Homeಮುಖಪುಟಭಾರತ್ ಜೋಡೋ ಯಾತ್ರೆಯೊಂದಿಗೆ ನನ್ನ ರಾಜಕೀಯ ಇನ್ನಿಂಗ್ಸ್ ಮುಕ್ತಾಯಗೊಳ್ಳಬಹುದು: ಸೋನಿಯಾ ಗಾಂಧಿ

ಭಾರತ್ ಜೋಡೋ ಯಾತ್ರೆಯೊಂದಿಗೆ ನನ್ನ ರಾಜಕೀಯ ಇನ್ನಿಂಗ್ಸ್ ಮುಕ್ತಾಯಗೊಳ್ಳಬಹುದು: ಸೋನಿಯಾ ಗಾಂಧಿ

- Advertisement -
- Advertisement -

ಭಾರತ್ ಜೋಡೋ ಯಾತ್ರೆಯೊಂದಿಗೆ ನನ್ನ ರಾಜಕೀಯ ಇನ್ನಿಂಗ್ಸ್ ಮುಕ್ತಾಯಗೊಳ್ಳಬಹುದು ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಹೇಳಿದ್ದಾರೆ.

ರಾಯ್‌ಪುರದಲ್ಲಿ ನಡೆಯುತ್ತಿರುವ 85ನೇ ಕಾಂಗ್ರೆಸ್ ಮಹಾ ಅಧಿವೇಶನದಲ್ಲಿ ಮಾತನಾಡಿದ ಅವರು, “2004 ಮತ್ತು 2009 ರಲ್ಲಿನ ನಮ್ಮ ವಿಜಯಗಳು, ಡಾ. ಮನಮೋಹನ್ ಸಿಂಗ್ ಅವರ ಸಮರ್ಥ ನಾಯಕತ್ವದ ಆಡಳಿತ ನನಗೆ ವೈಯಕ್ತಿಕ ತೃಪ್ತಿಯನ್ನು ನೀಡಿತು. ಆದರೆ ನನಗೆ ಹೆಚ್ಚು ತೃಪ್ತಿ ನೀಡಿದ್ದು ಭಾರತ್ ಜೋಡೋ ಯಾತ್ರೆಯಾಗಿದೆ. ಇದು ಕಾಂಗ್ರೆಸ್‌ಗೆ ಮಹತ್ವದ ತಿರುವು ಆಗಿದ್ದು, ಇದರೊಂದಿಗೆ ನನ್ನ ರಾಜಕೀಯ ಇನ್ನಿಂಗ್ಸ್ ಮುಕ್ತಾಯವಾಗಬಹುದು” ಎಂದಿದ್ದಾರೆ.

ಬಿಜೆಪಿ-ಆರ್‌ಎಸ್‌ಎಸ್ ದೇಶದ ಪ್ರತಿಯೊಂದು ಸಂಸ್ಥೆಯನ್ನು ವಶಪಡಿಸಿಕೊಂಡು ಬುಡಮೇಲು ಮಾಡಿದೆ. ಕೆಲವೇ ಕೆಲವು ಉದ್ಯಮಿಗಳಿಗೆ ಒಲವು ತೋರುವ ಮೂಲಕ ಆರ್ಥಿಕ ವಿನಾಶಕ್ಕೆ ಕಾರಣವಾಗಿದೆ. ಇದು ಕಾಂಗ್ರೆಸ್ ಮತ್ತು ಇಡೀ ದೇಶಕ್ಕೆ ಸವಾಲಿನ ಸಮಯ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಇದಕ್ಕೂ ಮೊದಲು ಮಾತನಾಡಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು, “ಒಂದು ಕಾಲದಲ್ಲಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷನಾಗಿದ್ದ ಒಬ್ಬ ಸಾಮಾನ್ಯ ವ್ಯಕ್ತಿ ಇಂದು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ಗೆ ಅಧ್ಯಕ್ಷನಾಗಲು ಕಾಂಗ್ರೆಸ್‌ನಲ್ಲಿ ಮಾತ್ರ ಸಾಧ್ಯ. ಇದು ಪ್ರಜಾಪ್ರಭುತ್ವದ ಬಹುದೊಡ್ಡ ಸಾಕ್ಷಿ” ಎಂದರು.

ಮಹಾತ್ಮಾ ಗಾಂಧೀಜಿ, ಪಂಡಿತ್ ನೆಹರು, ಸುಭಾಷ್ ಚಂದ್ರ ಬೋಸ್, ಸರ್ದಾರ್ ಪಟೇಲ್, ಮೌಲಾನಾ ಅಬುಲ್ ಕಲಾಂ ಆಜಾದ್, ಡಾ. ರಾಜೇಂದ್ರ ಪ್ರಸಾದ್, ಸರೋಜಿನಿ ನಾಯ್ಡು, ಇಂದಿರಾ ಗಾಂಧಿ, ರಾಜೀವ್ ಗಾಂಧಿ ಅವರು ನೀರೆರೆದ ಆ ಭವ್ಯ ಪರಂಪರೆಯನ್ನು ನಾವೆಲ್ಲರೂ ಪ್ರತಿನಿಧಿಸುತ್ತಿದ್ದೇವೆ” ಎಂದು ಹೇಳಿದ್ದಾರೆ.

“ದೇಶದಲ್ಲಿ ಪ್ರಜಾಪ್ರಭುತ್ವವನ್ನು ಅಳಿಸಲು ಬಿಜೆಪಿ ಪಿತೂರಿ ಮಾಡುತ್ತಿದೆ. ಆದರೆ, ಕಾಂಗ್ರೆಸ್ ಭಾರತವನ್ನು ಒಗ್ಗೂಡಿಸಲು ಪ್ರಯತ್ನಿಸುತ್ತಿದೆ” ಎಂದು ಹೇಳಿದ್ದಾರೆ.

ಭಾರತ್ ಜೋಡೋ ಯಾತ್ರೆ ಕೈಗೊಂಡಿದ್ದಕ್ಕಾಗಿ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು 22 ವರ್ಷಗಳ ಕಾಲ ಪಕ್ಷವನ್ನು ಮುನ್ನಡೆಸಿದ್ದಕ್ಕಾಗಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಮಲ್ಲಿಕಾರ್ಜುನ ಖರ್ಗೆ ಧನ್ಯವಾದ ಅರ್ಪಿಸಿದರು. “ಭಾರತ್ ಜೋಡೋ ಯಾತ್ರೆ ಎಂಬುದು ದೇಶದ ಭರವಸೆಯ ಹೊಸ ಅರುಣೋದಯದ ಹೆಸರು, ಅದರ ಬೆಳಕು ದೇಶದಾದ್ಯಂತ ಹರಡಿದೆ” ಎಂದಿದ್ದಾರೆ.

ಇದನ್ನೂ ಓದಿ: ‘ಸರ್ಕಾರ ವಿರೋಧಿ ಕಾವ್ಯಕ್ಕೆ ಅವಕಾಶವಿಲ್ಲ’: ರೇಖ್ತಾ ಸಾಂಸ್ಕೃತಿಕ ಉತ್ಸವದಿಂದ ಹಿಂದೆ ಸರಿದ ಕವಿ ವಾಜಪೇಯಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...