Homeದಲಿತ್ ಫೈಲ್ಸ್ನನ್ನ ಸಹೋದರಿಯ ಆತ್ಮಕ್ಕೆ ವಿಶ್ರಾಂತಿ ಸಿಕ್ಕಿಲ್ಲ; ಆರೋಪಿಗಳ ಖುಲಾಸೆ ಬಳಿಕ ಹತ್ರಾಸ್‌ ಅತ್ಯಾಚಾರ ಸಂತ್ರಸ್ತೆಯ ಸಹೋದರ...

ನನ್ನ ಸಹೋದರಿಯ ಆತ್ಮಕ್ಕೆ ವಿಶ್ರಾಂತಿ ಸಿಕ್ಕಿಲ್ಲ; ಆರೋಪಿಗಳ ಖುಲಾಸೆ ಬಳಿಕ ಹತ್ರಾಸ್‌ ಅತ್ಯಾಚಾರ ಸಂತ್ರಸ್ತೆಯ ಸಹೋದರ ಹೇಳಿಕೆ

- Advertisement -
- Advertisement -

“ನನ್ನ ಸಹೋದರಿಯ ಆತ್ಮಕ್ಕೆ ವಿಶ್ರಾಂತಿ ಸಿಕ್ಕಿಲ್ಲ” ಎಂದು ಹತ್ರಾಸ್ ಅತ್ಯಾಚಾರ ಪ್ರಕರಣದ ಸಂತ್ರಸ್ತೆಯ ಸಹೋದರ ಪ್ರತಿಕ್ರಿಯಿಸಿದ್ದಾರೆ. ವಿಶೇಷ ನ್ಯಾಯಾಲಯವು ನಾಲ್ವರು ಆರೋಪಿಗಳಲ್ಲಿ ಮೂವರನ್ನು ಖುಲಾಸೆಗೊಳಿಸಿದ ಬಳಿಕ ಸಂತ್ರಸ್ತ ಕುಟುಂಬ ಬೇಸರ ವ್ಯಕ್ತಪಡಿಸಿದೆ.

2020ರ ಸೆಪ್ಟೆಂಬರ್‌ನಲ್ಲಿ 19 ವರ್ಷದ ದಲಿತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳ ಪೈಕಿ ಮೂವರನ್ನು ಖುಲಾಸೆಗೊಳಿಸಿ ಉತ್ತರ ಪ್ರದೇಶದ ಹತ್ರಾಸ್ ಜಿಲ್ಲಾ ನ್ಯಾಯಾಲಯ ಗುರುವಾರ ತೀರ್ಪು ಪ್ರಕಟಿಸಿದೆ. ವಿಶೇಷ ನ್ಯಾಯಾಧೀಶರಾದ ತ್ರಿಲೋಕ್ ಪಾಲ್ ಸಿಂಗ್ ಅವರು ತೀರ್ಪು ಪ್ರಕಟಿಸಿದ್ದಾರೆ.

ನ್ಯಾಯಾಲಯದ ತೀರ್ಪಿನ ನಂತರ ‘ದಿ ಕ್ವಿಂಟ್‌’ ಜೊತೆ ಮಾತನಾಡಿರುವ ಸಂತ್ರಸ್ತ ಯುವತಿಯ ಸಹೋದರ “ನಮ್ಮ ಕುಟುಂಬವು ಧ್ವಂಸಗೊಂಡಿದೆ” ಎಂದು ನೋವು ತೋಡಿಕೊಂಡಿದ್ದಾರೆ.

“ಭಾರತೀಯ ನ್ಯಾಯಾಂಗದಿಂದ ನಾವು ಹೆಚ್ಚಿನ ಭರವಸೆ ಹೊಂದಿದ್ದೇವೆ. ಆದರೆ ನಮ್ಮ ಭಾರತೀಯ ನ್ಯಾಯ ವ್ಯವಸ್ಥೆ ಏನು ಎಂದು ಈಗ ನಮಗೆ ತಿಳಿದಿದೆ. ನಮ್ಮ ತಂಗಿಯನ್ನು ಅತ್ಯಾಚಾರ ಮಾಡಿ ಕೊಲೆ ಮಾಡಲಾಗಿದೆ, ನಂತರ ಆಕೆಯ ದೇಹವನ್ನು ಮಧ್ಯರಾತ್ರಿಯಲ್ಲಿ ಸುಡಲಾಗಿದೆ. ನನ್ನ ಸಹೋದರಿಯನ್ನು ಅತ್ಯಾಚಾರ ಮಾಡಿದವರನ್ನು ಖುಲಾಸೆಗೊಳಿಸಲು ನ್ಯಾಯಾಲಯ ಅವಕಾಶ ನೀಡಿದೆ. ನಾವು ಧ್ವಂಸಗೊಂಡಿದ್ದೇವೆ” ಎಂದಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನ್ನ ಚಾರ್ಜ್‌ಶೀಟ್‌ನಲ್ಲಿ ಗ್ರಾಮದ ನಾಲ್ವರ ವಿರುದ್ಧ ಅತ್ಯಾಚಾರ (ಐಪಿಸಿ ಸೆಕ್ಷನ್ 376), ಸಾಮೂಹಿಕ ಅತ್ಯಾಚಾರ (ಐಪಿಸಿ ಸೆಕ್ಷನ್ 376 ಡಿ) ಮತ್ತು ಕೊಲೆ (ಐಪಿಸಿ ಸೆಕ್ಷನ್ 304) ಆರೋಪ ಹೊರಿಸಿದೆ.

ಆದರೆ, ಅವರಲ್ಲಿ ಯಾರೊಬ್ಬರೂ ಅತ್ಯಾಚಾರ ಅಥವಾ ಕೊಲೆಯ ತಪ್ಪಿತಸ್ಥರೆಂದು ನ್ಯಾಯಾಲಯದಲ್ಲಿ ಸಾಬೀತಾಗಿಲ್ಲ. ಮಿಗಿಲಾಗಿ ನ್ಯಾಯಾಲಯದಿಂದ ತಪ್ಪಿತಸ್ಥನೆಂದು ಗುರುತಿಸಲ್ಪಟ್ಟಿರುವ ಆರೋಪಿ ಸಂದೀಪ್‌ಗೆ, ಕೊಲೆಗೆ ಸಮನಾಗದ (ಐಪಿಸಿ ಸೆಕ್ಷನ್ 304) ಮತ್ತು ಎಸ್‌ಸಿ/ಎಸ್‌ಟಿ ಕಾಯಿದೆಯಡಿಯಲ್ಲಿನ ಅಪರಾಧಗಳಿಗೆ ಶಿಕ್ಷೆ ವಿಧಿಸಲಾಗಿದೆ.

“ಅತ್ಯಾಚಾರ ಮತ್ತು ಕೊಲೆ ಆರೋಪದಡಿಯಲ್ಲಿ ಆತನಿಗೆ ಶಿಕ್ಷೆಯಾಗಿಲ್ಲ. ಅಂದರೆ ಅವರಿಗೂ ಬೇಗ ಜಾಮೀನು ಸಿಗುವುದು ಖಚಿತ. ಇದು ಅತಿರೇಕದ ಸಂಗತಿ” ಎಂದು ಸಂತ್ರಸ್ತೆಯ ಸಹೋದರ ನೊಂದು ನುಡಿದಿದ್ದಾರೆ.

“ಉಸ್ಕಿ ಆತ್ಮಾ ಕೋ ಶಾಂತಿ ಕೈಸೇ ಮಿಲೇಗೀ? (ಅವಳ ಆತ್ಮ ಈಗ ಹೇಗೆ ವಿಶ್ರಾಂತಿ ಪಡೆಯುತ್ತದೆ?)” ಎಂದು ಪ್ರಶ್ನಿಸಿದ್ದಾರೆ.

‘ಗ್ರಾಮಸ್ಥರಿಂದ ಆರೋಪಿಗಳಿಗೆ ಬೆಂಬಲ’

ಸೆಪ್ಟೆಂಬರ್ 2020ರಲ್ಲಿ ದಲಿತ ಹೆಣ್ಣುಮಗಳ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಲಾಯಿತು. 29 ಸೆಪ್ಟೆಂಬರ್ 2020ರಂದು, ಹತ್ರಾಸ್ ಪೋಲೀಸ್ ಮತ್ತು ಆಡಳಿತದ ವರ್ಗವು ರಾತ್ರೋರಾತ್ರಿ ಸಂತ್ರಸ್ತೆಯ ಅಂತ್ಯಕ್ರಿಯೆ ನಡೆಸಿತ್ತು. ಇದು ಬೆಳಕಿಗೆ ಬಂದಾಗ ದೇಶಾದ್ಯಂತ ಆಘಾತ ಉಂಟಾಗಿತ್ತು.

ಘಟನೆ ನಡೆದ ಎರಡು ವರ್ಷಗಳ ನಂತರ ಗ್ರಾಮಕ್ಕೆ ಭೇಟಿ ನೀಡಿದ್ದ ‘ದಿ ಕ್ವಿಂಟ್’ ತಂಡ ವರದಿ ಮಾಡುತ್ತಾ, “ಅಪರಾಧದ ಆರೋಪಿಗಳಿಗೆ ವ್ಯಾಪಕ ಬೆಂಬಲ ಮುಂದುವರಿದಿದೆ. ಆರೋಪಗಳನ್ನು ಸುಳ್ಳು ಎಂದು ಅನೇಕ ಗ್ರಾಮಸ್ಥರು ಹೇಳುತ್ತಿದ್ದಾರೆ. ಆರೋಪಿಗಳ ಪರವಾಗಿ ನಿಂತಿದ್ದಾರೆ” ಎಂದಿತ್ತು.

“ಈ ಜನರು ಮೊದಲ ದಿನದಿಂದಲೂ ಆರೋಪಿಗಳನ್ನು ಬೆಂಬಲಿಸುತ್ತಿದ್ದಾರೆ. ಈಗ ಅವರನ್ನು ಖುಲಾಸೆಗೊಳಿಸುವ ತೀರ್ಪು ಬಂದಿರುವುದರಿಂದ ಗ್ರಾಮಸ್ಥರು ಆರೋಪಿಗಳಿಗೆ ಮತ್ತಷ್ಟು ಧೈರ್ಯ ತುಂಬಲಿದ್ದಾರೆ” ಎಂದು ಸಂತ್ರಸ್ತೆಯ ಸಹೋದರ ಆತಂಕ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...