Homeಮುಖಪುಟ‘ನನ್ನ ಫೋನ್ ಟ್ಯಾಪ್ ಮಾಡಲಾಗಿದೆ’: ಕೇಂದ್ರದ ವಿರುದ್ಧ ಮಮತಾ ಬ್ಯಾನರ್ಜಿ ಆರೋಪ

‘ನನ್ನ ಫೋನ್ ಟ್ಯಾಪ್ ಮಾಡಲಾಗಿದೆ’: ಕೇಂದ್ರದ ವಿರುದ್ಧ ಮಮತಾ ಬ್ಯಾನರ್ಜಿ ಆರೋಪ

- Advertisement -
- Advertisement -

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ವಾಟ್ಸಾಪ್ ಸ್ನೂಪಿಂಗ್ ವಿವಾದದ ಬಗ್ಗೆ ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ ಮತ್ತು ಭದ್ರತಾ ಉಲ್ಲಂಘನೆಯ ಬಗ್ಗೆ ಕೇಂದ್ರ ಸರ್ಕಾರಕ್ಕೆ “ಸಂಪೂರ್ಣವಾಗಿ ತಿಳಿದಿದೆ” ಎಂದು ಆರೋಪಿಸಿದ್ದಾರೆ.

“ನನ್ನ ಫೋನ್ ಅನ್ನು ಟ್ಯಾಪ್ ಮಾಡಲಾಗಿದೆ, ಅದರ ಬಗ್ಗೆ ನನಗೆ ಮಾಹಿತಿ ಸಿಕ್ಕಿದೆ ಮತ್ತು ನನ್ನ ಬಳಿ ಪುರಾವೆಗಳಿವೆ. ಕೇಂದ್ರ ಸರ್ಕಾರ ಮತ್ತು ಎರಡು ಮೂರು ರಾಜ್ಯ ಸರ್ಕಾರಗಳ ಆದೇಶದ ಮೇರೆಗೆ ಇದು ನಡೆಯುತ್ತಿದೆ. ನಾನು ರಾಜ್ಯಗಳ ಹೆಸರನ್ನು ಹೇಳಲು ಇಚ್ಚಿಸುವುದಿಲ್ಲ ಆದರೆ ಅಲ್ಲಿ ಬಿಜೆಪಿ ಆಡಳಿತದಲ್ಲಿದೆ” ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: WhatsApp ಮೂಲಕ ಗೂಢಚರ್ಯೆ: ದಂಗುಬಡಿಸುವ ಅಪಾಯಕಾರಿ ವಿದ್ಯಮಾನ ಬಯಲು!

ವಿಶ್ವದಾದ್ಯಂತ ಸುಮಾರು 1,400 ಜನರ ಮೇಲೆ ಬೇಹುಗಾರಿಕೆ ನಡೆಸಲು ಇಸ್ರೇಲಿ ಸಂಸ್ಥೆಯು ತನ್ನ ವೇದಿಕೆಯನ್ನು ದುರುಪಯೋಗಪಡಿಸಿಕೊಂಡಿದೆ ಎಂದು ವಾಟ್ಸಾಪ್ ಆರೋಪಿಸಿದೆ. ಭಾರತದಲ್ಲಿ, ಮಾನವ ಹಕ್ಕುಗಳ ಕಾರ್ಯಕರ್ತರು, ವಕೀಲರು ಮತ್ತು ಪತ್ರಕರ್ತರ ವಾಟ್ಸಾಪ್‌ ಸಂದೇಶಗಳನ್ನು ಟ್ಯಾಪ್‌ ಮಾಡಲಾಗಿದೆ ಎಂದು ತಿಳಿದುಬಂದ ಹಿನ್ನೆಲೆಯಲ್ಲಿ ಮಮತಾ ಬ್ಯಾನರ್ಜಿ ಆರೋಪ ಮಾಡಿದ್ದಾರೆ.

ಮಾಜಿ ಕೇಂದ್ರ ಸಚಿವ ಪ್ರಫುಲ್ ಪಟೇಲ್ ಮತ್ತು ಮಾಜಿ ಸಂಸತ್ ಸದಸ್ಯ ಸಂತೋಷ್ ಭಾರತೀಯ ಕೂಡ ಈ ವಾಟ್ಸಾಪ್‌ ಬೇಹುಗಾರಿಕೆಗೆ ಒಳಗಾಗಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ದೇಶಾದ್ಯಂತ ಗೂಢಚರ್ಯೆ ಚಟುವಟಿಕೆಗಳನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಬ್ಯಾನರ್ಜಿ, ವಾಟ್ಸಾಪ್ ವಿಷಯದ ಬಗ್ಗೆ ತನಿಖೆ ನಡೆಸುವಂತೆ ಪ್ರಧಾನಿಯನ್ನು ಒತ್ತಾಯಿಸುವುದಾಗಿ ಹೇಳಿದ್ದಾರೆ.

“ನಮ್ಮ ವಾಕ್ ಸ್ವಾತಂತ್ರ್ಯ ಎಲ್ಲಿದೆ? ಇದು ಯಾವ ರೀತಿಯ ಸ್ವಾತಂತ್ರ್ಯ? ನಾವು ಫೋನ್‌ನಲ್ಲಿ ಮುಕ್ತವಾಗಿ ಮಾತನಾಡಲು ಸಾಧ್ಯವಿಲ್ಲ” ಎಂದು ಬ್ಯಾನರ್ಜಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜನರು ವಾಟ್ಸಾಪ್ ನಲ್ಲಿ ಸೋರಿಯಾಗಲು ಸಾಧ್ಯವಿಲ್ಲ ಎಂದು ಭಾವಿಸಿದ್ದರು. ಆದರೆ ಅದು ಈಗ ಸಾಧ್ಯವಾಗಿದೆ. ಜೊತೆಗೆ “ಲ್ಯಾಂಡ್‌ಲೈನ್ ಫೋನ್‌ಗಳು ಮತ್ತು ಮೊಬೈಲ್ ಫೋನ್‌ಗಳು” ಸಹ ಸುರಕ್ಷಿತವಾಗಿಲ್ಲ ಎಂದು ಅವರು ಹೇಳಿದ್ದಾರೆ.

ಇನ್ನು ಬಿಜೆಪಿ ಮುಖಂಡ ಕೈಲಾಶ್‌ ವಿಜಯವರ್ಗಿಯಾರವರ ಮಮತಾ ಬ್ಯಾನರ್ಜಿಯವರು ಆರೋಪವನ್ನು ತಳ್ಳಿ ಹಾಕಿದ್ದಾರೆ. “ಇತರರ ಮೇಲೆ ಕಣ್ಣಿಡಲು ಮಮತಾ ಬ್ಯಾನರ್ಜಿ ಸರ್ಕಾರಕ್ಕೆ ಅಭ್ಯಾಸವಾಗಿದೆ. ರಾಜೀವ್ ಕುಮಾರ್ (ಮಾಜಿ ಕೋಲ್ಕತಾ ಪೊಲೀಸ್ ಆಯುಕ್ತರು) ಇಂತಹ ಸ್ನೂಪಿಂಗ್‌ಗೆ ವ್ಯವಸ್ಥೆ ಮಾಡಿದ್ದರು ”ಎಂದು ವಿಜಯವರ್ಗಿಯಾ ಹೇಳಿದ್ದಾರೆ.

ವಿವಾದದ ಕೇಂದ್ರದಲ್ಲಿರುವ ಇಸ್ರೇಲಿ ಸಾಫ್ಟ್‌ವೇರ್ ಅನ್ನು ಎನ್‌ಎಸ್‌ಒ ಗ್ರೂಪ್ ಅಭಿವೃದ್ಧಿಪಡಿಸಿದೆ ಮತ್ತು ಇದನ್ನು ಹೆಚ್ಚಾಗಿ ಪೆಗಾಸಸ್ ಎಂದು ಕರೆಯಲಾಗುತ್ತದೆ. ತಾಂತ್ರಿಕವಾಗಿ ಮಾಲ್ವೇರ್, ಪೆಗಾಸಸ್ ಗುರಿಯ ಫೋನ್‌ನ ಸಂಪೂರ್ಣ ನಿಯಂತ್ರಣವನ್ನು ಅನುಮತಿಸುತ್ತದೆ, ಫೈಲ್‌ಗಳು, ಸಂವಹನ ಮತ್ತು ಮೈಕ್ರೊಫೋನ್ ಮತ್ತು ಕ್ಯಾಮರಾಗಳಿಗೆ ಪ್ರವೇಶವನ್ನು ಅದು ಸಕ್ರಿಯಗೊಳಿಸುತ್ತದೆ ಎನ್ನಲಾಗುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...