ಭಯೋತ್ಪಾದಕರು ಎಂದು ಕರೆದಿದ್ದಾರೆ. ಅಲ್ಲದೆ ಘಟನೆಗೆ ಡೊನಾಲ್ಡ್ ಟ್ರಂಪ್ ಕಾರಣ ಎಂದು ಆರೋಪಿಸಿದ ಅವರು, ಇದು ದೇಶದ ಇತಿಹಾಸದಲ್ಲೇ ಅತ್ಯಂತ ಕರಾಳ ದಿನ ಎಂದಿದ್ದಾರೆ.

ಇದನ್ನೂ ಓದಿ: ಜೋ ಬೈಡನ್-ಕಮಲಾ ಹ್ಯಾರಿಸ್ ಗೆಲುವನ್ನು ಅಂಗೀಕರಿಸಿದ ಅಮೆರಿಕ ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....