Homeರಾಜಕೀಯ‘ನನ್ನ ಫೋನ್ ಕದ್ದಾಲಿಸಲಾಗಿದ್ದು, ಖಾಸಗಿತನ ಉಲ್ಲಂಘನೆಯಾಗಿದೆ’: ತೆಲಂಗಾಣ ಗವರ್ನರ್‌‌ ಗಂಭೀರ ಆರೋಪ

‘ನನ್ನ ಫೋನ್ ಕದ್ದಾಲಿಸಲಾಗಿದ್ದು, ಖಾಸಗಿತನ ಉಲ್ಲಂಘನೆಯಾಗಿದೆ’: ತೆಲಂಗಾಣ ಗವರ್ನರ್‌‌ ಗಂಭೀರ ಆರೋಪ

- Advertisement -
- Advertisement -

‘ನನ್ನ ಫೋನ್‌ ಅನ್ನು ಟ್ಯಾಪ್ ಮಾಡಲಾಗಿದ್ದು, ಖಾಸಗಿತನವನ್ನು ಉಲ್ಲಂಘಿಸಲಾಗಿದೆ’ ಎಂದು ತೆಲಂಗಾಣ ರಾಜ್ಯಪಾಲರಾದ ತಮಿಳಿಸೈ ಸೌಂದರಾಜನ್ ಅವರು ರಾಜ್ಯ ಸರ್ಕಾರದ ವಿರುದ್ಧ ಬುಧವಾರ ಗಂಭೀರ ಆರೋಪ ಮಾಡಿದ್ದಾರೆ.

ತೆಲಂಗಾಣದ ಟಿಆರ್‌ಎಸ್‌ ಶಾಸಕರನ್ನು ಆಪರೇಷನ್ ಕಮಲ ಮಾಡಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಲಾಗಿದ್ದು, ಬಿಜೆಪಿ ಏಜೆಂಟರು ಎಂದು ಮೂವರನ್ನು ಬಂಧಿಸಲಾಗಿತ್ತು. ಈ ಬಗ್ಗೆ ಟಿಆರ್‌‌ಎಸ್ ಸೋಷಿಯಲ್ ಮೀಡಿಯಾ ಉಸ್ತುವಾರಿ ವಹಿಸಿದ ಟ್ವೀಟರ್‌ ಖಾತೆಯಲ್ಲಿ, ಆಪಾದಿತ ಆಪರೇಷನ್ ಕಮಲದಲ್ಲಿ ರಾಜ್ ಭವನ ಕೂಡಾ ಪಾತ್ರ ವಹಿಸಿದೆ ಎಂದು ಆರೋಪಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಆ ಟ್ವೀಟ್‌‌ ಅನ್ನು ಉಲ್ಲೇಖಿಸಿರುವ ರಾಜ್ಯಪಾಲರು ಪ್ರಕರಣಕ್ಕೆ ಯಾವುದೇ ಸಂಬಂಧವಿಲ್ಲದ ರಾಜ್ಯಪಾಲರ ಕಚೇರಿಯನ್ನು ವಿವಾದಕ್ಕೆ ಎಳೆಯಲಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: TRS ಶಾಸಕರ ಅಪರೇಷನ್ ಕಮಲ ಪ್ರಕರಣ: ತನಿಖೆ ಮೇಲಿನ ತಡೆಯಾಜ್ಞೆ ಹಿಂಪಡೆದ ತೆಲಂಗಾಣ ಹೈಕೋರ್ಟ್

“ನನ್ನ ಫೋನ್ ಅನ್ನು ಟ್ಯಾಪ್ ಮಾಡಲಾಗಿದ್ದು, ಖಾಸಗಿತದ ಉಲ್ಲಂಘನೆಯಾಗಿದೆ. ನನ್ನ ಹಿಂದಿನ ಎಡಿಸಿ ಹೆಸರು ತುಷರ್ ಆಗಿದ್ದು, ದೀಪಾವಳಿ ಶುಭಾಶಯ ಕೋರಲು ಅವರು ನನಗೆ ಕರೆ ಮಾಡಿದ್ದರು. ಅದೇ ದಿನ ತೆಲಂಗಾಣ ಸರ್ಕಾರವು ಈ ಪ್ರಕರಣದಲ್ಲಿ ತುಷಾರ್ ಭಾಗಿಯಾಗಿದ್ದಾರೆ ಎಂದು ಆರೋಪಿಸಿ, ಅವರು ರಾಜ್ ಭವನ ಕಚೇರಿಯನ್ನು ವಿವಾದಕ್ಕೆ ಎಳೆದಿದೆ” ಎಂದು ಅವರು ಹೇಳಿದ್ದಾರೆ.

“ನನ್ನ ಫೋನ್ ಅನ್ನು ಟ್ಯಾಪ್ ಮಾಡದಿದ್ದರೆ, ಈ ಪ್ರಕರಣದಲ್ಲಿ ತುಷಾರ್ ಭಾಗಿಯಾಗಿದ್ದಾರೆ ಮತ್ತು ರಾಜ ಭವನಕ್ಕೆ ಇದರಲ್ಲಿ ಸಂಪರ್ಕವಿದೆ ಎಂಬ ಪ್ರತಿಪಾದನೆಯನ್ನು ಅವರು ಹೇಗೆ ಮಾಡುತ್ತಾರೆ?”ಎಂದು ತಮಿಲಿಸೈ ಪ್ರಶ್ನಿಸಿದ್ದಾರೆ.

“ನನ್ನ ಫೋನ್ ಅನ್ನು ಟ್ಯಾಪ್ ಮಾಡಿದರೂ ನಾನು ಚಿಂತೆ ಮಾಡುತ್ತಿಲ್ಲ. ನನಗೆ ಮರೆಮಾಚಲು ಏನೂ ಇಲ್ಲ. ರಾಜ ಭವನದಲ್ಲಿ ಎಲ್ಲವೂ ತುಂಬಾ ಪಾರದರ್ಶಕವಾಗಿದೆ. ಒಂದು ವೇಳೆ ಅವರು ಬಯಸಿದರೆ ನಾನು ಅವರಿಗೆ ನನ್ನ ಫೋನ್ ಅನ್ನು ತೋರಿಸುತ್ತೇನೆ” ಎಂದು ರಾಜ್ಯಪಾಲರು ಹೇಳಿದ್ದಾರೆ.

ಇದನ್ನೂ ಓದಿ: ತೆಲಂಗಾಣ ಶಾಸಕರ ಖರೀದಿಗೆ ಬಿಜೆಪಿ ಯತ್ನ ಆರೋಪ: ವಿಡಿಯೊ ಪ್ರದರ್ಶಿಸಿದ ಮುಖ್ಯಮಂತ್ರಿ ಕೆಸಿಆರ್‌

ಟಿಆರ್‌ಎಸ್‌ ಶಾಸಕರನ್ನು ಅಪರೇಷನ್ ಕಮಲ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿ  ಮೂವರು ಆರೋಪಿಗಳನ್ನು ಸೈಬರಾಬಾದ್ ಪೊಲೀಸರು ಬಂಧಿಸುವುದರೊಂದಿಗೆ ಪ್ರಕರಣ ಇತ್ತೀಚೆಗೆ ಭಾರಿ ವಿವಾದವನ್ನು ಹುಟ್ಟುಹಾಕಿದೆ. ಆರೋಪಿಗಳು ಶಾಸಕರೊಂದಿಗೆ ಮಾತನಾಡುತ್ತಿರುವುದನ್ನು, ಪೊಲೀಸರು ಹಿಡನ್ ಕ್ಯಾಮರಾದಲ್ಲಿ ಸೆರೆ ಹಿಡಿದಿದ್ದಾರೆ.

ಈ ಘಟನೆಯ ನಂತರ, ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದ ಸಿಎಂ ಕೆಸಿಆರ್, ಕೇರಳದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎಯ ಮಿತ್ರಪಕ್ಷ ಬಿಡಿಜೆಯ ಮುಖ್ಯಸ್ಥ ತುಷಾರ್ ವೆಲ್ಲಪಲ್ಲಿ ಅವರು ಪೊಲೀಸರು ಬಂಧನಕ್ಕೊಳಗಾದ ಮೂವರಲ್ಲಿ ಒಬ್ಬರೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ಆರೋಪಿಸಿದ್ದಾರೆ. ಬಂಧನಕ್ಕೆ ಒಳಗಾದ ಮೂವರು ಕೂಡಾ ಬಿಜೆಪಿಯ ಏಜೆಂಟರು ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...