Homeಮುಖಪುಟ‘ನನ್ನ ಫೋನ್ ಟ್ಯಾಪ್ ಮಾಡಲಾಗಿದೆ’: ಕೇಂದ್ರದ ವಿರುದ್ಧ ಮಮತಾ ಬ್ಯಾನರ್ಜಿ ಆರೋಪ

‘ನನ್ನ ಫೋನ್ ಟ್ಯಾಪ್ ಮಾಡಲಾಗಿದೆ’: ಕೇಂದ್ರದ ವಿರುದ್ಧ ಮಮತಾ ಬ್ಯಾನರ್ಜಿ ಆರೋಪ

- Advertisement -
- Advertisement -

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ವಾಟ್ಸಾಪ್ ಸ್ನೂಪಿಂಗ್ ವಿವಾದದ ಬಗ್ಗೆ ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ ಮತ್ತು ಭದ್ರತಾ ಉಲ್ಲಂಘನೆಯ ಬಗ್ಗೆ ಕೇಂದ್ರ ಸರ್ಕಾರಕ್ಕೆ “ಸಂಪೂರ್ಣವಾಗಿ ತಿಳಿದಿದೆ” ಎಂದು ಆರೋಪಿಸಿದ್ದಾರೆ.

“ನನ್ನ ಫೋನ್ ಅನ್ನು ಟ್ಯಾಪ್ ಮಾಡಲಾಗಿದೆ, ಅದರ ಬಗ್ಗೆ ನನಗೆ ಮಾಹಿತಿ ಸಿಕ್ಕಿದೆ ಮತ್ತು ನನ್ನ ಬಳಿ ಪುರಾವೆಗಳಿವೆ. ಕೇಂದ್ರ ಸರ್ಕಾರ ಮತ್ತು ಎರಡು ಮೂರು ರಾಜ್ಯ ಸರ್ಕಾರಗಳ ಆದೇಶದ ಮೇರೆಗೆ ಇದು ನಡೆಯುತ್ತಿದೆ. ನಾನು ರಾಜ್ಯಗಳ ಹೆಸರನ್ನು ಹೇಳಲು ಇಚ್ಚಿಸುವುದಿಲ್ಲ ಆದರೆ ಅಲ್ಲಿ ಬಿಜೆಪಿ ಆಡಳಿತದಲ್ಲಿದೆ” ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: WhatsApp ಮೂಲಕ ಗೂಢಚರ್ಯೆ: ದಂಗುಬಡಿಸುವ ಅಪಾಯಕಾರಿ ವಿದ್ಯಮಾನ ಬಯಲು!

ವಿಶ್ವದಾದ್ಯಂತ ಸುಮಾರು 1,400 ಜನರ ಮೇಲೆ ಬೇಹುಗಾರಿಕೆ ನಡೆಸಲು ಇಸ್ರೇಲಿ ಸಂಸ್ಥೆಯು ತನ್ನ ವೇದಿಕೆಯನ್ನು ದುರುಪಯೋಗಪಡಿಸಿಕೊಂಡಿದೆ ಎಂದು ವಾಟ್ಸಾಪ್ ಆರೋಪಿಸಿದೆ. ಭಾರತದಲ್ಲಿ, ಮಾನವ ಹಕ್ಕುಗಳ ಕಾರ್ಯಕರ್ತರು, ವಕೀಲರು ಮತ್ತು ಪತ್ರಕರ್ತರ ವಾಟ್ಸಾಪ್‌ ಸಂದೇಶಗಳನ್ನು ಟ್ಯಾಪ್‌ ಮಾಡಲಾಗಿದೆ ಎಂದು ತಿಳಿದುಬಂದ ಹಿನ್ನೆಲೆಯಲ್ಲಿ ಮಮತಾ ಬ್ಯಾನರ್ಜಿ ಆರೋಪ ಮಾಡಿದ್ದಾರೆ.

ಮಾಜಿ ಕೇಂದ್ರ ಸಚಿವ ಪ್ರಫುಲ್ ಪಟೇಲ್ ಮತ್ತು ಮಾಜಿ ಸಂಸತ್ ಸದಸ್ಯ ಸಂತೋಷ್ ಭಾರತೀಯ ಕೂಡ ಈ ವಾಟ್ಸಾಪ್‌ ಬೇಹುಗಾರಿಕೆಗೆ ಒಳಗಾಗಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ದೇಶಾದ್ಯಂತ ಗೂಢಚರ್ಯೆ ಚಟುವಟಿಕೆಗಳನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಬ್ಯಾನರ್ಜಿ, ವಾಟ್ಸಾಪ್ ವಿಷಯದ ಬಗ್ಗೆ ತನಿಖೆ ನಡೆಸುವಂತೆ ಪ್ರಧಾನಿಯನ್ನು ಒತ್ತಾಯಿಸುವುದಾಗಿ ಹೇಳಿದ್ದಾರೆ.

“ನಮ್ಮ ವಾಕ್ ಸ್ವಾತಂತ್ರ್ಯ ಎಲ್ಲಿದೆ? ಇದು ಯಾವ ರೀತಿಯ ಸ್ವಾತಂತ್ರ್ಯ? ನಾವು ಫೋನ್‌ನಲ್ಲಿ ಮುಕ್ತವಾಗಿ ಮಾತನಾಡಲು ಸಾಧ್ಯವಿಲ್ಲ” ಎಂದು ಬ್ಯಾನರ್ಜಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜನರು ವಾಟ್ಸಾಪ್ ನಲ್ಲಿ ಸೋರಿಯಾಗಲು ಸಾಧ್ಯವಿಲ್ಲ ಎಂದು ಭಾವಿಸಿದ್ದರು. ಆದರೆ ಅದು ಈಗ ಸಾಧ್ಯವಾಗಿದೆ. ಜೊತೆಗೆ “ಲ್ಯಾಂಡ್‌ಲೈನ್ ಫೋನ್‌ಗಳು ಮತ್ತು ಮೊಬೈಲ್ ಫೋನ್‌ಗಳು” ಸಹ ಸುರಕ್ಷಿತವಾಗಿಲ್ಲ ಎಂದು ಅವರು ಹೇಳಿದ್ದಾರೆ.

ಇನ್ನು ಬಿಜೆಪಿ ಮುಖಂಡ ಕೈಲಾಶ್‌ ವಿಜಯವರ್ಗಿಯಾರವರ ಮಮತಾ ಬ್ಯಾನರ್ಜಿಯವರು ಆರೋಪವನ್ನು ತಳ್ಳಿ ಹಾಕಿದ್ದಾರೆ. “ಇತರರ ಮೇಲೆ ಕಣ್ಣಿಡಲು ಮಮತಾ ಬ್ಯಾನರ್ಜಿ ಸರ್ಕಾರಕ್ಕೆ ಅಭ್ಯಾಸವಾಗಿದೆ. ರಾಜೀವ್ ಕುಮಾರ್ (ಮಾಜಿ ಕೋಲ್ಕತಾ ಪೊಲೀಸ್ ಆಯುಕ್ತರು) ಇಂತಹ ಸ್ನೂಪಿಂಗ್‌ಗೆ ವ್ಯವಸ್ಥೆ ಮಾಡಿದ್ದರು ”ಎಂದು ವಿಜಯವರ್ಗಿಯಾ ಹೇಳಿದ್ದಾರೆ.

ವಿವಾದದ ಕೇಂದ್ರದಲ್ಲಿರುವ ಇಸ್ರೇಲಿ ಸಾಫ್ಟ್‌ವೇರ್ ಅನ್ನು ಎನ್‌ಎಸ್‌ಒ ಗ್ರೂಪ್ ಅಭಿವೃದ್ಧಿಪಡಿಸಿದೆ ಮತ್ತು ಇದನ್ನು ಹೆಚ್ಚಾಗಿ ಪೆಗಾಸಸ್ ಎಂದು ಕರೆಯಲಾಗುತ್ತದೆ. ತಾಂತ್ರಿಕವಾಗಿ ಮಾಲ್ವೇರ್, ಪೆಗಾಸಸ್ ಗುರಿಯ ಫೋನ್‌ನ ಸಂಪೂರ್ಣ ನಿಯಂತ್ರಣವನ್ನು ಅನುಮತಿಸುತ್ತದೆ, ಫೈಲ್‌ಗಳು, ಸಂವಹನ ಮತ್ತು ಮೈಕ್ರೊಫೋನ್ ಮತ್ತು ಕ್ಯಾಮರಾಗಳಿಗೆ ಪ್ರವೇಶವನ್ನು ಅದು ಸಕ್ರಿಯಗೊಳಿಸುತ್ತದೆ ಎನ್ನಲಾಗುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...