Homeದಲಿತ್ ಫೈಲ್ಸ್ನನ್ನ ಸಹೋದರಿಯ ಆತ್ಮಕ್ಕೆ ವಿಶ್ರಾಂತಿ ಸಿಕ್ಕಿಲ್ಲ; ಆರೋಪಿಗಳ ಖುಲಾಸೆ ಬಳಿಕ ಹತ್ರಾಸ್‌ ಅತ್ಯಾಚಾರ ಸಂತ್ರಸ್ತೆಯ ಸಹೋದರ...

ನನ್ನ ಸಹೋದರಿಯ ಆತ್ಮಕ್ಕೆ ವಿಶ್ರಾಂತಿ ಸಿಕ್ಕಿಲ್ಲ; ಆರೋಪಿಗಳ ಖುಲಾಸೆ ಬಳಿಕ ಹತ್ರಾಸ್‌ ಅತ್ಯಾಚಾರ ಸಂತ್ರಸ್ತೆಯ ಸಹೋದರ ಹೇಳಿಕೆ

- Advertisement -
- Advertisement -

“ನನ್ನ ಸಹೋದರಿಯ ಆತ್ಮಕ್ಕೆ ವಿಶ್ರಾಂತಿ ಸಿಕ್ಕಿಲ್ಲ” ಎಂದು ಹತ್ರಾಸ್ ಅತ್ಯಾಚಾರ ಪ್ರಕರಣದ ಸಂತ್ರಸ್ತೆಯ ಸಹೋದರ ಪ್ರತಿಕ್ರಿಯಿಸಿದ್ದಾರೆ. ವಿಶೇಷ ನ್ಯಾಯಾಲಯವು ನಾಲ್ವರು ಆರೋಪಿಗಳಲ್ಲಿ ಮೂವರನ್ನು ಖುಲಾಸೆಗೊಳಿಸಿದ ಬಳಿಕ ಸಂತ್ರಸ್ತ ಕುಟುಂಬ ಬೇಸರ ವ್ಯಕ್ತಪಡಿಸಿದೆ.

2020ರ ಸೆಪ್ಟೆಂಬರ್‌ನಲ್ಲಿ 19 ವರ್ಷದ ದಲಿತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳ ಪೈಕಿ ಮೂವರನ್ನು ಖುಲಾಸೆಗೊಳಿಸಿ ಉತ್ತರ ಪ್ರದೇಶದ ಹತ್ರಾಸ್ ಜಿಲ್ಲಾ ನ್ಯಾಯಾಲಯ ಗುರುವಾರ ತೀರ್ಪು ಪ್ರಕಟಿಸಿದೆ. ವಿಶೇಷ ನ್ಯಾಯಾಧೀಶರಾದ ತ್ರಿಲೋಕ್ ಪಾಲ್ ಸಿಂಗ್ ಅವರು ತೀರ್ಪು ಪ್ರಕಟಿಸಿದ್ದಾರೆ.

ನ್ಯಾಯಾಲಯದ ತೀರ್ಪಿನ ನಂತರ ‘ದಿ ಕ್ವಿಂಟ್‌’ ಜೊತೆ ಮಾತನಾಡಿರುವ ಸಂತ್ರಸ್ತ ಯುವತಿಯ ಸಹೋದರ “ನಮ್ಮ ಕುಟುಂಬವು ಧ್ವಂಸಗೊಂಡಿದೆ” ಎಂದು ನೋವು ತೋಡಿಕೊಂಡಿದ್ದಾರೆ.

“ಭಾರತೀಯ ನ್ಯಾಯಾಂಗದಿಂದ ನಾವು ಹೆಚ್ಚಿನ ಭರವಸೆ ಹೊಂದಿದ್ದೇವೆ. ಆದರೆ ನಮ್ಮ ಭಾರತೀಯ ನ್ಯಾಯ ವ್ಯವಸ್ಥೆ ಏನು ಎಂದು ಈಗ ನಮಗೆ ತಿಳಿದಿದೆ. ನಮ್ಮ ತಂಗಿಯನ್ನು ಅತ್ಯಾಚಾರ ಮಾಡಿ ಕೊಲೆ ಮಾಡಲಾಗಿದೆ, ನಂತರ ಆಕೆಯ ದೇಹವನ್ನು ಮಧ್ಯರಾತ್ರಿಯಲ್ಲಿ ಸುಡಲಾಗಿದೆ. ನನ್ನ ಸಹೋದರಿಯನ್ನು ಅತ್ಯಾಚಾರ ಮಾಡಿದವರನ್ನು ಖುಲಾಸೆಗೊಳಿಸಲು ನ್ಯಾಯಾಲಯ ಅವಕಾಶ ನೀಡಿದೆ. ನಾವು ಧ್ವಂಸಗೊಂಡಿದ್ದೇವೆ” ಎಂದಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನ್ನ ಚಾರ್ಜ್‌ಶೀಟ್‌ನಲ್ಲಿ ಗ್ರಾಮದ ನಾಲ್ವರ ವಿರುದ್ಧ ಅತ್ಯಾಚಾರ (ಐಪಿಸಿ ಸೆಕ್ಷನ್ 376), ಸಾಮೂಹಿಕ ಅತ್ಯಾಚಾರ (ಐಪಿಸಿ ಸೆಕ್ಷನ್ 376 ಡಿ) ಮತ್ತು ಕೊಲೆ (ಐಪಿಸಿ ಸೆಕ್ಷನ್ 304) ಆರೋಪ ಹೊರಿಸಿದೆ.

ಆದರೆ, ಅವರಲ್ಲಿ ಯಾರೊಬ್ಬರೂ ಅತ್ಯಾಚಾರ ಅಥವಾ ಕೊಲೆಯ ತಪ್ಪಿತಸ್ಥರೆಂದು ನ್ಯಾಯಾಲಯದಲ್ಲಿ ಸಾಬೀತಾಗಿಲ್ಲ. ಮಿಗಿಲಾಗಿ ನ್ಯಾಯಾಲಯದಿಂದ ತಪ್ಪಿತಸ್ಥನೆಂದು ಗುರುತಿಸಲ್ಪಟ್ಟಿರುವ ಆರೋಪಿ ಸಂದೀಪ್‌ಗೆ, ಕೊಲೆಗೆ ಸಮನಾಗದ (ಐಪಿಸಿ ಸೆಕ್ಷನ್ 304) ಮತ್ತು ಎಸ್‌ಸಿ/ಎಸ್‌ಟಿ ಕಾಯಿದೆಯಡಿಯಲ್ಲಿನ ಅಪರಾಧಗಳಿಗೆ ಶಿಕ್ಷೆ ವಿಧಿಸಲಾಗಿದೆ.

“ಅತ್ಯಾಚಾರ ಮತ್ತು ಕೊಲೆ ಆರೋಪದಡಿಯಲ್ಲಿ ಆತನಿಗೆ ಶಿಕ್ಷೆಯಾಗಿಲ್ಲ. ಅಂದರೆ ಅವರಿಗೂ ಬೇಗ ಜಾಮೀನು ಸಿಗುವುದು ಖಚಿತ. ಇದು ಅತಿರೇಕದ ಸಂಗತಿ” ಎಂದು ಸಂತ್ರಸ್ತೆಯ ಸಹೋದರ ನೊಂದು ನುಡಿದಿದ್ದಾರೆ.

“ಉಸ್ಕಿ ಆತ್ಮಾ ಕೋ ಶಾಂತಿ ಕೈಸೇ ಮಿಲೇಗೀ? (ಅವಳ ಆತ್ಮ ಈಗ ಹೇಗೆ ವಿಶ್ರಾಂತಿ ಪಡೆಯುತ್ತದೆ?)” ಎಂದು ಪ್ರಶ್ನಿಸಿದ್ದಾರೆ.

‘ಗ್ರಾಮಸ್ಥರಿಂದ ಆರೋಪಿಗಳಿಗೆ ಬೆಂಬಲ’

ಸೆಪ್ಟೆಂಬರ್ 2020ರಲ್ಲಿ ದಲಿತ ಹೆಣ್ಣುಮಗಳ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಲಾಯಿತು. 29 ಸೆಪ್ಟೆಂಬರ್ 2020ರಂದು, ಹತ್ರಾಸ್ ಪೋಲೀಸ್ ಮತ್ತು ಆಡಳಿತದ ವರ್ಗವು ರಾತ್ರೋರಾತ್ರಿ ಸಂತ್ರಸ್ತೆಯ ಅಂತ್ಯಕ್ರಿಯೆ ನಡೆಸಿತ್ತು. ಇದು ಬೆಳಕಿಗೆ ಬಂದಾಗ ದೇಶಾದ್ಯಂತ ಆಘಾತ ಉಂಟಾಗಿತ್ತು.

ಘಟನೆ ನಡೆದ ಎರಡು ವರ್ಷಗಳ ನಂತರ ಗ್ರಾಮಕ್ಕೆ ಭೇಟಿ ನೀಡಿದ್ದ ‘ದಿ ಕ್ವಿಂಟ್’ ತಂಡ ವರದಿ ಮಾಡುತ್ತಾ, “ಅಪರಾಧದ ಆರೋಪಿಗಳಿಗೆ ವ್ಯಾಪಕ ಬೆಂಬಲ ಮುಂದುವರಿದಿದೆ. ಆರೋಪಗಳನ್ನು ಸುಳ್ಳು ಎಂದು ಅನೇಕ ಗ್ರಾಮಸ್ಥರು ಹೇಳುತ್ತಿದ್ದಾರೆ. ಆರೋಪಿಗಳ ಪರವಾಗಿ ನಿಂತಿದ್ದಾರೆ” ಎಂದಿತ್ತು.

“ಈ ಜನರು ಮೊದಲ ದಿನದಿಂದಲೂ ಆರೋಪಿಗಳನ್ನು ಬೆಂಬಲಿಸುತ್ತಿದ್ದಾರೆ. ಈಗ ಅವರನ್ನು ಖುಲಾಸೆಗೊಳಿಸುವ ತೀರ್ಪು ಬಂದಿರುವುದರಿಂದ ಗ್ರಾಮಸ್ಥರು ಆರೋಪಿಗಳಿಗೆ ಮತ್ತಷ್ಟು ಧೈರ್ಯ ತುಂಬಲಿದ್ದಾರೆ” ಎಂದು ಸಂತ್ರಸ್ತೆಯ ಸಹೋದರ ಆತಂಕ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...